Homeಮುಖಪುಟಶ್ರೀಸಾಮಾನ್ಯರು ಕಂಡಂತೆ ಸಾಹಿತ್ಯ ಸಮ್ಮೇಳನ: ಭುವನೇಶ್ವರಿದೇವಿ ನಮ್ ಊರಿನೊಳಗೆ ಬಂದೌಳ ಅನ್ನೋ ಅಭಿಮಾನ

ಶ್ರೀಸಾಮಾನ್ಯರು ಕಂಡಂತೆ ಸಾಹಿತ್ಯ ಸಮ್ಮೇಳನ: ಭುವನೇಶ್ವರಿದೇವಿ ನಮ್ ಊರಿನೊಳಗೆ ಬಂದೌಳ ಅನ್ನೋ ಅಭಿಮಾನ

- Advertisement -
- Advertisement -

ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಅಕ್ಷರ ಹಾಗೂ ಜನ ಸಂಗಮದ ಬೃಹತ್ ಜಾತ್ರೆ. ಮಕ್ಕಳಿಂದ ಹಿಡಿದು ಇಳಿಗಾಲದ ಹಿರಿಯರವರೆಗೂ ಸಮ್ಮೇಳನದ ಕುರಿತು ಅತೀವ ಕುತೂಹಲ. ಅದರಲ್ಲೂ ಹಾವೇರಿ ಜಿಲ್ಲೆಗೆ ಇದೇ ಮೊದಲ ಬಾರಿಗೆ ಸಮ್ಮೇಳನದ ಆತಿಥ್ಯ ದೊರೆತಿರುವುದರಿಂದ ಜಿಲ್ಲೆಯ ಶ್ರೀಸಾಮಾನ್ಯರು ಸಾಗರೋಪಾದಿಯಲ್ಲಿ ಕನ್ನಡ ಜಾತ್ರೆಗೆ ಆಗಮಿಸುತ್ತಿದ್ದಾರೆ.

ರಾಜ್ಯದ ಮೂಲೆಮೂಲೆಯಿಂದ ಬಂದ ಜನರ ಜೊತೆಗೆ ಹಾವೇರಿ ಜಿಲ್ಲೆಯ ಜನತೆ ತೀವ್ರ ಕುತೂಹಲಗೊಂಡು ಸಮ್ಮೇಳನಕ್ಕೆ ಬರುತ್ತಿದ್ದಾರೆ. ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಇಂಥದೊಂದು ಕಾರ್ಯಕ್ರಮ ನಡೆಯುತ್ತಿರುವ ಖುಷಿ ಅನೇಕರಿಗೆ.

“ರಾಯಚೂರು, ಚಿತ್ರದುರ್ಗ ಎಲ್ಲ ಕಡೆ ಸಾಹಿತ್ಯ ಸಮ್ಮೇಳನ ಆಗೇವ. ಹಾವೇರಿ ಜಿಲ್ಲೆಯೊಳಗೆ ಕನ್ನಡ ಸಾಹಿತ್ಯ ಸಮ್ಮೇಳನ ಅಂದ್ರ  ಏನಂತಾನೇ ಗೊತ್ತಿರಲಿಲ್ಲ. ಇದೇ ಮೊದಲ ಸಲ ಸಮ್ಮೇಳನ ನೋಡಿ ಖುಷಿಯಾಗೈತೆ’’ ಎನ್ನುತ್ತಾರೆ ಹಾವೇರಿ ಜಿಲ್ಲೆಯ ಬಂಕಾಪುರದ ನೇಕಾರರಾದ ಶಿಲ್ಪಾ.

ಮುಂದುವರಿದು, “ಮಕ್ಕಳಿಗೆ ಕನ್ನಡ ಅಂದ್ರೆ ಏನಂತ ಗೊತ್ತಿಲ್ಲ. ಅರಣ್ಯ ಅಂದ್ರೆ ಏನಂತ ಗೊತ್ತಿಲ್ಲ. ಅದನ್ನೆಲ್ಲ ತಿಳಿಸುವ ಕೆಲಸ ಮಾಡಿದ್ದಾರೆ. ತಾಯಿ ಭುವನೇಶ್ವರಿ ನಮ್ ಊರಿನೊಳಗ ಬಂದೌಳ ಅನ್ನೋ ಅಭಿಮಾನ. ಕನ್ನಡದೊಳಗ ಹುಟ್ಟಿದಕ್ಕೂ ನಮ್ ಜೀವನ ಸಾರ್ಥಕವಾಯ್ತು’’ ಎಂಬುದು ಅವರ ಧನ್ಯತಾ ಭಾವ.

ಬಂಕಾಪುರದ ಲೀಲಾವತಿಯವರು ಮಾತನಾಡಿ,  “ತುಂಬಾ ಚೆನ್ನಾಗೈತೆ. ಮಕ್ಕಳನ್ನು ಕರೆದುಕೊಂಡು ಬಂದಿದ್ದೇವೆ. ಇದೇ ಫಸ್ಟ್ ಟೈಮ್ ಸಮ್ಮೇಳನ ನೋಡ್ತಾ ಇದ್ದೇವೆ. ಮಕ್ಕಳು ತಿಳಿದುಕೊಳ್ತಾವೊ. ಸಾಹಿತ್ಯ ಸಮ್ಮೇಳನ ಅಂದ್ರೆ ಎನಂಥ ಗೊತ್ತಿರಲಿಲ್ಲ. ನೋಡಲೇಬೇಕು ಅಂತ ಬಂದಿದ್ದೇವೆ’’  ಎಂದು ಸಂತಸ ವ್ಯಕ್ತಪಡಿಸಿದರು.

ಲೀಲಾವತಿ

ಸಿದ್ದಾಪುರದಿಂದ ಆಗಮಿಸಿದ್ದ ಕಲಾವಿದ ಬಸವರಾಜು ಮಾತನಾಡಿ, ಸುಗಮ ಸಂಗೀತ ಕಾರ್ಯಕ್ರಮದಲ್ಲಿ ನನಗೂ ಅವಕಾಶ ನೀಡಿದ್ದಾರೆ. ಪುಟ್ಟರಾಜ ಗವಾಯಿ, ಹಾನಗಲ್ ಕುಮಾರಸ್ವಾಮಿಯಂತಹ ರತ್ನಗಳಿದ್ದ ಯಾಲಕ್ಕಿ ನಾಡಿದು’’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಗದಗ ಜಿಲ್ಲೆಯ ತಮ್ಮನಗೌಡ ಪಾಟೀಲ ಅವರು ಮಾತನಾಡಿ, “ಇತರೆ ಸಮ್ಮೇಳನಕ್ಕಿಂತ ಹಾವೇರಿ ಸಮ್ಮೇಳನ ಭಿನ್ನವಾಗಿದೆ. ಎಲ್ಲರ ಅಭಿರುಚಿಗೆ ತಕ್ಕಂತೆ ಪುಸ್ತಕಗಳಿವೆ. ಕಡಿಮೆ ದರದಲ್ಲಿ ಪುಸ್ತಕಗಳು ನಡೆಯುತ್ತಿವೆ. ನಾನು ನೋಡಿರುವ ಸಮ್ಮೇಳನದಲ್ಲಿ ವಿಶಿಷ್ಟ ಸಮ್ಮೇಳನ ಇದಾಗಿದೆ. ಧಾರವಾಡ ಸಮ್ಮೇಳಕ್ಕೆ ಹೋಗಿದ್ದೆ. ಅಲ್ಲಿ ಸ್ಥಳ ಬಹಳ ಇಕ್ಕಟ್ಟಿನಿಂದ ಕೂಡಿತ್ತು’’ ಎಂದು ಸ್ಮರಿಸಿದರು.

ತಮ್ಮನಗೌಡ ಪಾಟೀಲ

ಹಾವೇರಿಯ ಸ್ಥಳೀಯ ಯುವಕ ಅನಂತ ಪ್ರತಿಕ್ರಿಯಿಸಿ, “ಜನರು ಶಾಂತ ರೀತಿಯಿಂದ ವರ್ತಿಸಬೇಕು. ಸ್ಪಚ್ಛತೆ ಕಾಪಾಡಬೇಕು. ಹಳ್ಳಿಗಳ ನಾಡು, ಜನಪದ ಕಲೆಗಳ ಬೀಡು, ಸರ್ವಜ್ಞ ನಡೆದಾಡಿದ ನೆಲ ಹಾವೇರಿ. ಇಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಬಹಳ ಖುಷಿಯನ್ನು ತಂದಿದೆ’’ ಎಂದರು.

ಅನಂತ

ಜಗದೀಶ ಸೋಮನಾಥಪುರ ಎಂಬವರು ಸಂತಸ ವ್ಯಕ್ತಪಡಿಸುತ್ತಾ, “ಸಮುದ್ರ ಚೆನ್ನಾಗೈತೆ. ವ್ಯವಸ್ಥೆ ಚೆನ್ನಾಗೈತೆ, ಒಟ್ಟು ಒಂಬತ್ತು ಮಂದಿ ಬಂದಿದ್ದೇವೆ. ಊಟ ಮಾಡಿದ್ವಿ, ಕಾರ್ಯಕ್ರಮ ನೋಡಿದ್ವಿ’’ ಎಂದು ತಮ್ಮದೇ ಧಾಟಿಯಲ್ಲಿ ಹೇಳಿದರು.

ಜಗದೀಶ ಸೋಮನಾಥಪುರ

ಭುವನೇಶ್ವರಿ ವೇಷಭೂಷಣ ಧರಿಸಿ ಗಮನ ಸೆಳೆಯುತ್ತಿದ್ದ ಬೆಂಗಳೂರಿನ ಶೋಭಾ ಮಾತನಾಡಿ, “ಅನ್ಯಭಾಷೆಗಳಿಗಿಂತ ಕನ್ನಡವೇ ಮೇಲು. ಕರ್ನಾಟಕದಲ್ಲಿ ಕನ್ನಡ ಭಾಷೆಯೇ ಪ್ರಧಾನ,  ಉಳಿದೆಲ್ಲ ಭಾಷೆಗಳು ನಿಧಾನ’’ ಎಂದರು.

“ಇದೇ ರೀತಿಯ ವೇಷಭೂಷಣದಲ್ಲಿ ಹಲವು ಸಾಹಿತ್ಯ ಸಮ್ಮೇಳನಗಳಿಗೆ ಹೋಗಿಬಂದಿದ್ದೇನೆ. ವಿಭಿನ್ನ ವೇಷ ಭೂಷಣ ಹಾಕಿದರೆ, ಜನ ಗಮನಿಸುತ್ತಾರೆ.  ಈ ಮೂಲಕ ಇಂದಿನ ಯುವ ಸಮುದಾಯದಲ್ಲಿ ಕನ್ನಡಾಭಿಮಾನ ಮೂಡಿಸಲು ಯತ್ನಿಸುತ್ತಿದ್ದೇನೆ’’ ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯವರಾದ ಎಂ.ಸುಬ್ರಮಣಿಯವರು `ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಕಳೆದ ಹದಿನೈದು ವರ್ಷಗಳಿಂದ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದೇನೆ. ಮಹೇಶ್ ಜೋಶಿಯವರು ಚೆನ್ನಾಗಿ ಆಯೋಜನೆ ಮಾಡಿದ್ದಾರೆ. ಆರೋಪಗಳು ಇದ್ದೇ ಇರುತ್ತವೆ. ಬಂದಿರುವ   ಆರೋಪಗಳನ್ನು ಗಣನೆಗೆ ತೆಗೆದುಕೊಂಡು ಮುಂದಿನ ಸಮ್ಮೇಳನದಲ್ಲಿ ಸರಿಪಡಿಸಿಕೊಳ್ಳಬೇಕು’’ ಎಂದು ಆಶಿಸಿದರು.

ಕಲಾವಿದ ಬಸವರಾಜು

ಎಲ್ಲಾ ಸಮ್ಮೇಳನದಲ್ಲಿ ಗಂಭೀರ ಸಂಗತಿಗಳು ಪ್ರಸ್ತಾಪವಾಗುತ್ತವೆ. ಎಲ್ಲ ನಿರ್ಣಯಗಳು ಮಂಡಿಸುತ್ತಾರೆ. ಅದರಲ್ಲಿ ಸ್ವಲ್ಪನಾದರೂ ಆಗಬೇಕು. ಗಡಿ ವಿವಾದ ಬಗೆಹರಿಯುತ್ತಿಲ್ಲ. ಇದು ಮುಂದಿನ ದಿನಗಳಲ್ಲಾದರೂ ಸರಿಯಾಗಬೇಕು’ ಎಂದು ಒತ್ತಾಯಿಸಿದರು.

ಮುಂಜಾನೆಯೇ `ನಾನುಗೌರಿ.ಕಾಂ’ಗೆ ಮಾತಿಗೆ ಸಿಕ್ಕ ಗೋಕಾಕಿನ ವೃದ್ಧ ಸಿ.ಎ.ಪಾಟೀಲ್, “ರಾಯಚೂರು ಒಂದನ್ನು ಬಿಟ್ಟು ಉಳಿದೆಲ್ಲ ಸಮ್ಮೇಳನಗಳು ಛಲೋ ಆಗಿದ್ದವಾ. ಟೈಮ್ಗೆ ಕಿಮ್ಮತ್ತು ಕೊಡೋರಂತೂ ಯಾರೂ ಇಲ್ಲ.  ಒಂಬತ್ತೂವರೆಗೆ ಟೈಮ್ ಕೊಟ್ಟಿದ್ದಾರ, ಒಬ್ಬರಾದ್ರೂ ವಿಐಪಿಗಳು ಬರೋರಿಲ್ಲ’’ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಪ್ರಾತಿನಿಧ್ಯ ಸಮಸ್ಯೆಗಳಿಂದ ಕಾವೇರಿದ ಹಾವೇರಿ ಸಾಹಿತ್ಯ ಸಮ್ಮೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...