Homeಮುಖಪುಟಮುಸ್ಲಿಮರನ್ನು ಹೊರಗಟ್ಟಲಿಕ್ಕೆ ಇಷ್ಟು ಹುನ್ನಾರ ಬೇಕಿತ್ತೆ?: ಲೇಖಕಿ ಬಾನು ಮುಷ್ತಾಕ್ ಪ್ರಶ್ನೆ

ಮುಸ್ಲಿಮರನ್ನು ಹೊರಗಟ್ಟಲಿಕ್ಕೆ ಇಷ್ಟು ಹುನ್ನಾರ ಬೇಕಿತ್ತೆ?: ಲೇಖಕಿ ಬಾನು ಮುಷ್ತಾಕ್ ಪ್ರಶ್ನೆ

"ಅವರು ಕೊಲೆ ಮಾಡಿದರೂ ಸಹ ಚರ್ಚೆ ಆಗುವುದಿಲ್ಲ. ಆದರೆ ನಾವು 'ಆ' ನೋವಾಗುತ್ತಿದೆ ಎಂದರೂ ಬದ್ನಾಮ್ ಆಗಿ ಬಿಡುತ್ತೇವೆ-ದೇಶದ್ರೋಹಿ ಆಗಿಬಿಡ್ತಿವಿ"

- Advertisement -
- Advertisement -

“ಕನ್ನಡ ಭಾಷೆಯ ಬಗ್ಗೆ ಒಬ್ಬ ಅಲ್ಪಸಂಖ್ಯಾತ ಮಹಿಳೆಯಾಗಿ ನನ್ನ ಗ್ರಹಿಕೆ ಎಂದರೆ, ಕನ್ನಡವನ್ನು ಬಳಸಲು ನನಗೆ ನೀವು ಅವಕಾಶವನ್ನೆ ಕೊಡಲಿಲ್ಲ. ಕನ್ನಡವನ್ನು ಭುವನೇಶ್ವರಿಯಾಗಿ ಮಾಡಿದಿರಿ. ಕನ್ನಡ ಬಾವುಟವನ್ನು ಅರಿಶಿನ ಕುಂಕುಮ ಎಂದು ಮಂದಾಸನದ ಮೇಲೆ ಕೂರಿಸಿಬಿಟ್ಟರಿ. ಆಗ ನಾನು ಎಲ್ಲಿ ನಿಲ್ಲಬೇಕು, ಎಲ್ಲಿ ನೋಡಬೇಕು? ನನ್ನ ಹೊರಗಟ್ಟುವಿಕೆ ಯಾವತ್ತೊ ಆರಂಭವಾಗಿದೆ, ಇಂದು ಪೂರ್ಣಗೊಳ್ಳುತ್ತಿದೆ ಅಷ್ಟೆ” ಎಂದು ಲೇಖಕಿ ಬಾನು ಮುಷ್ತಾಕ್‌ರವರು ವಿಷಾದ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ನಡೆಯುತ್ತಿರುವ ಜನಸಾಹಿತ್ಯ ಸಮ್ಮೇಳನ ಉದ್ಘಾಟನಾ ಗೋಷ್ಟಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಅವರು ಕೊಲೆ ಮಾಡಿದರೂ ಸಹ ಚರ್ಚೆ ಆಗುವುದಿಲ್ಲ. ಆದರೆ ನಾವು ‘ಆ’ ನೋವಾಗುತ್ತಿದೆ ಎಂದರೂ ಬದ್ನಾಮ್ ಆಗಿ ಬಿಡುತ್ತೇವೆ-ದೇಶದ್ರೋಹಿ ಆಗಿಬಿಡ್ತಿವಿ” ಎಂದು 1946ರಲ್ಲಿ ಉರ್ದು ಕವಿ ಬರೆದಿದ್ದಾರೆ. ಈ ಪರಿಸ್ಥಿತಿ ಇವತ್ತಿಗೂ ಕೂಡ ಪುನರಾವರ್ತನೆಯಾಗುತ್ತಿದೆ ಎಂದರೆ ನಾವು ಎಂತಹ ಭಯಾನಕ ಸ್ಥಿತಿಯಲ್ಲಿದ್ದೇವೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಇಂದು ದ್ವೇಷ ಭಾಷಣಗಳ, ಸುಳ್ಳು ಸುದ್ದಿಗಳ ಪ್ರಾಸನವಾಗುತ್ತಿದೆ. ನಮ್ಮ ನಂದಿನಿ ಕೈತಪ್ಪಿ ಹೋಗುತ್ತಿದೆ. ನಾವು ಕರ್ನಾಟಕದವರು ಬಹಳ ದೇಶಭಕ್ತರು, ಉದಾರಿಗಳೆಂದುಕೊಂಡು ಸುಮ್ಮನಿದ್ದೇವೆ. ನಂದಿನಿ ನಮ್ಮ ಸಾಹಿತ್ಯ, ಅನ್ನ, ಯುವಜನರ ನೆಮ್ಮದಿ ನೀರು, ವಸತಿ ಎಲ್ಲವೂ ಆಗಿದೆ. ಆದರೆ ಅದು ಕೈ ತಪ್ಪುತ್ತಿದ್ದರು ಸಹ ಏಕೆ ನಾವು ಮಾತನಾಡುತ್ತಿಲ್ಲ ಎಂದು ಬಾನು ಮುಷ್ತಾಕ್ ಪ್ರಶ್ನಿಸಿದರು.

ಮಹಿಳೆಯರನ್ನು ಹೇಗೆ ಹೊಗಳಿ, ಮಂದಾಸನದಲ್ಲಿ ಕೂರಿಸಿ ತುಳಿಯುತ್ತಿದ್ದಾರೋ, ನೀವುಗಳು ಹಾಗೆಯೆ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಮಾಡುತ್ತಿದ್ದೀರಿ. ಕನ್ನಡದ ರಥವನ್ನು ಎಳೆದು, ಕನ್ನಡದ ಜಾತ್ರೆ, ಪರಿಷೆ ಮಾಡಿ ನನ್ನನ್ನು ಅಂದರೆ ಮುಸ್ಲಿಮರನ್ನು ಹೊರಗಟ್ಟಲಿಕ್ಕೆ ಇಷ್ಟು ಹುನ್ನಾರ ಬೇಕಿತ್ತೆ? ಏಕೆ ಹೀಗೆ ಮಾಡುತ್ತಿದ್ದೀರಿ ಎಂಬುದಕ್ಕೆ ನನಗೆ ಉತ್ತರ ಕೊಡಿ ಎಂದು ಆಗ್ರಹಿಸಿದರು.

ಅಲ್ಪಸಂಖ್ಯಾತರು, ದಲಿತರು, ಅಲಕ್ಷಿತ ಸಮುದಾಯಗಳು ಕನ್ನಡದಲ್ಲಿ ಬರೆಯುತ್ತಿದ್ದಾರೆ. ಒಂದೂ ಪುಸ್ತಕ ಪ್ರಕಟಿಸದ ಕನಿಷ್ಟ 600ಕ್ಕಿಂತ ಹೆಚ್ಚಿನ ಮುಸ್ಲಿಂ ಬರಹಗಾರರಿದ್ದಾರೆ. ಆದರೆ ಅವರನ್ನೆಲ್ಲ ನಾವು ಮರೆತುಬಿಟ್ಟಿದ್ದೇವೆ ಎಂದು ವಿಷಾದಿಸಿದರು.

ಬಂಡಾಯ ಸಾಹಿತ್ಯ ಸಂಘಟನೆಯು ಅಲ್ಪಸಂಖ್ಯಾತರು, ದಲಿತರು, ಅಲಕ್ಷಿತ ಸಮುದಾಯಗಳಿಗೆ ಕನ್ನಡದ ಹೆಬ್ಬಾಗಿಲನ್ನು ತೆಗೆದರು. ನಮ್ಮ ಅಭಿವ್ಯಕ್ತಿಯ ಅಡೆತಡೆಗಳನ್ನು ಬಂಡಾಯ ಸಂಘಟನೆ ನಿವಾರಣೆ ಮಾಡಿತು. ಇಂದು ಜನ ಸಾಹಿತ್ಯ ಸಮ್ಮೇಳನ ಆ ಕೆಲಸಕ್ಕೆ ಮುಂದಾಗಿದೆ. ಈ ಪ್ರತಿರೋಧ ಸಮಾವೇಶ ಒಂದು ಅದ್ಭುತವಾದ ಅವಕಾಶ ಕಲ್ಪಿಸಿಕೊಟ್ಟಿದೆ. ಇದು ಸಂತೋಷದ ವಿಷಯ ಎಂದರು.

ಅತ್ಯಂತ ಸಂವೇದನಶೀಲ ಕಲೆ ಸೃಷ್ಟಿಯಾಗಲು ತಳಸಮುದಾಯಗಳ ಚಲನಶೀಲತೆ ಮತ್ತು ಔದಾರ್ಯವೇ ಮುಖ್ಯ ಕಾರಣ. ಇಂದಿಗೂ ಆ ಸಮುದಾಯಗಳ ಕಲೆ ಮತ್ತು ಸಾಹಿತ್ಯದ ಮೌಲ್ಯ ಮಾಪನ ಮಾಡುವುದು ಬಿಟ್ಟು ಟಿಪ್ಪುವಿನಲ್ಲಿ, ಎಂ ಎಫ್ ಹುಸೇನ್‌ನಲ್ಲಿ ಮುಸ್ಲಿಮನನ್ನು ಹುಡುಕುವ, ಬಾಬಾ ಸಾಹೇಬರಲ್ಲಿ ದಲಿತನನ್ನು ಕಾಣುವ ನಿಮ್ಮ ದೃಷ್ಟಿಯನ್ನು ನೀವೆ ಸರಿಪಡಿಸಿಕೊಳ್ಳಿ ಎಂದು ಒತ್ತಾಯಿಸಿದರು.

ಕೆಲವರು ನಾನು ಅವರ ಮರಿ ಮಗ, ಮರಿ ಮೊಮ್ಮಗ ಎಂದು ಹೇಳಿಕೊಳ್ಳುತ್ತಿದ್ದಾರೆ. ಮರಿ ಮಗನೊ, ನರಿ ಮಗನೊ ಏನಾದರೂ ಆಗಿ. ಆದರೆ ನೀವು ಯಾರ ಮಗ ಎಂದುಕೊಳ್ಳುತ್ತೀರಿ ಆ ಮಹಾನ್ ಪುರುಷನ ಗೌರವಕ್ಕೆ ಚ್ಯುತಿ ತರದಂತೆ ನಡೆದುಕೊಳ್ಳಿ. ಅವರ ಜೀವಪರ-ಜನಪರ ಮೌಲ್ಯಗಳಿಗೆ ಅನುಗುಣವಾಗಿ ನಡೆದುಕೊಳ್ಳಿ. ಏಕೆಂದರೆ ಅವರ ಮೆರಗು ಇಳಿದುಹೋಗುತ್ತದೆ, ಉಳಿಯುವುದಿಲ್ಲ ಎಂದು ಬಾನು ಮುಷ್ತಾಕ್ ಹೇಳಿದರು.

ಸರ್ವಾಧಿಕಾರಿಗಳು ಉಪಯುಕ್ತವಾದ ಶತ್ರು ಅಥವಾ ಅನ್ಯನನ್ನು ಆಯ್ಕೆ ಮಾಡಿಕೊಂಡು ಜನರ ರೋಷವನ್ನು ಘರ್ಷಣೆ ಅಥವಾ ಯುದ್ದದ ಮೂಲಕ ಆ ಕಡೆ ತಿರುಗಿಸುತ್ತಾರೆ. ಇಂದು ಅವರು ಮುಸ್ಲಿಮರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಅವರನ್ನು ದೇಶದ್ರೋಹಿಗಳಾಗಿ ಬಿಂಬಿಸಿ ದಿಕ್ಕು ತಪ್ಪಿಸುತ್ತಿದ್ದಾರೆ. ಕಲಾವಿದರು ಕೆಲಸ ಮಾಡಬೇಕಾದ ಕಾಲ ಇದು. ಇಲ್ಲಿ ನಿರಾಶೆಗೆ ಜಾಗವಿಲ್ಲ. ನಾವು ಮಾತಾಡುತ್ತೇವೆ, ಬರೆಯುತ್ತೇವೆ, ನಾವು ಭಾಷೆಯನ್ನು ಬಳಸುತ್ತೇವೆ ಹೀಗೆ ಆದಾಗ ಮಾತ್ರ ನಾಗರೀಕತೆಗಳು ವಾಸಿಯಾಗುತ್ತವೆ ಎಂದರು.

ಇದನ್ನೂ ಓದಿ; ರಾಷ್ಟ್ರಗಳನ್ನು ನಿರ್ಮಿಸುವವರು ಕಲಾವಿದರು ಮತ್ತು ಕವಿಗಳೆ ಹೊರತು ವ್ಯಾಪಾರಿಗಳು, ರಾಜಕಾರಣಿಗಳಲ್ಲ: ಡಾ. ಮೂಡ್ನಾಕೂಡು ಚಿನ್ನಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರತಿ ಕ್ಷಣ ಈ ಭಾರತ. ಪ್ರತಿ ವರ್ಷದ ಹಾಗೆ ಎಲ್ಲಾ ತರಹದಲ್ಲೂ ಹಿಂದೆ ಉರುಳುತ್ಹಿದೆ.
    ನಮ್ಮೆಲ್ಲರ ಕರ್ತವ್ಯ ನಿಷ್ಠೆಗೆ ಯಾವ ಬೆಲೆಯೇ ಇಲ್ಲಾ
    ನಮ್ಮ ದ್ವನಿ ಅರನುರೋಧನೆ ಯಾಗಿದೆ.

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...