Homeಮುಖಪುಟಕುನಾಲ್ ಕಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದ ಸಿಜೆಐ ಚಂದ್ರಚೂಡ್

ಕುನಾಲ್ ಕಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದ ಸಿಜೆಐ ಚಂದ್ರಚೂಡ್

- Advertisement -
- Advertisement -

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಧೀಶರಾದ ಡಿ.ವೈ ಚಂದ್ರಚೂಡ್‌ರವರು ಸ್ಟ್ಯಾಂಡಪ್ ಕಾಮಿಡಿಯನ್ ಕುನಾಲ್ ಕಮ್ರಾ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.

ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿಗೆ ಜಾಮೀನು ನೀಡಿದ ಪೀಠದಲ್ಲಿ ಜಸ್ಟಿಸ್ ಚಂದ್ರಚೂಡ್‌ರವರು ಸಹ ಇದ್ದರು. ಆ ಜಾಮೀನು ತೀರ್ಪನ್ನು ಟೀಕಿಸಿದ ಕಾರಣಕ್ಕಾಗಿಯೇ ಕುನಾಲ್ ಕಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಾಗಿತ್ತು. ಹಾಗಾಗಿ ತಾನೇ ನೀಡಿದ ತೀರ್ಪನ್ನು ಟೀಕಿಸಿದ ವ್ಯಕ್ತಿಯ ವಿರುದ್ಧದ ವಿಚಾರಣೆಯನ್ನು ತಾನೇ ನಡೆಸುವುದು ಸರಿಯಲ್ಲ ಎಂದು ನಿರ್ಧರಿಸಿ ಚಂದ್ರಚೂಡ್‌ರವರು ವಿಚಾರಣೆಯಿಂದ ಹೊರಗುಳಿದಿದ್ದಾರೆ.

ವಂಚನೆ ಮತ್ತು ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದನ್ನು ಟೀಕಿಸಿ ಕುನಾಲ್ ಕಮ್ರಾ ಟ್ವೀಟ್ ಮಾಡಿದ್ದರು.

2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಅವರ ಆತ್ಮಹತ್ಯಾ ಪತ್ರದಲ್ಲಿ ಅರ್ನಾಬ್ ಹೆಸರು ಉಲ್ಲೇಖಿಸಲಾಗಿತ್ತು. ಆದರೆ ಈ ಪ್ರಕರಣ ವರ್ಷಕ್ಕೂ ಮೊದಲೇ ಮುಚ್ಚಿಹೋಗಿತ್ತು. ಈಗ ಮತ್ತೆ ಅದಕ್ಕೆ ಮರುಜೀವ ನೀಡಿದ ಮುಂಬೈ ಪೊಲೀಸರು 2020ರಲ್ಲಿ ಅರ್ನಾಬ್‌ ಅವರನ್ನು ಬಂಧಿಸಿದ್ದರು. ಇದನ್ನು ಪ್ರಶ್ನಿಸಿ ಜಾಮೀನು ಪಡೆಯುವ ಸಲುವಾಗಿ ಅವರು ಬಾಂಬೆ ಹೈಕೋರ್ಟ್‌ಗೆ ಹೋಗಿದ್ದರು. ಆದರೆ ಅದು ಜಾಮೀನು ನಿರಾಕರಿಸಿತ್ತು. ಹಾಗಾಗಿ ಅರ್ನಾಬ್ ಸುಪ್ರೀಂ ಮೆಟ್ಟಿಲೇರಿದ್ದರು.

ಆಗ ಸುಪ್ರಿಂ ಕೋರ್ಟ್‌ ನ್ಯಾಯಾಧೀಶರಾಗಿದ್ದ ಚಂದ್ರಚೂಡ್‌ರವರು ಜಾಮೀನು ನೀಡಿದ್ದರು. ಕೇವಲ ಒಂದು ವಾರದಲ್ಲಿ ಅವರ ಅರ್ಜಿಯನ್ನು ಏಕೆ ಪರಿಗಣಿಸಲಾಯಿತು? ಬೇರೆ ಹೋರಾಟಗಾರರ ಅರ್ಜಿಗಳು ವಿಚಾರಣೆಗೆ ಬರುವುದಿಲ್ಲ ಏಕೆ ಎಂಬ ಪ್ರಶ್ನೆ ಎದ್ದಿತ್ತು.

ದೇಶದಲ್ಲಿ ನೂರಾರು ಹೋರಾಟಗಾರರು ಹಲವಾರು ವರ್ಷಗಳಿಂದ ರಾಜಕೀಯ ಖೈದಿಗಳಾಗಿ ಜೈಲಿನಲ್ಲಿದ್ದರೂ ಅವರಿಗೆ ಏಕೆ ಜಾಮೀನು ನೀಡಿಲ್ಲ ಎಂಬ ಅಭಿಪ್ರಾಯದ ಹಿನ್ನೆಲೆಯಲ್ಲಿ ಖ್ಯಾತ ಸ್ಟಾಂಡಪ್ ಕಾಮಿಡಿಯನ್ ಕುನಾಲ್ ಕಮ್ರಾ ಸುಪ್ರೀಂ ತೀರ್ಪನ್ನು ಟ್ರೋಲ್ ಮಾಡಿದ್ದರು.

ಕುನಾಲ್ ಕಮ್ರ ವಿರುದ್ಧ ಎಂಟು ಜನರಿಗೆ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು  ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅನುಮತಿ ನೀಡುವ ಮೂಲಕ, ಕಮ್ರ ತಮಾಷೆಯ ಗೆರೆಯನ್ನು ದಾಟಿದ್ದಾರೆ ಎಂದು ಹೇಳಿದ್ದಾರೆ.

“ಸುಪ್ರೀಂ ಕೋರ್ಟ್ ಮೇಲೆ ಅನ್ಯಾಯವಾಗಿ ಕೆಟ್ಟ ರೀತಿಯಲ್ಲಿ ದಾಳಿ ಮಾಡುವುದು ಶಿಕ್ಷೆಗೆ ಕಾರಣವಾಗುತ್ತದೆ ಎಂದು ಜನರು ಅರ್ಥಮಾಡಿಕೊಳ್ಳುವ ಸಮಯ ಇದು” ಎಂದು ಅಟಾರ್ನಿ ಜನರಲ್ ವೇಣುಗೋಪಾಲ್ ಅವರು  ಕಮ್ರ ಅವರನ್ನು ನ್ಯಾಯಾಲಯಕ್ಕೆ ಕರೆದೊಯ್ಯಲು ತಮ್ಮ ಅನುಮತಿಯನ್ನು ಕೇಳಿದ ವಕೀಲರಿಗೆ ಉತ್ತರಿಸಿದ ಪತ್ರದಲ್ಲಿ ತಿಳಿಸಿದ್ದಾರೆ.

ಕ್ಷಮೆ ಕೇಳಿದರೆ ಪ್ರಕರಣ ಕೈಬಿಡುವುದಾಗಿ ಅಟಾರ್ನಿ ಜನರಲ್ ತಿಳಿಸಿದ್ದರು. ಅದರೆ ಪ್ರಕರಣದ ಕುರಿತು ಮತ್ತೆ ಟ್ವೀಟ್ ಮಾಡಿದ್ದ ಕಮ್ರಾ, ’ನನ್ನ ಟ್ವೀಟ್‌ಗಳನ್ನು ಹಿಂತೆಗೆದುಕೊಳ್ಳುವ ಅಥವಾ ಅವರಲ್ಲಿ ಕ್ಷಮೆಯಾಚಿಸುವ ಉದ್ದೇಶ ನನಗಿಲ್ಲ. ಅವು ತಮ್ಮಷ್ಟಕ್ಕೇ ಹೇಳಬೇಕಾದುದ್ದನ್ನು ಹೇಳುತ್ತವೆ ಎಂದು ನಾನು ನಂಬುತ್ತೇನೆ” ಎಂದಿದ್ದರು. ಜೊತೆಗೆ “ವಕೀಲರು ಇಲ್ಲ, ಕ್ಷಮಾಪಣೆ ಇಲ್ಲ, ದಂಡ ಕಟ್ಟಲ್ಲ, ಸಮಯ ಹಾಳು ಮಾಡಲ್ಲ” ಎಂದು ತಮ್ಮ ಪತ್ರದೊಂದಿಗೆ ಅಟರ್ನಿ ಜನರಲ್ ವೇಣುಗೋಪಾಲ್ ಅವರನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿದ್ದರು.

ಇದನ್ನೂ ಓದಿ: ಪ್ರಧಾನಿ ಎದುರು ತುಟಿ ಬಿಚ್ಚಲಾಗದ ಮುಖ್ಯಮಂತ್ರಿಯನ್ನು ಹುಲಿ-ಸಿಂಹಕ್ಕೆ ಹೋಲಿಸಲಾಗುತ್ತಾ?: ನಾಯಿಮರಿ ಹೇಳಿಕೆಗೆ ಸಿದ್ದರಾಮಯ್ಯ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...