Homeಮುಖಪುಟಸಿದ್ದು ನಿಜಕನಸುಗಳು ಪುಸ್ತಕ ಬಿಡುಗಡೆಗೆ ಸಿಟಿ ಸಿವಿಲ್ ಕೋರ್ಟ್ ತಡೆ; ಬಿಜೆಪಿಗೆ ಮುಖಭಂಗ

ಸಿದ್ದು ನಿಜಕನಸುಗಳು ಪುಸ್ತಕ ಬಿಡುಗಡೆಗೆ ಸಿಟಿ ಸಿವಿಲ್ ಕೋರ್ಟ್ ತಡೆ; ಬಿಜೆಪಿಗೆ ಮುಖಭಂಗ

- Advertisement -
- Advertisement -

‘ಸಿದ್ದು ನಿಜಕನಸುಗಳು’ ಎಂಬ ಪುಸ್ತಕ ಬಿಡುಗಡೆಗೆ ಮುಂದಾಗಿದ್ದ ಬಿಜೆಪಿಗೆ ಮುಖಭಂಗವಾಗಿದೆ. ಪುಸ್ತಕ ಬಿಡುಗಡೆ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ತಡೆಯಾಜ್ಞೆ ನೀಡಿದೆ.

ಇದು ಮಾಜಿ ಸಿಎಂ ಸಿದ್ದರಾಮಯ್ಯನವರ ತೇಜೋವಧೆ ಮಾಡಲು ನಡೆಸಿರುವ ಪಿತೂರಿ ಎಂದು ಆರೋಪಿಸಿದ್ದ ಸಿದ್ದರಾಮಯ್ಯನವರ ಪುತ್ರ ಶಾಸಕ ಯತೀಂದ್ರ ಸಿದ್ದರಾಮಯ್ಯ ಸಲ್ಲಿಸಿದ ರಿಟ್ ಅರ್ಜಿ ಆಲಿಸಿದ ಕೋರ್ಟ್ ಪುಸ್ತಕ ಬಿಡುಗಡೆ, ಮಾರಾಟ ಮತ್ತು ಮಾಧ್ಯಮ ಪ್ರಸಾರಕ್ಕೆ ತಡೆ ನೀಡಿದೆ.

ಕಳೆದ ತಿಂಗಳು ಆಧಾರ ರಹಿತವಾಗಿ, ಧರ್ಮಗಳ ನಡುವೆ ಕಲಹ ಉಂಟು ಮಾಡುವಂತೆ ರಚನೆಯಾಗಿರುವ ‘ಟಿಪ್ಪು ನಿಜಕನಸುಗಳು’ ಕೃತಿ ಮಾರಾಟ ಮಾಡದಂತೆ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿತ್ತು.

“ಸಿದ್ದು ನಿಜಕನಸುಗಳು” ಎಂಬ ಪುಸ್ತಕದ ಮೂಲಕ ಹಲವು ಸೂಕ್ಷ್ಮ ವಿಷಯಗಳನ್ನು ಬಹಿರಂಗಪಡಿಸುವ ಜತೆ ಹಲವು ಪ್ರಶ್ನೆಗಳಿಗೆ ಉತ್ತರ ಹುಡುಕಿ ಕೊಡುವ ಪ್ರಯತ್ನವನ್ನು ಶ್ಲಾಘಿಸುತ್ತೇನೆ. ಈ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದೇನೆ. ನೀವೂ ಬನ್ನಿ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ್ ಆಹ್ವಾನ ಪತ್ರಿಕೆಯನ್ನು ನಿನ್ನೆ ಟ್ವೀಟ್ ಮಾಡಿದ್ದರು.

ಆಹ್ವಾನ ಪತ್ರಿಕೆಯ ಪ್ರಕಾರ ಈ ಪುಸ್ತಕವನ್ನು ವಿಕೆಪಿ ಎಂಬ ಅನಾಮಧೇಯ ವ್ಯಕ್ತಿ ಬರೆದಿದ್ದಾರೆ. ಇದು ಮೊದಲ ಸಂಪುಟವಾಗಿದ್ದು, ಇನ್ನು ಹಲವು ಸಂಪುಟಗಳನ್ನು ರಚಿಸುವ ಉದ್ದೇಶ ಬಿಜೆಪಿಗಿದೆ ಎಂಬುದು ತಿಳಿದುಬಂದಿದೆ. ಸೋಮವಾರ ಮಧ್ಯಾಹ್ನ 3 ಗಂಟೆಗೆ ಟೌನ್‌ಹಾಲ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಡಾ.ಅಶ್ವಥ್ ನಾರಾಯಣ್ ಪುಸ್ತಕ ಬಿಡುಗಡೆ ಮಾಡಿದರೆ, ವಿಧಾನ ಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸಬೇಕಿತ್ತು.

ಪಠ್ಯಪುಸ್ತಕ ತಿರುಚಿದ ಆರೋಪ ಹೊತ್ತಿರುವ ಬಲಪಂಥೀಯ ಬರಹಗಾರ-ಪತ್ರಕರ್ತರಾದ ರೋಹಿತ್ ಚಕ್ರತೀರ್ಥ, ವೃಶಾಂಕ್ ಭಟ್, ಸಂತೋಷ್ ತಮ್ಮಯ್ಯ  ಮತ್ತು ರಾಕೇಶ್ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ ಎಂದು ಪ್ರಕಟಣೆ ತಿಳಿಸಿತ್ತು.

ಈ ಪುಸ್ತಕವು ಸಿದ್ದರಾಮಯ್ಯನವರ ವಿರುದ್ಧ ಇಲ್ಲ ಸಲ್ಲದ ಅಪಪ್ರಚಾರ ಮಾಡಲು ಮತ್ತು ಒಂದು ಸಮುದಾಯವನ್ನು ತುಚ್ಛೀಕರಣ ಮಾಡಲು ರಚಿಸಲಾಗಿದೆ ಎಂದು ಕೆಪಿಸಿಸಿ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಎಸ್‌ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

“ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ದುರುದ್ದೇಶದ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ. ಜ.9ರಂದು ಮಧ್ಯಾಹ್ನ 3 ಗಂಟೆಗೆ ತಮ್ಮ ಠಾಣಾ ವ್ಯಾಪ್ತಿಯಲ್ಲಿ ಬರುವ ಪುರಭವನದಲ್ಲಿ ಈ ಕಾರ್ಯಕ್ರಮ ಇರುವ ಬಗ್ಗೆ ಆಹ್ವಾನ ಪತ್ರಿಕೆ ಹರಿದಾಡುತ್ತಿದೆ ಸಿದ್ದರಾಮಯ್ಯ ಅವರ ವಿರೂಪಗೊಳಿಸಿದ ಭಾವಚಿತ್ರವನ್ನು ಬಳಸಿ ‘ಸಿದ್ದು ನಿಜಕನಸುಗಳು’ ಎಂಬ ಶೀರ್ಷಿಕೆಯಡಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ. ಪತ್ರಿಕೆಯಲ್ಲಿನ ಪುಸ್ತಕದ ಮುಖಪುಟ ವಿಪಕ್ಷ ನಾಯಕರ ಅವಹೇಳನಕಾರಿ, ಕಪೋಲಕಲ್ಪಿತ, ಪ್ರಚೋದನಕಾರಿ ಲೇಖನಗಳನ್ನು ಒಳಗೊಂಡಿರುವುದು ಸ್ಪಷ್ಟವಾಗಿದೆ. ಇಂತಹ ದ್ವೇ‍ಷಪೂರಿತ ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಲ್ಲದೆ ಕಾಂಗ್ರೆಸ್ ಪಕ್ಷವು ಬಿಜೆಪಿಯ ಪುಸ್ತಕ ಬಿಡುಗಡೆಗೆ ತಿರುಗೇಟು ನೀಡಲು ಸಜ್ಜಾಗಿದೆ. ಸಿದ್ದರಾಮಯ್ಯ ಸರ್ಕಾರದ ಅಭಿವೃದ್ದಿ ಯೋಜನೆಗಳ ಸಾಲು ಸಾಲು ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿದೆ.

ಸಿದ್ದರಾಮಯ್ಯನವರ ಕನಸು ಹಸಿವು ಮುಕ್ತ ಕರ್ನಾಟಕ: ಬಡಜನರು ಯಾರ ಬಳಿಯೂ ಅನ್ನಕ್ಕಾಗಿ ಕೈಚಾಚದೆ ಸ್ವಾಭಿಮಾನದ ಬದುಕನ್ನು ಸಾಗಿಸಬೇಕೆನ್ನುವುದು ಸಿದ್ದರಾಮಯ್ಯ ಸರ್ಕಾರದ ನಿಜಕನಸುಗಳು. ಇದಕ್ಕಾಗಿ ಹಸಿವು ಮುಕ್ತ ಕರ್ನಾಟಕದ ಕನಸಿನೊಂದಿಗೆ ಅನ್ನಭಾಗ್ಯ ಯೋಜನೆಯು ರಾಜ್ಯದಲ್ಲಿ ಅನುಷ್ಠಾನಗೊಳಿಸಿದ ಸಿದ್ದು, ಈ ಯೋಜನೆಯಿಂದ 3.85 ಕೋಟಿ ಬಡ ಜನರ ಪೌಷ್ಠಿಕತೆ ಉತ್ತಮಗೊಂಡಿದೆ.

ಬಡವರಿಗೆ ಉದ್ಯೋಗ: ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಪಶುಸಂಗೋಪನೆ ಬಹುಮುಖ್ಯ ಕಸುಬಾಗಿದ್ದು, ಈ ಕ್ಷೇತ್ರದಲ್ಲಿ ಉದ್ಯೋಗಾಭಿವೃದ್ಧಿಗೆ ವಿಫುಲ ಅವಕಾಶಗಳಿವೆ. ಪ್ರಮುಖ ಯೋಜನೆಗಳಾದ ಕುರಿಗಾಹಿ ಸುರಕ್ಷಾ ಯೋಜನೆ, ಕ್ಷೀರಭಾಗ್ಯ, ಪಶುಭಾಗ್ಯ ಮುಂತಾದವುಗಳ ಮೂಲಕ ಗ್ರಾಮೀಣ ರೈತರಿಗೆ ಸಿದ್ದರಾಮಯ್ಯನವರ ಸರ್ಕಾರವು ಪ್ರೋತ್ಸಾಹ ನೀಡಿದೆ. ಇದರ ಫಲವಾಗಿ ಫಲಾನುಭವಿಗಳ ಸಂಖ್ಯೆಯಲ್ಲಿ ಒಂದು ಲಕ್ಷದಷ್ಟು ಹೆಚ್ಚಳವಾಗಿ 10 ಲಕ್ಷಕ್ಕೆ ಏರಿಕೆಗೊಂಡಿತ್ತು.

ಗುಡಿಸಲು ಮುಕ್ತ ಕರ್ನಾಟಕದ ಕನಸು: ಸಿದ್ದರಾಮಯ್ಯ ಸರ್ಕಾರ ತನ್ನ ಆಡಳಿತಾವಧಿಯಲ್ಲಿ ಗುಡಿಸಲು ಮುಕ್ತ ಕರ್ನಾಟಕವನ್ನಾಗಿಸುವ ನಿಜಕನಸನ್ನು ಹೊಂದಿತ್ತು, ಇದಕ್ಕಾಗಿ ಪ್ರತಿ ವರ್ಷವೂ 3 ಲಕ್ಷ ಮನೆಗಳನ್ನು ನಿರ್ಮಿಸಿದೆ. ಸಾರ್ವಜನಿಕ ವಸತಿಗೆ ಹೆಚ್ಚಿನ ಆದ್ಯತೆ ನೀಡಿರುವ ಕೆಲವೇ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿತ್ತು. ಸಿದ್ದರಾಮಯ್ಯನವರ 5 ವರ್ಷದ ಆಡಳಿತದಲ್ಲಿ 15 ಲಕ್ಷಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಿದ್ದು ಸಿದ್ದು ಸರ್ಕಾರ. ಇದಕ್ಕಾಗಿ ಸರ್ಕಾರವು ಹುಟ್ಕ ಸಂಸ್ಥೆಯಿಂದ ವಸತಿ ಯೋಜನೆಗಳ ಅನುಷ್ಠಾನದ ಅತ್ಯುತ್ತಮ ಸಾಧನೆಯ ಪುರಸ್ಕಾರಕ್ಕೂ ಭಾಜನವಾಗಿದೆ.

ಶಿಕ್ಷಣ ಕ್ರಾಂತಿ -ಸಿದ್ದು ಕನಸು: ‘ಪ್ರತಿಯೊಂದು ಮಗು ಶಾಲೆಯಲ್ಲಿ ಮತ್ತು ಉತ್ತಮ ಕಲಿಕೆಯೊಂದಿಗೆ’ ಎನ್ನುವ ಗುರಿಯೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟದ ಹೆಚ್ಚಳಕ್ಕಾಗಿ ಸರ್ಕಾರ ಅನೇಕ ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ. ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಮಧ್ಯಾಹ್ನದ ಬಿಸಿಯೂಟ ಮತ್ತು ಬಿಸಿಹಾಲನ್ನು ನೀಡಿತ್ತು. 1 ಕೋಟಿಗೂ ಹೆಚ್ಚು ಮಕ್ಕಳು ಪ್ರಯೋಜನ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಆಧಾರ ರಹಿತ ‘ಟಿಪ್ಪು ನಿಜಕನಸುಗಳು’ ಕೃತಿ ಮಾರಾಟಕ್ಕೆ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...