Homeಮುಖಪುಟಜಾತ್ಯತೀತತೆಯ ಉಲ್ಲೇಖವಿರುವ ಸರ್ಕಾರದ ಭಾಷಣ ಓದದೆ ಸದನದಿಂದ ಹೊರನಡೆದ ತಮಿಳುನಾಡು ರಾಜ್ಯಪಾಲ

ಜಾತ್ಯತೀತತೆಯ ಉಲ್ಲೇಖವಿರುವ ಸರ್ಕಾರದ ಭಾಷಣ ಓದದೆ ಸದನದಿಂದ ಹೊರನಡೆದ ತಮಿಳುನಾಡು ರಾಜ್ಯಪಾಲ

- Advertisement -
- Advertisement -

ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಮಾತ್ರ ರೆಕಾರ್ಡ್ ಮಾಡಲು ಸ್ಪೀಕರ್‌ಗೆ ಸೂಚಿಸುವ ನಿರ್ಣಯವನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಮಂಡಿಸಿದ ನಂತರ ತಮಿಳುನಾಡು ರಾಜ್ಯಪಾಲ ಆರ್‌.ಎನ್.ರವಿ ಅವರು ಇಂದು (ಜ.9) ವಿಧಾನಸಭೆಯಿಂದ ಹೊರನಡೆದಿದ್ದಾರೆ.

ರಾಜ್ಯ ಸರ್ಕಾರ ಸಿದ್ಧಪಡಿಸಿದ ಮತ್ತು ಸ್ಪೀಕರ್ ಅನುವಾದಿಸಿದ ರಾಜ್ಯಪಾಲರ ಮೂಲ ಭಾಷಣವನ್ನು ಮಾತ್ರ ರೆಕಾರ್ಡ್ ಮಾಡುವ ನಿರ್ಣಯವನ್ನು ವಿಧಾನಸಭೆ ಅಂಗೀಕರಿಸಿತು. ರಾಜ್ಯಪಾಲರು ತಮ್ಮ ಭಾಷಣಕ್ಕೆ ಸರ್ಕಾರ ಸಿದ್ಧಪಡಿಸದ ಕೆಲವು ಭಾಗಗಳನ್ನು ಸೇರಿಸಿದ್ದಾರೆ ಎಂದು ವರದಿಯಾಗಿದೆ.

ಜಾತ್ಯತೀತತೆಯ ಬಗ್ಗೆ ಉಲ್ಲೇಖಗಳನ್ನು ಒಳಗೊಂಡಿರುವ, ತಮಿಳುನಾಡು ಶಾಂತಿಯ ಸ್ವರ್ಗ ಎಂದು ಬಣ್ಣಿಸಲಾದ ಮತ್ತು ಪೆರಿಯಾರ್, ಬಿ.ಆರ್.ಅಂಬೇಡ್ಕರ್, ಕೆ.ಕಾಮರಾಜ್, ಸಿ.ಎನ್.ಅಣ್ಣಾದೊರೈ, ಕರುಣಾನಿಧಿ ಅವರಂತಹ ನಾಯಕರನ್ನು ಸ್ಮರಿಸಿ ರಾಜ್ಯ ಸರ್ಕಾರವು ಸಿದ್ಧಪಡಿಸಿದ ಭಾಷಣದ ಭಾಗಗಳನ್ನು ರಾಜ್ಯಪಾಲರು ಬಿಟ್ಟಿಬಿಟ್ಟರು. ಆನಂತರ ಮುಖ್ಯಮಂತ್ರಿ ನಿರ್ಣಯ ಮಂಡಿಸಿದರು. ಆಡಳಿತಾರೂಢ ಡಿಎಂಕೆ ಪ್ರತಿಪಾದಿಸುವ ‘ದ್ರಾವಿಡ ಮಾದರಿ’ಯ ಉಲ್ಲೇಖವನ್ನೂ ಅವರು ಓದಲಿಲ್ಲ.

ರಾಜ್ಯಪಾಲರ ಕ್ರಮವು ವಿಧಾನಸಭೆ ಸದನದ ಸಂಪ್ರದಾಯಗಳಿಗೆ ವಿರುದ್ಧವಾಗಿದೆ ಎಂದು ತಮ್ಮ ನಿರ್ಣಯದಲ್ಲಿ ಎಂ.ಕೆ. ಸ್ಟಾಲಿನ್ ಅಭಿಪ್ರಾಯಪಟ್ಟಿದ್ದಾರೆ.

ಆಡಳಿತಾರೂಢ ಡಿಎಂಕೆಯ ಮಿತ್ರಪಕ್ಷಗಳಾದ ಕಾಂಗ್ರೆಸ್, ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ಸಿಪಿಐ ಮತ್ತು ಸಿಪಿಐ(ಎಂ) ಪಕ್ಷಗಳು ಈ ಹಿಂದೆ ರಾಜ್ಯಪಾಲರ ಭಾಷಣವನ್ನು ಬಹಿಷ್ಕರಿಸಿದ್ದವು. ಪ್ರತಿಭಟನೆಯ ನಂತರ, ಘೋಷಣೆಗಳನ್ನು ಕೂಗಲಾಗಿದೆ.

ರಾಜ್ಯಪಾಲ ರವಿ ವಿರುದ್ಧ ವಿಧಾನಸಭೆಯಲ್ಲಿ ‘ತಮಿಳುನಾಡು ಬಿಟ್ಟು ತೊಲಗಿ’ ಘೋಷಣೆಗಳು ಪ್ರತಿಧ್ವನಿಸಿದವು. ಆಡಳಿತಾರೂಢ ಡಿಎಂಕೆ ಶಾಸಕರು, “ಬಿಜೆಪಿ, ಆರೆಸ್ಸೆಸ್ ಸಿದ್ಧಾಂತವನ್ನು ಹೇರಬೇಡಿ” ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಸಂಸದ ಕಾರ್ತಿ ಪಿ.ಚಿದಂಬರಂ ಅವರು ರಾಜ್ಯಪಾಲರನ್ನು ಪದಚ್ಯುತಗೊಳಿಸುವಂತೆ ಕರೆ ನೀಡಿದ್ದಾರೆ.

“ತಮಿಳಗಂ ತಮಿಳುನಾಡಿಗೆ ಹೆಚ್ಚು ಸೂಕ್ತವಾದ ಹೆಸರು” ಎಂದು ರಾಜ್ಯಪಾಲರು ಇತ್ತೀಚೆಗೆ ಹೇಳಿಕೆ ನೀಡಿದ ಬಳಿಕ ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲರ ನಡುವೆ ವಿವಾದ ಉಂಟಾಗಿದೆ. ಡಿಎಂಕೆ ಶಾಸಕರು ರಾಜ್ಯಪಾಲರ ಹೇಳಿಕೆಯನ್ನು ಖಂಡಿಸಿದ್ದಾರೆ.

(‘ನಾಡು’ ಎಂಬ ಪದವು ಭೂಮಿ ಎಂದರ್ಥವನ್ನು ಹೊಂದಿದೆ. ಕೆಲವೊಮ್ಮೆ ದೇಶ ಅಥವಾ ರಾಷ್ಟ್ರ-ರಾಜ್ಯ ಎಂದು ಅರ್ಥೈಸಲಾಗುತ್ತದೆ. ‘ತಮಿಳಗಂ’ ಎಂದರೆ ತಮಿಳರು ವಾಸಿಸುವ ಪ್ರದೇಶ ಎಂಬುದಾಗಿದೆ.)

“ದುರದೃಷ್ಟವಶಾತ್ ತಮಿಳುನಾಡಿನಲ್ಲಿ ನಾವು ದ್ರಾವಿಡರು ಎಂಬ ಹಿಂಜರಿಕೆಯ ರಾಜಕಾರಣವಿದೆ. ಸಂವಿಧಾನದ ಬಲದಿಂದ ನಮ್ಮನ್ನು ಒಟ್ಟುಗೂಡಿಸಲಾಗಿದೆ. ನಾವು ದೇಶದ ಭಾಗವಲ್ಲ ಎಂಬ ವಿಚಾರವನ್ನು ಬಲಪಡಿಸಲು ಅರ್ಧಶತಮಾನ ಕಾಲ ಪ್ರಯತ್ನಿಸಲಾಗಿದೆ. ಇಡೀ ದೇಶಕ್ಕೆ ಅನ್ವಯಿಸುವ ಎಲ್ಲವನ್ನೂ ತಮಿಳುನಾಡು ವಿರೋಧಿಸುತ್ತಿದೆ”ಎಂದು ರಾಜ್ಯಪಾಲರು ಬುಧವಾರ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ  ಹೇಳಿದ್ದರು. ಕಾಶಿ-ತಮಿಳು ಸಂಗಮದ ಸಂಘಟಕರು ಮತ್ತು ಸ್ವಯಂಸೇವಕರನ್ನು ಅಭಿನಂದಿಸುವ ಕಾರ್ಯಕ್ರಮ ಅದಾಗಿತ್ತು.

“ಇದೊಂದು ಅಭ್ಯಾಸವಾಗಿದೆ. ಅನೇಕ ಪ್ರಬಂಧಗಳನ್ನು ಸುಳ್ಳು ಮತ್ತು ಕಳಪೆ ಕಾಲ್ಪನಿಕ ಸಂಗತಿಗಳಿಂದ ಬರೆಯಲಾಗಿದೆ. ಇದನ್ನು ಹೋಗಲಾಡಿಸಬೇಕು. ಸತ್ಯವು ಮೇಲುಗೈ ಸಾಧಿಸಬೇಕು. ವಾಸ್ತವವಾಗಿ, ತಮಿಳುನಾಡು ಭಾರತದ ಆತ್ಮವನ್ನು ಹಿಡಿದಿಟ್ಟುಕೊಂಡಿರುವ ನಾಡು. ಆದರೆ ತಮಿಳಗಂ ಎಂಬುದು ಸೂಕ್ತ ಪದವಾಗಿ ಹೋಗಿದೆ” ಎಂದಿದ್ದರು ರಾಜ್ಯಪಾಲರು.

ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರದ ನಡುವೆ ವಾಗ್ವಾದ ನಡೆದಿದ್ದು, ಬಿಜೆಪಿಯ ಆಶಯದಂತೆ ರಾಜ್ಯಪಾಲ ರವಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆಡಳಿತರೂಢ ಪಕ್ಷ ಆರೋಪಿಸಿದೆ.

“ರಾಜ್ಯಪಾಲ ಆರ್.ಎನ್.ರವಿ ಅವರು ದಿನನಿತ್ಯ ಒಂದಷ್ಟು ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಗೊಂದಲ, ಪ್ರತ್ಯೇಕತೆ ಮತ್ತು ಸಂಘರ್ಷ ಸೃಷ್ಟಿಸುತ್ತಿದ್ದಾರೆ. 50 ವರ್ಷಗಳ ದ್ರಾವಿಡ ರಾಜಕಾರಣದಲ್ಲಿ ಜನರಿಗೆ ಮೋಸ ಮಾಡಲಾಗಿದೆ ಎಂದು ರಾಜ್ಯಪಾಲರು ಹೇಳಿದ್ದಾರೆ” ಎಂದು ಟೀಕೆಗಳು ವ್ಯಕ್ತವಾಗಿವೆ.

ಡಿಎಂಕೆ ವಕ್ತಾರ ಸೇಲಂ ಧರಣೀಧರನ್ ಪ್ರತಿಕ್ರಿಯಿಸಿದ್ದು, “ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರು ಇಂದು ತಮಿಳುನಾಡು ವಿಧಾನಸಭೆಯಲ್ಲಿ ತಮ್ಮ ಭಾಷಣದ ವೇಳೆ ಕೆಲವು ಪ್ರಮುಖ ವಿಷಯಗಳನ್ನು ಬಿಟ್ಟು ಸಾಂವಿಧಾನಿಕ ನಿಯಮಗಳಿಂದ ಉಲ್ಲಂಘಿಸಿದ್ದಾರೆ. ಈ ರಾಜ್ಯಪಾಲರು ರಾಜಕೀಯ ಅಜೆಂಡಾವನ್ನು ಹೊಂದಿದ್ದಾರೆ. ಅವರು ತಮಿಳುನಾಡಿನ ಬಿಜೆಪಿ ವಕ್ತಾರರಂತೆ ವರ್ತಿಸುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...