Homeಕರ್ನಾಟಕನಾಟಕದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿ ಅವಹೇಳನ: ಮೈಸೂರು ರಂಗಾಯಣ ಮುತ್ತಿಗೆಗೆ ನಿರ್ಧಾರ

ನಾಟಕದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿ ಅವಹೇಳನ: ಮೈಸೂರು ರಂಗಾಯಣ ಮುತ್ತಿಗೆಗೆ ನಿರ್ಧಾರ

- Advertisement -
- Advertisement -

ಮೈಸೂರಿನ ರಂಗಾಯಣದಲ್ಲಿ ಪ್ರದರ್ಶನಗೊಂಡ ನಾಟಕವೊಂದರಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಕುರಿತು ಅವಹೇಳನಕಾರಿ ಸಂಭಾಷಣೆ ಬಳಸಿರುವುದನ್ನು ಖಂಡಿಸಿ ಜನವರಿ 10 ರಂದು ರಂಗಾಯಣ ಮುತ್ತಿಗೆ ಹೋರಾಟ ನಡೆಸಲು ಸ್ವಾಭಿಮಾನಿ ಹೋರಾಟ ಸಮಿತಿ ನಿರ್ಧರಿಸಿದೆ.

‘ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪನವರ ಪ್ರತಿ ನಡೆಯು ಕೋಮು ಸಂಘರ್ಷಕ್ಕೆ ಕಾರಣವಾಗುತ್ತಿದೆ. ಸರ್ಕಾರದ ಸಂಸ್ಥೆಯಾದ ರಂಗಾಯಣವನ್ನು ತಮ್ಮ ದುರುದ್ದೇಶಕ್ಕೆ ಬಿಜೆಪಿ ಹಾಗೂ ಆರ್‌ಸ್‌ಎಸ್ ರಹಸ್ಯ ಕಾರ್ಯಸೂಚಿಗಳ ಜಾರಿಗೆ ಬಳಸಿಕೊಳ್ಳುತ್ತಿದ್ದಾರೆ’ ಎಂದು ಸಭೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಮೈಸೂರು ನಗರದ ಓವಲ್ ಮೈದಾನದಲ್ಲಿ ಜಮಾವಣೆಗೊಂಡು ಖಂಡನಾ ಸಮಾವೇಶ ನಡೆಸಲಾಗುವುದು. ಆನಂತರ ರಂಗಾಯಣಕ್ಕೆ ಮುತ್ತಿಗೆ ಹಾಕಿ ಹೋರಾಟ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ವಿಧಾನಪರಿಷತ್‌ ಸದಸ್ಯ ಡಾ.ಡಿ.ತಿಮ್ಮಯ್ಯ, ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಬಿ.ಸುಬ್ರಹ್ಮಣ್ಯ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ, ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್, ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ, ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು, ಪೌರಕಾರ್ಮಿಕರ ಸಂಘದ ಅಧ್ಯಕ್ಷ ನಾರಾಯಣ ಮುಂತಾದವರು ಸಭೆಯಲ್ಲಿ ಭಾಗವಹಿಸಿದ್ದರು.

ಏನಿದು ಪ್ರಕರಣ

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರರ ‘ಸಾಂಬಶಿವ ಪ್ರಹಸನ’ ನಾಟಕವನ್ನು ಕಾರ್ತಿಕ್ ಉಪಮನ್ಯು ನಿರ್ದೇಶನದಲ್ಲಿ ‘ನಾಗರತ್ನಮ್ಮ’ ರಂಗ ಕಾರ್ಯಾಗಾರದ ಶಿಬಿರಾರ್ಥಿಗಳು ಡಿಸೆಂಬರ್ 31ರ ಶನಿವಾರ ಪ್ರದರ್ಶಿಸುತ್ತಿದ್ದರು. ಈ ನಾಟಕದಲ್ಲಿ ಕೆಲವು ಅಂಶಗಳನ್ನು ತಿರುಚಿ ಸಿದ್ದರಾಮಯ್ಯನವರನ್ನು ಹೀಯಾಳಿಸಲಾಗಿದೆ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರನ್ನೂ ಗೇಲಿ ಮಾಡಲಾಗಿದೆ ಎಂದು  ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

 

‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಶಾದಿ ಭಾಗ್ಯ’ಗಳನ್ನು ಕೊಟ್ಟು ಜನರನ್ನು ಅವರು ಸೋಂಬೇರಿಗಳನ್ನಾಗಿ ಮಾಡಿದರು. ಅದೇ ರೀತಿ ‘ಕಳ್ಳತನ ಭಾಗ್ಯ’ವನ್ನು ನೀಡಬೇಕಾಗಿತ್ತು ಎನ್ನುವ ಸಂಭಾಷಣೆಯನ್ನು ರಂಗದ ಮೇಲೆ ಪ್ರಸ್ತುತಪಡಿಸಲಾಗಿತ್ತು. ಕಾರ್ಯಕ್ರಮಗಳಲ್ಲಿ ನಿದ್ರೆ ಹೊಡೆಯುವುದು, ಗೊರಕೆ ಹೊಡೆದು ಅವರಿಂದ ರಾಜ್ಯವೇ ಹಾಳಾಗಿದೆ. ನಿಮಗೆ ಈ ಭಾರಿ ಬಾದಾಮಿಯೂ ಕೂಡ ಸಿಗುವುದಿಲ್ಲ ಎಂದು ಸೇವಕನ ಪಾತ್ರಧಾರಿಯಿಂದ ನಾಟಕದಲ್ಲಿ ಹೇಳಿಸಲಾಗಿದೆ” ಎಂದು ಆರೋಪಿಸಿದ್ದಾರೆ.

ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷರಾದ ಬಿ.ಸುಬ್ರಹ್ಮಣ್ಯ“ಇದು ನೇರವಾಗಿ ಸಿದ್ದರಾಮಯ್ಯನವರಿಗೆ ಹೋಲಿಕೆ ಮಾಡಲಾಗಿದೆ. ಹಾಗೂ ಕೇಡಿ ಆಂಕಲ್ ಎಂದು ಮಂತ್ರಿಯ ಪಾತ್ರವನ್ನು ಸೃಷ್ಟಿಸಿ ಅದರಲ್ಲಿ ಕಳ್ಳತನ ಮಾಡಿ ಕೊಳ್ಳೆ ಹೊಡೆಯುತ್ತಿದ್ದಾನೆ ಎಂದು ಹೇಳಿಸಲಾಗಿದೆ. ಇದೂ ಕೂಡ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರನ್ನೇ ಹೋಲುವಂತೆ ಪಾತ್ರ ಸೃಷ್ಟಿಸಲಾಗಿದೆ ಎಂದು ಕಿಡಿಕಾರಿದ್ದಾರೆ.

ಇದಕ್ಕೆ ಸ್ವತಃ ಕಂಬಾರರೇ ಆಕ್ರೋಶ ವ್ಯಕ್ತಪಡಿಸಿ “ಈ ರೀತಿ ನಾಟಕವನ್ನು ತಿರುಚಿದವರು ಮತ್ತು ನಾಟಕ ಪ್ರದರ್ಶಿಸಲು ಅವಕಾಶ ನೀಡಿರುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು” ಎಂದು ಮೈಸೂರು ಪೊಲೀಸ್ ಕಮಿಷನರ್‌ಗೆ ಅವರು ಪತ್ರ ಬರೆದಿದ್ದಾರೆ.

“ಮೈಸೂರಿನ ರಂಗಾಯಣದಲ್ಲಿ ನನ್ನ ನಾಟಕ, ಸಾಂಬಶಿವ ಪ್ರಹಸನವನ್ನು ಅಸಹ್ಯವಾಗಿ ತಿರುಚಿ ಪ್ರದರ್ಶಿಸಿರುವ ಬಗ್ಗೆ ನನಗೆ ತುಂಬ ವಿಷಾದವಾಗಿದೆ” ಎಂದಿರುವ ಕಂಬಾರರು, “ಮೊದಲನೆಯದಾಗಿ ನನ್ನ ನಾಟಕ ಪ್ರದರ್ಶಿಸುವುದಕ್ಕೆ ನನ್ನ ಅನುಮತಿ ಕೇಳಲೇ ಬೇಕಾಗಿತ್ತು. ಆದರೆ ಇವರು ಕೇಳಿಲ್ಲ. ರಂಗಾಯಣವಾದರೂ ನನ್ನ ಅನುಮತಿ ಇಲ್ಲದ ನಾಟಕ ಪ್ರದರ್ಶನಕ್ಕೆ ಅವಕಾಶ ಕೊಟ್ಟಿರುವುದು ವಿಷಾದಕರ” ಎಂದು ಟೀಕಿಸಿದ್ದಾರೆ.

“ಎರಡನೆಯದಾಗಿ, ನನ್ನ ಯಾವುದೇ ನಾಟಕಗಳಲ್ಲಿ ವ್ಯಕ್ತಿಗಳ ನಿಂದನೆ ಇರುವುದು ಸಾಧ್ಯವಿಲ್ಲ. ಅನುಮತಿ ಇಲ್ಲದೇ ನಾಟಕವನ್ನು ಪ್ರದರ್ಶಿಸಿದ್ದಕ್ಕೆ, ಪ್ರದರ್ಶಿಸಲು ಅವಕಾಶ ಮಾಡಿಕೊಟ್ಟವರಿಗೂ ಮತ್ತು ಇಲ್ಲದ ಸಾಹಿತ್ಯವನ್ನು ಸೇರಿಸಿದ್ದಕ್ಕೆ ನಿರ್ದೇಶಕರ ಮೇಲೂ ಈ ಅಹಿತಕರ ವಾತಾವರಣಕ್ಕೆ ಕಾರಣರಾದ, ಸಂಬಂಧಪಟ್ಟ ಎಲ್ಲರ ಮೇಲೂ, ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಅವರು ಕೋರಿದ್ದಾರೆ.

ಇದನ್ನೂ ಓದಿ: ನಾಟಕದಲ್ಲಿ ಇಲ್ಲದ ವಿಚಾರ ತುರುಕಿ ಸಿದ್ದರಾಮಯ್ಯನವರಿಗೆ ಅವಹೇಳನ: ಕ್ರಮ ಜರುಗಿಸಲು ಮೈಸೂರು ಕಮಿಷನರ್‌ಗೆ ಕಂಬಾರರ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...