Homeಅಂತರಾಷ್ಟ್ರೀಯಬ್ರೆಜಿಲ್: ಸಂಸತ್‌‌ ಕಟ್ಟಡ, ಸುಪ್ರೀಂ ಕೋರ್ಟ್ & ಅಧ್ಯಕ್ಷೀಯ ಅರಮನೆಗೆ ನುಗ್ಗಿ ಧ್ವಂಸಗೊಳಿಸಿದ ಬಲಪಂಥೀಯ ಪ್ರತಿಭಟನಾಕಾರರು

ಬ್ರೆಜಿಲ್: ಸಂಸತ್‌‌ ಕಟ್ಟಡ, ಸುಪ್ರೀಂ ಕೋರ್ಟ್ & ಅಧ್ಯಕ್ಷೀಯ ಅರಮನೆಗೆ ನುಗ್ಗಿ ಧ್ವಂಸಗೊಳಿಸಿದ ಬಲಪಂಥೀಯ ಪ್ರತಿಭಟನಾಕಾರರು

- Advertisement -
- Advertisement -

ಬ್ರೆಜಿಲ್‌ನ ಮಾಜಿ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರ ಬೆಂಬಲಿಗರು ಭಾನುವಾರ ನಡೆಸಿದ ಪ್ರತಿಭಟನೆಯ ವೇಳೆ ಹಿಂಸಾಚಾರ ನಡೆಸಿದ್ದು ದೇಶದ ಉನ್ನತ ಸರ್ಕಾರಿ ಕಟ್ಟಡಗಳನ್ನು ಆಕ್ರಮಿಸಿ ಧ್ವಂಸಗೊಳಿಸಿದ್ದಾರೆ. ಹಾಲಿ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರು ಒಂದು ವಾರದ ಹಿಂದೆ ಅಧಿಕಾರ ಕೈಗಿತ್ತಿಕೊಂಡಿದ್ದರು.

ಅವರು ಅಕ್ಟೋಬರ್ 30 ರಂದು ನಡೆದ ಚುನಾವಣೆಯಲ್ಲಿ ಬೋಲ್ಸನಾರೊ ಅವರನ್ನು ಸೋಲಿಸಿ ಎರಡನೇ ಭಾರಿಗೆ ದೇಶದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೊಲ್ಸನಾರೊ ಬೆಂಬಲಿಗರು ಭಾನುವಾರ ನಡೆಸಿದ ಪ್ರತಿಭಟನೆಯಲ್ಲಿ ದೇಶದ ಸಂಸತ್‌‌ ಕಟ್ಟಡ, ಸುಪ್ರೀಂ ಕೋರ್ಟ್ ಮತ್ತು ಅಧ್ಯಕ್ಷೀಯ ಅರಮನೆಗೆ ನುಗ್ಗಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವೀಡಿಯೊಗಳಲ್ಲಿ ಬೋಲ್ಸನಾರೊ ಬೆಂಬಲಿಗರು ಸರ್ಕಾರಿ ಕಟ್ಟಡಗಳ ಕಿಟಕಿಗಳು ಮತ್ತು ಪೀಠೋಪಕರಣಗಳನ್ನು ಒಡೆದುಹಾಕುವುದನ್ನು ಕಾಣುತ್ತದೆ.

ಬೆಂಬಲಿಗರು ದೇಶದ ಉನ್ನತ ಮಟ್ಟದ ಮೂರು ಸರ್ಕಾರಿ ಕಟ್ಟಡಗಳನ್ನು ಆಕ್ರಮಿಸಿ ಛಾವಣಿಯ ಮೇಲೆ ಏರಿರುವುದು ವಿಡಿಯೊಗಳಲ್ಲಿ ದಾಖಲಾಗಿವೆ. ಕೆಲವು ಪ್ರತಿಭಟನಾಕಾರರು ಬಲಪಂಥೀಯ ನಾಯಕ ಬೋಲ್ಸನಾರೊ ಅವರಿಗೆ ಪುನಃ ಅಧಿಕಾರ ನೀಡಿ ಲುಲಾ ಅವರನ್ನು ಅಧ್ಯಕ್ಷ ಸ್ಥಾನದಿಂದ ಹೊರಹಾಕಲು ಕರೆ ನೀಡಿದ್ದು ಅಥವಾ ಮಿಲಿಟರಿ ಹಸ್ತಕ್ಷೇಪ ಮಾಡುವಂತೆ ಒತ್ತಾಯಿಸಿದ್ದಾರೆ.

ಘಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದು,“ಬ್ರೆಸಿಲ್‌ನಲ್ಲಿ ಸರ್ಕಾರಿ ಸಂಸ್ಥೆಗಳ ವಿರುದ್ಧ ನಡೆದ ಗಲಭೆ ಮತ್ತು ವಿಧ್ವಂಸಕ ಸುದ್ದಿಗಳು ತೀವ್ರ ಕಳವಳವನ್ನು ಉಂಟುಮಾಡಿದೆ. ಪ್ರಜಾಪ್ರಭುತ್ವದ ಸಂಪ್ರದಾಯಗಳನ್ನು ಎಲ್ಲರೂ ಗೌರವಿಸಬೇಕು. ನಾವು ಬ್ರೆಜಿಲ್ ಅಧಿಕಾರಿಗಳಿಗೆ ನಮ್ಮ ಸಂಪೂರ್ಣ ಬೆಂಬಲವನ್ನು ನೀಡುತ್ತೇವೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಅಮೇರಿಕಾ ಅಧ್ಯಕ್ಷ ಜೋ ಬಿಡನ್ ಘಟನೆಯನ್ನು “ಪ್ರಜಾಪ್ರಭುತ್ವದ ಮೇಲಿನ ಆಕ್ರಮಣ” ಎಂದು ಹೇಳಿದ್ದಾರೆ. “ಬ್ರೆಜಿಲ್‌ನಲ್ಲಿ ನಡೆದ ಪ್ರಜಾಪ್ರಭುತ್ವದ ಮೇಲಿನ ಆಕ್ರಮಣವನ್ನು ನಾನು ಖಂಡಿಸುತ್ತೇನೆ. ಬ್ರೆಜಿಲ್‌ನ ಪ್ರಜಾಪ್ರಭುತ್ವ ಸಂಸ್ಥೆಗಳು ನಮ್ಮ ಸಂಪೂರ್ಣ ಬೆಂಬಲವನ್ನು ಹೊಂದಿವೆ. ಬ್ರೆಜಿಲಿಯನ್ ಜನರ ಇಚ್ಛೆಯನ್ನು ದುರ್ಬಲಗೊಳಿಸಬಾರದು. ಲೂಲಾ ಅವರ ಜೊತೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ” ಎಂದು ಅವರು ಹೇಳಿದ್ದಾರೆ.

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರು ಬ್ರೆಜಿಲಿಯನ್ ಜನರು ಮತ್ತು ಪ್ರಜಾಪ್ರಭುತ್ವ ಸಂಸ್ಥೆಗಳ ಇಚ್ಛೆಯನ್ನು ಗೌರವಿಸಬೇಕು ಎಂದು ಒತ್ತಿ ಹೇಳಿದ್ದಾರೆ.

“ಇಂದು ನಡೆದ ಬ್ರೆಜಿಲ್‌ನ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ದಾಳಿಯನ್ನು ನಾನು ಖಂಡಿಸುತ್ತೇನೆ. ಬ್ರೆಜಿಲ್‌ ಜನರು ಮತ್ತು ಪ್ರಜಾಪ್ರಭುತ್ವ ಸಂಸ್ಥೆಗಳ ಇಚ್ಛೆಯನ್ನು ಗೌರವಿಸಬೇಕಾಗಿದ್ದು, ಅದು ಆಗುತ್ತದೆ ಎಂದು ನನಗೆ ಸಂಪೂರ್ಣ ವಿಶ್ವಾಸವಿದೆ. ಬ್ರೆಜಿಲ್ ಒಂದು ಶ್ರೇಷ್ಠ ಪ್ರಜಾಪ್ರಭುತ್ವ ದೇಶ” ಎಂದು ಗುಟೆರಸ್ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...