Homeಮುಖಪುಟಮುಸ್ಲಿಮರನ್ನು ಹೊರಗಟ್ಟಲಿಕ್ಕೆ ಇಷ್ಟು ಹುನ್ನಾರ ಬೇಕಿತ್ತೆ?: ಲೇಖಕಿ ಬಾನು ಮುಷ್ತಾಕ್ ಪ್ರಶ್ನೆ

ಮುಸ್ಲಿಮರನ್ನು ಹೊರಗಟ್ಟಲಿಕ್ಕೆ ಇಷ್ಟು ಹುನ್ನಾರ ಬೇಕಿತ್ತೆ?: ಲೇಖಕಿ ಬಾನು ಮುಷ್ತಾಕ್ ಪ್ರಶ್ನೆ

"ಅವರು ಕೊಲೆ ಮಾಡಿದರೂ ಸಹ ಚರ್ಚೆ ಆಗುವುದಿಲ್ಲ. ಆದರೆ ನಾವು 'ಆ' ನೋವಾಗುತ್ತಿದೆ ಎಂದರೂ ಬದ್ನಾಮ್ ಆಗಿ ಬಿಡುತ್ತೇವೆ-ದೇಶದ್ರೋಹಿ ಆಗಿಬಿಡ್ತಿವಿ"

- Advertisement -
- Advertisement -

“ಕನ್ನಡ ಭಾಷೆಯ ಬಗ್ಗೆ ಒಬ್ಬ ಅಲ್ಪಸಂಖ್ಯಾತ ಮಹಿಳೆಯಾಗಿ ನನ್ನ ಗ್ರಹಿಕೆ ಎಂದರೆ, ಕನ್ನಡವನ್ನು ಬಳಸಲು ನನಗೆ ನೀವು ಅವಕಾಶವನ್ನೆ ಕೊಡಲಿಲ್ಲ. ಕನ್ನಡವನ್ನು ಭುವನೇಶ್ವರಿಯಾಗಿ ಮಾಡಿದಿರಿ. ಕನ್ನಡ ಬಾವುಟವನ್ನು ಅರಿಶಿನ ಕುಂಕುಮ ಎಂದು ಮಂದಾಸನದ ಮೇಲೆ ಕೂರಿಸಿಬಿಟ್ಟರಿ. ಆಗ ನಾನು ಎಲ್ಲಿ ನಿಲ್ಲಬೇಕು, ಎಲ್ಲಿ ನೋಡಬೇಕು? ನನ್ನ ಹೊರಗಟ್ಟುವಿಕೆ ಯಾವತ್ತೊ ಆರಂಭವಾಗಿದೆ, ಇಂದು ಪೂರ್ಣಗೊಳ್ಳುತ್ತಿದೆ ಅಷ್ಟೆ” ಎಂದು ಲೇಖಕಿ ಬಾನು ಮುಷ್ತಾಕ್‌ರವರು ವಿಷಾದ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ನಡೆಯುತ್ತಿರುವ ಜನಸಾಹಿತ್ಯ ಸಮ್ಮೇಳನ ಉದ್ಘಾಟನಾ ಗೋಷ್ಟಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಅವರು ಕೊಲೆ ಮಾಡಿದರೂ ಸಹ ಚರ್ಚೆ ಆಗುವುದಿಲ್ಲ. ಆದರೆ ನಾವು ‘ಆ’ ನೋವಾಗುತ್ತಿದೆ ಎಂದರೂ ಬದ್ನಾಮ್ ಆಗಿ ಬಿಡುತ್ತೇವೆ-ದೇಶದ್ರೋಹಿ ಆಗಿಬಿಡ್ತಿವಿ” ಎಂದು 1946ರಲ್ಲಿ ಉರ್ದು ಕವಿ ಬರೆದಿದ್ದಾರೆ. ಈ ಪರಿಸ್ಥಿತಿ ಇವತ್ತಿಗೂ ಕೂಡ ಪುನರಾವರ್ತನೆಯಾಗುತ್ತಿದೆ ಎಂದರೆ ನಾವು ಎಂತಹ ಭಯಾನಕ ಸ್ಥಿತಿಯಲ್ಲಿದ್ದೇವೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಇಂದು ದ್ವೇಷ ಭಾಷಣಗಳ, ಸುಳ್ಳು ಸುದ್ದಿಗಳ ಪ್ರಾಸನವಾಗುತ್ತಿದೆ. ನಮ್ಮ ನಂದಿನಿ ಕೈತಪ್ಪಿ ಹೋಗುತ್ತಿದೆ. ನಾವು ಕರ್ನಾಟಕದವರು ಬಹಳ ದೇಶಭಕ್ತರು, ಉದಾರಿಗಳೆಂದುಕೊಂಡು ಸುಮ್ಮನಿದ್ದೇವೆ. ನಂದಿನಿ ನಮ್ಮ ಸಾಹಿತ್ಯ, ಅನ್ನ, ಯುವಜನರ ನೆಮ್ಮದಿ ನೀರು, ವಸತಿ ಎಲ್ಲವೂ ಆಗಿದೆ. ಆದರೆ ಅದು ಕೈ ತಪ್ಪುತ್ತಿದ್ದರು ಸಹ ಏಕೆ ನಾವು ಮಾತನಾಡುತ್ತಿಲ್ಲ ಎಂದು ಬಾನು ಮುಷ್ತಾಕ್ ಪ್ರಶ್ನಿಸಿದರು.

ಮಹಿಳೆಯರನ್ನು ಹೇಗೆ ಹೊಗಳಿ, ಮಂದಾಸನದಲ್ಲಿ ಕೂರಿಸಿ ತುಳಿಯುತ್ತಿದ್ದಾರೋ, ನೀವುಗಳು ಹಾಗೆಯೆ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಮಾಡುತ್ತಿದ್ದೀರಿ. ಕನ್ನಡದ ರಥವನ್ನು ಎಳೆದು, ಕನ್ನಡದ ಜಾತ್ರೆ, ಪರಿಷೆ ಮಾಡಿ ನನ್ನನ್ನು ಅಂದರೆ ಮುಸ್ಲಿಮರನ್ನು ಹೊರಗಟ್ಟಲಿಕ್ಕೆ ಇಷ್ಟು ಹುನ್ನಾರ ಬೇಕಿತ್ತೆ? ಏಕೆ ಹೀಗೆ ಮಾಡುತ್ತಿದ್ದೀರಿ ಎಂಬುದಕ್ಕೆ ನನಗೆ ಉತ್ತರ ಕೊಡಿ ಎಂದು ಆಗ್ರಹಿಸಿದರು.

ಅಲ್ಪಸಂಖ್ಯಾತರು, ದಲಿತರು, ಅಲಕ್ಷಿತ ಸಮುದಾಯಗಳು ಕನ್ನಡದಲ್ಲಿ ಬರೆಯುತ್ತಿದ್ದಾರೆ. ಒಂದೂ ಪುಸ್ತಕ ಪ್ರಕಟಿಸದ ಕನಿಷ್ಟ 600ಕ್ಕಿಂತ ಹೆಚ್ಚಿನ ಮುಸ್ಲಿಂ ಬರಹಗಾರರಿದ್ದಾರೆ. ಆದರೆ ಅವರನ್ನೆಲ್ಲ ನಾವು ಮರೆತುಬಿಟ್ಟಿದ್ದೇವೆ ಎಂದು ವಿಷಾದಿಸಿದರು.

ಬಂಡಾಯ ಸಾಹಿತ್ಯ ಸಂಘಟನೆಯು ಅಲ್ಪಸಂಖ್ಯಾತರು, ದಲಿತರು, ಅಲಕ್ಷಿತ ಸಮುದಾಯಗಳಿಗೆ ಕನ್ನಡದ ಹೆಬ್ಬಾಗಿಲನ್ನು ತೆಗೆದರು. ನಮ್ಮ ಅಭಿವ್ಯಕ್ತಿಯ ಅಡೆತಡೆಗಳನ್ನು ಬಂಡಾಯ ಸಂಘಟನೆ ನಿವಾರಣೆ ಮಾಡಿತು. ಇಂದು ಜನ ಸಾಹಿತ್ಯ ಸಮ್ಮೇಳನ ಆ ಕೆಲಸಕ್ಕೆ ಮುಂದಾಗಿದೆ. ಈ ಪ್ರತಿರೋಧ ಸಮಾವೇಶ ಒಂದು ಅದ್ಭುತವಾದ ಅವಕಾಶ ಕಲ್ಪಿಸಿಕೊಟ್ಟಿದೆ. ಇದು ಸಂತೋಷದ ವಿಷಯ ಎಂದರು.

ಅತ್ಯಂತ ಸಂವೇದನಶೀಲ ಕಲೆ ಸೃಷ್ಟಿಯಾಗಲು ತಳಸಮುದಾಯಗಳ ಚಲನಶೀಲತೆ ಮತ್ತು ಔದಾರ್ಯವೇ ಮುಖ್ಯ ಕಾರಣ. ಇಂದಿಗೂ ಆ ಸಮುದಾಯಗಳ ಕಲೆ ಮತ್ತು ಸಾಹಿತ್ಯದ ಮೌಲ್ಯ ಮಾಪನ ಮಾಡುವುದು ಬಿಟ್ಟು ಟಿಪ್ಪುವಿನಲ್ಲಿ, ಎಂ ಎಫ್ ಹುಸೇನ್‌ನಲ್ಲಿ ಮುಸ್ಲಿಮನನ್ನು ಹುಡುಕುವ, ಬಾಬಾ ಸಾಹೇಬರಲ್ಲಿ ದಲಿತನನ್ನು ಕಾಣುವ ನಿಮ್ಮ ದೃಷ್ಟಿಯನ್ನು ನೀವೆ ಸರಿಪಡಿಸಿಕೊಳ್ಳಿ ಎಂದು ಒತ್ತಾಯಿಸಿದರು.

ಕೆಲವರು ನಾನು ಅವರ ಮರಿ ಮಗ, ಮರಿ ಮೊಮ್ಮಗ ಎಂದು ಹೇಳಿಕೊಳ್ಳುತ್ತಿದ್ದಾರೆ. ಮರಿ ಮಗನೊ, ನರಿ ಮಗನೊ ಏನಾದರೂ ಆಗಿ. ಆದರೆ ನೀವು ಯಾರ ಮಗ ಎಂದುಕೊಳ್ಳುತ್ತೀರಿ ಆ ಮಹಾನ್ ಪುರುಷನ ಗೌರವಕ್ಕೆ ಚ್ಯುತಿ ತರದಂತೆ ನಡೆದುಕೊಳ್ಳಿ. ಅವರ ಜೀವಪರ-ಜನಪರ ಮೌಲ್ಯಗಳಿಗೆ ಅನುಗುಣವಾಗಿ ನಡೆದುಕೊಳ್ಳಿ. ಏಕೆಂದರೆ ಅವರ ಮೆರಗು ಇಳಿದುಹೋಗುತ್ತದೆ, ಉಳಿಯುವುದಿಲ್ಲ ಎಂದು ಬಾನು ಮುಷ್ತಾಕ್ ಹೇಳಿದರು.

ಸರ್ವಾಧಿಕಾರಿಗಳು ಉಪಯುಕ್ತವಾದ ಶತ್ರು ಅಥವಾ ಅನ್ಯನನ್ನು ಆಯ್ಕೆ ಮಾಡಿಕೊಂಡು ಜನರ ರೋಷವನ್ನು ಘರ್ಷಣೆ ಅಥವಾ ಯುದ್ದದ ಮೂಲಕ ಆ ಕಡೆ ತಿರುಗಿಸುತ್ತಾರೆ. ಇಂದು ಅವರು ಮುಸ್ಲಿಮರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಅವರನ್ನು ದೇಶದ್ರೋಹಿಗಳಾಗಿ ಬಿಂಬಿಸಿ ದಿಕ್ಕು ತಪ್ಪಿಸುತ್ತಿದ್ದಾರೆ. ಕಲಾವಿದರು ಕೆಲಸ ಮಾಡಬೇಕಾದ ಕಾಲ ಇದು. ಇಲ್ಲಿ ನಿರಾಶೆಗೆ ಜಾಗವಿಲ್ಲ. ನಾವು ಮಾತಾಡುತ್ತೇವೆ, ಬರೆಯುತ್ತೇವೆ, ನಾವು ಭಾಷೆಯನ್ನು ಬಳಸುತ್ತೇವೆ ಹೀಗೆ ಆದಾಗ ಮಾತ್ರ ನಾಗರೀಕತೆಗಳು ವಾಸಿಯಾಗುತ್ತವೆ ಎಂದರು.

ಇದನ್ನೂ ಓದಿ; ರಾಷ್ಟ್ರಗಳನ್ನು ನಿರ್ಮಿಸುವವರು ಕಲಾವಿದರು ಮತ್ತು ಕವಿಗಳೆ ಹೊರತು ವ್ಯಾಪಾರಿಗಳು, ರಾಜಕಾರಣಿಗಳಲ್ಲ: ಡಾ. ಮೂಡ್ನಾಕೂಡು ಚಿನ್ನಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರತಿ ಕ್ಷಣ ಈ ಭಾರತ. ಪ್ರತಿ ವರ್ಷದ ಹಾಗೆ ಎಲ್ಲಾ ತರಹದಲ್ಲೂ ಹಿಂದೆ ಉರುಳುತ್ಹಿದೆ.
    ನಮ್ಮೆಲ್ಲರ ಕರ್ತವ್ಯ ನಿಷ್ಠೆಗೆ ಯಾವ ಬೆಲೆಯೇ ಇಲ್ಲಾ
    ನಮ್ಮ ದ್ವನಿ ಅರನುರೋಧನೆ ಯಾಗಿದೆ.

LEAVE A REPLY

Please enter your comment!
Please enter your name here

- Advertisment -

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...