Homeಕರ್ನಾಟಕಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನ: ಪುಸ್ತಕ ಮಾರಾಟಗಾರರ ಗೋಳು ಕೇಳುವವರ್ಯಾರು?

ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನ: ಪುಸ್ತಕ ಮಾರಾಟಗಾರರ ಗೋಳು ಕೇಳುವವರ್ಯಾರು?

- Advertisement -
- Advertisement -

ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮೊದಲ ದಿನವೇ ಜನ ಸಾಗರ ಹರಿದುಬಂದಿದೆ. ಕೆಲವು ಪುಸ್ತಕ ಮಾರಾಟಗಾರರಿಗೆ ತಕ್ಕಮಟ್ಟಿಗಿನ ಲಾಭವೂ ಆಗುತ್ತಿದೆ. ಆದರೆ ಪುಸ್ತಕ ಮಾರಾಟಗಾರರತ್ತ ಕನ್ನಡ ಸಾಹಿತ್ಯ ಪರಿಷತ್ತಿನ ಯಾವೊಬ್ಬ ಪ್ರತಿನಿಧಿಯೂ ಸುಳಿದಿಲ್ಲ. ಜೊತೆಗೆ ವಾಣಿಜ್ಯ ಮಳಿಗೆಯೊಳಗೆ ಒಂದಿಷ್ಟು ಪುಸ್ತಕ ಮಳಿಗೆಗಳನ್ನು ಹಾಕಿರುವುದರಿಂದಾಗಿ ಕೆಲವು ಪ್ರಕಾಶಕರು ಸಮಸ್ಯೆ ಎದುರಿಸುತ್ತಿದ್ದಾರೆ.

ಸಮ್ಮೇಳನದ ಆರಂಭದ ದಿನವೇ ಹೆಚ್ಚಿನ ಸಂಖ್ಯೆಯಲ್ಲಿ ಪುಸ್ತಕ ಮಳಿಗೆಗಳತ್ತ ಜನರು ಹರಿಬಂದಿದ್ದರು. ಎರಡನೇ ದಿನ ಮತ್ತಷ್ಟು ಪುಸ್ತಕ ಪ್ರೇಮಿಗಳು ಮಳಿಗೆಗಳತ್ತ ಧಾವಿಸುವ ನಿರೀಕ್ಷೆ ಇದೆ. ಆದರೆ ಸಮ್ಮೇಳನದ ಸಂಘಟಕರು ಪುಸ್ತಕ ಮಾರಾಟಗಾರರಿಗೆ ಬೇಕಾದ ಅಗತ್ಯತೆಗಳ ಕುರಿತು ಕೇಳುತ್ತಿಲ್ಲ. ಪ್ರತಿಸಲವೂ ಒಂದಲ್ಲ, ಒಂದು ಸಮಸ್ಯೆಯನ್ನು ಪ್ರಕಾಶಕರು ಅನುಭವಿಸುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಾಣಿಜ್ಯ ಮಳಿಗೆಯಲ್ಲಿ ಸಿಕ್ಕಿಕೊಂಡು ಸಮಸ್ಯೆ ಅನುಭವಿಸುತ್ತಿರುವ ಸಾಧನ ಪ್ರಕಾಶನದ ರವಿಚಂದ್ರ ರಾವ್ ಮಾತನಾಡಿ, “ಮಳಿಗೆಯೊಂದಕ್ಕೆ ಮೂರು ಸಾವಿರ ರೂಪಾಯಿಯನ್ನು ಕೊಡುತ್ತೇವೆ. ಪೋನ್ ಪೇ, ಗೂಗಲ್ ಪೇ ಮಾಡುವವರಿಗೆ ಇಂಟರ್ ನೆಟ್ ಸೌಲಭ್ಯವಿಲ್ಲ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ, ಮಳಿಗೆಗಳನ್ನು ರೂಪಿಸುತ್ತೀರಿ. ಸಾವಿರಾರು ಜನ ಸೇರುವ ಜಾಗದಲ್ಲಿ ನೆಟ್ ವರ್ಕ್ ಸಮಸ್ಯೆಯಾಗುತ್ತದೆ ಎಂಬ ಎಚ್ಚರಿಕೆ ಇರಬೇಕಿತ್ತಲ್ಲವೇ? ತಾತ್ಕಲಿಕವಾಗಿ ನೆಟ್ ವರ್ಕ್ ಸೌಲಭ್ಯ ಕಲ್ಪಿಸಬೇಕಿತ್ತು. ಕಸಾಪ ಅಧ್ಯಕ್ಷರಾದ ಜೋಶಿಯವರ ಮನೆಯಲ್ಲಿ ಏನಾದರೂ ಸಮಸ್ಯೆಯಾದರೆ, ತಕ್ಷಣಕ್ಕೆ ಕರೆ ಮಾಡಿ ಮಾತನಾಡಲು ಆಗದ ಪರಿಸ್ಥಿತಿ ಉಂಟಾಗಿದೆ’’ ಎಂದರು.

“ಇಲ್ಲಿ ವಾಣಿಜ್ಯ ಮಳಿಗೆ ಎಂದು ಬೋರ್ಡ್ ಹಾಕಿ ಪುಸ್ತಕ ಮಾರಾಟ ಮಾಡಲು ಅವಕಾಶ ನೀಡಿದ್ದಾರೆ. ಪುಸ್ತಕ ಮಳಿಗೆಗಳೆಲ್ಲ ಒಂದೇ ಕಡೆ ಇರಬೇಕು. ಇಲ್ಲಿಗೆ ಬರುವ ಗ್ರಾಹಕರು ಪುಸ್ತಕವನ್ನು ಖರೀದಿಸುವುದಕ್ಕಿಂತ ಬೇರೆ ವಸ್ತುಗಳ ಖರೀದಿಗೆ ಗಮನ ಕೊಡುತ್ತಾರೆ. ಪ್ರಕಾಶಕರನ್ನು ಕೆಳ ದರ್ಜೆಯಲ್ಲಿ ಕಸಾಪ ನೋಡುತ್ತಿದೆ. ಪ್ರಕಾಶಕರು, ಸಾಹಿತ್ಯ ಸಮ್ಮೇಳನ ಒಂದೇ ನಾಣ್ಯದ ಎರಡು ಮುಖಗಳು. ವೇದಿಕೆಗಳಲ್ಲಿ ನೀವಿದ್ದು, ನಿಮ್ಮ ಪ್ರಚಾರಕ್ಕೆ ಮಾತ್ರ  ಗಮನ ಕೊಡುತ್ತಿರುವುದಕ್ಕೆ ನಮ್ಮ ಧಿಕ್ಕಾರ’’ ಎಂದು ಕಿಡಿಕಾರಿದರು.

“ಮಹೇಶ ಜೋಶಿಯವರು ಯಾವುದೇ ಹೊಸ ನಿಯಮವನ್ನು ಜಾರಿಗೆ ತರುವಾಗ ಸೂಕ್ತ ಮಾಹಿತಿಯನ್ನು ನೀಡಬೇಕಿತ್ತು. ಪರಿಷತ್ ಸದಸ್ಯರಾಗಿದ್ದರಷ್ಟೇ ಪುಸ್ತಕ ಮಳಿಗೆ ಹಾಕಲು ಅವಕಾಶ ನೀಡುವುದಾಗಿ ನಿಯಮ ತಂದರು. ಆಪ್ ಮೂಲಕ ನೋಂದಣಿ ಮಾಡಿಕೊಳ್ಳಬೇಕಿತ್ತು. ಎಷ್ಟೋ ಮಂದಿ ಪ್ರಕಾಶಕರಿಗೆ ಮಾಹಿತಿ ಇರಲಿಲ್ಲ. ಹೊಸದಾಗಿ ತಯಾರಿ ಮಾಡಿರುವ ಆಪ್ ಸರಿಯಾಗಿ ಅಭಿವೃದ್ಧಿಪಡಿಸಲಾಗಿಲ್ಲ. ಬಹುತೇಕ ಮಾರಾಟಗಾರರು ಬಂದಿಲ್ಲ. ನಿಮಗೆ ವೇದಿಕೆ ಮತ್ತು ನಿಮ್ಮ ಹೆಸರು ಮುಖ್ಯವಷ್ಟೇ. ಜನಸಾಮಾನ್ಯರು ಮತ್ತು ಪುಸ್ತಕ ವ್ಯಾಪಾರಿಗಳು ಏನು ಮಾಡಬೇಕು?’’ ಎಂದು ಪ್ರಶ್ನಿಸಿದರು.

ಕನ್ನಡದ ಬಗ್ಗೆ ಆಸೆ, ಆಸಕ್ತರಾದವರು ಕಸಾಪ ಅಧ್ಯಕ್ಷರಾಗುವುದು ಮುಖ್ಯ. ಐಎಎಸ್, ಐಪಿಎಸ್ ಅಧಿಕಾರಿಗಳಲ್ಲ. ಕನ್ನಡ ಪುಸ್ತಕ ಮತ್ತು ಪ್ರಕಾಶನದ ಬಗ್ಗೆ ಆಸಕ್ತಿ ಇರುವವರು ಅಧ್ಯಕ್ಷರಾಗಬೇಕು. ಜೋಶಿಯವರು ಕನ್ನಡ, ಕನ್ನಡ ಎನ್ನುತ್ತಾರೆ. ಇಲ್ಲಿನ ಮಳಿಗೆಗಳಿಗೆ ಕ್ರಮಾಂಕ ಕೊಡುವಾಗ ಎ, ಬಿ, ಸಿ, ಡಿ ಅಂತ ನೀಡಿದ್ದಾರೆ. ಅದನ್ನೇ ಅ, ಆ, ಇ, ಈ ಅಂತ ಕೊಡಬಹುದಿತ್ತಲ್ಲ’’ ಎಂದು ಬೇಸರ ವ್ಯಕ್ತಪಡಿಸಿದರು.

ಮಳಿಗೆಗಳಲ್ಲಿ ಬಿದ್ದಿರುವ ಕಸದ ವಿಲೇವಾರಿಗೆ ಕ್ರಮ ಜರುಗಿಸಿಲ್ಲ. ಮಳಿಗೆಗಳ ಮುಂದೆ ಕಸವನ್ನು ಗುಡ್ಡೆ ಹಾಕಿಕೊಂಡ ಪುಸ್ತಕ ಪ್ರೇಮಿಗಳನ್ನು ಒಳಗೆ ಕರೆಯುವಂತಾಗಿದೆ. ಈ ಹಿಂದಿನ ಸಮ್ಮೇಳನಗಳಲ್ಲಿ ಕಸಾಪ ಪ್ರತಿನಿಧಿಗಳು ನಮ್ಮತ್ತ ಬಂದು, ನಮ್ಮ ಅಗತ್ಯತೆಗಳ ಕುರಿತು ಕನಿಷ್ಠ ವಿಚಾರಿಸಿಕೊಳ್ಳುತ್ತಿದ್ದರು ಎಂದು ಪ್ರಕಾಶಕರೊಬ್ಬರು ತಿಳಿಸಿದರು.

ಮೊದಲೆಲ್ಲ ಪುಸ್ತಕ ಮಾರಾಟಗಾರರು ಜಿಲ್ಲಾ ಕಸಾಪ ಕಚೇರಿಯಲ್ಲಿ ನೊಂದಣಿ ಮಾಡಿಕೊಂಡಿದ್ದರೆ ಮುಗಿಯುತ್ತಿತ್ತು. ಆಪ್ ಮೂಲಕ ನೊಂದಣಿ ಎಂಬ ನಿಯಮ ತಂದು ಸಮ್ಮೇಳನ ಆರಂಭದಿಂದಲೇ ಪುಸ್ತಕ ಮಾರಾಟಗಾರರ ಮೇಲೆ ಪ್ರಹಾರ ಮಾಡಲಾಯಿತು. ಈಗ ಸಮ್ಮೇಳನದ ಸಮಯದಲ್ಲೂ ಕಸಾಪ ಪ್ರತಿನಿಧಿಗಳು ಪುಸ್ತಕ ಮಳಿಗೆಗಳತ್ತ ಸುಳಿಯದೆ ಮತ್ತದೇ ಧೋರಣೆ ಮುಂದುವರಿಸಿದ್ದಾರೆ ಎಂದು ಮಾರಾಟಗಾರರು ವಿಷಾಧಿಸಿದರು.

ಮತ್ತೊಬ್ಬ ಪ್ರಕಾಶಕರು ಪ್ರತಿಕ್ರಿಯಿಸಿ, “ಅಕ್ಷರ ಜಾತ್ರೆಗೆ ಜನಸಾಗರ ಹರಿದುಬರುತ್ತಿದೆ. ಧೂಳು ಎದ್ದೇಳದಂತೆ ಹಸಿರು ಕಾರ್ಪೇಟ್ ಹಾಸಿರುವುದರಿಂದ ಧೂಳಿನ ಸಮಸ್ಯೆ ತಲೆದೋರಿಲ್ಲದಿರುವುದು ಖುಷಿಯ ಸಂಗತಿ. ವಿಚಾರ ಸಾಹಿತ್ಯ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತ್ಯ ಕೃತಿಗಳಿಗೆ ಹೆಚ್ಚಿನ ಬೇಡಿಕೆ ಇದೆ. ಹಾವೇರಿ ಸಮ್ಮೇಳನ ಸ್ವಲ್ಪಮಟ್ಟಿಗೆ ಲಾಭವನ್ನು ಮಾಡಿಕೊಟ್ಟಿದೆ’’ ಎಂದರು.

ಇದನ್ನೂ ಓದಿ; ಪ್ರಾತಿನಿಧ್ಯ ಸಮಸ್ಯೆಗಳಿಂದ ಕಾವೇರಿದ ಹಾವೇರಿ ಸಾಹಿತ್ಯ ಸಮ್ಮೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...