Homeಮುಖಪುಟಹಣ ಬಲದಿಂದ ಅಧಿಕಾರ ಖರೀದಿಸುತ್ತಿದ್ದಾರೆ: ಸಮ್ಮೇಳನಾಧ್ಯಕ್ಷರೊಂದಿಗಿನ ಸಂವಾದಲ್ಲಿ ದೊಡ್ಡರಂಗೇಗೌಡರ ವಿಷಾದ

ಹಣ ಬಲದಿಂದ ಅಧಿಕಾರ ಖರೀದಿಸುತ್ತಿದ್ದಾರೆ: ಸಮ್ಮೇಳನಾಧ್ಯಕ್ಷರೊಂದಿಗಿನ ಸಂವಾದಲ್ಲಿ ದೊಡ್ಡರಂಗೇಗೌಡರ ವಿಷಾದ

- Advertisement -
- Advertisement -

ಇತ್ತೀಚಿನ ವರ್ಷಗಳಲ್ಲಿ ಹಣಬಲದಿಂದ ಅಧಿಕಾರವನ್ನು ಪಡೆಯುವವರು ವಿಧಾನಸಭೆ, ವಿಧಾನಪರಿಷತ್ ಗಳನ್ನು ಪ್ರವೇಶಿಸುತ್ತಿದ್ದಾರೆ ಎಂದು 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ.ದೊಡ್ಡರಂಗೇಗೌಡ ವಿಷಾದಿಸಿದರು.

ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನಕ-ಶರೀಫ-ಸರ್ವಜ್ಞ ಪ್ರಧಾನ ವೇದಿಕೆಯಲ್ಲಿ ಶನಿವಾರ ನಡೆದ ‘ಸಮ್ಮೇಳನಾಧ್ಯಕ್ಷರ ಜೊತೆ ಮಾತು – ಮಂಥನ’ ಕಾರ್ಯಕ್ರಮದಲ್ಲಿ ಅವರು ಲೇಖಕರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

“ಸಂಸದೀಯ ವ್ಯವಸ್ಥೆಯಲ್ಲಿ ಚರ್ಚೆಗಳಾಗದೆ ಮಸೂದೆಗಳು ಜಾರಿಯಾಗುತ್ತಿವೆ. ಶಾಸನ ಸಭೆಯಲ್ಲಿ ಗುಣಮಟ್ಟದ ಚರ್ಚೆಗಳು ಕಂಡು ಬರುತ್ತಿಲ್ಲ’’ ಎಂಬುದನ್ನು ಪತ್ರಕರ್ತ ರುದ್ರಣ್ಣ ಹರ್ತಿಕೋಟೆ ಪ್ರಸ್ತಾಪಿಸಿದರು. ಮಾಜಿ ವಿಧಾನಪರಿಷತ್ ಸದಸ್ಯರೂ ಆಗಿರುವ ದೊಡ್ಡರಂಗೇಗೌಡರು ಮಾತನಾಡಿ, “ಶಾಸಕರು ಬಳಸುತ್ತಿರುವ ಭಾಷೆ ಯೋಚಿಸುವಂತಾಗಿದೆ. ಅದನ್ನು ನೋಡಿದರೆ ನೋವಾಗುತ್ತದೆ. ಹಣದ ಪ್ರಭಾವದಿಂದ ಅಧಿಕಾರವನ್ನು ಖರೀದಿಸಲಾಗುತ್ತಿದೆ. ಪಂಚೆಯನ್ನು ಎತ್ತಿಕಟ್ಟಿ, ಸದನದಲ್ಲಿಯೇ ತೊಡೆ ತಟ್ಟುತ್ತಿರುವುದಕ್ಕೆ ಏನನ್ನು ಹೇಳಬೇಕು?’’ ಎಂದು ಪ್ರಶ್ನಿಸಿದರು.

ಭ್ರಷ್ಟತೆ ಪರಮಾವಧಿಯಾಗಿರುವ ಈ ಕಾಲದಲ್ಲಿ ಪ್ರಾಮಾಣಿಕತೆಯನ್ನು ಹುಡುಕಬೇಕಿದೆ. ಪ್ರಜೆಗಳ ಹಿತಾಸಕ್ತಿ ಕಡಿಮೆಯಾಗಿ, ಸ್ವಹಿತಾಸಕ್ತಿಗಳು ಶಾಸನ ಸಭೆಗಳನ್ನು ಪ್ರವೇಶಿಸುತ್ತಿದ್ದಾರೆ. ಇಂದು ಎಸ್.ನಿಜಲಿಂಗಪ್ಪ, ಕಡಿದಾಳು ಮಂಜಪ್ಪ, ಕೆಂಗಲ್ ಹನುಮಂತಯ್ಯನವರಂತಹ ಸಂಸದೀಯ ಪಟುಗಳು ಕಾಣದಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮೌಲ್ಯಗಳು ದಿನೇ ದಿನೇ ಅರ್ಥಕಳೆದುಕೊಳ್ಳುತ್ತಿವೆ. ದುಡ್ಡಿರುವವರು ಗೆದ್ದುಬರುತ್ತಾರೆ ಎಂದು ಟೀಕಿಸಿದರು.

ಸಂವಿಧಾನ ವಿರೋಧಿಯಾದ ಭಾಷೆಯನ್ನು ಶಾಸಕರು ಬಳಸುತ್ತಿದ್ದಾರೆ. ನಡೆದುಕೊಳ್ಳಬಾರದ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ವ್ಯವಸ್ಥೆಯ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದು ವ್ಯಕ್ತಿತ್ವಕ್ಕೆ ಕಳಂಕ. ಆದರೆ ಇಡೀ ವಿಶ್ವದಲ್ಲೇ ಭ್ರಷ್ಟತೆ ಆಕ್ರಮಿಸಿಕೊಂಡು ಕಾಡುತ್ತಿದೆ. ಇದನ್ನು ಬೇರು ಸಹಿತ ಕಿತ್ತುಹಾಕಬೇಕಾದರೆ ಕ್ರಾಂತಿಯಾಗಬೇಕು. ಕ್ರಾಂತಿ ಎಂದರೆ ವ್ಯಕ್ತಿಗಳಲ್ಲಿ ಅರಿವನ್ನು ಮೂಡಿಸುವುದಾಗಿದೆ ಎಂದು ಅಭಿಪ್ರಾಯಪಟ್ಟರು.

ಲೇಖಕ ಅಂಜನ್ ಶೆಟ್ಟಿಯವರು ಶಾಸನ ಸಭೆಗಳ ಕುರಿತು ಪ್ರಶ್ನೆಯನ್ನು ಮುಂದುವರಿಸಿದಾಗ, ‘ಕಲೆ ಸಾಹಿತ್ಯದಂತಹ ನಾಮನಿರ್ದೇಶಿತ ಸ್ಥಾನಗಳಿಗೆ ಆ ಕ್ಷೇತ್ರದಲ್ಲಿ ಸೇವೆ ಸಲ್ಲಿಸದವರು ಪ್ರವೇಶಿಸುತ್ತಿದ್ದಾರೆ. ಒಂದು ಕ್ಷೇತ್ರವನ್ನು ಇನ್ನೊಂದು ಕ್ಷೇತ್ರದವರು ಅತಿಕ್ರಮಣ ಮಾಡುವುದು ದುರಂತ. ಇಂಥವರ  ಆಯ್ಕೆಗಳು ರಾಜ್ಯಪಾಲರ ಅಂಕಿತ ದೊರಕುತ್ತಿದೆ’’ ಎಂದು ವಿಷಾದಿಸಿದರು.

ಲೇಖಕಿ ಸಂಕಮ್ಮ ಜಿ.ಸಂಕಣ್ಣನವರ ಮಾತನಾಡಿ, ಚಿತ್ರ ಸಾಹಿತ್ಯ ಹಾಗೂ ಸಾಹಿತ್ಯಕ್ಕೂ ಇರುವ ವ್ಯತ್ಯಾಸವನ್ನು ತಿಳಿಸಬೇಕೆಂದು ಕೋರಿದರು. ಅದಕ್ಕೆ ಪ್ರತಿಕ್ರಿಯಿಸಿದ ದೊಡ್ಡರಂಗೇಗೌಡರು, “ಒಂದು ಸಿನಿಮಾಕ್ಕೆ ಸಾಹಿತ್ಯ ರಚಿಸುವಾಗ ನಿರ್ದೇಶಕ, ನಿರ್ಮಾಪಕ ಹೇಳಿದ ಸನ್ನಿವೇಶಕ್ಕೆ ಸೂಕ್ತವಾಗಿ ಬರೆಯಬೇಕು. ಸಂಗೀತ, ಸ್ವರ ಪ್ರಸ್ತಾವವನ್ನು ತಿಳಿದು ಬರೆಯುತ್ತೇವೆ. ಒಮ್ಮೆ ಸುಲಭ ಸನ್ನಿವೇಶ ಸಿಗಬಹುದು, ಕೆಲವೊಮ್ಮೆ ಕ್ಲಿಷ್ಟ ಸನ್ನಿವೇಶ ಸಿಗಬಹುದು. ಆದರೆ ಸಾಹಿತ್ಯದಲ್ಲಿ ಕವಿಗೆ ನಿರ್ಬಂಧ ಇರುವುದಿಲ್ಲ. ತನ್ನ ಕಲ್ಪನಾ ಲೋಕದಲ್ಲಿ ಕವಿ ಬರೆಯಬಹುದು. ಸಮುದ್ರದ ಅಲೆಗಳಂತೆ ಭಾವನೆಗಳು ಬರುತ್ತವೆ. ಅಲ್ಲಿ ಸ್ವಂತಿಕೆಯನ್ನು ಪ್ರದರ್ಶಿಸಬಹುದು” ಎಂದು ತಮ್ಮ ಅನುಭವ ಹಂಚಿಕೊಂಡರು.

ಮಾಲತೇಶ ಅಂಗೂರ ಅವರು ಪ್ರಶ್ನಿಸಿ, “ಗೋಕಾಕ್ ಚಳವಳಿಯ ನಂತರದಲ್ಲಿ ಅಂತಹದೊಂದು ಕನ್ನಡದ ಚಳವಳಿ ಮತ್ತೆ ಹುಟ್ಟಲಿಲ್ಲ’’ ಎಂದು ಪ್ರಸ್ತಾಪಿಸಿದರು. ಈ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸರ್ವಾಧ್ಯಕ್ಷರು, “ಗೋಕಾಕ್ ಚಳವಳಿಗಿಂತ ಮೀರಿದ ಚಳವಳಿ ಅಗತ್ಯವಿದೆ’’ ಎಂದರು.

ಡಾ.ಶಾರದಾ ಮುಳ್ಳೂರು ಅವರು ದೊಡ್ಡರಂಗೇಗೌಡರ ಸಾಹಿತ್ಯ ಬೇರೆ ಬೇರೆ ಭಾಷೆಗಳಿಗೆ ಅನುವಾದವಾಗಿದ್ದರ ಕುರಿತು ಮಾತನಾಡಿದರು. ಇತರ ಲೇಖಕರು ಸಂವಾದದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: ಪ್ರಾತಿನಿಧ್ಯ ಸಮಸ್ಯೆಗಳಿಂದ ಕಾವೇರಿದ ಹಾವೇರಿ ಸಾಹಿತ್ಯ ಸಮ್ಮೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...