Homeಮುಖಪುಟಶ್ರೀಸಾಮಾನ್ಯರು ಕಂಡಂತೆ ಸಾಹಿತ್ಯ ಸಮ್ಮೇಳನ: ಭುವನೇಶ್ವರಿದೇವಿ ನಮ್ ಊರಿನೊಳಗೆ ಬಂದೌಳ ಅನ್ನೋ ಅಭಿಮಾನ

ಶ್ರೀಸಾಮಾನ್ಯರು ಕಂಡಂತೆ ಸಾಹಿತ್ಯ ಸಮ್ಮೇಳನ: ಭುವನೇಶ್ವರಿದೇವಿ ನಮ್ ಊರಿನೊಳಗೆ ಬಂದೌಳ ಅನ್ನೋ ಅಭಿಮಾನ

- Advertisement -
- Advertisement -

ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಅಕ್ಷರ ಹಾಗೂ ಜನ ಸಂಗಮದ ಬೃಹತ್ ಜಾತ್ರೆ. ಮಕ್ಕಳಿಂದ ಹಿಡಿದು ಇಳಿಗಾಲದ ಹಿರಿಯರವರೆಗೂ ಸಮ್ಮೇಳನದ ಕುರಿತು ಅತೀವ ಕುತೂಹಲ. ಅದರಲ್ಲೂ ಹಾವೇರಿ ಜಿಲ್ಲೆಗೆ ಇದೇ ಮೊದಲ ಬಾರಿಗೆ ಸಮ್ಮೇಳನದ ಆತಿಥ್ಯ ದೊರೆತಿರುವುದರಿಂದ ಜಿಲ್ಲೆಯ ಶ್ರೀಸಾಮಾನ್ಯರು ಸಾಗರೋಪಾದಿಯಲ್ಲಿ ಕನ್ನಡ ಜಾತ್ರೆಗೆ ಆಗಮಿಸುತ್ತಿದ್ದಾರೆ.

ರಾಜ್ಯದ ಮೂಲೆಮೂಲೆಯಿಂದ ಬಂದ ಜನರ ಜೊತೆಗೆ ಹಾವೇರಿ ಜಿಲ್ಲೆಯ ಜನತೆ ತೀವ್ರ ಕುತೂಹಲಗೊಂಡು ಸಮ್ಮೇಳನಕ್ಕೆ ಬರುತ್ತಿದ್ದಾರೆ. ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಇಂಥದೊಂದು ಕಾರ್ಯಕ್ರಮ ನಡೆಯುತ್ತಿರುವ ಖುಷಿ ಅನೇಕರಿಗೆ.

“ರಾಯಚೂರು, ಚಿತ್ರದುರ್ಗ ಎಲ್ಲ ಕಡೆ ಸಾಹಿತ್ಯ ಸಮ್ಮೇಳನ ಆಗೇವ. ಹಾವೇರಿ ಜಿಲ್ಲೆಯೊಳಗೆ ಕನ್ನಡ ಸಾಹಿತ್ಯ ಸಮ್ಮೇಳನ ಅಂದ್ರ  ಏನಂತಾನೇ ಗೊತ್ತಿರಲಿಲ್ಲ. ಇದೇ ಮೊದಲ ಸಲ ಸಮ್ಮೇಳನ ನೋಡಿ ಖುಷಿಯಾಗೈತೆ’’ ಎನ್ನುತ್ತಾರೆ ಹಾವೇರಿ ಜಿಲ್ಲೆಯ ಬಂಕಾಪುರದ ನೇಕಾರರಾದ ಶಿಲ್ಪಾ.

ಮುಂದುವರಿದು, “ಮಕ್ಕಳಿಗೆ ಕನ್ನಡ ಅಂದ್ರೆ ಏನಂತ ಗೊತ್ತಿಲ್ಲ. ಅರಣ್ಯ ಅಂದ್ರೆ ಏನಂತ ಗೊತ್ತಿಲ್ಲ. ಅದನ್ನೆಲ್ಲ ತಿಳಿಸುವ ಕೆಲಸ ಮಾಡಿದ್ದಾರೆ. ತಾಯಿ ಭುವನೇಶ್ವರಿ ನಮ್ ಊರಿನೊಳಗ ಬಂದೌಳ ಅನ್ನೋ ಅಭಿಮಾನ. ಕನ್ನಡದೊಳಗ ಹುಟ್ಟಿದಕ್ಕೂ ನಮ್ ಜೀವನ ಸಾರ್ಥಕವಾಯ್ತು’’ ಎಂಬುದು ಅವರ ಧನ್ಯತಾ ಭಾವ.

ಬಂಕಾಪುರದ ಲೀಲಾವತಿಯವರು ಮಾತನಾಡಿ,  “ತುಂಬಾ ಚೆನ್ನಾಗೈತೆ. ಮಕ್ಕಳನ್ನು ಕರೆದುಕೊಂಡು ಬಂದಿದ್ದೇವೆ. ಇದೇ ಫಸ್ಟ್ ಟೈಮ್ ಸಮ್ಮೇಳನ ನೋಡ್ತಾ ಇದ್ದೇವೆ. ಮಕ್ಕಳು ತಿಳಿದುಕೊಳ್ತಾವೊ. ಸಾಹಿತ್ಯ ಸಮ್ಮೇಳನ ಅಂದ್ರೆ ಎನಂಥ ಗೊತ್ತಿರಲಿಲ್ಲ. ನೋಡಲೇಬೇಕು ಅಂತ ಬಂದಿದ್ದೇವೆ’’  ಎಂದು ಸಂತಸ ವ್ಯಕ್ತಪಡಿಸಿದರು.

ಲೀಲಾವತಿ

ಸಿದ್ದಾಪುರದಿಂದ ಆಗಮಿಸಿದ್ದ ಕಲಾವಿದ ಬಸವರಾಜು ಮಾತನಾಡಿ, ಸುಗಮ ಸಂಗೀತ ಕಾರ್ಯಕ್ರಮದಲ್ಲಿ ನನಗೂ ಅವಕಾಶ ನೀಡಿದ್ದಾರೆ. ಪುಟ್ಟರಾಜ ಗವಾಯಿ, ಹಾನಗಲ್ ಕುಮಾರಸ್ವಾಮಿಯಂತಹ ರತ್ನಗಳಿದ್ದ ಯಾಲಕ್ಕಿ ನಾಡಿದು’’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಗದಗ ಜಿಲ್ಲೆಯ ತಮ್ಮನಗೌಡ ಪಾಟೀಲ ಅವರು ಮಾತನಾಡಿ, “ಇತರೆ ಸಮ್ಮೇಳನಕ್ಕಿಂತ ಹಾವೇರಿ ಸಮ್ಮೇಳನ ಭಿನ್ನವಾಗಿದೆ. ಎಲ್ಲರ ಅಭಿರುಚಿಗೆ ತಕ್ಕಂತೆ ಪುಸ್ತಕಗಳಿವೆ. ಕಡಿಮೆ ದರದಲ್ಲಿ ಪುಸ್ತಕಗಳು ನಡೆಯುತ್ತಿವೆ. ನಾನು ನೋಡಿರುವ ಸಮ್ಮೇಳನದಲ್ಲಿ ವಿಶಿಷ್ಟ ಸಮ್ಮೇಳನ ಇದಾಗಿದೆ. ಧಾರವಾಡ ಸಮ್ಮೇಳಕ್ಕೆ ಹೋಗಿದ್ದೆ. ಅಲ್ಲಿ ಸ್ಥಳ ಬಹಳ ಇಕ್ಕಟ್ಟಿನಿಂದ ಕೂಡಿತ್ತು’’ ಎಂದು ಸ್ಮರಿಸಿದರು.

ತಮ್ಮನಗೌಡ ಪಾಟೀಲ

ಹಾವೇರಿಯ ಸ್ಥಳೀಯ ಯುವಕ ಅನಂತ ಪ್ರತಿಕ್ರಿಯಿಸಿ, “ಜನರು ಶಾಂತ ರೀತಿಯಿಂದ ವರ್ತಿಸಬೇಕು. ಸ್ಪಚ್ಛತೆ ಕಾಪಾಡಬೇಕು. ಹಳ್ಳಿಗಳ ನಾಡು, ಜನಪದ ಕಲೆಗಳ ಬೀಡು, ಸರ್ವಜ್ಞ ನಡೆದಾಡಿದ ನೆಲ ಹಾವೇರಿ. ಇಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಬಹಳ ಖುಷಿಯನ್ನು ತಂದಿದೆ’’ ಎಂದರು.

ಅನಂತ

ಜಗದೀಶ ಸೋಮನಾಥಪುರ ಎಂಬವರು ಸಂತಸ ವ್ಯಕ್ತಪಡಿಸುತ್ತಾ, “ಸಮುದ್ರ ಚೆನ್ನಾಗೈತೆ. ವ್ಯವಸ್ಥೆ ಚೆನ್ನಾಗೈತೆ, ಒಟ್ಟು ಒಂಬತ್ತು ಮಂದಿ ಬಂದಿದ್ದೇವೆ. ಊಟ ಮಾಡಿದ್ವಿ, ಕಾರ್ಯಕ್ರಮ ನೋಡಿದ್ವಿ’’ ಎಂದು ತಮ್ಮದೇ ಧಾಟಿಯಲ್ಲಿ ಹೇಳಿದರು.

ಜಗದೀಶ ಸೋಮನಾಥಪುರ

ಭುವನೇಶ್ವರಿ ವೇಷಭೂಷಣ ಧರಿಸಿ ಗಮನ ಸೆಳೆಯುತ್ತಿದ್ದ ಬೆಂಗಳೂರಿನ ಶೋಭಾ ಮಾತನಾಡಿ, “ಅನ್ಯಭಾಷೆಗಳಿಗಿಂತ ಕನ್ನಡವೇ ಮೇಲು. ಕರ್ನಾಟಕದಲ್ಲಿ ಕನ್ನಡ ಭಾಷೆಯೇ ಪ್ರಧಾನ,  ಉಳಿದೆಲ್ಲ ಭಾಷೆಗಳು ನಿಧಾನ’’ ಎಂದರು.

“ಇದೇ ರೀತಿಯ ವೇಷಭೂಷಣದಲ್ಲಿ ಹಲವು ಸಾಹಿತ್ಯ ಸಮ್ಮೇಳನಗಳಿಗೆ ಹೋಗಿಬಂದಿದ್ದೇನೆ. ವಿಭಿನ್ನ ವೇಷ ಭೂಷಣ ಹಾಕಿದರೆ, ಜನ ಗಮನಿಸುತ್ತಾರೆ.  ಈ ಮೂಲಕ ಇಂದಿನ ಯುವ ಸಮುದಾಯದಲ್ಲಿ ಕನ್ನಡಾಭಿಮಾನ ಮೂಡಿಸಲು ಯತ್ನಿಸುತ್ತಿದ್ದೇನೆ’’ ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯವರಾದ ಎಂ.ಸುಬ್ರಮಣಿಯವರು `ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಕಳೆದ ಹದಿನೈದು ವರ್ಷಗಳಿಂದ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದೇನೆ. ಮಹೇಶ್ ಜೋಶಿಯವರು ಚೆನ್ನಾಗಿ ಆಯೋಜನೆ ಮಾಡಿದ್ದಾರೆ. ಆರೋಪಗಳು ಇದ್ದೇ ಇರುತ್ತವೆ. ಬಂದಿರುವ   ಆರೋಪಗಳನ್ನು ಗಣನೆಗೆ ತೆಗೆದುಕೊಂಡು ಮುಂದಿನ ಸಮ್ಮೇಳನದಲ್ಲಿ ಸರಿಪಡಿಸಿಕೊಳ್ಳಬೇಕು’’ ಎಂದು ಆಶಿಸಿದರು.

ಕಲಾವಿದ ಬಸವರಾಜು

ಎಲ್ಲಾ ಸಮ್ಮೇಳನದಲ್ಲಿ ಗಂಭೀರ ಸಂಗತಿಗಳು ಪ್ರಸ್ತಾಪವಾಗುತ್ತವೆ. ಎಲ್ಲ ನಿರ್ಣಯಗಳು ಮಂಡಿಸುತ್ತಾರೆ. ಅದರಲ್ಲಿ ಸ್ವಲ್ಪನಾದರೂ ಆಗಬೇಕು. ಗಡಿ ವಿವಾದ ಬಗೆಹರಿಯುತ್ತಿಲ್ಲ. ಇದು ಮುಂದಿನ ದಿನಗಳಲ್ಲಾದರೂ ಸರಿಯಾಗಬೇಕು’ ಎಂದು ಒತ್ತಾಯಿಸಿದರು.

ಮುಂಜಾನೆಯೇ `ನಾನುಗೌರಿ.ಕಾಂ’ಗೆ ಮಾತಿಗೆ ಸಿಕ್ಕ ಗೋಕಾಕಿನ ವೃದ್ಧ ಸಿ.ಎ.ಪಾಟೀಲ್, “ರಾಯಚೂರು ಒಂದನ್ನು ಬಿಟ್ಟು ಉಳಿದೆಲ್ಲ ಸಮ್ಮೇಳನಗಳು ಛಲೋ ಆಗಿದ್ದವಾ. ಟೈಮ್ಗೆ ಕಿಮ್ಮತ್ತು ಕೊಡೋರಂತೂ ಯಾರೂ ಇಲ್ಲ.  ಒಂಬತ್ತೂವರೆಗೆ ಟೈಮ್ ಕೊಟ್ಟಿದ್ದಾರ, ಒಬ್ಬರಾದ್ರೂ ವಿಐಪಿಗಳು ಬರೋರಿಲ್ಲ’’ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಪ್ರಾತಿನಿಧ್ಯ ಸಮಸ್ಯೆಗಳಿಂದ ಕಾವೇರಿದ ಹಾವೇರಿ ಸಾಹಿತ್ಯ ಸಮ್ಮೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...