Homeಕರ್ನಾಟಕಸದಾಶಿವ ಆಯೋಗದ ವರದಿಗೆ ಅಲೆಮಾರಿಗಳ ವಿರೋಧವೆಂದು ಅಪಪ್ರಚಾರ: ಅನಂತ್ ನಾಯ್ಕ್ ಹೇಳಿಕೆಗೆ ಸಮುದಾಯದ ಮುಖಂಡರ ಸ್ಪಷ್ಟನೆ

ಸದಾಶಿವ ಆಯೋಗದ ವರದಿಗೆ ಅಲೆಮಾರಿಗಳ ವಿರೋಧವೆಂದು ಅಪಪ್ರಚಾರ: ಅನಂತ್ ನಾಯ್ಕ್ ಹೇಳಿಕೆಗೆ ಸಮುದಾಯದ ಮುಖಂಡರ ಸ್ಪಷ್ಟನೆ

- Advertisement -
- Advertisement -

ಜಸ್ಟಿಸ್ ಎ.ಜೆ.ಸದಾಶಿವ ಆಯೋಗದ ವರದಿ ಅನ್ವಯ ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಜಾರಿಗೊಳಿಸಬೇಕು ಎಂಬ ಹೋರಾಟ ತೀವ್ರವಾಗಿರುವ ಬೆನ್ನಲ್ಲೇ, ಈ ಆಯೋಗದ ವರದಿಯನ್ನು ಕೇಂದ್ರಕ್ಕೆ ತರಾತುರಿಯಲ್ಲಿ ಶಿಫಾರಸ್ಸು ಮಾಡಬಾರದೆಂದು ಒಂದು ವರ್ಗ ಆಗ್ರಹಿಸುತ್ತಿದೆ.

ಲಂಬಾಣಿ, ಬೋವಿ ಮುಖಂಡರು ಮುಂಚೂಣಿಯಲ್ಲಿರುವ ‘ಕರ್ನಾಟಕ ಮೀಸಲಾತಿ ಸಂರಕ್ಷಣ ಒಕ್ಕೂಟ’ವು ಆಯೋಗದ ವರದಿಯನ್ನು ವಿರೋಧಿಸಿ ಜನವರಿ 10ರಂದು ಬೆಂಗಳೂರಿನಲ್ಲಿ ಬೃಹತ್ ಹೋರಾಟವನ್ನೂ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿಡಿಯೊ ಬಿಡುಗಡೆ ಮಾಡಿರುವ ಒಕ್ಕೂಟದ ಮುಖಂಡರಾದ ಅನಂತ್ ನಾಯ್ಕ್, “ನ್ಯಾಯಮೂರ್ತಿ ಸದಾಶಿವ ವರದಿಯಲ್ಲಿರುವ ಅವೈಜ್ಞಾನಿಕ, ಅವಾಸ್ತವಿಕ ಅಂಶಗಳನ್ನು ಸರ್ಕಾರ ಸಾರ್ವಜನಿಕವಾಗಿ ಚರ್ಚೆಗೆ ಒಳಪಡಿಸದೆ ಏಕಪಕ್ಷೀಯವಾಗಿ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂಬ ಷಡ್ಯಂತ್ರವನ್ನು ಮಾಡುತ್ತಿದೆ. ಇದರ ವಿರುದ್ಧ ಬಲವಾದಂತಹ ಹೋರಾಟವನ್ನು ಕಟ್ಟಬೇಕೆಂಬ ಕಾರಣಕ್ಕಾಗಿ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಲಂಬಾಣಿ, ಭೋವಿ, ಕೊರಚ, ಕೊರಮ, ಅಲೆಮಾರಿ, ಅರೆ ಅಲೆಮಾರಿ, ಹಂದಿಜೋಗಿ, ಶಿಳ್ಳೇಕ್ಯಾತ ಬೇಡ/ಬುಡ್ಗ ಜಂಗಮ ಈ ಸೂಕ್ಷ್ಮ ಸಮುದಾಯಗಳು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಾಗೂ ಸಂಕಲ್ಪ ಸಮಾವೇಶವನ್ನು ಹಮ್ಮಿಕೊಂಡಿದ್ದೇವೆ” ಎಂದಿದ್ದಾರೆ. ಇದಕ್ಕೆ ಅಲೆಮಾರಿ ಸಮುದಾಯದ ಮುಖಂಡರು ಟೀಕಿಸಿದ್ದಾರೆ.

ಬೇಡ/ಬುಡ್ಗ ಜಂಗಮ ಮತ್ತು ಸುಡುಗಾಡ ಸಿದ್ಧ ಸಮುದಾಯದ ರಾಜ್ಯ ಮುಖಂಡರಾದ ಮಾಂತೇಶ್ ಸಂಕಲ್ ಗಬ್ಬೂರ್ ಪ್ರತಿಕ್ರಿಯಿಸಿ ಅನಂತ್ ನಾಯ್ಕ್ ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ.

“ಜಸ್ಟೀಸ್ ಸದಾಶಿವ ಆಯೋಗದ ವರದಿಯ ಪರ ಮತ್ತು ವಿರೋಧದ ಹೋರಾಟ ನಡೆಯುತ್ತಿದೆ. ಅಲೆಮಾರಿ ಸಮುದಾಯದಲ್ಲಿ ಬರುವ ಬೇಡ/ಬುಡ್ಗ ಜಂಗಮ ಮತ್ತು ಸುಡುಗಾಡು ಸಿದ್ಧಸಮುದಾಯ ಸದಾಶಿವ ಆಯೋಗದ ವರದಿ ವಿರೋಧಿಸಿ ಹೋರಾಟದಲ್ಲಿ ಭಾಗಿಯಾಗಲಿದೆ ಎಂದು ಮೀಸಲಾತಿ  ಸಂರಕ್ಷಣಾ ಸಮಿತಿಯ ಮುಖಂಡರಾದ ಅನಂತ್ ನಾಯ್ಕ್‌ ಹೇಳಿಕೆ ನೀಡಿದ್ದಾರೆ. ಸಮುದಾಯದ ಮುಖಂಡರೊಂದಿಗೆ ಯಾವುದೇ ಚರ್ಚೆಯನ್ನು ನಡೆಸದೆ ಮಾತನಾಡಿದ್ದಾರೆ” ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಅಲೆಮಾರಿ ಸಮುದಾಯದವರಾದ ನಾವು ಒಳಮೀಸಲಾತಿಯನ್ನು ವಿರೋಧಿಸಿಲ್ಲ. ಸದಾಶಿವ ಆಯೋಗದ ವರದಿಗೆ ನಮ್ಮ ವಿರೋಧವಿಲ್ಲ. ಒಳಮೀಸಲಾತಿ ಹೋರಾಟಕ್ಕೆ ನಮ್ಮ ಬೆಂಬಲವಿದೆ. ಒಳಮೀಸಲಾತಿ ವಿರೋಧಿ ಚಟುವಟಿಕೆಯಲ್ಲಿ ನಾವು ಯಾವತ್ತೂ ಭಾಗಿಯಾಗಿಲ್ಲ. ಅಲೆಮಾರಿ ಸಮುದಾಯಗಳಿಗೆ ಶೇ. 1ರಷ್ಟು ಮೀಸಲಾತಿಯನ್ನು ನೀಡಬೇಕೆಂದು ಸದಾಶಿವ ಆಯೋಗದ ವರದಿ ಹೇಳುತ್ತಿದೆ. ಅದರ ಪರವಾಗಿ ನಾವು ಇದ್ದೇವೆ. ದಲಿತ ಸಮುದಾಯದ ಸಹೋದರರ ಜೊತೆ ನಾವಿದ್ದೇವೆ. ಒಡೆದು ಆಳುವ ನೀತಿಯ ಭಾಗವಾಗಿ, ಅಲೆಮಾರಿಗಳ ಹೆಸರನ್ನು ಬಳಸಲಾಗುತ್ತಿದೆ. ಜನವರಿ 10ರಂದು ನಡೆಯುವ ಹೋರಾಟದಲ್ಲಿ ನಾವು ಯಾವುದೇ ಕಾರಣಕ್ಕೂ ಪಾಲ್ಗೊಳ್ಳುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆಯಲ್ಲಿ ಅಲೆಮಾರಿ ಬೇಡ/ಬುಡ್ಗ ಜಂಗಮ ಸಮುದಾಯದ ಮುಖಂಡರಾದ ಶಿವರಾಜ್ ರುದ್ರಾಕ್ಷಿ ಮಾತನಾಡಿ, “ಸದಾಶಿವ ಆಯೋಗದ ವರದಿ ಜಾರಿಯಾದರೆ ಅಲೆಮಾರಿ ಸಮುದಾಯಕ್ಕೆ ಅನುಕೂಲವಾಗಲಿದೆ. ಶೇ.1ರಷ್ಟಿರುವ ಅಲೆಮಾರಿ ಸಮುದಾಯ ಅಭಿವೃದ್ಧಿಯಾಗಿಲ್ಲ. ಸ್ವಾತಂತ್ರ್ಯ ದೊರೆತು 75 ವರ್ಷಗಳಾದರೂ ನಮ್ಮ ಸಮುದಾಯದಿಂದ ಒಬ್ಬನೇ ಒಬ್ಬ ಎಂಎಲ್‌ಎ ಆಗಿಲ್ಲ, ಜಿಪಂ ಸದಸ್ಯನಾಗಿಲ್ಲ, ಉದ್ಯೋಗಗಳಂತೂ ಸಿಗುತ್ತಲೇ ಇಲ್ಲ. ಸದಾಶಿವ ಆಯೋಗದ ವರದಿ ಜಾರಿಯಾದರೆ ನಮ್ಮಲ್ಲಿ ಒಂದಿಷ್ಟು ಜನ ಉದ್ಯೋಗ ಪಡೆಯಲು ಸಾಧ್ಯವಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

“ನಮ್ಮ ಮಕ್ಕಳಿಗೆ ಶಿಕ್ಷಣ ಕನಸಿನ ಮಾತಾಗಿದೆ. ಶಿಕ್ಷಣವನ್ನು ಖಾಸಗೀಕರಣ ಮಾಡಿ, ನಮ್ಮ ಮಕ್ಕಳು ಓದಲು ಸಾಧ್ಯವಾಗುತ್ತಿಲ್ಲ. ಅಲೆಮಾರಿಗಳ ಸಮೀಕ್ಷೆ ನಡೆಸಿ ನಮಗೆ ಶೇ. 1ರಷ್ಟು ಮೀಸಲಾತಿಯನ್ನು ಆಯೋಗ ನೀಡಿದೆ. ಇದನ್ನು ಸ್ವಾಗತ ಮಾಡುತ್ತೇವೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಲೆಮಾರಿ ಸಮುದಾಯಗಳಿಗೆ, ಹಾಗೂ ಬಹುಸಂಖ್ಯಾತ ಎಡಗೈ, ಬಲಗೈ ಸಮುದಾಯಕ್ಕೆ ನ್ಯಾಯ ಸಿಗುವುದು ಬಹುಶಃ ಕೊಲಂಬೊ ಸಮುದಾಗಳಿಗೆ ಇಷ್ಟವಿಲ್ಲ ಅನ್ನಸುತ್ತೇ ಇಷ್ಟುದಿನ ಬಲಗೈ ಸೋದರರನ್ನು ಕಣ್ಣಿಗೆ ಬಟ್ಟೆ ಕಟ್ಟಿರುವವರು ಅವರು ಎಚ್ಚರಿಕೆ ಗೊಂಡ ಕೂಡಲೇ ಅಲೆಮಾರಿ ಭುಜದ ಮೇಲೆ ಬೆಟ್ಟು ತೋರಿಸುವ ನೀಚತನ ಬಿಡ ಬೇಕು ಅಂಬೇಡ್ಕರ್ ರವರ ಆಶಯದಂತೆ ಸರ್ವರಿಗೂ ಸಮಾನ ಅವಕಾಶ ಸಿಗಲಿ, ಜೊತೆಗೆ ಕೊಲಂಬೊ ಸಮುದಾಯಗಳು ಎಷ್ಟು ಬಾರಿ ಅಂಬೇಡ್ಕರ್ ವಿಚಾರ ಧಾರೆಗಳಿಗೆ ಧಕ್ಕೆ ಬಂದಾಗ , ದಲಿತರ ಮೇಲೆ ದೌರ್ಜನ್ಯ, ಅತ್ಯಾಚಾರ ವೆಸಗಿದಾಗ, ಬಾಬಾ ಸಾಹೇಬರ ಸಿದ್ದಾಂತಗಳ ಪರ ಅದೆಷ್ಟು ಬಾರಿ ಬೀದಿಗಿಳಿದು ಹೋರಾಟ ಮಾಡಿದ್ದೀರಿ, ಮೀಸಲು ತೆಗೆಯುತ್ತೇವೆ, ಸಂವಿಧಾನ ಬದಲಾಯಿಸುತ್ತೇವೆ ಎಂದಾಗ ನೀವು ಎಷ್ಟು ಬಾರಿ ಎಷ್ಟು ಹೋರಾಟಗಳನ್ನು ಮಾಡಿದ್ದೀರಿ ನಿಯತ್ತಿನಿಂದ ಹೇಳಿ…
    ಸುಪ್ರೀಂ ಕೋರ್ಟ್ 2020ಫೆ 14 ರಂದು ನೀಡಿದ ತಿರ್ಪಿನಂತೆ ಸ್ಪೃಶ್ಯ ಜಾತಿಗಳನ್ನು ಎಸ್ಸಿ ಪಟ್ಟಿಯಿಂದ ತೆಗೆಯಿರಿ ಎಂದು ಹೇಳಿದಾಗ ನಾವು ಕೊಲಂಬೊ ಸಮುದಾಗಳು ನಮ್ಮ ಸೋದರ ಸಮುದಾಯಗಳು ಎಂದೂ ಸುಮ್ಮನೆ ಅದರ ಪರ ಧ್ವನಿ ಎತ್ತದಿರುವುದು ನಿಮ್ಮ ಈ ಉಪಟಳಕ್ಕೆ ಕಾರಣವಾಗಿರಬಹುದು.
    ಬಹುಸಂಖ್ಯಾತ ಎಡಗೈ ಬಲಗೈ ಅಸ್ಪೃಶ್ಯ ಸಮುದಾಗಳು ಇರುವಕಡೆ ಕೇವಲ ಐದರಿಂದ ಹತ್ತು ಸಾವಿರ ಜನ ಇರುವವರು ಅಧಿಕಾರ ಪಡೆದು ಅಸ್ಪೃಶ್ಯ ಸಮುದಾಗಳ ಪಾಲು ಕದ್ದು ತಿಂದು ಕೊಬ್ಬಿದವರಿಗೆ ಒಳ ಮೀಸಲಾತಿ ಯೇ ಸೂಕ್ತ ಉತ್ತರ……..
    ಶ್ರೀಕಾಂತ್ ಪಾವಗಡ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...