Homeಮುಖಪುಟಶ್ರೀಸಾಮಾನ್ಯರು ಕಂಡಂತೆ ಸಾಹಿತ್ಯ ಸಮ್ಮೇಳನ: ಭುವನೇಶ್ವರಿದೇವಿ ನಮ್ ಊರಿನೊಳಗೆ ಬಂದೌಳ ಅನ್ನೋ ಅಭಿಮಾನ

ಶ್ರೀಸಾಮಾನ್ಯರು ಕಂಡಂತೆ ಸಾಹಿತ್ಯ ಸಮ್ಮೇಳನ: ಭುವನೇಶ್ವರಿದೇವಿ ನಮ್ ಊರಿನೊಳಗೆ ಬಂದೌಳ ಅನ್ನೋ ಅಭಿಮಾನ

- Advertisement -
- Advertisement -

ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಅಕ್ಷರ ಹಾಗೂ ಜನ ಸಂಗಮದ ಬೃಹತ್ ಜಾತ್ರೆ. ಮಕ್ಕಳಿಂದ ಹಿಡಿದು ಇಳಿಗಾಲದ ಹಿರಿಯರವರೆಗೂ ಸಮ್ಮೇಳನದ ಕುರಿತು ಅತೀವ ಕುತೂಹಲ. ಅದರಲ್ಲೂ ಹಾವೇರಿ ಜಿಲ್ಲೆಗೆ ಇದೇ ಮೊದಲ ಬಾರಿಗೆ ಸಮ್ಮೇಳನದ ಆತಿಥ್ಯ ದೊರೆತಿರುವುದರಿಂದ ಜಿಲ್ಲೆಯ ಶ್ರೀಸಾಮಾನ್ಯರು ಸಾಗರೋಪಾದಿಯಲ್ಲಿ ಕನ್ನಡ ಜಾತ್ರೆಗೆ ಆಗಮಿಸುತ್ತಿದ್ದಾರೆ.

ರಾಜ್ಯದ ಮೂಲೆಮೂಲೆಯಿಂದ ಬಂದ ಜನರ ಜೊತೆಗೆ ಹಾವೇರಿ ಜಿಲ್ಲೆಯ ಜನತೆ ತೀವ್ರ ಕುತೂಹಲಗೊಂಡು ಸಮ್ಮೇಳನಕ್ಕೆ ಬರುತ್ತಿದ್ದಾರೆ. ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಇಂಥದೊಂದು ಕಾರ್ಯಕ್ರಮ ನಡೆಯುತ್ತಿರುವ ಖುಷಿ ಅನೇಕರಿಗೆ.

“ರಾಯಚೂರು, ಚಿತ್ರದುರ್ಗ ಎಲ್ಲ ಕಡೆ ಸಾಹಿತ್ಯ ಸಮ್ಮೇಳನ ಆಗೇವ. ಹಾವೇರಿ ಜಿಲ್ಲೆಯೊಳಗೆ ಕನ್ನಡ ಸಾಹಿತ್ಯ ಸಮ್ಮೇಳನ ಅಂದ್ರ  ಏನಂತಾನೇ ಗೊತ್ತಿರಲಿಲ್ಲ. ಇದೇ ಮೊದಲ ಸಲ ಸಮ್ಮೇಳನ ನೋಡಿ ಖುಷಿಯಾಗೈತೆ’’ ಎನ್ನುತ್ತಾರೆ ಹಾವೇರಿ ಜಿಲ್ಲೆಯ ಬಂಕಾಪುರದ ನೇಕಾರರಾದ ಶಿಲ್ಪಾ.

ಮುಂದುವರಿದು, “ಮಕ್ಕಳಿಗೆ ಕನ್ನಡ ಅಂದ್ರೆ ಏನಂತ ಗೊತ್ತಿಲ್ಲ. ಅರಣ್ಯ ಅಂದ್ರೆ ಏನಂತ ಗೊತ್ತಿಲ್ಲ. ಅದನ್ನೆಲ್ಲ ತಿಳಿಸುವ ಕೆಲಸ ಮಾಡಿದ್ದಾರೆ. ತಾಯಿ ಭುವನೇಶ್ವರಿ ನಮ್ ಊರಿನೊಳಗ ಬಂದೌಳ ಅನ್ನೋ ಅಭಿಮಾನ. ಕನ್ನಡದೊಳಗ ಹುಟ್ಟಿದಕ್ಕೂ ನಮ್ ಜೀವನ ಸಾರ್ಥಕವಾಯ್ತು’’ ಎಂಬುದು ಅವರ ಧನ್ಯತಾ ಭಾವ.

ಬಂಕಾಪುರದ ಲೀಲಾವತಿಯವರು ಮಾತನಾಡಿ,  “ತುಂಬಾ ಚೆನ್ನಾಗೈತೆ. ಮಕ್ಕಳನ್ನು ಕರೆದುಕೊಂಡು ಬಂದಿದ್ದೇವೆ. ಇದೇ ಫಸ್ಟ್ ಟೈಮ್ ಸಮ್ಮೇಳನ ನೋಡ್ತಾ ಇದ್ದೇವೆ. ಮಕ್ಕಳು ತಿಳಿದುಕೊಳ್ತಾವೊ. ಸಾಹಿತ್ಯ ಸಮ್ಮೇಳನ ಅಂದ್ರೆ ಎನಂಥ ಗೊತ್ತಿರಲಿಲ್ಲ. ನೋಡಲೇಬೇಕು ಅಂತ ಬಂದಿದ್ದೇವೆ’’  ಎಂದು ಸಂತಸ ವ್ಯಕ್ತಪಡಿಸಿದರು.

ಲೀಲಾವತಿ

ಸಿದ್ದಾಪುರದಿಂದ ಆಗಮಿಸಿದ್ದ ಕಲಾವಿದ ಬಸವರಾಜು ಮಾತನಾಡಿ, ಸುಗಮ ಸಂಗೀತ ಕಾರ್ಯಕ್ರಮದಲ್ಲಿ ನನಗೂ ಅವಕಾಶ ನೀಡಿದ್ದಾರೆ. ಪುಟ್ಟರಾಜ ಗವಾಯಿ, ಹಾನಗಲ್ ಕುಮಾರಸ್ವಾಮಿಯಂತಹ ರತ್ನಗಳಿದ್ದ ಯಾಲಕ್ಕಿ ನಾಡಿದು’’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಗದಗ ಜಿಲ್ಲೆಯ ತಮ್ಮನಗೌಡ ಪಾಟೀಲ ಅವರು ಮಾತನಾಡಿ, “ಇತರೆ ಸಮ್ಮೇಳನಕ್ಕಿಂತ ಹಾವೇರಿ ಸಮ್ಮೇಳನ ಭಿನ್ನವಾಗಿದೆ. ಎಲ್ಲರ ಅಭಿರುಚಿಗೆ ತಕ್ಕಂತೆ ಪುಸ್ತಕಗಳಿವೆ. ಕಡಿಮೆ ದರದಲ್ಲಿ ಪುಸ್ತಕಗಳು ನಡೆಯುತ್ತಿವೆ. ನಾನು ನೋಡಿರುವ ಸಮ್ಮೇಳನದಲ್ಲಿ ವಿಶಿಷ್ಟ ಸಮ್ಮೇಳನ ಇದಾಗಿದೆ. ಧಾರವಾಡ ಸಮ್ಮೇಳಕ್ಕೆ ಹೋಗಿದ್ದೆ. ಅಲ್ಲಿ ಸ್ಥಳ ಬಹಳ ಇಕ್ಕಟ್ಟಿನಿಂದ ಕೂಡಿತ್ತು’’ ಎಂದು ಸ್ಮರಿಸಿದರು.

ತಮ್ಮನಗೌಡ ಪಾಟೀಲ

ಹಾವೇರಿಯ ಸ್ಥಳೀಯ ಯುವಕ ಅನಂತ ಪ್ರತಿಕ್ರಿಯಿಸಿ, “ಜನರು ಶಾಂತ ರೀತಿಯಿಂದ ವರ್ತಿಸಬೇಕು. ಸ್ಪಚ್ಛತೆ ಕಾಪಾಡಬೇಕು. ಹಳ್ಳಿಗಳ ನಾಡು, ಜನಪದ ಕಲೆಗಳ ಬೀಡು, ಸರ್ವಜ್ಞ ನಡೆದಾಡಿದ ನೆಲ ಹಾವೇರಿ. ಇಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಬಹಳ ಖುಷಿಯನ್ನು ತಂದಿದೆ’’ ಎಂದರು.

ಅನಂತ

ಜಗದೀಶ ಸೋಮನಾಥಪುರ ಎಂಬವರು ಸಂತಸ ವ್ಯಕ್ತಪಡಿಸುತ್ತಾ, “ಸಮುದ್ರ ಚೆನ್ನಾಗೈತೆ. ವ್ಯವಸ್ಥೆ ಚೆನ್ನಾಗೈತೆ, ಒಟ್ಟು ಒಂಬತ್ತು ಮಂದಿ ಬಂದಿದ್ದೇವೆ. ಊಟ ಮಾಡಿದ್ವಿ, ಕಾರ್ಯಕ್ರಮ ನೋಡಿದ್ವಿ’’ ಎಂದು ತಮ್ಮದೇ ಧಾಟಿಯಲ್ಲಿ ಹೇಳಿದರು.

ಜಗದೀಶ ಸೋಮನಾಥಪುರ

ಭುವನೇಶ್ವರಿ ವೇಷಭೂಷಣ ಧರಿಸಿ ಗಮನ ಸೆಳೆಯುತ್ತಿದ್ದ ಬೆಂಗಳೂರಿನ ಶೋಭಾ ಮಾತನಾಡಿ, “ಅನ್ಯಭಾಷೆಗಳಿಗಿಂತ ಕನ್ನಡವೇ ಮೇಲು. ಕರ್ನಾಟಕದಲ್ಲಿ ಕನ್ನಡ ಭಾಷೆಯೇ ಪ್ರಧಾನ,  ಉಳಿದೆಲ್ಲ ಭಾಷೆಗಳು ನಿಧಾನ’’ ಎಂದರು.

“ಇದೇ ರೀತಿಯ ವೇಷಭೂಷಣದಲ್ಲಿ ಹಲವು ಸಾಹಿತ್ಯ ಸಮ್ಮೇಳನಗಳಿಗೆ ಹೋಗಿಬಂದಿದ್ದೇನೆ. ವಿಭಿನ್ನ ವೇಷ ಭೂಷಣ ಹಾಕಿದರೆ, ಜನ ಗಮನಿಸುತ್ತಾರೆ.  ಈ ಮೂಲಕ ಇಂದಿನ ಯುವ ಸಮುದಾಯದಲ್ಲಿ ಕನ್ನಡಾಭಿಮಾನ ಮೂಡಿಸಲು ಯತ್ನಿಸುತ್ತಿದ್ದೇನೆ’’ ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯವರಾದ ಎಂ.ಸುಬ್ರಮಣಿಯವರು `ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಕಳೆದ ಹದಿನೈದು ವರ್ಷಗಳಿಂದ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದೇನೆ. ಮಹೇಶ್ ಜೋಶಿಯವರು ಚೆನ್ನಾಗಿ ಆಯೋಜನೆ ಮಾಡಿದ್ದಾರೆ. ಆರೋಪಗಳು ಇದ್ದೇ ಇರುತ್ತವೆ. ಬಂದಿರುವ   ಆರೋಪಗಳನ್ನು ಗಣನೆಗೆ ತೆಗೆದುಕೊಂಡು ಮುಂದಿನ ಸಮ್ಮೇಳನದಲ್ಲಿ ಸರಿಪಡಿಸಿಕೊಳ್ಳಬೇಕು’’ ಎಂದು ಆಶಿಸಿದರು.

ಕಲಾವಿದ ಬಸವರಾಜು

ಎಲ್ಲಾ ಸಮ್ಮೇಳನದಲ್ಲಿ ಗಂಭೀರ ಸಂಗತಿಗಳು ಪ್ರಸ್ತಾಪವಾಗುತ್ತವೆ. ಎಲ್ಲ ನಿರ್ಣಯಗಳು ಮಂಡಿಸುತ್ತಾರೆ. ಅದರಲ್ಲಿ ಸ್ವಲ್ಪನಾದರೂ ಆಗಬೇಕು. ಗಡಿ ವಿವಾದ ಬಗೆಹರಿಯುತ್ತಿಲ್ಲ. ಇದು ಮುಂದಿನ ದಿನಗಳಲ್ಲಾದರೂ ಸರಿಯಾಗಬೇಕು’ ಎಂದು ಒತ್ತಾಯಿಸಿದರು.

ಮುಂಜಾನೆಯೇ `ನಾನುಗೌರಿ.ಕಾಂ’ಗೆ ಮಾತಿಗೆ ಸಿಕ್ಕ ಗೋಕಾಕಿನ ವೃದ್ಧ ಸಿ.ಎ.ಪಾಟೀಲ್, “ರಾಯಚೂರು ಒಂದನ್ನು ಬಿಟ್ಟು ಉಳಿದೆಲ್ಲ ಸಮ್ಮೇಳನಗಳು ಛಲೋ ಆಗಿದ್ದವಾ. ಟೈಮ್ಗೆ ಕಿಮ್ಮತ್ತು ಕೊಡೋರಂತೂ ಯಾರೂ ಇಲ್ಲ.  ಒಂಬತ್ತೂವರೆಗೆ ಟೈಮ್ ಕೊಟ್ಟಿದ್ದಾರ, ಒಬ್ಬರಾದ್ರೂ ವಿಐಪಿಗಳು ಬರೋರಿಲ್ಲ’’ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಪ್ರಾತಿನಿಧ್ಯ ಸಮಸ್ಯೆಗಳಿಂದ ಕಾವೇರಿದ ಹಾವೇರಿ ಸಾಹಿತ್ಯ ಸಮ್ಮೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...