Homeಕರ್ನಾಟಕಕನ್ನಡದಲ್ಲಿ ತೀರ್ಪು ಬರೆದರೆ ಜನರ ವಿಶ್ವಾಸ ಹೆಚ್ಚುತ್ತದೆ: ಜಸ್ಟಿಸ್ ಅರಳಿ ನಾಗರಾಜ

ಕನ್ನಡದಲ್ಲಿ ತೀರ್ಪು ಬರೆದರೆ ಜನರ ವಿಶ್ವಾಸ ಹೆಚ್ಚುತ್ತದೆ: ಜಸ್ಟಿಸ್ ಅರಳಿ ನಾಗರಾಜ

- Advertisement -
- Advertisement -

ನ್ಯಾಯಾಲಯ ನೀಡುವ ತೀರ್ಪುಗಳು ಜನ ಸಾಮಾನ್ಯರಿಗೆ ಅರ್ಥವಾಗುವಂತಿದ್ದರೆ ಕಾನೂನಿನ ಮೇಲೆ ಜನರಿಗೆ ನಂಬಿಕೆ ಉಳಿಯಲು ಸಾಧ್ಯ. ಈ ದಿಸೆಯಲ್ಲಿ ಕನ್ನಡ ಭಾಷೆಯಲ್ಲಿ ನ್ಯಾಯದಾನ ಮಾಡಿದರೆ, ನಮ್ಮಲ್ಲಿನ ಜನರಿಗೆ ನ್ಯಾಯಾಲಯದ ಮೇಲೆ ಹೆಚ್ಚು ನಂಬಿಕೆ, ವಿಶ್ವಾಸ ಬೆಳೆಯುತ್ತದೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅರಳಿ ನಾಗರಾಜರವರು ಅಭಿಪ್ರಾಯಪಟ್ಟರು.

ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಕನ್ನಡ ಸಾಹಿತ್ಯ ಸಮ್ಮೇಳದ ಅಂಗವಾಗಿ ಕನಕ-ಶರೀಫ- ಸರ್ವಜ್ಷ ಪ್ರಧಾನ ವೇದಿಕೆಯಲ್ಲಿ ಎರಡನೆ ಇದನ ನಡೆದ “ಕನ್ನಡದಲ್ಲಿ ಕಾನೂನು ಸಾಹಿತ್ಯ” ಕುರಿತ ಗೋಷ್ಠಿಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನ್ಯಾಯಾಲಯ ನೀಡುವಂತಹ ತೀರ್ಪುಗಳು ಇಂದಿನ ದಿನಗಳಲ್ಲಿ ಕಕ್ಷಿದಾರರಿಗೆ, ಶ್ರೀಸಾಮಾನ್ಯರಿಗೆ ಅರ್ಥವಾಗದ ಕಾರಣ, ಪ್ರಕರಣಗಳು ದೀರ್ಘಕಾಲ ಎಳೆಯುತ್ತಿವೆ. ನ್ಯಾಯಾಲಯದಲ್ಲಿ ಪ್ರಕರಣಗಳ ತೀರ್ಪುಗಳು ವಿಳಂಬವಾಗುತ್ತವೆ. ಆದ್ದರಿಂದ ಶ್ರೀಸಾಮಾನ್ಯರಿಗೆ ಕಥೆಗಳ ಮೂಲಕ, ನಾಟಕಗಳ ಮೂಲಕ, ಸಾಹಿತ್ಯಗಳ ಮೂಲಕ ಅವರ ಮಾತೃಭಾಷೆಯಲ್ಲಿ ತಿಳಿವಳಿಕೆ ಮೂಡುಸುವುದರ ಮೂಲಕ ಸಾಮಾನ್ಯ ಕಾನೂನುಗಳ ಬಗ್ಗೆ ಅರಿವು ಮೂಡಸಬೇಕಿದೆ ಎಂದು ಹೇಳಿದರು.

ಹುಬ್ಬಳ್ಳಿ ಕರ್ನಾಟಕ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಡಾ. ಸಿ. ಬಸವರಾಜ ಮಾತನಾಡಿ, “ಕಾನೂನಾತ್ಮಕ ಪುಸ್ತಕಗಳು ಹೆಚ್ಚಿನ ಪ್ರಮಾಣದಲ್ಲಿ ಕನ್ನಡದಲ್ಲಿ ಹೊರಬರುವಂತೆ ಮಾಡಲು ಸರ್ಕಾರ ಕನ್ನಡ ಕಾನೂನು ಪ್ರಾಧಿಕಾರ ರಚನೆ ಮಾಡಬೇಕು. ಕನ್ನಡ ಕಾನೂನು ಪ್ರಾಧಿಕಾರ ರಚಿಸುವುದರ ಮೂಲಕ ಹೆಚ್ಚು ಸಂಶೋಧನಾತ್ಮಕ ಕನ್ನಡ ಕಾನೂನು ಪುಸ್ತಕಗಳು ರಚಿಸುವುದ ಮೂಲಕ ಯುವ ಸಾಹಿತಿಗಳಿಗೆ ಹೆಚ್ಚು ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದರು.

ಕರ್ನಾಟಕದಲ್ಲಿ ಇಂದು ಸುಮಾರು 109 ಕಾನೂನು ಕಾಲೇಜುಗಳಿದ್ದು, ಕಾನೂನಾತ್ಮಕ ಕನ್ನಡ ಪುಸ್ತಕಗಳು ದೊರಕದೇ ಇರುವುದು ದುರ್ದೈವದ ಸಂಗತಿಯಾಗಿದೆ. ಕಾನೂನು ವ್ಯಾಸಂಗಕ್ಕೆ ಹೆಚ್ಚು ಸಂಶೋಧನಾತ್ಮಕ ಪುಸ್ತಕಗಳು ದೊರಕಿಸಿಕೊಡುವುದರ ಮೂಲಕ ಕನ್ನಡ ಭಾಷಾಭಿಮಾನ ಹೆಚ್ಚಿಸುವುದಲ್ಲದೇ, ಕನ್ನಡ ಕಾನೂನಾತ್ಮಕ ಸಾಹಿತ್ಯ ಬೆಳಿಸುವುದರಲ್ಲಿ ಸಹಕಾರಿಯಾಗುತ್ತದೆ. ಇದಲ್ಲದೇ ಕಾನೂನಾತ್ಮಕ ಸಾಹಿತ್ಯ ಬರೆಯುವ ಯುವ ಸಾಹಿತಿಗಳಿಗೆ ಸರ್ಕಾರ ಪ್ರೋತ್ಸಾಹ ಧನ ನೀಡಬೇಕು ಎಂದರು.

‘ಶ್ರೀಸಾಮಾನ್ಯರಿಗೆ ಕನ್ನಡದಲ್ಲಿ ಕಾನೂನು ಅರಿವು’ ಕುರಿತು ನಿವೃತ್ತ ಜಿಲ್ಲಾ ನ್ಯಾಯಾಧೀಶ ಸಿದ್ದಪ್ಪ ಕೆಂಪಗೌಡರ ಮಾತನಾಡಿ, “ನ್ಯಾಯಾಲಯಗಳು ಇರುವುದು ನ್ಯಾಯಾಧೀಶರಿಗಲ್ಲ, ನ್ಯಾಯಾಲಯ ಇರುವುದು ಶ್ರೀಸಾಮಾನ್ಯರಿಗೆ. ಆದ್ದರಿಂದ ಪ್ರತಿಯೊಬ್ಬ ಶ್ರೀಸಾಮಾನ್ಯರಿಗೂ ಸಾಮಾನ್ಯ ಕಾನೂನು ತಿಳುವಳಿಕೆ ಅಗತ್ಯವಾಗಿದೆ. ಸಾಮಾನ್ಯ ಜನರು ‘ನನಗೆ ಕಾನೂನು ಗೊತ್ತಿಲ್ಲ ಎನ್ನಬಾರದು, ಕಾನೂನು ತಪ್ಪು ಮಾಡಿದರೆ ಕ್ಷಮಿಸುವುದಿಲ್ಲ. ನ್ಯಾಯಾಧೀಶರು ಕೇವಲ ಪ್ರಶಸ್ತಿಗಾಗಿ ಕನ್ನಡ ಭಾಷೆಯಲ್ಲಿ ತೀರ್ಪು ನೀಡುವುದಲ್ಲ, ನ್ಯಾಯಾಧೀಶರಿಗೆ ಕನ್ನಡ ಭಾಷೆಯ ಬಗ್ಗೆ ಅಭಿಮಾನವಿರಲಿ. ತಾವು ನೀಡುವ ತೀರ್ಪುಗಳು ಕನ್ನಡದಲ್ಲಿದ್ದರೆ ಶ್ರೀಸಾಮಾನ್ಯರಿಗೂ, ಕಕ್ಷಿದಾದರಿಗೂ ನ್ಯಾಯ ಒದಗಿಸಿದಂತೆ ಮತ್ತು ಕನ್ನಡ ಭಾಷಾಭಿಮಾನ ಬೆಳಿಸಿದಂತೆ ಎಂದರು.

ಇದನ್ನೂ ಓದಿ:  ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನ: ಪುಸ್ತಕ ಮಾರಾಟಗಾರರ ಗೋಳು ಕೇಳುವವರ್ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...