Homeಕರ್ನಾಟಕವಿಶ್ವಾಸಮತ ಯಾಚನೆ ಇಂದೂ ನಡೆಯುವುದು ಅನುಮಾನ ಎಂಬ ವಾತಾವರಣ ಏಕೆ ನಿರ್ಮಾಣವಾಗಿದೆ?

ವಿಶ್ವಾಸಮತ ಯಾಚನೆ ಇಂದೂ ನಡೆಯುವುದು ಅನುಮಾನ ಎಂಬ ವಾತಾವರಣ ಏಕೆ ನಿರ್ಮಾಣವಾಗಿದೆ?

ಅನರ್ಹರಾಗಲಿ, ಸರ್ಕಾರ ಉಳಿಯೋದು ಬೇಡ ಎಂಬುದು ಸ್ಪೀಕರ್ ಅಪೇಕ್ಷೆಯಾಗಿತ್ತು

- Advertisement -
- Advertisement -

ಶಾಸಕರ ಅನರ್ಹತೆ ಕುರಿತ ಅಂತಿಮ ತೀರ್ಮಾನ ತೆಗೆದುಕೊಂಡಿದ್ದ ಸ್ಪೀಕರ್ ಮೇಲೆ ಬಂದ ಒತ್ತಡವು ವಿಶ್ವಾಸಮತ ಯಾಚನೆಯನ್ನು ಮಂಗಳವಾರಕ್ಕೆ ಮುಂದೂಡುವಂತೆ ಮಾಡುವ ಸಾಧ್ಯತೆ ಇದೆ. ಸೋಮವಾರ ಬೆಳಿಗ್ಗೆಯವರೆಗೆ ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಮುಖಂಡರ ಒತ್ತಡಕ್ಕೆ ಸ್ಪೀಕರ್ ಒಂದಿಂಚೂ ಬಗ್ಗಿರಲಿಲ್ಲ. ‘ನಿಮಗೆ ಇಷ್ಟು ಸಮಯ ಸಿಕ್ಕಿದ್ದರೂ ಒಬ್ಬರೂ ಬಂದಿಲ್ಲ. ಸದನದಲ್ಲಿ ನಡೆದ ಚರ್ಚೆಯು ಈಗಾಗಲೇ ಬಿಜೆಪಿಯವರು ಮಾಡಿದ್ದು ತಪ್ಪು ಎಂಬ ಭಾವನೆಯು ಬರುವಂತೆ ಆಗಿದೆ. ಆದರೆ, ಇದನ್ನು ಮತ್ತಷ್ಟು ಎಳೆಯುವುದು ಒಳ್ಳೆಯದಲ್ಲ. ನಾನೂ ಸಹಾ ಶುಕ್ರವಾರ ಸದನದಲ್ಲಿ ಸೋಮವಾರ ಮುಗಿಸುವ ವಿಚಾರ ಹೇಳಿದ್ದೇನೆ. ಒಂದು ವೇಳೆ ನೀವು ನನ್ನ ಮೇಲೆ ಒತ್ತಡ ತರುವುದಾದಲ್ಲಿ ನಾನು ರಾಜೀನಾಮೆ ಕೊಡುತ್ತೇನೆ’ ಎಂದು ಸ್ಪೀಕರ್ ಹೇಳಿದರೆಂದು ಅವರ ಸಮೀಪವರ್ತಿಗಳು ಹೇಳುತ್ತಾರೆ.

ಇಡೀ ಪ್ರಕರಣದ ಕೇಂದ್ರಬಿಂದುವಾಗಿರುವ ಸ್ಪೀಕರ್ ರಮೇಶ್ ಕುಮಾರ್ ಅವರ ನಿರ್ಧಾರದ ಮೇಲೆ ವಿಶ್ವಾಸಮತ ಯಾಚನೆ ಯಾವಾಗ ಆಗುತ್ತದೆಂಬುದು ತೀರ್ಮಾನವಾಗಲಿದೆ. ಇಂದು ಸಂಜೆಯವರೆಗೂ ಅವರ ಕಟು ನಿರ್ಧಾರ ‘ಆಪರೇಷನ್ ಕಮಲದ ಆಮಿಷಕ್ಕೆ ಪಕ್ಷಾಂತರ ಮಾಡಿರುವ ಶಾಸಕರನ್ನು ಅನರ್ಹಗೊಳಿಸಲೇಬೇಕು. ಅವರಿಗಾಗಿ ಕಾಯುತ್ತಾ ವಿಶ್ವಾಸಮತವನ್ನು ಎಳೆಯುವ ಸಮ್ಮಿಶ್ರ ಪಕ್ಷಗಳ ಉದ್ದೇಶವನ್ನು ತಾನು ಒಪ್ಪುವುದಿಲ್ಲ’ ಎಂದೇ ಆಗಿತ್ತು. ಆದರೆ, ‘ಗುರುವಾರದವರೆಗೆ ಕಾದರೆ ಗ್ರಹಗತಿಗಳು ಸರಿ ಹೋಗುತ್ತವೆ, ಸರ್ಕಾರ ಉಳಿಯುತ್ತದೆ’ ಎಂಬ ಮೌಢ್ಯಕ್ಕೆ ಬಲಿ ಬಿದ್ದಿರುವ ಗೌಡರ ಕುಟುಂಬವು ಅವರನ್ನು ಒಲಿಸುವ ಪ್ರಯತ್ನಕ್ಕೆ ಕೈ ಹಾಕಿ ಸಫಲವಾಗಿರಲಿಲ್ಲ. ಕನಿಷ್ಠ ಪಕ್ಷ ನಾಳೆ ಒಂದು ದಿನದ ಮಟ್ಟಿಗಾದರೂ ಮುಂದೂಡಿ ಎಂಬುದು ಅವರ ಆಗ್ರಹವಾಗಿತ್ತು. ಮೊದಮೊದಲು ಅವರ ದನಿಗೆ ಹ್ಞೂಂಗುಡದಿದ್ದ ಸಿದ್ದರಾಮಯ್ಯನವರೂ ನಂತರ ಸ್ಪೀಕರ್ ಅವರಿಗೆ ‘ಒಂದು ದಿನ ನೋಡೋಣ’ ಎಂಬ ಸಂದೇಶ ಕಳಿಸಿದ್ದಾರೆ.

ಅಂತಿಮವಾಗಿ ಕೆ.ಸಿ.ವೇಣುಗೋಪಾಲ್ ಅವರ ಮೂಲಕ ಫೋನ್ ಮಾಡಿಸಿ, ಸ್ಪೀಕರ್ ಮೇಲೆ ಇನ್ನಿಲ್ಲದ ಒತ್ತಡ ತಂದರೆಂದು ಹೇಳಲಾಗುತ್ತಿದೆ. ಈ ಮಧ್ಯೆ ಡಿ.ಕೆ.ಶಿವಕುಮಾರ್ ಮಾಧ್ಯಮಗಳ ಜೊತೆ ಮಾತನಾಡಿ ‘ರೆಬೆಲ್ ಶಾಸಕರು ಬೇಗ ತೀರ್ಮಾನ ತೆಗೆದುಕೊಂಡು ಬೆಳಿಗ್ಗೆ 11 ಗಂಟೆ ಒಳಗೆ ವಾಪಸ್ ಬರಲಿ. ಇಲ್ಲವಾದರೆ ಅನರ್ಹತೆ ಖಚಿತ. ಬಿಜೆಪಿಯವರು ನಿಮ್ಮ ತಲೆಗೆ ಮಂಗನ ಟೋಪಿ ತೊಡಿಸುತ್ತಾರೆ ಅಷ್ಟೇ’ ಎಂದು ಹೇಳಿದರು.

ಇವೆಲ್ಲದರ ಕಾರಣದಿಂದ ಒತ್ತಡಕ್ಕೆ ಒಳಗಾದ ಸ್ಪೀಕರ್ ಯಾವ ತೀರ್ಮಾನ ತೆಗೆದುಕೊಳ್ಳುವುದು ಎಂಬ ತೂಗುಯ್ಯಾಲೆಯಲ್ಲಿ ಬಿದ್ದಿರುವುದರಿಂದಲೇ ಯಾವ ನಿರ್ಧಾರವನ್ನೂ ಘೋಷಿಸದೇ ಮ್ಲಾನವದನರಾಗಿ ಕುಳಿತಿದ್ದಾರೆ. ಯಾರಿಗೂ ಚೈತನ್ಯದಿಂದ ಮಾತನಾಡುವ ಉಮೇದೂ ಇಲ್ಲದೇ, ಎಳೆಯುವ ಉದ್ದೇಶದಿಂದ ಮಾತ್ರ ಮಾತನಾಡುತ್ತಿರುವಾಗ ಅನಗತ್ಯವಾಗಿ ಮುಂದೂಡುವ ಮೂಲಕ ಮೈತ್ರಿ ಪಕ್ಷಗಳ ಒತ್ತಡಕ್ಕೆ ಗುರಿಯಾಗುತ್ತಾರಾ, ಇಲ್ಲವೇ ಅವರ ಮೂಲ ನಿಲುವಿಗೆ ಬದ್ಧರಾಗಿ ವಿಶ್ವಾಸಮತಯಾಚನೆಗೆ ಹಾಕುತ್ತಾರಾ ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...