Homeಕರ್ನಾಟಕಸದಾಶಿವ ಆಯೋಗದ ವರದಿಗೆ ಅಲೆಮಾರಿಗಳ ವಿರೋಧವೆಂದು ಅಪಪ್ರಚಾರ: ಅನಂತ್ ನಾಯ್ಕ್ ಹೇಳಿಕೆಗೆ ಸಮುದಾಯದ ಮುಖಂಡರ ಸ್ಪಷ್ಟನೆ

ಸದಾಶಿವ ಆಯೋಗದ ವರದಿಗೆ ಅಲೆಮಾರಿಗಳ ವಿರೋಧವೆಂದು ಅಪಪ್ರಚಾರ: ಅನಂತ್ ನಾಯ್ಕ್ ಹೇಳಿಕೆಗೆ ಸಮುದಾಯದ ಮುಖಂಡರ ಸ್ಪಷ್ಟನೆ

- Advertisement -
- Advertisement -

ಜಸ್ಟಿಸ್ ಎ.ಜೆ.ಸದಾಶಿವ ಆಯೋಗದ ವರದಿ ಅನ್ವಯ ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಜಾರಿಗೊಳಿಸಬೇಕು ಎಂಬ ಹೋರಾಟ ತೀವ್ರವಾಗಿರುವ ಬೆನ್ನಲ್ಲೇ, ಈ ಆಯೋಗದ ವರದಿಯನ್ನು ಕೇಂದ್ರಕ್ಕೆ ತರಾತುರಿಯಲ್ಲಿ ಶಿಫಾರಸ್ಸು ಮಾಡಬಾರದೆಂದು ಒಂದು ವರ್ಗ ಆಗ್ರಹಿಸುತ್ತಿದೆ.

ಲಂಬಾಣಿ, ಬೋವಿ ಮುಖಂಡರು ಮುಂಚೂಣಿಯಲ್ಲಿರುವ ‘ಕರ್ನಾಟಕ ಮೀಸಲಾತಿ ಸಂರಕ್ಷಣ ಒಕ್ಕೂಟ’ವು ಆಯೋಗದ ವರದಿಯನ್ನು ವಿರೋಧಿಸಿ ಜನವರಿ 10ರಂದು ಬೆಂಗಳೂರಿನಲ್ಲಿ ಬೃಹತ್ ಹೋರಾಟವನ್ನೂ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿಡಿಯೊ ಬಿಡುಗಡೆ ಮಾಡಿರುವ ಒಕ್ಕೂಟದ ಮುಖಂಡರಾದ ಅನಂತ್ ನಾಯ್ಕ್, “ನ್ಯಾಯಮೂರ್ತಿ ಸದಾಶಿವ ವರದಿಯಲ್ಲಿರುವ ಅವೈಜ್ಞಾನಿಕ, ಅವಾಸ್ತವಿಕ ಅಂಶಗಳನ್ನು ಸರ್ಕಾರ ಸಾರ್ವಜನಿಕವಾಗಿ ಚರ್ಚೆಗೆ ಒಳಪಡಿಸದೆ ಏಕಪಕ್ಷೀಯವಾಗಿ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂಬ ಷಡ್ಯಂತ್ರವನ್ನು ಮಾಡುತ್ತಿದೆ. ಇದರ ವಿರುದ್ಧ ಬಲವಾದಂತಹ ಹೋರಾಟವನ್ನು ಕಟ್ಟಬೇಕೆಂಬ ಕಾರಣಕ್ಕಾಗಿ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಲಂಬಾಣಿ, ಭೋವಿ, ಕೊರಚ, ಕೊರಮ, ಅಲೆಮಾರಿ, ಅರೆ ಅಲೆಮಾರಿ, ಹಂದಿಜೋಗಿ, ಶಿಳ್ಳೇಕ್ಯಾತ ಬೇಡ/ಬುಡ್ಗ ಜಂಗಮ ಈ ಸೂಕ್ಷ್ಮ ಸಮುದಾಯಗಳು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಾಗೂ ಸಂಕಲ್ಪ ಸಮಾವೇಶವನ್ನು ಹಮ್ಮಿಕೊಂಡಿದ್ದೇವೆ” ಎಂದಿದ್ದಾರೆ. ಇದಕ್ಕೆ ಅಲೆಮಾರಿ ಸಮುದಾಯದ ಮುಖಂಡರು ಟೀಕಿಸಿದ್ದಾರೆ.

ಬೇಡ/ಬುಡ್ಗ ಜಂಗಮ ಮತ್ತು ಸುಡುಗಾಡ ಸಿದ್ಧ ಸಮುದಾಯದ ರಾಜ್ಯ ಮುಖಂಡರಾದ ಮಾಂತೇಶ್ ಸಂಕಲ್ ಗಬ್ಬೂರ್ ಪ್ರತಿಕ್ರಿಯಿಸಿ ಅನಂತ್ ನಾಯ್ಕ್ ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ.

“ಜಸ್ಟೀಸ್ ಸದಾಶಿವ ಆಯೋಗದ ವರದಿಯ ಪರ ಮತ್ತು ವಿರೋಧದ ಹೋರಾಟ ನಡೆಯುತ್ತಿದೆ. ಅಲೆಮಾರಿ ಸಮುದಾಯದಲ್ಲಿ ಬರುವ ಬೇಡ/ಬುಡ್ಗ ಜಂಗಮ ಮತ್ತು ಸುಡುಗಾಡು ಸಿದ್ಧಸಮುದಾಯ ಸದಾಶಿವ ಆಯೋಗದ ವರದಿ ವಿರೋಧಿಸಿ ಹೋರಾಟದಲ್ಲಿ ಭಾಗಿಯಾಗಲಿದೆ ಎಂದು ಮೀಸಲಾತಿ  ಸಂರಕ್ಷಣಾ ಸಮಿತಿಯ ಮುಖಂಡರಾದ ಅನಂತ್ ನಾಯ್ಕ್‌ ಹೇಳಿಕೆ ನೀಡಿದ್ದಾರೆ. ಸಮುದಾಯದ ಮುಖಂಡರೊಂದಿಗೆ ಯಾವುದೇ ಚರ್ಚೆಯನ್ನು ನಡೆಸದೆ ಮಾತನಾಡಿದ್ದಾರೆ” ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಅಲೆಮಾರಿ ಸಮುದಾಯದವರಾದ ನಾವು ಒಳಮೀಸಲಾತಿಯನ್ನು ವಿರೋಧಿಸಿಲ್ಲ. ಸದಾಶಿವ ಆಯೋಗದ ವರದಿಗೆ ನಮ್ಮ ವಿರೋಧವಿಲ್ಲ. ಒಳಮೀಸಲಾತಿ ಹೋರಾಟಕ್ಕೆ ನಮ್ಮ ಬೆಂಬಲವಿದೆ. ಒಳಮೀಸಲಾತಿ ವಿರೋಧಿ ಚಟುವಟಿಕೆಯಲ್ಲಿ ನಾವು ಯಾವತ್ತೂ ಭಾಗಿಯಾಗಿಲ್ಲ. ಅಲೆಮಾರಿ ಸಮುದಾಯಗಳಿಗೆ ಶೇ. 1ರಷ್ಟು ಮೀಸಲಾತಿಯನ್ನು ನೀಡಬೇಕೆಂದು ಸದಾಶಿವ ಆಯೋಗದ ವರದಿ ಹೇಳುತ್ತಿದೆ. ಅದರ ಪರವಾಗಿ ನಾವು ಇದ್ದೇವೆ. ದಲಿತ ಸಮುದಾಯದ ಸಹೋದರರ ಜೊತೆ ನಾವಿದ್ದೇವೆ. ಒಡೆದು ಆಳುವ ನೀತಿಯ ಭಾಗವಾಗಿ, ಅಲೆಮಾರಿಗಳ ಹೆಸರನ್ನು ಬಳಸಲಾಗುತ್ತಿದೆ. ಜನವರಿ 10ರಂದು ನಡೆಯುವ ಹೋರಾಟದಲ್ಲಿ ನಾವು ಯಾವುದೇ ಕಾರಣಕ್ಕೂ ಪಾಲ್ಗೊಳ್ಳುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆಯಲ್ಲಿ ಅಲೆಮಾರಿ ಬೇಡ/ಬುಡ್ಗ ಜಂಗಮ ಸಮುದಾಯದ ಮುಖಂಡರಾದ ಶಿವರಾಜ್ ರುದ್ರಾಕ್ಷಿ ಮಾತನಾಡಿ, “ಸದಾಶಿವ ಆಯೋಗದ ವರದಿ ಜಾರಿಯಾದರೆ ಅಲೆಮಾರಿ ಸಮುದಾಯಕ್ಕೆ ಅನುಕೂಲವಾಗಲಿದೆ. ಶೇ.1ರಷ್ಟಿರುವ ಅಲೆಮಾರಿ ಸಮುದಾಯ ಅಭಿವೃದ್ಧಿಯಾಗಿಲ್ಲ. ಸ್ವಾತಂತ್ರ್ಯ ದೊರೆತು 75 ವರ್ಷಗಳಾದರೂ ನಮ್ಮ ಸಮುದಾಯದಿಂದ ಒಬ್ಬನೇ ಒಬ್ಬ ಎಂಎಲ್‌ಎ ಆಗಿಲ್ಲ, ಜಿಪಂ ಸದಸ್ಯನಾಗಿಲ್ಲ, ಉದ್ಯೋಗಗಳಂತೂ ಸಿಗುತ್ತಲೇ ಇಲ್ಲ. ಸದಾಶಿವ ಆಯೋಗದ ವರದಿ ಜಾರಿಯಾದರೆ ನಮ್ಮಲ್ಲಿ ಒಂದಿಷ್ಟು ಜನ ಉದ್ಯೋಗ ಪಡೆಯಲು ಸಾಧ್ಯವಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

“ನಮ್ಮ ಮಕ್ಕಳಿಗೆ ಶಿಕ್ಷಣ ಕನಸಿನ ಮಾತಾಗಿದೆ. ಶಿಕ್ಷಣವನ್ನು ಖಾಸಗೀಕರಣ ಮಾಡಿ, ನಮ್ಮ ಮಕ್ಕಳು ಓದಲು ಸಾಧ್ಯವಾಗುತ್ತಿಲ್ಲ. ಅಲೆಮಾರಿಗಳ ಸಮೀಕ್ಷೆ ನಡೆಸಿ ನಮಗೆ ಶೇ. 1ರಷ್ಟು ಮೀಸಲಾತಿಯನ್ನು ಆಯೋಗ ನೀಡಿದೆ. ಇದನ್ನು ಸ್ವಾಗತ ಮಾಡುತ್ತೇವೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಲೆಮಾರಿ ಸಮುದಾಯಗಳಿಗೆ, ಹಾಗೂ ಬಹುಸಂಖ್ಯಾತ ಎಡಗೈ, ಬಲಗೈ ಸಮುದಾಯಕ್ಕೆ ನ್ಯಾಯ ಸಿಗುವುದು ಬಹುಶಃ ಕೊಲಂಬೊ ಸಮುದಾಗಳಿಗೆ ಇಷ್ಟವಿಲ್ಲ ಅನ್ನಸುತ್ತೇ ಇಷ್ಟುದಿನ ಬಲಗೈ ಸೋದರರನ್ನು ಕಣ್ಣಿಗೆ ಬಟ್ಟೆ ಕಟ್ಟಿರುವವರು ಅವರು ಎಚ್ಚರಿಕೆ ಗೊಂಡ ಕೂಡಲೇ ಅಲೆಮಾರಿ ಭುಜದ ಮೇಲೆ ಬೆಟ್ಟು ತೋರಿಸುವ ನೀಚತನ ಬಿಡ ಬೇಕು ಅಂಬೇಡ್ಕರ್ ರವರ ಆಶಯದಂತೆ ಸರ್ವರಿಗೂ ಸಮಾನ ಅವಕಾಶ ಸಿಗಲಿ, ಜೊತೆಗೆ ಕೊಲಂಬೊ ಸಮುದಾಯಗಳು ಎಷ್ಟು ಬಾರಿ ಅಂಬೇಡ್ಕರ್ ವಿಚಾರ ಧಾರೆಗಳಿಗೆ ಧಕ್ಕೆ ಬಂದಾಗ , ದಲಿತರ ಮೇಲೆ ದೌರ್ಜನ್ಯ, ಅತ್ಯಾಚಾರ ವೆಸಗಿದಾಗ, ಬಾಬಾ ಸಾಹೇಬರ ಸಿದ್ದಾಂತಗಳ ಪರ ಅದೆಷ್ಟು ಬಾರಿ ಬೀದಿಗಿಳಿದು ಹೋರಾಟ ಮಾಡಿದ್ದೀರಿ, ಮೀಸಲು ತೆಗೆಯುತ್ತೇವೆ, ಸಂವಿಧಾನ ಬದಲಾಯಿಸುತ್ತೇವೆ ಎಂದಾಗ ನೀವು ಎಷ್ಟು ಬಾರಿ ಎಷ್ಟು ಹೋರಾಟಗಳನ್ನು ಮಾಡಿದ್ದೀರಿ ನಿಯತ್ತಿನಿಂದ ಹೇಳಿ…
    ಸುಪ್ರೀಂ ಕೋರ್ಟ್ 2020ಫೆ 14 ರಂದು ನೀಡಿದ ತಿರ್ಪಿನಂತೆ ಸ್ಪೃಶ್ಯ ಜಾತಿಗಳನ್ನು ಎಸ್ಸಿ ಪಟ್ಟಿಯಿಂದ ತೆಗೆಯಿರಿ ಎಂದು ಹೇಳಿದಾಗ ನಾವು ಕೊಲಂಬೊ ಸಮುದಾಗಳು ನಮ್ಮ ಸೋದರ ಸಮುದಾಯಗಳು ಎಂದೂ ಸುಮ್ಮನೆ ಅದರ ಪರ ಧ್ವನಿ ಎತ್ತದಿರುವುದು ನಿಮ್ಮ ಈ ಉಪಟಳಕ್ಕೆ ಕಾರಣವಾಗಿರಬಹುದು.
    ಬಹುಸಂಖ್ಯಾತ ಎಡಗೈ ಬಲಗೈ ಅಸ್ಪೃಶ್ಯ ಸಮುದಾಗಳು ಇರುವಕಡೆ ಕೇವಲ ಐದರಿಂದ ಹತ್ತು ಸಾವಿರ ಜನ ಇರುವವರು ಅಧಿಕಾರ ಪಡೆದು ಅಸ್ಪೃಶ್ಯ ಸಮುದಾಗಳ ಪಾಲು ಕದ್ದು ತಿಂದು ಕೊಬ್ಬಿದವರಿಗೆ ಒಳ ಮೀಸಲಾತಿ ಯೇ ಸೂಕ್ತ ಉತ್ತರ……..
    ಶ್ರೀಕಾಂತ್ ಪಾವಗಡ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...