Homeಮುಖಪುಟಜಾತ್ಯತೀತತೆಯ ಉಲ್ಲೇಖವಿರುವ ಸರ್ಕಾರದ ಭಾಷಣ ಓದದೆ ಸದನದಿಂದ ಹೊರನಡೆದ ತಮಿಳುನಾಡು ರಾಜ್ಯಪಾಲ

ಜಾತ್ಯತೀತತೆಯ ಉಲ್ಲೇಖವಿರುವ ಸರ್ಕಾರದ ಭಾಷಣ ಓದದೆ ಸದನದಿಂದ ಹೊರನಡೆದ ತಮಿಳುನಾಡು ರಾಜ್ಯಪಾಲ

- Advertisement -
- Advertisement -

ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಮಾತ್ರ ರೆಕಾರ್ಡ್ ಮಾಡಲು ಸ್ಪೀಕರ್‌ಗೆ ಸೂಚಿಸುವ ನಿರ್ಣಯವನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಮಂಡಿಸಿದ ನಂತರ ತಮಿಳುನಾಡು ರಾಜ್ಯಪಾಲ ಆರ್‌.ಎನ್.ರವಿ ಅವರು ಇಂದು (ಜ.9) ವಿಧಾನಸಭೆಯಿಂದ ಹೊರನಡೆದಿದ್ದಾರೆ.

ರಾಜ್ಯ ಸರ್ಕಾರ ಸಿದ್ಧಪಡಿಸಿದ ಮತ್ತು ಸ್ಪೀಕರ್ ಅನುವಾದಿಸಿದ ರಾಜ್ಯಪಾಲರ ಮೂಲ ಭಾಷಣವನ್ನು ಮಾತ್ರ ರೆಕಾರ್ಡ್ ಮಾಡುವ ನಿರ್ಣಯವನ್ನು ವಿಧಾನಸಭೆ ಅಂಗೀಕರಿಸಿತು. ರಾಜ್ಯಪಾಲರು ತಮ್ಮ ಭಾಷಣಕ್ಕೆ ಸರ್ಕಾರ ಸಿದ್ಧಪಡಿಸದ ಕೆಲವು ಭಾಗಗಳನ್ನು ಸೇರಿಸಿದ್ದಾರೆ ಎಂದು ವರದಿಯಾಗಿದೆ.

ಜಾತ್ಯತೀತತೆಯ ಬಗ್ಗೆ ಉಲ್ಲೇಖಗಳನ್ನು ಒಳಗೊಂಡಿರುವ, ತಮಿಳುನಾಡು ಶಾಂತಿಯ ಸ್ವರ್ಗ ಎಂದು ಬಣ್ಣಿಸಲಾದ ಮತ್ತು ಪೆರಿಯಾರ್, ಬಿ.ಆರ್.ಅಂಬೇಡ್ಕರ್, ಕೆ.ಕಾಮರಾಜ್, ಸಿ.ಎನ್.ಅಣ್ಣಾದೊರೈ, ಕರುಣಾನಿಧಿ ಅವರಂತಹ ನಾಯಕರನ್ನು ಸ್ಮರಿಸಿ ರಾಜ್ಯ ಸರ್ಕಾರವು ಸಿದ್ಧಪಡಿಸಿದ ಭಾಷಣದ ಭಾಗಗಳನ್ನು ರಾಜ್ಯಪಾಲರು ಬಿಟ್ಟಿಬಿಟ್ಟರು. ಆನಂತರ ಮುಖ್ಯಮಂತ್ರಿ ನಿರ್ಣಯ ಮಂಡಿಸಿದರು. ಆಡಳಿತಾರೂಢ ಡಿಎಂಕೆ ಪ್ರತಿಪಾದಿಸುವ ‘ದ್ರಾವಿಡ ಮಾದರಿ’ಯ ಉಲ್ಲೇಖವನ್ನೂ ಅವರು ಓದಲಿಲ್ಲ.

ರಾಜ್ಯಪಾಲರ ಕ್ರಮವು ವಿಧಾನಸಭೆ ಸದನದ ಸಂಪ್ರದಾಯಗಳಿಗೆ ವಿರುದ್ಧವಾಗಿದೆ ಎಂದು ತಮ್ಮ ನಿರ್ಣಯದಲ್ಲಿ ಎಂ.ಕೆ. ಸ್ಟಾಲಿನ್ ಅಭಿಪ್ರಾಯಪಟ್ಟಿದ್ದಾರೆ.

ಆಡಳಿತಾರೂಢ ಡಿಎಂಕೆಯ ಮಿತ್ರಪಕ್ಷಗಳಾದ ಕಾಂಗ್ರೆಸ್, ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ಸಿಪಿಐ ಮತ್ತು ಸಿಪಿಐ(ಎಂ) ಪಕ್ಷಗಳು ಈ ಹಿಂದೆ ರಾಜ್ಯಪಾಲರ ಭಾಷಣವನ್ನು ಬಹಿಷ್ಕರಿಸಿದ್ದವು. ಪ್ರತಿಭಟನೆಯ ನಂತರ, ಘೋಷಣೆಗಳನ್ನು ಕೂಗಲಾಗಿದೆ.

ರಾಜ್ಯಪಾಲ ರವಿ ವಿರುದ್ಧ ವಿಧಾನಸಭೆಯಲ್ಲಿ ‘ತಮಿಳುನಾಡು ಬಿಟ್ಟು ತೊಲಗಿ’ ಘೋಷಣೆಗಳು ಪ್ರತಿಧ್ವನಿಸಿದವು. ಆಡಳಿತಾರೂಢ ಡಿಎಂಕೆ ಶಾಸಕರು, “ಬಿಜೆಪಿ, ಆರೆಸ್ಸೆಸ್ ಸಿದ್ಧಾಂತವನ್ನು ಹೇರಬೇಡಿ” ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಸಂಸದ ಕಾರ್ತಿ ಪಿ.ಚಿದಂಬರಂ ಅವರು ರಾಜ್ಯಪಾಲರನ್ನು ಪದಚ್ಯುತಗೊಳಿಸುವಂತೆ ಕರೆ ನೀಡಿದ್ದಾರೆ.

“ತಮಿಳಗಂ ತಮಿಳುನಾಡಿಗೆ ಹೆಚ್ಚು ಸೂಕ್ತವಾದ ಹೆಸರು” ಎಂದು ರಾಜ್ಯಪಾಲರು ಇತ್ತೀಚೆಗೆ ಹೇಳಿಕೆ ನೀಡಿದ ಬಳಿಕ ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲರ ನಡುವೆ ವಿವಾದ ಉಂಟಾಗಿದೆ. ಡಿಎಂಕೆ ಶಾಸಕರು ರಾಜ್ಯಪಾಲರ ಹೇಳಿಕೆಯನ್ನು ಖಂಡಿಸಿದ್ದಾರೆ.

(‘ನಾಡು’ ಎಂಬ ಪದವು ಭೂಮಿ ಎಂದರ್ಥವನ್ನು ಹೊಂದಿದೆ. ಕೆಲವೊಮ್ಮೆ ದೇಶ ಅಥವಾ ರಾಷ್ಟ್ರ-ರಾಜ್ಯ ಎಂದು ಅರ್ಥೈಸಲಾಗುತ್ತದೆ. ‘ತಮಿಳಗಂ’ ಎಂದರೆ ತಮಿಳರು ವಾಸಿಸುವ ಪ್ರದೇಶ ಎಂಬುದಾಗಿದೆ.)

“ದುರದೃಷ್ಟವಶಾತ್ ತಮಿಳುನಾಡಿನಲ್ಲಿ ನಾವು ದ್ರಾವಿಡರು ಎಂಬ ಹಿಂಜರಿಕೆಯ ರಾಜಕಾರಣವಿದೆ. ಸಂವಿಧಾನದ ಬಲದಿಂದ ನಮ್ಮನ್ನು ಒಟ್ಟುಗೂಡಿಸಲಾಗಿದೆ. ನಾವು ದೇಶದ ಭಾಗವಲ್ಲ ಎಂಬ ವಿಚಾರವನ್ನು ಬಲಪಡಿಸಲು ಅರ್ಧಶತಮಾನ ಕಾಲ ಪ್ರಯತ್ನಿಸಲಾಗಿದೆ. ಇಡೀ ದೇಶಕ್ಕೆ ಅನ್ವಯಿಸುವ ಎಲ್ಲವನ್ನೂ ತಮಿಳುನಾಡು ವಿರೋಧಿಸುತ್ತಿದೆ”ಎಂದು ರಾಜ್ಯಪಾಲರು ಬುಧವಾರ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ  ಹೇಳಿದ್ದರು. ಕಾಶಿ-ತಮಿಳು ಸಂಗಮದ ಸಂಘಟಕರು ಮತ್ತು ಸ್ವಯಂಸೇವಕರನ್ನು ಅಭಿನಂದಿಸುವ ಕಾರ್ಯಕ್ರಮ ಅದಾಗಿತ್ತು.

“ಇದೊಂದು ಅಭ್ಯಾಸವಾಗಿದೆ. ಅನೇಕ ಪ್ರಬಂಧಗಳನ್ನು ಸುಳ್ಳು ಮತ್ತು ಕಳಪೆ ಕಾಲ್ಪನಿಕ ಸಂಗತಿಗಳಿಂದ ಬರೆಯಲಾಗಿದೆ. ಇದನ್ನು ಹೋಗಲಾಡಿಸಬೇಕು. ಸತ್ಯವು ಮೇಲುಗೈ ಸಾಧಿಸಬೇಕು. ವಾಸ್ತವವಾಗಿ, ತಮಿಳುನಾಡು ಭಾರತದ ಆತ್ಮವನ್ನು ಹಿಡಿದಿಟ್ಟುಕೊಂಡಿರುವ ನಾಡು. ಆದರೆ ತಮಿಳಗಂ ಎಂಬುದು ಸೂಕ್ತ ಪದವಾಗಿ ಹೋಗಿದೆ” ಎಂದಿದ್ದರು ರಾಜ್ಯಪಾಲರು.

ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರದ ನಡುವೆ ವಾಗ್ವಾದ ನಡೆದಿದ್ದು, ಬಿಜೆಪಿಯ ಆಶಯದಂತೆ ರಾಜ್ಯಪಾಲ ರವಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆಡಳಿತರೂಢ ಪಕ್ಷ ಆರೋಪಿಸಿದೆ.

“ರಾಜ್ಯಪಾಲ ಆರ್.ಎನ್.ರವಿ ಅವರು ದಿನನಿತ್ಯ ಒಂದಷ್ಟು ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಗೊಂದಲ, ಪ್ರತ್ಯೇಕತೆ ಮತ್ತು ಸಂಘರ್ಷ ಸೃಷ್ಟಿಸುತ್ತಿದ್ದಾರೆ. 50 ವರ್ಷಗಳ ದ್ರಾವಿಡ ರಾಜಕಾರಣದಲ್ಲಿ ಜನರಿಗೆ ಮೋಸ ಮಾಡಲಾಗಿದೆ ಎಂದು ರಾಜ್ಯಪಾಲರು ಹೇಳಿದ್ದಾರೆ” ಎಂದು ಟೀಕೆಗಳು ವ್ಯಕ್ತವಾಗಿವೆ.

ಡಿಎಂಕೆ ವಕ್ತಾರ ಸೇಲಂ ಧರಣೀಧರನ್ ಪ್ರತಿಕ್ರಿಯಿಸಿದ್ದು, “ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರು ಇಂದು ತಮಿಳುನಾಡು ವಿಧಾನಸಭೆಯಲ್ಲಿ ತಮ್ಮ ಭಾಷಣದ ವೇಳೆ ಕೆಲವು ಪ್ರಮುಖ ವಿಷಯಗಳನ್ನು ಬಿಟ್ಟು ಸಾಂವಿಧಾನಿಕ ನಿಯಮಗಳಿಂದ ಉಲ್ಲಂಘಿಸಿದ್ದಾರೆ. ಈ ರಾಜ್ಯಪಾಲರು ರಾಜಕೀಯ ಅಜೆಂಡಾವನ್ನು ಹೊಂದಿದ್ದಾರೆ. ಅವರು ತಮಿಳುನಾಡಿನ ಬಿಜೆಪಿ ವಕ್ತಾರರಂತೆ ವರ್ತಿಸುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...