Homeಮುಖಪುಟಜಾತ್ಯತೀತತೆಯ ಉಲ್ಲೇಖವಿರುವ ಸರ್ಕಾರದ ಭಾಷಣ ಓದದೆ ಸದನದಿಂದ ಹೊರನಡೆದ ತಮಿಳುನಾಡು ರಾಜ್ಯಪಾಲ

ಜಾತ್ಯತೀತತೆಯ ಉಲ್ಲೇಖವಿರುವ ಸರ್ಕಾರದ ಭಾಷಣ ಓದದೆ ಸದನದಿಂದ ಹೊರನಡೆದ ತಮಿಳುನಾಡು ರಾಜ್ಯಪಾಲ

- Advertisement -
- Advertisement -

ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಮಾತ್ರ ರೆಕಾರ್ಡ್ ಮಾಡಲು ಸ್ಪೀಕರ್‌ಗೆ ಸೂಚಿಸುವ ನಿರ್ಣಯವನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಮಂಡಿಸಿದ ನಂತರ ತಮಿಳುನಾಡು ರಾಜ್ಯಪಾಲ ಆರ್‌.ಎನ್.ರವಿ ಅವರು ಇಂದು (ಜ.9) ವಿಧಾನಸಭೆಯಿಂದ ಹೊರನಡೆದಿದ್ದಾರೆ.

ರಾಜ್ಯ ಸರ್ಕಾರ ಸಿದ್ಧಪಡಿಸಿದ ಮತ್ತು ಸ್ಪೀಕರ್ ಅನುವಾದಿಸಿದ ರಾಜ್ಯಪಾಲರ ಮೂಲ ಭಾಷಣವನ್ನು ಮಾತ್ರ ರೆಕಾರ್ಡ್ ಮಾಡುವ ನಿರ್ಣಯವನ್ನು ವಿಧಾನಸಭೆ ಅಂಗೀಕರಿಸಿತು. ರಾಜ್ಯಪಾಲರು ತಮ್ಮ ಭಾಷಣಕ್ಕೆ ಸರ್ಕಾರ ಸಿದ್ಧಪಡಿಸದ ಕೆಲವು ಭಾಗಗಳನ್ನು ಸೇರಿಸಿದ್ದಾರೆ ಎಂದು ವರದಿಯಾಗಿದೆ.

ಜಾತ್ಯತೀತತೆಯ ಬಗ್ಗೆ ಉಲ್ಲೇಖಗಳನ್ನು ಒಳಗೊಂಡಿರುವ, ತಮಿಳುನಾಡು ಶಾಂತಿಯ ಸ್ವರ್ಗ ಎಂದು ಬಣ್ಣಿಸಲಾದ ಮತ್ತು ಪೆರಿಯಾರ್, ಬಿ.ಆರ್.ಅಂಬೇಡ್ಕರ್, ಕೆ.ಕಾಮರಾಜ್, ಸಿ.ಎನ್.ಅಣ್ಣಾದೊರೈ, ಕರುಣಾನಿಧಿ ಅವರಂತಹ ನಾಯಕರನ್ನು ಸ್ಮರಿಸಿ ರಾಜ್ಯ ಸರ್ಕಾರವು ಸಿದ್ಧಪಡಿಸಿದ ಭಾಷಣದ ಭಾಗಗಳನ್ನು ರಾಜ್ಯಪಾಲರು ಬಿಟ್ಟಿಬಿಟ್ಟರು. ಆನಂತರ ಮುಖ್ಯಮಂತ್ರಿ ನಿರ್ಣಯ ಮಂಡಿಸಿದರು. ಆಡಳಿತಾರೂಢ ಡಿಎಂಕೆ ಪ್ರತಿಪಾದಿಸುವ ‘ದ್ರಾವಿಡ ಮಾದರಿ’ಯ ಉಲ್ಲೇಖವನ್ನೂ ಅವರು ಓದಲಿಲ್ಲ.

ರಾಜ್ಯಪಾಲರ ಕ್ರಮವು ವಿಧಾನಸಭೆ ಸದನದ ಸಂಪ್ರದಾಯಗಳಿಗೆ ವಿರುದ್ಧವಾಗಿದೆ ಎಂದು ತಮ್ಮ ನಿರ್ಣಯದಲ್ಲಿ ಎಂ.ಕೆ. ಸ್ಟಾಲಿನ್ ಅಭಿಪ್ರಾಯಪಟ್ಟಿದ್ದಾರೆ.

ಆಡಳಿತಾರೂಢ ಡಿಎಂಕೆಯ ಮಿತ್ರಪಕ್ಷಗಳಾದ ಕಾಂಗ್ರೆಸ್, ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ಸಿಪಿಐ ಮತ್ತು ಸಿಪಿಐ(ಎಂ) ಪಕ್ಷಗಳು ಈ ಹಿಂದೆ ರಾಜ್ಯಪಾಲರ ಭಾಷಣವನ್ನು ಬಹಿಷ್ಕರಿಸಿದ್ದವು. ಪ್ರತಿಭಟನೆಯ ನಂತರ, ಘೋಷಣೆಗಳನ್ನು ಕೂಗಲಾಗಿದೆ.

ರಾಜ್ಯಪಾಲ ರವಿ ವಿರುದ್ಧ ವಿಧಾನಸಭೆಯಲ್ಲಿ ‘ತಮಿಳುನಾಡು ಬಿಟ್ಟು ತೊಲಗಿ’ ಘೋಷಣೆಗಳು ಪ್ರತಿಧ್ವನಿಸಿದವು. ಆಡಳಿತಾರೂಢ ಡಿಎಂಕೆ ಶಾಸಕರು, “ಬಿಜೆಪಿ, ಆರೆಸ್ಸೆಸ್ ಸಿದ್ಧಾಂತವನ್ನು ಹೇರಬೇಡಿ” ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಸಂಸದ ಕಾರ್ತಿ ಪಿ.ಚಿದಂಬರಂ ಅವರು ರಾಜ್ಯಪಾಲರನ್ನು ಪದಚ್ಯುತಗೊಳಿಸುವಂತೆ ಕರೆ ನೀಡಿದ್ದಾರೆ.

“ತಮಿಳಗಂ ತಮಿಳುನಾಡಿಗೆ ಹೆಚ್ಚು ಸೂಕ್ತವಾದ ಹೆಸರು” ಎಂದು ರಾಜ್ಯಪಾಲರು ಇತ್ತೀಚೆಗೆ ಹೇಳಿಕೆ ನೀಡಿದ ಬಳಿಕ ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲರ ನಡುವೆ ವಿವಾದ ಉಂಟಾಗಿದೆ. ಡಿಎಂಕೆ ಶಾಸಕರು ರಾಜ್ಯಪಾಲರ ಹೇಳಿಕೆಯನ್ನು ಖಂಡಿಸಿದ್ದಾರೆ.

(‘ನಾಡು’ ಎಂಬ ಪದವು ಭೂಮಿ ಎಂದರ್ಥವನ್ನು ಹೊಂದಿದೆ. ಕೆಲವೊಮ್ಮೆ ದೇಶ ಅಥವಾ ರಾಷ್ಟ್ರ-ರಾಜ್ಯ ಎಂದು ಅರ್ಥೈಸಲಾಗುತ್ತದೆ. ‘ತಮಿಳಗಂ’ ಎಂದರೆ ತಮಿಳರು ವಾಸಿಸುವ ಪ್ರದೇಶ ಎಂಬುದಾಗಿದೆ.)

“ದುರದೃಷ್ಟವಶಾತ್ ತಮಿಳುನಾಡಿನಲ್ಲಿ ನಾವು ದ್ರಾವಿಡರು ಎಂಬ ಹಿಂಜರಿಕೆಯ ರಾಜಕಾರಣವಿದೆ. ಸಂವಿಧಾನದ ಬಲದಿಂದ ನಮ್ಮನ್ನು ಒಟ್ಟುಗೂಡಿಸಲಾಗಿದೆ. ನಾವು ದೇಶದ ಭಾಗವಲ್ಲ ಎಂಬ ವಿಚಾರವನ್ನು ಬಲಪಡಿಸಲು ಅರ್ಧಶತಮಾನ ಕಾಲ ಪ್ರಯತ್ನಿಸಲಾಗಿದೆ. ಇಡೀ ದೇಶಕ್ಕೆ ಅನ್ವಯಿಸುವ ಎಲ್ಲವನ್ನೂ ತಮಿಳುನಾಡು ವಿರೋಧಿಸುತ್ತಿದೆ”ಎಂದು ರಾಜ್ಯಪಾಲರು ಬುಧವಾರ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ  ಹೇಳಿದ್ದರು. ಕಾಶಿ-ತಮಿಳು ಸಂಗಮದ ಸಂಘಟಕರು ಮತ್ತು ಸ್ವಯಂಸೇವಕರನ್ನು ಅಭಿನಂದಿಸುವ ಕಾರ್ಯಕ್ರಮ ಅದಾಗಿತ್ತು.

“ಇದೊಂದು ಅಭ್ಯಾಸವಾಗಿದೆ. ಅನೇಕ ಪ್ರಬಂಧಗಳನ್ನು ಸುಳ್ಳು ಮತ್ತು ಕಳಪೆ ಕಾಲ್ಪನಿಕ ಸಂಗತಿಗಳಿಂದ ಬರೆಯಲಾಗಿದೆ. ಇದನ್ನು ಹೋಗಲಾಡಿಸಬೇಕು. ಸತ್ಯವು ಮೇಲುಗೈ ಸಾಧಿಸಬೇಕು. ವಾಸ್ತವವಾಗಿ, ತಮಿಳುನಾಡು ಭಾರತದ ಆತ್ಮವನ್ನು ಹಿಡಿದಿಟ್ಟುಕೊಂಡಿರುವ ನಾಡು. ಆದರೆ ತಮಿಳಗಂ ಎಂಬುದು ಸೂಕ್ತ ಪದವಾಗಿ ಹೋಗಿದೆ” ಎಂದಿದ್ದರು ರಾಜ್ಯಪಾಲರು.

ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರದ ನಡುವೆ ವಾಗ್ವಾದ ನಡೆದಿದ್ದು, ಬಿಜೆಪಿಯ ಆಶಯದಂತೆ ರಾಜ್ಯಪಾಲ ರವಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆಡಳಿತರೂಢ ಪಕ್ಷ ಆರೋಪಿಸಿದೆ.

“ರಾಜ್ಯಪಾಲ ಆರ್.ಎನ್.ರವಿ ಅವರು ದಿನನಿತ್ಯ ಒಂದಷ್ಟು ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಗೊಂದಲ, ಪ್ರತ್ಯೇಕತೆ ಮತ್ತು ಸಂಘರ್ಷ ಸೃಷ್ಟಿಸುತ್ತಿದ್ದಾರೆ. 50 ವರ್ಷಗಳ ದ್ರಾವಿಡ ರಾಜಕಾರಣದಲ್ಲಿ ಜನರಿಗೆ ಮೋಸ ಮಾಡಲಾಗಿದೆ ಎಂದು ರಾಜ್ಯಪಾಲರು ಹೇಳಿದ್ದಾರೆ” ಎಂದು ಟೀಕೆಗಳು ವ್ಯಕ್ತವಾಗಿವೆ.

ಡಿಎಂಕೆ ವಕ್ತಾರ ಸೇಲಂ ಧರಣೀಧರನ್ ಪ್ರತಿಕ್ರಿಯಿಸಿದ್ದು, “ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರು ಇಂದು ತಮಿಳುನಾಡು ವಿಧಾನಸಭೆಯಲ್ಲಿ ತಮ್ಮ ಭಾಷಣದ ವೇಳೆ ಕೆಲವು ಪ್ರಮುಖ ವಿಷಯಗಳನ್ನು ಬಿಟ್ಟು ಸಾಂವಿಧಾನಿಕ ನಿಯಮಗಳಿಂದ ಉಲ್ಲಂಘಿಸಿದ್ದಾರೆ. ಈ ರಾಜ್ಯಪಾಲರು ರಾಜಕೀಯ ಅಜೆಂಡಾವನ್ನು ಹೊಂದಿದ್ದಾರೆ. ಅವರು ತಮಿಳುನಾಡಿನ ಬಿಜೆಪಿ ವಕ್ತಾರರಂತೆ ವರ್ತಿಸುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...