Homeಕರ್ನಾಟಕಬೆಂಗಳೂರು ಪೊಲೀಸರ ವಶದಲ್ಲಿದ್ದ ದಲಿತ ಯುವಕನ ಸಾವು - ಲಾಕಪ್ ಡೆತ್ ಆರೋಪ

ಬೆಂಗಳೂರು ಪೊಲೀಸರ ವಶದಲ್ಲಿದ್ದ ದಲಿತ ಯುವಕನ ಸಾವು – ಲಾಕಪ್ ಡೆತ್ ಆರೋಪ

- Advertisement -
- Advertisement -

ಬೆಂಗಳೂರಿನ ಜಾಲಿ ಮೊಹಲ್ಲಾದ ನಿವಾಸಿ ದಲಿತ ಯುವಕ ವಿನೋದ್‌ ಎಂಬಾತ ಪೊಲೀಸರ ವಶದಲ್ಲಿದ್ದಾಗಲೇ ಸಾವನ್ನಪ್ಪಿರುವ ಘಟನೆ ಜನವರಿ 05ರಂದು ಕಾಟನ್‌ ಪೇಟೆ ಪೊಲೀಸ್‌ ಠಾಣೆಯಲ್ಲಿ ವರದಿಯಾಗಿದೆ.

2017ರಲ್ಲಿ ದರೋಡೆಗೆ ಸಂಚು ರೂಪಿಸಿದ್ದ ಎಂಬ ಆರೋಪದಡಿ ಬುಧವಾರ ಬಂಧನಕ್ಕೊಳಗಾಗಿದ್ದ 23 ವರ್ಷದ ವಿನೋದ್ ರಾಮಚಂದ್ರನ್ ಗುರುವಾರ ಬೆಳಿಗ್ಗೆ 3.45ರ ಸಮಯದಲ್ಲಿ ಲಾಕಪ್‌ನಲ್ಲಿ ಮಲಗಿದ್ದಾಗಲೇ ನಿಧನರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಿನೋದ್ ಕುಟುಂಬ ಪೊಲೀಸರ ಹೇಳಿಕೆಯನ್ನು ಅಲ್ಲಗೆಳೆದಿದ್ದು ಪೊಲೀಸರ ದೌರ್ಜನ್ಯ ಮತ್ತು ಕಿರುಕುಳದಿಂದಲೇ ವಿನೋದ್ ಸಾವನಪ್ಪಿದ್ದಾನೆ ಎಂದು ಆರೋಪಿಸಿದ್ದಾರೆ.

ದರೋಡೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ವಿನೋದ್ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿತ್ತು. ಕೋರ್ಟ್ ಆದೇಶದಂತೆ ಬುಧವಾರ ಮಧ್ಯಾಹ್ನ 12.30ರ ಸಮಯದಲ್ಲಿ ಜಾಲಿ ಪಾಳ್ಯದಿಂದ ಬಂಧಿಸಿ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿರಿಸಲಾಗಿತ್ತು. ಆದರೆ ಗುರುವಾರ ಬೆಳ್ಳಂಬೆಳಿಗ್ಗೆ 3 ಗಂಟೆ ಸಮಾರಿಗೆ ನೋಡಿದಾಗ ವಿನೋದ್ ಲಾಕಪ್‌ನಲ್ಲಿ ಪ್ರಜ್ಞೆತಪ್ಪಿ ಬಿದ್ದಿದ್ದಾನೆಂದು ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು.

ಸುಮಾರು 5 ಗಂಟೆ ಸಮಯಲ್ಲಿ ಜಾಲಿ ಪಾಳ್ಯಕ್ಕೆ ತೆರಳಿದ್ದ ಪೊಲೀಸರು ಅವರ ತಾಯಿಗೆ ವಿನೋದ್ ಆರೋಗ್ಯ ಗಂಭೀರ ಸ್ಥಿತಿಯಲ್ಲಿದೆ ಎಂದು ತಿಳಿಸಿದ್ದರು. ಆದರೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಸಿಬ್ಬಂದಿಯೊಬ್ಬರು ವಿನೋದ್ ಸಾವನಪ್ಪಿರುವುದನ್ನು ಖಚಿತಪಡಿಸಿಕೊಂಡು ಕುಟುಂಬಕ್ಕೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಬೆಂಗಳೂರು ನಗರ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ ಈ ಕುರಿತು ಮಾಹಿತಿ ನೀಡಿದ್ದು, “ಆರೋಪಿ ವಿರುದ್ಧ 2017ರಲ್ಲಿ ಕಾಟನ್ ಪೇಟೆ ಠಾಣೆಯಲ್ಲಿ ದರೋಡೆಗೆ ಯತ್ನ ಪ್ರಕರಣ ದಾಖಲಾಗಿತ್ತು‌‌‌. ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್​ ಜಾರಿಯಾಗಿತ್ತು. ಬುಧವಾರ ಆತನನ್ನು ಪೊಲೀಸರು ಬಂಧಿಸಿ ಕಾಟನ್‌ಪೇಟೆ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ರಾತ್ರಿ ಠಾಣೆಯಲ್ಲಿ ಮಲಗಿದ್ದ ಆರೋಪಿಯನ್ನು ಗುರುವಾರ ಮುಂಜಾನೆ 3‌.45 ವೇಳೆಗೆ ಪೊಲೀಸ್ ಸಿಬ್ಬಂದಿ ಎಬ್ಬಿಸಲು ಪ್ರಯತ್ನಿಸಿದ್ದಾರೆ. ಆದರೆ ಆತ ಪ್ರಜ್ಞೆ ತಪ್ಪಿದ್ದರಿಂದ ಕೂಡಲೇ ಆಸ್ಪತ್ರೆಗೆ‌ ದಾಖಲಿಸಿದ್ದಾರೆ. ಆದರೆ ಮಾರ್ಗ‌ಮಧ್ಯಯೇ ಆತ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಸದ್ಯ ಈಗ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಸಾವೆಂದು ಪ್ರಕರಣ ದಾಖಲಿಸಿ, ಎಲ್ಲ ಮಾರ್ಗಸೂಚಿಗಳನ್ನು ಪಾಲಿಸಿದ್ದೇವೆ. ಅಲ್ಲದೆ, ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾಹಿಸಲಾಗಿದೆ” ಎಂದಿದ್ದಾರೆ.

ಪೊಲೀಸ್ ಕಿರುಕುಳದಿಂದ ವಿನೋದ್ ಸಾವು – ಸ್ಲಂ ಮಹಿಳಾ ಸಂಘಟನೆ ಆರೋಪ

ಪೊಲೀಸ್ ಕಿರುಕುಳದಿಂದಲೇ ವಿನೋದ್ ಸಾವನಪ್ಪಿದ್ದಾರೆ ಎಂದು ಸ್ಲಂ ಮಹಿಳಾ ಸಂಘಟನೆಯ ಮುಖಂಡೆ ಜಾನ್ಸಿ ಆರೋಪಿಸಿದ್ದಾರೆ. “ವಿನೋದ್‌ರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅವರ ಕತ್ತಿನ ಹಿಂಭಾಗದಲ್ಲಿ ರಕ್ತ ಸೋರುತ್ತಿತ್ತು ಎಂದು ಆಸ್ಪತ್ರೆಯ ಸಿಬ್ಬಂದಿಗಳು ತಿಳಿಸಿದ್ದಾರೆ. ಶವಗಾರದ ವಾಚ್‌ಮನ್ ಕೂಡ ಅದನ್ನೆ ಹೇಳಿದ್ದಾರೆ. ಆದರೆ ಪೊಲೀಸರು ಪ್ರಜ್ಞೆ ತಪ್ಪಿ ಸಾವನಪ್ಪಿದ್ದಾನೆ ಎಂದು ಒಮ್ಮೆ, ಹೃದಯಾಘಾತವಾಗಿ ಬಿದ್ದು ಸಾವನಪ್ಪಿದ್ದಾನೆ ಎಂದು ಮತ್ತೊಮ್ಮೆ ಹೇಳುವ ಮೂಲಕ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದ್ದರೆ. ಪೊಲೀಸ್ ಕಿರುಕುಳವೇ ವಿನೋದ್ ಸಾವಿಗೆ ಕಾರಣ” ಎಂದು ಆರೋಪಿಸಿದ್ದಾರೆ.

ಪೊಲೀಸರು ಬಲವಂತವಾಗಿ ವಿನೋದ್ ಅಂತ್ಯಕ್ರಿಯೆ ನಡೆಸಿದ್ದಾರೆ. ಅವರ ತಾಯಿಯನ್ನು ಹೊರತುಪಡಿಸಿ ಉಳಿದ ಯಾರಿಗೂ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ನೀಡಿಲ್ಲ. ಇದು ಕಾನೂನುಬಾಹಿರವಾಗಿದ್ದು ಈ ಪ್ರಕರಣದಲ್ಲಿ ಎಲ್ಲಾ ಸಿಸಿಕ್ಯಾಮರಗಳನ್ನು ಪರಿಶೀಲಿಸಬೇಕು. ಸಮರ್ಪಕ ತನಿಖೆ ನಡೆದು ವಿನೋದ್ ಸಾವಿನ ನಿಖರ ಕಾರಣ ತಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಲಾಕಪ್ ಡೆತ್ …. ಪೋಲೀಸರು ತಮ್ಮ ಜವಾಬ್ದಾರಿಯನ್ನು ಮರೆತು … ಹುಡುನನನ್ನು ಲಾಕಪ್ ನಲ್ಲಿಯೇ ಕೊಂದು ಹಾಕಿದ್ದಾರೆ೦ದರೆ… ಸರಕಾರದ ಸಪೋರ್ಟ್ ಇಲ್ಲದಿದ್ದರೆ ಇದು ಸಾಧ್ಯವೇ?..
    ಆದಕ್ಕೆನೇ ಪೋಲೀಸರ ಮಕ್ಕಳು ಅಡ್ಡ ಕಾಯದಲ್ಲೆ ಹೋಗೋದು …. ಉಪ್ಪು ತಿಂದವರು ನೀರು ಕುಡಿತ್ತಾರೆ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...