Homeಕರ್ನಾಟಕಸದಾಶಿವ ಆಯೋಗದ ವರದಿಗೆ ಅಲೆಮಾರಿಗಳ ವಿರೋಧವೆಂದು ಅಪಪ್ರಚಾರ: ಅನಂತ್ ನಾಯ್ಕ್ ಹೇಳಿಕೆಗೆ ಸಮುದಾಯದ ಮುಖಂಡರ ಸ್ಪಷ್ಟನೆ

ಸದಾಶಿವ ಆಯೋಗದ ವರದಿಗೆ ಅಲೆಮಾರಿಗಳ ವಿರೋಧವೆಂದು ಅಪಪ್ರಚಾರ: ಅನಂತ್ ನಾಯ್ಕ್ ಹೇಳಿಕೆಗೆ ಸಮುದಾಯದ ಮುಖಂಡರ ಸ್ಪಷ್ಟನೆ

- Advertisement -
- Advertisement -

ಜಸ್ಟಿಸ್ ಎ.ಜೆ.ಸದಾಶಿವ ಆಯೋಗದ ವರದಿ ಅನ್ವಯ ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಜಾರಿಗೊಳಿಸಬೇಕು ಎಂಬ ಹೋರಾಟ ತೀವ್ರವಾಗಿರುವ ಬೆನ್ನಲ್ಲೇ, ಈ ಆಯೋಗದ ವರದಿಯನ್ನು ಕೇಂದ್ರಕ್ಕೆ ತರಾತುರಿಯಲ್ಲಿ ಶಿಫಾರಸ್ಸು ಮಾಡಬಾರದೆಂದು ಒಂದು ವರ್ಗ ಆಗ್ರಹಿಸುತ್ತಿದೆ.

ಲಂಬಾಣಿ, ಬೋವಿ ಮುಖಂಡರು ಮುಂಚೂಣಿಯಲ್ಲಿರುವ ‘ಕರ್ನಾಟಕ ಮೀಸಲಾತಿ ಸಂರಕ್ಷಣ ಒಕ್ಕೂಟ’ವು ಆಯೋಗದ ವರದಿಯನ್ನು ವಿರೋಧಿಸಿ ಜನವರಿ 10ರಂದು ಬೆಂಗಳೂರಿನಲ್ಲಿ ಬೃಹತ್ ಹೋರಾಟವನ್ನೂ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿಡಿಯೊ ಬಿಡುಗಡೆ ಮಾಡಿರುವ ಒಕ್ಕೂಟದ ಮುಖಂಡರಾದ ಅನಂತ್ ನಾಯ್ಕ್, “ನ್ಯಾಯಮೂರ್ತಿ ಸದಾಶಿವ ವರದಿಯಲ್ಲಿರುವ ಅವೈಜ್ಞಾನಿಕ, ಅವಾಸ್ತವಿಕ ಅಂಶಗಳನ್ನು ಸರ್ಕಾರ ಸಾರ್ವಜನಿಕವಾಗಿ ಚರ್ಚೆಗೆ ಒಳಪಡಿಸದೆ ಏಕಪಕ್ಷೀಯವಾಗಿ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂಬ ಷಡ್ಯಂತ್ರವನ್ನು ಮಾಡುತ್ತಿದೆ. ಇದರ ವಿರುದ್ಧ ಬಲವಾದಂತಹ ಹೋರಾಟವನ್ನು ಕಟ್ಟಬೇಕೆಂಬ ಕಾರಣಕ್ಕಾಗಿ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಲಂಬಾಣಿ, ಭೋವಿ, ಕೊರಚ, ಕೊರಮ, ಅಲೆಮಾರಿ, ಅರೆ ಅಲೆಮಾರಿ, ಹಂದಿಜೋಗಿ, ಶಿಳ್ಳೇಕ್ಯಾತ ಬೇಡ/ಬುಡ್ಗ ಜಂಗಮ ಈ ಸೂಕ್ಷ್ಮ ಸಮುದಾಯಗಳು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಾಗೂ ಸಂಕಲ್ಪ ಸಮಾವೇಶವನ್ನು ಹಮ್ಮಿಕೊಂಡಿದ್ದೇವೆ” ಎಂದಿದ್ದಾರೆ. ಇದಕ್ಕೆ ಅಲೆಮಾರಿ ಸಮುದಾಯದ ಮುಖಂಡರು ಟೀಕಿಸಿದ್ದಾರೆ.

ಬೇಡ/ಬುಡ್ಗ ಜಂಗಮ ಮತ್ತು ಸುಡುಗಾಡ ಸಿದ್ಧ ಸಮುದಾಯದ ರಾಜ್ಯ ಮುಖಂಡರಾದ ಮಾಂತೇಶ್ ಸಂಕಲ್ ಗಬ್ಬೂರ್ ಪ್ರತಿಕ್ರಿಯಿಸಿ ಅನಂತ್ ನಾಯ್ಕ್ ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ.

“ಜಸ್ಟೀಸ್ ಸದಾಶಿವ ಆಯೋಗದ ವರದಿಯ ಪರ ಮತ್ತು ವಿರೋಧದ ಹೋರಾಟ ನಡೆಯುತ್ತಿದೆ. ಅಲೆಮಾರಿ ಸಮುದಾಯದಲ್ಲಿ ಬರುವ ಬೇಡ/ಬುಡ್ಗ ಜಂಗಮ ಮತ್ತು ಸುಡುಗಾಡು ಸಿದ್ಧಸಮುದಾಯ ಸದಾಶಿವ ಆಯೋಗದ ವರದಿ ವಿರೋಧಿಸಿ ಹೋರಾಟದಲ್ಲಿ ಭಾಗಿಯಾಗಲಿದೆ ಎಂದು ಮೀಸಲಾತಿ  ಸಂರಕ್ಷಣಾ ಸಮಿತಿಯ ಮುಖಂಡರಾದ ಅನಂತ್ ನಾಯ್ಕ್‌ ಹೇಳಿಕೆ ನೀಡಿದ್ದಾರೆ. ಸಮುದಾಯದ ಮುಖಂಡರೊಂದಿಗೆ ಯಾವುದೇ ಚರ್ಚೆಯನ್ನು ನಡೆಸದೆ ಮಾತನಾಡಿದ್ದಾರೆ” ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಅಲೆಮಾರಿ ಸಮುದಾಯದವರಾದ ನಾವು ಒಳಮೀಸಲಾತಿಯನ್ನು ವಿರೋಧಿಸಿಲ್ಲ. ಸದಾಶಿವ ಆಯೋಗದ ವರದಿಗೆ ನಮ್ಮ ವಿರೋಧವಿಲ್ಲ. ಒಳಮೀಸಲಾತಿ ಹೋರಾಟಕ್ಕೆ ನಮ್ಮ ಬೆಂಬಲವಿದೆ. ಒಳಮೀಸಲಾತಿ ವಿರೋಧಿ ಚಟುವಟಿಕೆಯಲ್ಲಿ ನಾವು ಯಾವತ್ತೂ ಭಾಗಿಯಾಗಿಲ್ಲ. ಅಲೆಮಾರಿ ಸಮುದಾಯಗಳಿಗೆ ಶೇ. 1ರಷ್ಟು ಮೀಸಲಾತಿಯನ್ನು ನೀಡಬೇಕೆಂದು ಸದಾಶಿವ ಆಯೋಗದ ವರದಿ ಹೇಳುತ್ತಿದೆ. ಅದರ ಪರವಾಗಿ ನಾವು ಇದ್ದೇವೆ. ದಲಿತ ಸಮುದಾಯದ ಸಹೋದರರ ಜೊತೆ ನಾವಿದ್ದೇವೆ. ಒಡೆದು ಆಳುವ ನೀತಿಯ ಭಾಗವಾಗಿ, ಅಲೆಮಾರಿಗಳ ಹೆಸರನ್ನು ಬಳಸಲಾಗುತ್ತಿದೆ. ಜನವರಿ 10ರಂದು ನಡೆಯುವ ಹೋರಾಟದಲ್ಲಿ ನಾವು ಯಾವುದೇ ಕಾರಣಕ್ಕೂ ಪಾಲ್ಗೊಳ್ಳುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆಯಲ್ಲಿ ಅಲೆಮಾರಿ ಬೇಡ/ಬುಡ್ಗ ಜಂಗಮ ಸಮುದಾಯದ ಮುಖಂಡರಾದ ಶಿವರಾಜ್ ರುದ್ರಾಕ್ಷಿ ಮಾತನಾಡಿ, “ಸದಾಶಿವ ಆಯೋಗದ ವರದಿ ಜಾರಿಯಾದರೆ ಅಲೆಮಾರಿ ಸಮುದಾಯಕ್ಕೆ ಅನುಕೂಲವಾಗಲಿದೆ. ಶೇ.1ರಷ್ಟಿರುವ ಅಲೆಮಾರಿ ಸಮುದಾಯ ಅಭಿವೃದ್ಧಿಯಾಗಿಲ್ಲ. ಸ್ವಾತಂತ್ರ್ಯ ದೊರೆತು 75 ವರ್ಷಗಳಾದರೂ ನಮ್ಮ ಸಮುದಾಯದಿಂದ ಒಬ್ಬನೇ ಒಬ್ಬ ಎಂಎಲ್‌ಎ ಆಗಿಲ್ಲ, ಜಿಪಂ ಸದಸ್ಯನಾಗಿಲ್ಲ, ಉದ್ಯೋಗಗಳಂತೂ ಸಿಗುತ್ತಲೇ ಇಲ್ಲ. ಸದಾಶಿವ ಆಯೋಗದ ವರದಿ ಜಾರಿಯಾದರೆ ನಮ್ಮಲ್ಲಿ ಒಂದಿಷ್ಟು ಜನ ಉದ್ಯೋಗ ಪಡೆಯಲು ಸಾಧ್ಯವಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

“ನಮ್ಮ ಮಕ್ಕಳಿಗೆ ಶಿಕ್ಷಣ ಕನಸಿನ ಮಾತಾಗಿದೆ. ಶಿಕ್ಷಣವನ್ನು ಖಾಸಗೀಕರಣ ಮಾಡಿ, ನಮ್ಮ ಮಕ್ಕಳು ಓದಲು ಸಾಧ್ಯವಾಗುತ್ತಿಲ್ಲ. ಅಲೆಮಾರಿಗಳ ಸಮೀಕ್ಷೆ ನಡೆಸಿ ನಮಗೆ ಶೇ. 1ರಷ್ಟು ಮೀಸಲಾತಿಯನ್ನು ಆಯೋಗ ನೀಡಿದೆ. ಇದನ್ನು ಸ್ವಾಗತ ಮಾಡುತ್ತೇವೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಲೆಮಾರಿ ಸಮುದಾಯಗಳಿಗೆ, ಹಾಗೂ ಬಹುಸಂಖ್ಯಾತ ಎಡಗೈ, ಬಲಗೈ ಸಮುದಾಯಕ್ಕೆ ನ್ಯಾಯ ಸಿಗುವುದು ಬಹುಶಃ ಕೊಲಂಬೊ ಸಮುದಾಗಳಿಗೆ ಇಷ್ಟವಿಲ್ಲ ಅನ್ನಸುತ್ತೇ ಇಷ್ಟುದಿನ ಬಲಗೈ ಸೋದರರನ್ನು ಕಣ್ಣಿಗೆ ಬಟ್ಟೆ ಕಟ್ಟಿರುವವರು ಅವರು ಎಚ್ಚರಿಕೆ ಗೊಂಡ ಕೂಡಲೇ ಅಲೆಮಾರಿ ಭುಜದ ಮೇಲೆ ಬೆಟ್ಟು ತೋರಿಸುವ ನೀಚತನ ಬಿಡ ಬೇಕು ಅಂಬೇಡ್ಕರ್ ರವರ ಆಶಯದಂತೆ ಸರ್ವರಿಗೂ ಸಮಾನ ಅವಕಾಶ ಸಿಗಲಿ, ಜೊತೆಗೆ ಕೊಲಂಬೊ ಸಮುದಾಯಗಳು ಎಷ್ಟು ಬಾರಿ ಅಂಬೇಡ್ಕರ್ ವಿಚಾರ ಧಾರೆಗಳಿಗೆ ಧಕ್ಕೆ ಬಂದಾಗ , ದಲಿತರ ಮೇಲೆ ದೌರ್ಜನ್ಯ, ಅತ್ಯಾಚಾರ ವೆಸಗಿದಾಗ, ಬಾಬಾ ಸಾಹೇಬರ ಸಿದ್ದಾಂತಗಳ ಪರ ಅದೆಷ್ಟು ಬಾರಿ ಬೀದಿಗಿಳಿದು ಹೋರಾಟ ಮಾಡಿದ್ದೀರಿ, ಮೀಸಲು ತೆಗೆಯುತ್ತೇವೆ, ಸಂವಿಧಾನ ಬದಲಾಯಿಸುತ್ತೇವೆ ಎಂದಾಗ ನೀವು ಎಷ್ಟು ಬಾರಿ ಎಷ್ಟು ಹೋರಾಟಗಳನ್ನು ಮಾಡಿದ್ದೀರಿ ನಿಯತ್ತಿನಿಂದ ಹೇಳಿ…
    ಸುಪ್ರೀಂ ಕೋರ್ಟ್ 2020ಫೆ 14 ರಂದು ನೀಡಿದ ತಿರ್ಪಿನಂತೆ ಸ್ಪೃಶ್ಯ ಜಾತಿಗಳನ್ನು ಎಸ್ಸಿ ಪಟ್ಟಿಯಿಂದ ತೆಗೆಯಿರಿ ಎಂದು ಹೇಳಿದಾಗ ನಾವು ಕೊಲಂಬೊ ಸಮುದಾಗಳು ನಮ್ಮ ಸೋದರ ಸಮುದಾಯಗಳು ಎಂದೂ ಸುಮ್ಮನೆ ಅದರ ಪರ ಧ್ವನಿ ಎತ್ತದಿರುವುದು ನಿಮ್ಮ ಈ ಉಪಟಳಕ್ಕೆ ಕಾರಣವಾಗಿರಬಹುದು.
    ಬಹುಸಂಖ್ಯಾತ ಎಡಗೈ ಬಲಗೈ ಅಸ್ಪೃಶ್ಯ ಸಮುದಾಗಳು ಇರುವಕಡೆ ಕೇವಲ ಐದರಿಂದ ಹತ್ತು ಸಾವಿರ ಜನ ಇರುವವರು ಅಧಿಕಾರ ಪಡೆದು ಅಸ್ಪೃಶ್ಯ ಸಮುದಾಗಳ ಪಾಲು ಕದ್ದು ತಿಂದು ಕೊಬ್ಬಿದವರಿಗೆ ಒಳ ಮೀಸಲಾತಿ ಯೇ ಸೂಕ್ತ ಉತ್ತರ……..
    ಶ್ರೀಕಾಂತ್ ಪಾವಗಡ

LEAVE A REPLY

Please enter your comment!
Please enter your name here

- Advertisment -

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...