Homeಮುಖಪುಟಹಣ ಬಲದಿಂದ ಅಧಿಕಾರ ಖರೀದಿಸುತ್ತಿದ್ದಾರೆ: ಸಮ್ಮೇಳನಾಧ್ಯಕ್ಷರೊಂದಿಗಿನ ಸಂವಾದಲ್ಲಿ ದೊಡ್ಡರಂಗೇಗೌಡರ ವಿಷಾದ

ಹಣ ಬಲದಿಂದ ಅಧಿಕಾರ ಖರೀದಿಸುತ್ತಿದ್ದಾರೆ: ಸಮ್ಮೇಳನಾಧ್ಯಕ್ಷರೊಂದಿಗಿನ ಸಂವಾದಲ್ಲಿ ದೊಡ್ಡರಂಗೇಗೌಡರ ವಿಷಾದ

- Advertisement -
- Advertisement -

ಇತ್ತೀಚಿನ ವರ್ಷಗಳಲ್ಲಿ ಹಣಬಲದಿಂದ ಅಧಿಕಾರವನ್ನು ಪಡೆಯುವವರು ವಿಧಾನಸಭೆ, ವಿಧಾನಪರಿಷತ್ ಗಳನ್ನು ಪ್ರವೇಶಿಸುತ್ತಿದ್ದಾರೆ ಎಂದು 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ.ದೊಡ್ಡರಂಗೇಗೌಡ ವಿಷಾದಿಸಿದರು.

ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನಕ-ಶರೀಫ-ಸರ್ವಜ್ಞ ಪ್ರಧಾನ ವೇದಿಕೆಯಲ್ಲಿ ಶನಿವಾರ ನಡೆದ ‘ಸಮ್ಮೇಳನಾಧ್ಯಕ್ಷರ ಜೊತೆ ಮಾತು – ಮಂಥನ’ ಕಾರ್ಯಕ್ರಮದಲ್ಲಿ ಅವರು ಲೇಖಕರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

“ಸಂಸದೀಯ ವ್ಯವಸ್ಥೆಯಲ್ಲಿ ಚರ್ಚೆಗಳಾಗದೆ ಮಸೂದೆಗಳು ಜಾರಿಯಾಗುತ್ತಿವೆ. ಶಾಸನ ಸಭೆಯಲ್ಲಿ ಗುಣಮಟ್ಟದ ಚರ್ಚೆಗಳು ಕಂಡು ಬರುತ್ತಿಲ್ಲ’’ ಎಂಬುದನ್ನು ಪತ್ರಕರ್ತ ರುದ್ರಣ್ಣ ಹರ್ತಿಕೋಟೆ ಪ್ರಸ್ತಾಪಿಸಿದರು. ಮಾಜಿ ವಿಧಾನಪರಿಷತ್ ಸದಸ್ಯರೂ ಆಗಿರುವ ದೊಡ್ಡರಂಗೇಗೌಡರು ಮಾತನಾಡಿ, “ಶಾಸಕರು ಬಳಸುತ್ತಿರುವ ಭಾಷೆ ಯೋಚಿಸುವಂತಾಗಿದೆ. ಅದನ್ನು ನೋಡಿದರೆ ನೋವಾಗುತ್ತದೆ. ಹಣದ ಪ್ರಭಾವದಿಂದ ಅಧಿಕಾರವನ್ನು ಖರೀದಿಸಲಾಗುತ್ತಿದೆ. ಪಂಚೆಯನ್ನು ಎತ್ತಿಕಟ್ಟಿ, ಸದನದಲ್ಲಿಯೇ ತೊಡೆ ತಟ್ಟುತ್ತಿರುವುದಕ್ಕೆ ಏನನ್ನು ಹೇಳಬೇಕು?’’ ಎಂದು ಪ್ರಶ್ನಿಸಿದರು.

ಭ್ರಷ್ಟತೆ ಪರಮಾವಧಿಯಾಗಿರುವ ಈ ಕಾಲದಲ್ಲಿ ಪ್ರಾಮಾಣಿಕತೆಯನ್ನು ಹುಡುಕಬೇಕಿದೆ. ಪ್ರಜೆಗಳ ಹಿತಾಸಕ್ತಿ ಕಡಿಮೆಯಾಗಿ, ಸ್ವಹಿತಾಸಕ್ತಿಗಳು ಶಾಸನ ಸಭೆಗಳನ್ನು ಪ್ರವೇಶಿಸುತ್ತಿದ್ದಾರೆ. ಇಂದು ಎಸ್.ನಿಜಲಿಂಗಪ್ಪ, ಕಡಿದಾಳು ಮಂಜಪ್ಪ, ಕೆಂಗಲ್ ಹನುಮಂತಯ್ಯನವರಂತಹ ಸಂಸದೀಯ ಪಟುಗಳು ಕಾಣದಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮೌಲ್ಯಗಳು ದಿನೇ ದಿನೇ ಅರ್ಥಕಳೆದುಕೊಳ್ಳುತ್ತಿವೆ. ದುಡ್ಡಿರುವವರು ಗೆದ್ದುಬರುತ್ತಾರೆ ಎಂದು ಟೀಕಿಸಿದರು.

ಸಂವಿಧಾನ ವಿರೋಧಿಯಾದ ಭಾಷೆಯನ್ನು ಶಾಸಕರು ಬಳಸುತ್ತಿದ್ದಾರೆ. ನಡೆದುಕೊಳ್ಳಬಾರದ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ವ್ಯವಸ್ಥೆಯ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದು ವ್ಯಕ್ತಿತ್ವಕ್ಕೆ ಕಳಂಕ. ಆದರೆ ಇಡೀ ವಿಶ್ವದಲ್ಲೇ ಭ್ರಷ್ಟತೆ ಆಕ್ರಮಿಸಿಕೊಂಡು ಕಾಡುತ್ತಿದೆ. ಇದನ್ನು ಬೇರು ಸಹಿತ ಕಿತ್ತುಹಾಕಬೇಕಾದರೆ ಕ್ರಾಂತಿಯಾಗಬೇಕು. ಕ್ರಾಂತಿ ಎಂದರೆ ವ್ಯಕ್ತಿಗಳಲ್ಲಿ ಅರಿವನ್ನು ಮೂಡಿಸುವುದಾಗಿದೆ ಎಂದು ಅಭಿಪ್ರಾಯಪಟ್ಟರು.

ಲೇಖಕ ಅಂಜನ್ ಶೆಟ್ಟಿಯವರು ಶಾಸನ ಸಭೆಗಳ ಕುರಿತು ಪ್ರಶ್ನೆಯನ್ನು ಮುಂದುವರಿಸಿದಾಗ, ‘ಕಲೆ ಸಾಹಿತ್ಯದಂತಹ ನಾಮನಿರ್ದೇಶಿತ ಸ್ಥಾನಗಳಿಗೆ ಆ ಕ್ಷೇತ್ರದಲ್ಲಿ ಸೇವೆ ಸಲ್ಲಿಸದವರು ಪ್ರವೇಶಿಸುತ್ತಿದ್ದಾರೆ. ಒಂದು ಕ್ಷೇತ್ರವನ್ನು ಇನ್ನೊಂದು ಕ್ಷೇತ್ರದವರು ಅತಿಕ್ರಮಣ ಮಾಡುವುದು ದುರಂತ. ಇಂಥವರ  ಆಯ್ಕೆಗಳು ರಾಜ್ಯಪಾಲರ ಅಂಕಿತ ದೊರಕುತ್ತಿದೆ’’ ಎಂದು ವಿಷಾದಿಸಿದರು.

ಲೇಖಕಿ ಸಂಕಮ್ಮ ಜಿ.ಸಂಕಣ್ಣನವರ ಮಾತನಾಡಿ, ಚಿತ್ರ ಸಾಹಿತ್ಯ ಹಾಗೂ ಸಾಹಿತ್ಯಕ್ಕೂ ಇರುವ ವ್ಯತ್ಯಾಸವನ್ನು ತಿಳಿಸಬೇಕೆಂದು ಕೋರಿದರು. ಅದಕ್ಕೆ ಪ್ರತಿಕ್ರಿಯಿಸಿದ ದೊಡ್ಡರಂಗೇಗೌಡರು, “ಒಂದು ಸಿನಿಮಾಕ್ಕೆ ಸಾಹಿತ್ಯ ರಚಿಸುವಾಗ ನಿರ್ದೇಶಕ, ನಿರ್ಮಾಪಕ ಹೇಳಿದ ಸನ್ನಿವೇಶಕ್ಕೆ ಸೂಕ್ತವಾಗಿ ಬರೆಯಬೇಕು. ಸಂಗೀತ, ಸ್ವರ ಪ್ರಸ್ತಾವವನ್ನು ತಿಳಿದು ಬರೆಯುತ್ತೇವೆ. ಒಮ್ಮೆ ಸುಲಭ ಸನ್ನಿವೇಶ ಸಿಗಬಹುದು, ಕೆಲವೊಮ್ಮೆ ಕ್ಲಿಷ್ಟ ಸನ್ನಿವೇಶ ಸಿಗಬಹುದು. ಆದರೆ ಸಾಹಿತ್ಯದಲ್ಲಿ ಕವಿಗೆ ನಿರ್ಬಂಧ ಇರುವುದಿಲ್ಲ. ತನ್ನ ಕಲ್ಪನಾ ಲೋಕದಲ್ಲಿ ಕವಿ ಬರೆಯಬಹುದು. ಸಮುದ್ರದ ಅಲೆಗಳಂತೆ ಭಾವನೆಗಳು ಬರುತ್ತವೆ. ಅಲ್ಲಿ ಸ್ವಂತಿಕೆಯನ್ನು ಪ್ರದರ್ಶಿಸಬಹುದು” ಎಂದು ತಮ್ಮ ಅನುಭವ ಹಂಚಿಕೊಂಡರು.

ಮಾಲತೇಶ ಅಂಗೂರ ಅವರು ಪ್ರಶ್ನಿಸಿ, “ಗೋಕಾಕ್ ಚಳವಳಿಯ ನಂತರದಲ್ಲಿ ಅಂತಹದೊಂದು ಕನ್ನಡದ ಚಳವಳಿ ಮತ್ತೆ ಹುಟ್ಟಲಿಲ್ಲ’’ ಎಂದು ಪ್ರಸ್ತಾಪಿಸಿದರು. ಈ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸರ್ವಾಧ್ಯಕ್ಷರು, “ಗೋಕಾಕ್ ಚಳವಳಿಗಿಂತ ಮೀರಿದ ಚಳವಳಿ ಅಗತ್ಯವಿದೆ’’ ಎಂದರು.

ಡಾ.ಶಾರದಾ ಮುಳ್ಳೂರು ಅವರು ದೊಡ್ಡರಂಗೇಗೌಡರ ಸಾಹಿತ್ಯ ಬೇರೆ ಬೇರೆ ಭಾಷೆಗಳಿಗೆ ಅನುವಾದವಾಗಿದ್ದರ ಕುರಿತು ಮಾತನಾಡಿದರು. ಇತರ ಲೇಖಕರು ಸಂವಾದದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: ಪ್ರಾತಿನಿಧ್ಯ ಸಮಸ್ಯೆಗಳಿಂದ ಕಾವೇರಿದ ಹಾವೇರಿ ಸಾಹಿತ್ಯ ಸಮ್ಮೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...