Homeಕರ್ನಾಟಕಬಿಜೆಪಿ v/s ಬಿಜೆಪಿ: ‘ಸಿಡಿ’ ವಿಚಾರವಾಗಿ ಕಿತ್ತಾಡಿಕೊಂಡ ಬಿಜೆಪಿ ಶಾಸಕ ಯತ್ನಾಳ್ & ಸಚಿವ ನಿರಾಣಿ

ಬಿಜೆಪಿ v/s ಬಿಜೆಪಿ: ‘ಸಿಡಿ’ ವಿಚಾರವಾಗಿ ಕಿತ್ತಾಡಿಕೊಂಡ ಬಿಜೆಪಿ ಶಾಸಕ ಯತ್ನಾಳ್ & ಸಚಿವ ನಿರಾಣಿ

- Advertisement -
- Advertisement -

ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಆಡಳಿತರೂಢ ಬಿಜೆಪಿ ಪಕ್ಷದ ಶಾಸಕ ಬಸನಗೌಡ ಯತ್ನಾಳ್ ಮತ್ತು ಸಚಿವ ಮುರುಗೇಶ ನಿರಾಣಿ  ಪರಸ್ಪರ ಆರೋಪ ಪ್ರತ್ಯಾರೋಪಗಳು ಮಾಡುತ್ತಿದ್ದು, ಮಾಧ್ಯಮಗಳ ಮೂಲಕ ಏಕವಚನದಲ್ಲೇ ಕಿತ್ತಾಡಿಕೊಂಡಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ್ದ ಶಾಸಕ ಯತ್ನಾಳ್, “ನಿರಾಣಿ ಅವರು ಯಾರದ್ದೋ ಸಿ.ಡಿ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಅವರು ಸಿ.ಡಿ ಮೂಲಕವೇ ಮಂತ್ರಿಯಾಗುತ್ತಾರೆ. ನಾನು ಅಂಥಹ ಹಲ್ಕಾ ಕೆಲಸ ಮಾಡುವುದಿಲ್ಲ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅವರಿಗೆ ತಾಕತ್ತಿದ್ದರೆ, ಅಪ್ಪನಿಗೆ ಹುಟ್ಟಿದ್ದರೆ ಸಿ.ಡಿ ಬಿಡುಗಡೆ ಮಾಡಲಿ. ನನಗೆ ಟಿಕೆಟ್ ಕೊಡುಲು ಇವರು ಯಾರು?. ಇತ್ತೀಚೆಗೆ ವಿಜಯಪುರ ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ ನಿರಾಣಿ ಮತ್ತು ವಿಜಯೇಂದ್ರ ಅವರು ಬಿಜೆಪಿ ಬಂಡಾಯ ಅಭ್ಯರ್ಥಿಗಳಿಗೆ ಹಣ ನೀಡಿ, ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ಪ್ರಯತ್ನಿಸಿದ್ದರು. ಬಿಜೆಪಿಯಿಂದ ಬಂಡಾಯವೆದ್ದು ಪಕ್ಷೇತರವಾಗಿ ನಿಂತ ಅಭ್ಯರ್ಥಿಗಳಿಗೆ ಹಣ ನೀಡಿಲ್ಲ ಎಂದಾದರೆ ವಿಜಯೇಂದ್ರ ಮತ್ತು ನಿರಾಣಿ ಧರ್ಮಸ್ಥಳದಲ್ಲಿ ಆಣೆ ಮಾಡಿ ಹೇಳಲಿ” ಎಂದು ಯತ್ನಾಳ್ ಸವಾಲು ಹಾಕಿದ್ದಾರೆ.

ಇದಕ್ಕೆ ಪತ್ರಿಕಾಗೋಷ್ಠಿಯಲ್ಲಿ ತಿರುಗೇಟು ನೀಡಿದ ಸಚಿವ ಮುರುಗೇಶ ನಿರಾಣಿ ಅವರು, “ನಿನಗೆ ತಾಕತ್ತು ಇದ್ದರೆ 2023ರ ಚುನಾವಣೆಯಲ್ಲಿ ನಾನೂ ಸ್ಪರ್ಧಿಸುತ್ತೇನೆ. ನೀನು ಸ್ಪರ್ಧೆ ಮಾಡು ಜನ ಯಾರಿಗೆ ಆಶೀರ್ವಾದ ಮಾಡುತ್ತಾರೆ ನೋಡೋಣ. ಈ ಬಾರಿ ವಿಜಯಪುರದಲ್ಲಿ ನಿನಗೆ ತಕ್ಕ ಪಾಠ ಕಲಿಸಲು ಸಜ್ಜಾಗಿದ್ದಾರೆ. ನನ್ನ ಬಗ್ಗೆ ಹಗುರವಾಗಿ ಮಾತನಾಡುವ ಮುನ್ನ ಆಲೋಚಿಸುವುದು ಒಳಿತು. ನನ್ನ ವಿರುದ್ಧ ನಾಲಿಗೆ ಹರಿಯಬಿಟ್ಟರೆ ಅದೇ ದಾಟಿಯಲ್ಲೇ ನಾನು ಉತ್ತರ ಕೊಡಬೇಕಾಗುತ್ತದೆ” ಎಂದು ಏಕವಚನದಲ್ಲೇ ಶಾಸಕ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಮುಖ್ಯಮಂತ್ರಿ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಹರಿಹರ ಪೀಠ ಮತ್ತು ನನ್ನ ಬಗ್ಗೆ ಹಗುರವಾಗಿ ಮಾತನಾಡಿದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ. ಬೊಮ್ಮಾಯಿ ತಾಯಿ ಆಣೆ ಮಾಡಿದ್ದಾರೆ, ಮೋಸ ಮಾಡಿದ್ದಾರೆಂದು ಲೂಸ್ ಟಾಕ್ ಮಾಡುವುದನ್ನು ಬಿಡು. ಇನ್ನು ಮುಂದೆ ಮಾತನಾಡುವಾಗ ಎಚ್ಚರ ಇರಲಿ” ಎಂದು ನಿರಾಣಿ ಎಚ್ಚರಿಕೆ ನೀಡಿದ್ದಾರೆ.

“ಕೃಷ್ಣಾ ನದಿ ನೀರು ನಾನು ಕೂಡಾ ಕುಡಿದು ಬೆಳೆದಿದ್ದೇನೆ. ಇಲ್ಲೇ ನನ್ನ ಎಲ್ಲ ಸಂಬಂಧಗಳಿವೆ. ನಿನಗೆ ಗೊತ್ತಿರುವ ಭಾಷೆ, ಬೈಗುಳಕ್ಕಿಂತ ಹೆಚ್ಚು ನನಗೂ ಗೊತ್ತಿವೆ, ಹಾಗಂತ ನಾನು ಅವುಗಳನ್ನು ಬಳಸುವುದಿಲ್ಲ. ನೀನು ರಾಜಕಾರಣಕ್ಕೆ ಬರುವ ಮೊದಲು ನೀವು ಹೇಗಿದ್ದೀರಿ? ಯಾವ ಫುಟ್‍ಪಾತ್ ಮೇಲೆ ನಿಲ್ಲುತ್ತಿದ್ದೀರಿ? ಎಲ್ಲಿ ಕೂರುತ್ತಿದ್ದಿರೀ, ಎಲ್ಲವೂ ಗೊತ್ತಿದೆ”

“ಲಿಂಗಾಯತ ಪಂಚಮಸಾಲಿ ಮತ್ತು ಬಣಜಿಗ ಸಮುದಾಯದವರು ಬಹಳ ಹಿಂದಿನಿಂದಲೂ ಅಣ್ಣ-ತಮ್ಮಂದಿರಂತೆ ಇದ್ದಾರೆ. ಯಾವುದೇ ಸಮಾಜದ ಜೊತೆ ಬೇಧಬಾವ ಇಲ್ಲದೆ ನಡೆದಕೊಂಡು ಬಂದಿದ್ದೇವೆ. ಸಭೆ, ಸಮಾರಂಭದಲ್ಲಿ ಅನ್ಯ ಸಮಾಜದ ಬಗ್ಗೆ ಹಗುರವಾಗಿ ಮಾತನಾಡಿ, ಚಪ್ಪಾಳೆ ಹೊಡೆಸಿಕೊಳ್ಳುವುದು ಬಿಡಿ”

“ನೀವು ಬೇರೆ ಪಕ್ಷದಲ್ಲಿ ಇದ್ದಾಗ ಟೊಪ್ಪಿ ಹಾಕಿಕೊಂಡು ಹಿಂದೂಗಳನ್ನು ಬೈಯ್ದಿದ್ದೀರಿ. ಈಗ ಟೊಪ್ಪಿ ತೆಗೆದು ಅವರನ್ನೇ ಬೈಯುತ್ತಿದ್ದೀರಿ. ನಿಮಗೆ ಎರಡು ನಾಲಿಗೆ ಇವೆಯೇ?. ನನಗೆ ಪಕ್ಷ ಮತ್ತು ಸಮಾಜ ಎರಡನೆ ತಾಯಿ ಇದ್ದ ಹಾಗೆ. ಎಂದೂ ಪಕ್ಷ ಬಿಟ್ಟು ಹೋಗಿಲ್ಲ, ಸಮಾಜದ ಬಗ್ಗೆ ಒಡಕಿನ ಮಾತು ಆಡಿಲ್ಲ” ಎಂದು ನಿರಾಣಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ವಪಕ್ಷೀಯ ಸಚಿವ ಮತ್ತು ಶಾಸಕ ಕಿತ್ತಾಡಿಕೊಂಡ ಬಗ್ಗೆ ಕಾಂಗ್ರೆಸ್ ವ್ಯಂಗ್ಯವಾಡಿದ್ದು, “BJP vs BJP ಕಿತ್ತಾಟದಲ್ಲಿ ಎಲ್ಲವೂ ಹೊರಬರುತ್ತಿದೆ. ಕರ್ನಾಟಕದ ಸುಬ್ರಹ್ಮಣ್ಯ ಸ್ವಾಮಿಯಾದ ಯತ್ನಾಳ್ ಸಿಡಿ ಬ್ಲಾಕ್ಮೇಲ್ ಮಾಡಿ ನಿರಾಣಿ ಮಂತ್ರಿಯಾಗಿದ್ದಾರೆ ಎಂದಿದ್ದಾರೆ. ಯಾರ ಸಿಡಿ? ಸಿಡಿ ಮಾಡಿಕೊಟ್ಟಿದ್ದು ಸ್ಯಾಂಟ್ರೋ ರವಿಯೇ? ನಿರಾಣಿ ಹಣ ಕೊಟ್ಟಿದ್ದು ಯಾರಿಗೆ? ಆ ಹಣದ ಬಗ್ಗೆ ಇಡಿ ತನಿಖೆ ಏಕಿಲ್ಲ? ಇದಕ್ಕೆ ರಾಜ್ಯ BJP ಉತ್ತರಿಸಬೇಕಿದೆ” ಎಂದು ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Bjp is communal and dividing india on religion basis and they have become highly corrupt, ppl don’t keep any trust in bjp leaders from top to bottom hence better to make bjp mukth Bharat 👏

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...