Homeಕರ್ನಾಟಕಹಿಜಾಬ್‌ ವಿವಾದ: ಮುಸ್ಲಿಂ ಹೆಣ್ಣುಮಕ್ಕಳ ಮೇಲಾದ ಪರಿಣಾಮಗಳ ಕುರಿತು ಪಿಯುಸಿಎಲ್‌ ವರದಿ

ಹಿಜಾಬ್‌ ವಿವಾದ: ಮುಸ್ಲಿಂ ಹೆಣ್ಣುಮಕ್ಕಳ ಮೇಲಾದ ಪರಿಣಾಮಗಳ ಕುರಿತು ಪಿಯುಸಿಎಲ್‌ ವರದಿ

- Advertisement -
- Advertisement -

ಸಾವಿತ್ರಿಬಾಯಿ ಫುಲೆಯವರ ನಿಕಟವರ್ತಿಯಾಗಿದ್ದ ಸಮಾಜ ಸುಧಾರಕಿ ಮತ್ತು ಶಿಕ್ಷಣತಜ್ಞೆ ಫಾತಿಮಾ ಶೇಖ್ ಅವರ ಜನ್ಮದಿನದ ಸಂದರ್ಭದಲ್ಲಿ ‘ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ’ ಸಂಸ್ಥೆಯು ವಿಶೇಷ ವರದಿಯನ್ನು ಬಿಡುಗಡೆ ಮಾಡಿದ್ದು, “ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ನ ವಾಸ್ತವಿಕ ನಿಷೇಧದಿಂದಾಗಿ ಮುಸ್ಲಿಂ ಹೆಣ್ಣುಮಕ್ಕಳ ಶಿಕ್ಷಣ, ಘನತೆ ಮತ್ತು ಖಾಸಗಿತನದ ಹಕ್ಕುಗಳ ಮೇಲೆ ಉಂಟಾಗಿರುವ ಪರಿಣಾಮವನ್ನು ಸರಿಪಡಿಸಬೇಕು” ಎಂದು ಒತ್ತಾಯಿಸಿದೆ.

“ಕ್ಲೋಸಿಂಗ್‌ ದಿ ಗೇಟ್ಸ್‌ ಟು ಎಜುಕೇಷನ್‌: ವಯೊಲೇಶನ್ಸ್‌ ಆಫ್‌ ರೈಟ್ಸ್‌ ಆಫ್‌ ಮುಸ್ಲಿಂ ವುಮೆನ್‌ ಸ್ಟೂಡೆಂಟ್ಸ್” ಎಂಬ ವರದಿಯನ್ನು ಪಿಯುಸಿಎಲ್ ಬಿಡುಗಡೆ ಮಾಡಿದೆ. “ಹಿಜಾಬ್ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪುಗಳು ಶಿಕ್ಷಣ ಸಂಸ್ಥೆಗಳಿಗೆ ಹಿಜಾಬನ್ನು ನಿಷೇಧಿಸುವುದಂತೆ ಆದೇಶಿಸುವುದಿಲ್ಲವಾದರೂ, ವಾಸ್ತವವಾಗಿ ರಾಜ್ಯದ ಹಲವಾರು ಶಿಕ್ಷಣ ಸಂಸ್ಥೆಗಳು ಹಿಜಾಬನ್ನು ನಿಷೇಧಿಸಿದವು. ಈ ವರದಿಯು ಹಿಜಾಬ್‌ನ ಮೇಲೆ ಹೇರಿದ ಈ ನಿಷೇಧದ ಪರಿಣಾಮವನ್ನು ದಾಖಲಿಸುತ್ತದೆ ಮತ್ತು ಹಠಾತ್ ನಿಷೇಧವನ್ನು ರಾಜ್ಯಾದ್ಯಂತ ಹೇರಿದಾಗ ಕಿರುಕುಳ, ಅವಮಾನ ಮತ್ತು ಪ್ರತ್ಯೇಕತೆಯನ್ನು ಅನುಭವಿಸಿದ  ಮುಸ್ಲಿಂ ಮಹಿಳಾ ವಿದ್ಯಾರ್ಥಿನಿಯರ ಹೇಳಿಕೆ ಮತ್ತು  ಸಾಕ್ಷ್ಯಗಳನ್ನು ಮುನ್ನೆಲೆಗೆ ತರುತ್ತದೆ” ಎಂದು ಪಿಯುಸಿಎಲ್‌ ತಿಳಿಸಿದೆ.

“ಕರ್ನಾಟಕ ಸರ್ಕಾರವು ಮುಸ್ಲಿಂ ಯುವತಿಯರ ಮೂಲಭೂತ ಹಕ್ಕುಗಳ ನಿರಂತರ ಉಲ್ಲಂಘನೆಗಳಿಗೆ ಪ್ರತಿಕ್ರಿಯಿಸಲು ಸಾಂವಿಧಾನಿಕ ಜವಾಬ್ದಾರಿಯನ್ನು ಹೊಂದಿದೆ. ಉಡುಪಿಯ ಪದವಿಪೂರ್ವ ಕಾಲೇಜಿನಲ್ಲಿ ಒಂದು ವರ್ಷಕ್ಕೂ ಹಿಂದೆ ಹಿಜಾಬ್ ಅನ್ನು ಹಠಾತ್ತನೆ ನಿಷೇಧಿಸಿದ ನಂತರ, ಕರ್ನಾಟಕದಾದ್ಯಂತ ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಹೆಣಗಾಡುತ್ತಿದ್ದಾರೆ ಮತ್ತು ಮಾನಸಿಕ ತೊಂದರೆ ಮತ್ತು ಪ್ರತ್ಯೇಕತೆಯಂತಹ ಗಂಭೀರ ಪರಿಣಾಮಗಳನ್ನು ಎದುರಿಸುತ್ತಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದೆ.

“ಅಕ್ಟೋಬರ್ 13, 2022 ರಂದು ನೀಡಲಾದ ಸುಪ್ರೀಂ ಕೋರ್ಟಿನ ವಿಭಜಿತ ತೀರ್ಪು, ವಿದ್ಯಾರ್ಥಿಗಳ ನ್ಯಾಯಕ್ಕಾಗಿ ಕಾಯುವಿಕೆಯನ್ನು ದೀರ್ಘಗೊಳಿಸಿದೆ. ಆ ದಿನಾಂಕದಂದು ಸೂಕ್ತ ಪೀಠವನ್ನು ರಚಿಸುವಂತೆ ಗೌರವಾನ್ವಿತ ಮುಖ್ಯ ನ್ಯಾಯಾಧೀಶರ ಮುಂದೆ ವಿಷಯವನ್ನು ಇರಿಸಲಾಯಿತು. ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳಿಗೆ ಶಿಕ್ಷಣ, ಘನತೆ ಮತ್ತು ಖಾಸಗಿತನದ ಸಾಂವಿಧಾನಿಕ ಹಕ್ಕನ್ನು ನಿರಾಕರಿಸಲಾಗುತ್ತಿರುವುದರಿಂದ ಈ ವಿಷಯವನ್ನು ಸರ್ವೋಚ್ಚ ನ್ಯಾಯಾಲಯ ತ್ವರಿತವಾಗಿ ತೆಗೆದುಕೊಳ್ಳಬೇಕಾದ ತುರ್ತು ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟಿದೆ.

“ಕರ್ನಾಟಕದಾದ್ಯಂತ ಹಾಸನ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ರಾಯಚೂರು ಜಿಲ್ಲೆಗಳಿಗೆ ತಂಡ ಭೇಟಿ ನೀಡಿ ತೀರ್ಪಿನಿಂದ ಪ್ರಭಾವಿತವಾದ ಮಹಿಳಾ ವಿದ್ಯಾರ್ಥಿಗಳಿಂದ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ ಎಂದಿರುವ ಪಿಯುಸಿಎಲ್‌, ಈ ವಿದ್ಯಾರ್ಥಿಗಳಿಗೆ  ತಮ್ಮ ಶಿಕ್ಷಣದ ಹಕ್ಕನ್ನು ನಿರಾಕಾರಣೆ ಹೇಗಾಯಿತು ಹಾಗೂ  ಹೇಗೆ ದ್ವೇಷ, ಹಗೆತನ ಮತ್ತು ತಪ್ಪು ಮಾಹಿತಿಯ ವಾತಾವರಣದಲ್ಲಿ ಅವರನ್ನು ಹೇಗೆ ಘಾಸಿ ಗೊಳಿಸಲಾಯಿತು ಎಂಬುದನ್ನು ವರದಿಯು ಬಹಿರಂಗಪಡಿಸುತ್ತದೆ” ಎಂದು ವಿವರಿಸಿದೆ.

ಹಿಜಾಬ್ ಧರಿಸಿದ ವಿದ್ಯಾರ್ಥಿಗಳ ವಿರುದ್ಧ ಹಿಂದುತ್ವ ಕಿಡಿಗೇಡಿ ಗುಂಪುಗಳು ಹೇಗೆ ಅಪಪ್ರಚಾರ ನಡೆಸಿವೆ. ಸರ್ಕಾರ ಮತ್ತು ಪೊಲೀಸರ ನಿಷ್ಕ್ರಿಯತೆಯು ಹೇಗೆ ಈ ಮೂಲಭೂತವಾದಿ ಶಕ್ತಿಗಳಿಗೆ ಸೂಚ್ಯವಾಗಿ ಪ್ರೋತ್ಸಾಹ ನೀಡಿತು ಎಂಬುದರ ಬಗ್ಗೆಯೂ ವರದಿ ಗಮನ ಸೆಳೆದಿದೆ.

“ತಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದರ ಮೇಲೆ ನಿರ್ಬಂಧವನ್ನು ಹೇರಿದ ನಂತರ ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳ ಮೇಲೆ ಪರಿಣಾಮ, ಮುಸ್ಲಿಂ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಾತ್ರಿಪಡಿಸುವಲ್ಲಿ ಕಾರ್ಯನಿರ್ವಹಿಸಬೇಕಿದ್ದ ವಿವಿಧ  ವ್ಯಕ್ತಿ ಮತ್ತು ಸಂಸ್ಥೆಗಳ ವೈಫಲ್ಯ ಮತ್ತು ಮುಸ್ಲಿಂ ಸಮುದಾಯದ ವಿರುದ್ಧ ವಿಶೇಷವಾಗಿ ಮಹಿಳೆಯರ ವಿರುದ್ಧ ಪಕ್ಷಪಾತಗಳು, ಪೂರ್ವಾಗ್ರಹಗಳು ಮತ್ತು ಸ್ಟೀರಿಯೊಟೈಪ್‌ಗಳು ಸೇರಿದಂತೆ ವಿವಿಧ ಸಾಮಾಜಿಕ-ಸಾಂಸ್ಕೃತಿಕ ಅಂಶಗಳು ದ್ವೇಷದ ವಾತಾವರಣವನ್ನು ಹೆಚ್ಚಿಸಲು ಅನುವು ಮಾಡಿಕೊಟ್ಟಿವೆ” ಎಂದು ಬೇಸರ ವ್ಯಕ್ತಪಡಿಸಲಾಗಿದೆ.

ಈ ವಿಷಯದಲ್ಲಿ ಭಾಗಿಯಾಗಿರುವ ವಿವಿಧ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ವಿವರವಾದ  ಶಿಫಾರಸುಗಳನ್ನೂ ವರದಿ ಮಾಡಿದೆ. ಪಿಯುಸಿಎಲ್‌ ಕರ್ನಾಟಕದ ಅಧ್ಯಕ್ಷರಾದ ಅರವಿಂದ್ ನರೈನ್, ಪ್ರಧಾನ ಕಾರ್ಯದರ್ಶಿ ಶುಜಯತುಲ್ಲಾ ಅವರು ತಮ್ಮ ವರದಿಯಲ್ಲಿ ಹಲವು ವಿಷಯಗಳ ಕುರಿತು ಗಮನ ಸೆಳೆದಿದ್ದಾರೆ.

“ಮುಸ್ಲಿಂ ವಿದ್ಯಾರ್ಥಿಗಳು ಸಂಬಂಧಪಟ್ಟಂತೆ ತಾರತಮ್ಯ, ಖಾಸಗಿತನ, ಸ್ವಾಯತ್ತತೆ ಮತ್ತು ಘನತೆಯ ಸಾಂವಿಧಾನಿಕ ಮೌಲ್ಯಗಳನ್ನು ಕರ್ನಾಟಕ ಸರ್ಕಾರ  ಎತ್ತಿಹಿಡಿಯಬೇಕು. ಕರ್ನಾಟಕ ರಾಜ್ಯ ಸರ್ಕಾರ ತನ್ನ ಅಸಂವಿಧಾನಿಕ ಮತ್ತು ಅನಿಯಂತ್ರಿತ ಕ್ರಮದಿಂದಾಗಿ ಶಿಕ್ಷಣ, ಅಭಿವ್ಯಕ್ತಿ, ಘನತೆ ಮತ್ತು ತಾರತಮ್ಯದ ವಿರುದ್ದದ ಸಾಂವಿಧಾನಿಕ ಹಕ್ಕುಗಳಿಂದ ವಂಚಿತರಾದ ಮುಸ್ಲಿಂ ಹೆಣ್ಣು ವಿದ್ಯಾರ್ಥಿನಿಯರು ಅನುಭವಿಸಿದ ನಷ್ಟವನ್ನು ಭರಿಸಬೇಕು” ಎಂದು ಆಗ್ರಹಿಸಲಾಗಿದೆ.

“ಶಿಕ್ಷಣ ಇಲಾಖೆಯು ಕಡ್ಡಾಯವಾಗಿ ‘ರೇಶಮ್ ವರ್ಸಸ್ ಸ್ಟೇಟ್ ಆಫ್ ಕರ್ನಾಟಕ’ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಆದೇಶದ ವ್ಯಾಪ್ತಿಯನ್ನು ಸ್ಪಷ್ಟಪಡಿಸುವ ನಿರ್ದೇಶನಗಳನ್ನು ನೀಡಿಬೇಕು. ಕರ್ನಾಟಕ ರಾಜ್ಯ ಸರ್ಕಾರವು ಫೆಬ್ರವರಿ – ಏಪ್ರಿಲ್ 2022 ರ ಅವಧಿಯಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಡೆಸಿದ ಮುಸ್ಲಿಂ ವಿದ್ಯಾರ್ಥಿಗಳು, ಶಿಕ್ಷಕರು ಅಥವಾ ಅಂತಹ ಯಾವುದೇ ವ್ಯಕ್ತಿಯ ವಿರುದ್ಧ ಕೈಗೊಂಡಿರುವ ಕಾನೂನು ಕ್ರಮವನ್ನು ತಕ್ಷಣವೇ  ಹಿಂಪಡೆಯಬೇಕು” ಎಂದು ಒತ್ತಾಯಿಸಲಾಗಿದೆ.

“ಮಾಧ್ಯಮಗಳು ದುರ್ಬಲ ಸಮುದಾಯಗಳು, ಅಪ್ರಾಪ್ತ ವಯಸ್ಕರು ಮತ್ತು ವಿಚಾರಣೆಯಲ್ಲಿರುವ ನ್ಯಾಯಾಲಯದ ಪ್ರಕರಣಗಳಿಗೆ ಸಂಬಂಧಿಸಿದ ವರದಿಯನ್ನು ನೀಡುವಾಗ ಆಂತರಿಕ ಮಾರ್ಗಸೂಚಿಗಳನ್ನು ಸಿದ್ಧಪಡಿಸಬೇಕು  ಮತ್ತು ಅವುಗಳ ಪ್ರಸಾರದಿಂದಾಗಿ ಅಂಚಿನಲ್ಲಿರುವ ಸಮುದಾಯಗಳು ಅನುಭವಿಸುವ ಪರಕೀಯತೆ ಮತ್ತು ಕಳಂಕವನ್ನು ಉಲ್ಬಣಗೊಳಿಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು” ಎಂದು ತಿಳಿಸಲಾಗಿದೆ.

“ಪೊಲೀಸರು ಕಡ್ಡಾಯವಾಗಿ ಈ ಪ್ರಕರಣದಲ್ಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗೆ ಹಾಜರಾಗಿದ್ದ ಎಲ್ಲಾ ಅರ್ಜಿದಾರರು ಮತ್ತು ಅವರ ಕುಟುಂಬಗಳಿಗೆ ರಕ್ಷಣೆಯನ್ನು ವಿಸ್ತರಿಸಿ ಅವರ ದೈಹಿಕ ಸುರಕ್ಷತೆ ಮತ್ತು ಭದ್ರತೆಯನ್ನು ಖಾತ್ರಿಪಡಿಸಿಕೊಳ್ಳಬೇಕು. ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳಿಗೆ ಕಿರುಕುಳ ನೀಡುವ, ಈಗಾಗಲೇ ವರದಿಯಾಗಿರುವ  ವೀಡಿಯೊಗಳು ಮತ್ತು ಚಿತ್ರಗಳಲ್ಲಿ ಗೋಚರಿಸುವ ಹಿಂದುತ್ವ ಕಿಡಿಗೇಡಿ ಗುಂಪು/ಸದಸ್ಯರ ವಿರುದ್ಧ ಪ್ರಕರಣಗಳನ್ನು ದಾಖಲಿಸುವಲ್ಲಿ ತ್ವರಿತ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಲಾಗಿದೆ.

“ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳು ಸಲ್ಲಿಸಿದ ದೂರುಗಳ ಮೇಲೆ ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳಬೇಕು. ಅವರು ದೂರು ನೀಡಿರುವ ಕಾಲೇಜು ಅಧಿಕಾರಿಗಳು, ಹಿಂದುತ್ವ ಗುಂಪುಗಳು ಅಥವಾ ವಿದ್ಯಾರ್ಥಿಗಳ ಮೇಲೆ ಮತ್ತು ದೂರು ನೀಡಿರುವ ಕುಟುಂಬದವರ ಘನತೆ, ಖಾಸಗಿತನ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸಿದ ಯಾವುದೇ ವ್ಯಕ್ತಿಯ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಬೇಕು. ಮುಸ್ಲಿಂ ವಿದ್ಯಾರ್ಥಿಗಳ ಮೂಲಭೂತ ಹಕ್ಕುಗಳ ಉಲ್ಲಂಘನೆ ಮಾಡಿದವರ ಮೇಲೆ ಇಲಾಖಾ ವಿಚಾರಣೆಯನ್ನು ಕೈಗೊಳ್ಳಬೇಕು. ತಮ್ಮ ನಿಷ್ಕ್ರಿಯತೆ ಮತ್ತು ಅನಧಿಕೃತ ಕ್ರಮದಿಂದಾಗಿ ಮುಸ್ಲಿಂ ವಿದ್ಯಾರ್ಥಿಗಳ ಮೂಲಭೂತ ಹಕ್ಕುಗಳ ಉಲ್ಲಂಘನೆಗೆ  ಕಾರಣವಾದ ತನ್ನ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮವನ್ನು ಪ್ರಾರಂಭಿಸಬೇಕು. 01.01.2022 ಮತ್ತು 30.04.2022 ರ ನಡುವೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ CrPC ಯ ಸೆಕ್ಷನ್ 144 ಅನ್ನು ವಿಧಿಸುವ ಎಲ್ಲಾ ಆದೇಶಗಳನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಬೇಕು” ಎಂದು ಆಗ್ರಹಿಸಲಾಗಿದೆ.

“ಮಹಿಳಾ ಮತ್ತು ಮಕ್ಕಳ ಇಲಾಖೆ, ಕರ್ನಾಟಕ ಕಡ್ಡಾಯವಾಗಿ ಹಿಜಾಬ್ ತೀರ್ಪಿನಿಂದ ಪ್ರತಿಕೂಲ ಪರಿಣಾಮ ಬೀರುವ ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಬೆಂಬಲವನ್ನು ಒದಗಿಸುವ ಕಾರ್ಯಕ್ರಮಗಳನ್ನು ಪ್ರಾರಂಭಿಸಬೇಕು. ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ (KSHRC), ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ (KMSC), ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (KSCPCR) ಮತ್ತು ಕರ್ನಾಟಕ ರಾಜ್ಯ ಮಹಿಳಾ ಆಯೋಗ (KSCW) ಹಕ್ಕುಗಳ ಉಲ್ಲಂಘನೆಯ ಬಗ್ಗೆ ಸ್ವಯಂ-ಪ್ರೇರಿತ ದೂರು ದಾಖಲಿಸಿಕೊಳ್ಳಬೇಕು. ಮುಸ್ಲಿಂ ಮಹಿಳೆಯರು ಮತ್ತು ಅಪ್ರಾಪ್ತ ವಯಸ್ಕರು, ಮತ್ತು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕಿರುಕುಳ, ತಾರತಮ್ಯ ಮತ್ತು ದ್ವೇಷ ಭಾಷಣದ ಪ್ರಕರಣಗಳಲ್ಲಿ ಮಧ್ಯಪ್ರವೇಶಿಸಬೇಕು” ಎಂದು ಸಲಹೆ ನೀಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...