Homeಕರ್ನಾಟಕಹಿಜಾಬ್‌ ವಿವಾದ: ಮುಸ್ಲಿಂ ಹೆಣ್ಣುಮಕ್ಕಳ ಮೇಲಾದ ಪರಿಣಾಮಗಳ ಕುರಿತು ಪಿಯುಸಿಎಲ್‌ ವರದಿ

ಹಿಜಾಬ್‌ ವಿವಾದ: ಮುಸ್ಲಿಂ ಹೆಣ್ಣುಮಕ್ಕಳ ಮೇಲಾದ ಪರಿಣಾಮಗಳ ಕುರಿತು ಪಿಯುಸಿಎಲ್‌ ವರದಿ

- Advertisement -
- Advertisement -

ಸಾವಿತ್ರಿಬಾಯಿ ಫುಲೆಯವರ ನಿಕಟವರ್ತಿಯಾಗಿದ್ದ ಸಮಾಜ ಸುಧಾರಕಿ ಮತ್ತು ಶಿಕ್ಷಣತಜ್ಞೆ ಫಾತಿಮಾ ಶೇಖ್ ಅವರ ಜನ್ಮದಿನದ ಸಂದರ್ಭದಲ್ಲಿ ‘ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ’ ಸಂಸ್ಥೆಯು ವಿಶೇಷ ವರದಿಯನ್ನು ಬಿಡುಗಡೆ ಮಾಡಿದ್ದು, “ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ನ ವಾಸ್ತವಿಕ ನಿಷೇಧದಿಂದಾಗಿ ಮುಸ್ಲಿಂ ಹೆಣ್ಣುಮಕ್ಕಳ ಶಿಕ್ಷಣ, ಘನತೆ ಮತ್ತು ಖಾಸಗಿತನದ ಹಕ್ಕುಗಳ ಮೇಲೆ ಉಂಟಾಗಿರುವ ಪರಿಣಾಮವನ್ನು ಸರಿಪಡಿಸಬೇಕು” ಎಂದು ಒತ್ತಾಯಿಸಿದೆ.

“ಕ್ಲೋಸಿಂಗ್‌ ದಿ ಗೇಟ್ಸ್‌ ಟು ಎಜುಕೇಷನ್‌: ವಯೊಲೇಶನ್ಸ್‌ ಆಫ್‌ ರೈಟ್ಸ್‌ ಆಫ್‌ ಮುಸ್ಲಿಂ ವುಮೆನ್‌ ಸ್ಟೂಡೆಂಟ್ಸ್” ಎಂಬ ವರದಿಯನ್ನು ಪಿಯುಸಿಎಲ್ ಬಿಡುಗಡೆ ಮಾಡಿದೆ. “ಹಿಜಾಬ್ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪುಗಳು ಶಿಕ್ಷಣ ಸಂಸ್ಥೆಗಳಿಗೆ ಹಿಜಾಬನ್ನು ನಿಷೇಧಿಸುವುದಂತೆ ಆದೇಶಿಸುವುದಿಲ್ಲವಾದರೂ, ವಾಸ್ತವವಾಗಿ ರಾಜ್ಯದ ಹಲವಾರು ಶಿಕ್ಷಣ ಸಂಸ್ಥೆಗಳು ಹಿಜಾಬನ್ನು ನಿಷೇಧಿಸಿದವು. ಈ ವರದಿಯು ಹಿಜಾಬ್‌ನ ಮೇಲೆ ಹೇರಿದ ಈ ನಿಷೇಧದ ಪರಿಣಾಮವನ್ನು ದಾಖಲಿಸುತ್ತದೆ ಮತ್ತು ಹಠಾತ್ ನಿಷೇಧವನ್ನು ರಾಜ್ಯಾದ್ಯಂತ ಹೇರಿದಾಗ ಕಿರುಕುಳ, ಅವಮಾನ ಮತ್ತು ಪ್ರತ್ಯೇಕತೆಯನ್ನು ಅನುಭವಿಸಿದ  ಮುಸ್ಲಿಂ ಮಹಿಳಾ ವಿದ್ಯಾರ್ಥಿನಿಯರ ಹೇಳಿಕೆ ಮತ್ತು  ಸಾಕ್ಷ್ಯಗಳನ್ನು ಮುನ್ನೆಲೆಗೆ ತರುತ್ತದೆ” ಎಂದು ಪಿಯುಸಿಎಲ್‌ ತಿಳಿಸಿದೆ.

“ಕರ್ನಾಟಕ ಸರ್ಕಾರವು ಮುಸ್ಲಿಂ ಯುವತಿಯರ ಮೂಲಭೂತ ಹಕ್ಕುಗಳ ನಿರಂತರ ಉಲ್ಲಂಘನೆಗಳಿಗೆ ಪ್ರತಿಕ್ರಿಯಿಸಲು ಸಾಂವಿಧಾನಿಕ ಜವಾಬ್ದಾರಿಯನ್ನು ಹೊಂದಿದೆ. ಉಡುಪಿಯ ಪದವಿಪೂರ್ವ ಕಾಲೇಜಿನಲ್ಲಿ ಒಂದು ವರ್ಷಕ್ಕೂ ಹಿಂದೆ ಹಿಜಾಬ್ ಅನ್ನು ಹಠಾತ್ತನೆ ನಿಷೇಧಿಸಿದ ನಂತರ, ಕರ್ನಾಟಕದಾದ್ಯಂತ ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಹೆಣಗಾಡುತ್ತಿದ್ದಾರೆ ಮತ್ತು ಮಾನಸಿಕ ತೊಂದರೆ ಮತ್ತು ಪ್ರತ್ಯೇಕತೆಯಂತಹ ಗಂಭೀರ ಪರಿಣಾಮಗಳನ್ನು ಎದುರಿಸುತ್ತಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದೆ.

“ಅಕ್ಟೋಬರ್ 13, 2022 ರಂದು ನೀಡಲಾದ ಸುಪ್ರೀಂ ಕೋರ್ಟಿನ ವಿಭಜಿತ ತೀರ್ಪು, ವಿದ್ಯಾರ್ಥಿಗಳ ನ್ಯಾಯಕ್ಕಾಗಿ ಕಾಯುವಿಕೆಯನ್ನು ದೀರ್ಘಗೊಳಿಸಿದೆ. ಆ ದಿನಾಂಕದಂದು ಸೂಕ್ತ ಪೀಠವನ್ನು ರಚಿಸುವಂತೆ ಗೌರವಾನ್ವಿತ ಮುಖ್ಯ ನ್ಯಾಯಾಧೀಶರ ಮುಂದೆ ವಿಷಯವನ್ನು ಇರಿಸಲಾಯಿತು. ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳಿಗೆ ಶಿಕ್ಷಣ, ಘನತೆ ಮತ್ತು ಖಾಸಗಿತನದ ಸಾಂವಿಧಾನಿಕ ಹಕ್ಕನ್ನು ನಿರಾಕರಿಸಲಾಗುತ್ತಿರುವುದರಿಂದ ಈ ವಿಷಯವನ್ನು ಸರ್ವೋಚ್ಚ ನ್ಯಾಯಾಲಯ ತ್ವರಿತವಾಗಿ ತೆಗೆದುಕೊಳ್ಳಬೇಕಾದ ತುರ್ತು ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟಿದೆ.

“ಕರ್ನಾಟಕದಾದ್ಯಂತ ಹಾಸನ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ರಾಯಚೂರು ಜಿಲ್ಲೆಗಳಿಗೆ ತಂಡ ಭೇಟಿ ನೀಡಿ ತೀರ್ಪಿನಿಂದ ಪ್ರಭಾವಿತವಾದ ಮಹಿಳಾ ವಿದ್ಯಾರ್ಥಿಗಳಿಂದ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ ಎಂದಿರುವ ಪಿಯುಸಿಎಲ್‌, ಈ ವಿದ್ಯಾರ್ಥಿಗಳಿಗೆ  ತಮ್ಮ ಶಿಕ್ಷಣದ ಹಕ್ಕನ್ನು ನಿರಾಕಾರಣೆ ಹೇಗಾಯಿತು ಹಾಗೂ  ಹೇಗೆ ದ್ವೇಷ, ಹಗೆತನ ಮತ್ತು ತಪ್ಪು ಮಾಹಿತಿಯ ವಾತಾವರಣದಲ್ಲಿ ಅವರನ್ನು ಹೇಗೆ ಘಾಸಿ ಗೊಳಿಸಲಾಯಿತು ಎಂಬುದನ್ನು ವರದಿಯು ಬಹಿರಂಗಪಡಿಸುತ್ತದೆ” ಎಂದು ವಿವರಿಸಿದೆ.

ಹಿಜಾಬ್ ಧರಿಸಿದ ವಿದ್ಯಾರ್ಥಿಗಳ ವಿರುದ್ಧ ಹಿಂದುತ್ವ ಕಿಡಿಗೇಡಿ ಗುಂಪುಗಳು ಹೇಗೆ ಅಪಪ್ರಚಾರ ನಡೆಸಿವೆ. ಸರ್ಕಾರ ಮತ್ತು ಪೊಲೀಸರ ನಿಷ್ಕ್ರಿಯತೆಯು ಹೇಗೆ ಈ ಮೂಲಭೂತವಾದಿ ಶಕ್ತಿಗಳಿಗೆ ಸೂಚ್ಯವಾಗಿ ಪ್ರೋತ್ಸಾಹ ನೀಡಿತು ಎಂಬುದರ ಬಗ್ಗೆಯೂ ವರದಿ ಗಮನ ಸೆಳೆದಿದೆ.

“ತಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದರ ಮೇಲೆ ನಿರ್ಬಂಧವನ್ನು ಹೇರಿದ ನಂತರ ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳ ಮೇಲೆ ಪರಿಣಾಮ, ಮುಸ್ಲಿಂ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಾತ್ರಿಪಡಿಸುವಲ್ಲಿ ಕಾರ್ಯನಿರ್ವಹಿಸಬೇಕಿದ್ದ ವಿವಿಧ  ವ್ಯಕ್ತಿ ಮತ್ತು ಸಂಸ್ಥೆಗಳ ವೈಫಲ್ಯ ಮತ್ತು ಮುಸ್ಲಿಂ ಸಮುದಾಯದ ವಿರುದ್ಧ ವಿಶೇಷವಾಗಿ ಮಹಿಳೆಯರ ವಿರುದ್ಧ ಪಕ್ಷಪಾತಗಳು, ಪೂರ್ವಾಗ್ರಹಗಳು ಮತ್ತು ಸ್ಟೀರಿಯೊಟೈಪ್‌ಗಳು ಸೇರಿದಂತೆ ವಿವಿಧ ಸಾಮಾಜಿಕ-ಸಾಂಸ್ಕೃತಿಕ ಅಂಶಗಳು ದ್ವೇಷದ ವಾತಾವರಣವನ್ನು ಹೆಚ್ಚಿಸಲು ಅನುವು ಮಾಡಿಕೊಟ್ಟಿವೆ” ಎಂದು ಬೇಸರ ವ್ಯಕ್ತಪಡಿಸಲಾಗಿದೆ.

ಈ ವಿಷಯದಲ್ಲಿ ಭಾಗಿಯಾಗಿರುವ ವಿವಿಧ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ವಿವರವಾದ  ಶಿಫಾರಸುಗಳನ್ನೂ ವರದಿ ಮಾಡಿದೆ. ಪಿಯುಸಿಎಲ್‌ ಕರ್ನಾಟಕದ ಅಧ್ಯಕ್ಷರಾದ ಅರವಿಂದ್ ನರೈನ್, ಪ್ರಧಾನ ಕಾರ್ಯದರ್ಶಿ ಶುಜಯತುಲ್ಲಾ ಅವರು ತಮ್ಮ ವರದಿಯಲ್ಲಿ ಹಲವು ವಿಷಯಗಳ ಕುರಿತು ಗಮನ ಸೆಳೆದಿದ್ದಾರೆ.

“ಮುಸ್ಲಿಂ ವಿದ್ಯಾರ್ಥಿಗಳು ಸಂಬಂಧಪಟ್ಟಂತೆ ತಾರತಮ್ಯ, ಖಾಸಗಿತನ, ಸ್ವಾಯತ್ತತೆ ಮತ್ತು ಘನತೆಯ ಸಾಂವಿಧಾನಿಕ ಮೌಲ್ಯಗಳನ್ನು ಕರ್ನಾಟಕ ಸರ್ಕಾರ  ಎತ್ತಿಹಿಡಿಯಬೇಕು. ಕರ್ನಾಟಕ ರಾಜ್ಯ ಸರ್ಕಾರ ತನ್ನ ಅಸಂವಿಧಾನಿಕ ಮತ್ತು ಅನಿಯಂತ್ರಿತ ಕ್ರಮದಿಂದಾಗಿ ಶಿಕ್ಷಣ, ಅಭಿವ್ಯಕ್ತಿ, ಘನತೆ ಮತ್ತು ತಾರತಮ್ಯದ ವಿರುದ್ದದ ಸಾಂವಿಧಾನಿಕ ಹಕ್ಕುಗಳಿಂದ ವಂಚಿತರಾದ ಮುಸ್ಲಿಂ ಹೆಣ್ಣು ವಿದ್ಯಾರ್ಥಿನಿಯರು ಅನುಭವಿಸಿದ ನಷ್ಟವನ್ನು ಭರಿಸಬೇಕು” ಎಂದು ಆಗ್ರಹಿಸಲಾಗಿದೆ.

“ಶಿಕ್ಷಣ ಇಲಾಖೆಯು ಕಡ್ಡಾಯವಾಗಿ ‘ರೇಶಮ್ ವರ್ಸಸ್ ಸ್ಟೇಟ್ ಆಫ್ ಕರ್ನಾಟಕ’ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಆದೇಶದ ವ್ಯಾಪ್ತಿಯನ್ನು ಸ್ಪಷ್ಟಪಡಿಸುವ ನಿರ್ದೇಶನಗಳನ್ನು ನೀಡಿಬೇಕು. ಕರ್ನಾಟಕ ರಾಜ್ಯ ಸರ್ಕಾರವು ಫೆಬ್ರವರಿ – ಏಪ್ರಿಲ್ 2022 ರ ಅವಧಿಯಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಡೆಸಿದ ಮುಸ್ಲಿಂ ವಿದ್ಯಾರ್ಥಿಗಳು, ಶಿಕ್ಷಕರು ಅಥವಾ ಅಂತಹ ಯಾವುದೇ ವ್ಯಕ್ತಿಯ ವಿರುದ್ಧ ಕೈಗೊಂಡಿರುವ ಕಾನೂನು ಕ್ರಮವನ್ನು ತಕ್ಷಣವೇ  ಹಿಂಪಡೆಯಬೇಕು” ಎಂದು ಒತ್ತಾಯಿಸಲಾಗಿದೆ.

“ಮಾಧ್ಯಮಗಳು ದುರ್ಬಲ ಸಮುದಾಯಗಳು, ಅಪ್ರಾಪ್ತ ವಯಸ್ಕರು ಮತ್ತು ವಿಚಾರಣೆಯಲ್ಲಿರುವ ನ್ಯಾಯಾಲಯದ ಪ್ರಕರಣಗಳಿಗೆ ಸಂಬಂಧಿಸಿದ ವರದಿಯನ್ನು ನೀಡುವಾಗ ಆಂತರಿಕ ಮಾರ್ಗಸೂಚಿಗಳನ್ನು ಸಿದ್ಧಪಡಿಸಬೇಕು  ಮತ್ತು ಅವುಗಳ ಪ್ರಸಾರದಿಂದಾಗಿ ಅಂಚಿನಲ್ಲಿರುವ ಸಮುದಾಯಗಳು ಅನುಭವಿಸುವ ಪರಕೀಯತೆ ಮತ್ತು ಕಳಂಕವನ್ನು ಉಲ್ಬಣಗೊಳಿಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು” ಎಂದು ತಿಳಿಸಲಾಗಿದೆ.

“ಪೊಲೀಸರು ಕಡ್ಡಾಯವಾಗಿ ಈ ಪ್ರಕರಣದಲ್ಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗೆ ಹಾಜರಾಗಿದ್ದ ಎಲ್ಲಾ ಅರ್ಜಿದಾರರು ಮತ್ತು ಅವರ ಕುಟುಂಬಗಳಿಗೆ ರಕ್ಷಣೆಯನ್ನು ವಿಸ್ತರಿಸಿ ಅವರ ದೈಹಿಕ ಸುರಕ್ಷತೆ ಮತ್ತು ಭದ್ರತೆಯನ್ನು ಖಾತ್ರಿಪಡಿಸಿಕೊಳ್ಳಬೇಕು. ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳಿಗೆ ಕಿರುಕುಳ ನೀಡುವ, ಈಗಾಗಲೇ ವರದಿಯಾಗಿರುವ  ವೀಡಿಯೊಗಳು ಮತ್ತು ಚಿತ್ರಗಳಲ್ಲಿ ಗೋಚರಿಸುವ ಹಿಂದುತ್ವ ಕಿಡಿಗೇಡಿ ಗುಂಪು/ಸದಸ್ಯರ ವಿರುದ್ಧ ಪ್ರಕರಣಗಳನ್ನು ದಾಖಲಿಸುವಲ್ಲಿ ತ್ವರಿತ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಲಾಗಿದೆ.

“ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳು ಸಲ್ಲಿಸಿದ ದೂರುಗಳ ಮೇಲೆ ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳಬೇಕು. ಅವರು ದೂರು ನೀಡಿರುವ ಕಾಲೇಜು ಅಧಿಕಾರಿಗಳು, ಹಿಂದುತ್ವ ಗುಂಪುಗಳು ಅಥವಾ ವಿದ್ಯಾರ್ಥಿಗಳ ಮೇಲೆ ಮತ್ತು ದೂರು ನೀಡಿರುವ ಕುಟುಂಬದವರ ಘನತೆ, ಖಾಸಗಿತನ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸಿದ ಯಾವುದೇ ವ್ಯಕ್ತಿಯ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಬೇಕು. ಮುಸ್ಲಿಂ ವಿದ್ಯಾರ್ಥಿಗಳ ಮೂಲಭೂತ ಹಕ್ಕುಗಳ ಉಲ್ಲಂಘನೆ ಮಾಡಿದವರ ಮೇಲೆ ಇಲಾಖಾ ವಿಚಾರಣೆಯನ್ನು ಕೈಗೊಳ್ಳಬೇಕು. ತಮ್ಮ ನಿಷ್ಕ್ರಿಯತೆ ಮತ್ತು ಅನಧಿಕೃತ ಕ್ರಮದಿಂದಾಗಿ ಮುಸ್ಲಿಂ ವಿದ್ಯಾರ್ಥಿಗಳ ಮೂಲಭೂತ ಹಕ್ಕುಗಳ ಉಲ್ಲಂಘನೆಗೆ  ಕಾರಣವಾದ ತನ್ನ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮವನ್ನು ಪ್ರಾರಂಭಿಸಬೇಕು. 01.01.2022 ಮತ್ತು 30.04.2022 ರ ನಡುವೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ CrPC ಯ ಸೆಕ್ಷನ್ 144 ಅನ್ನು ವಿಧಿಸುವ ಎಲ್ಲಾ ಆದೇಶಗಳನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಬೇಕು” ಎಂದು ಆಗ್ರಹಿಸಲಾಗಿದೆ.

“ಮಹಿಳಾ ಮತ್ತು ಮಕ್ಕಳ ಇಲಾಖೆ, ಕರ್ನಾಟಕ ಕಡ್ಡಾಯವಾಗಿ ಹಿಜಾಬ್ ತೀರ್ಪಿನಿಂದ ಪ್ರತಿಕೂಲ ಪರಿಣಾಮ ಬೀರುವ ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಬೆಂಬಲವನ್ನು ಒದಗಿಸುವ ಕಾರ್ಯಕ್ರಮಗಳನ್ನು ಪ್ರಾರಂಭಿಸಬೇಕು. ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ (KSHRC), ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ (KMSC), ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (KSCPCR) ಮತ್ತು ಕರ್ನಾಟಕ ರಾಜ್ಯ ಮಹಿಳಾ ಆಯೋಗ (KSCW) ಹಕ್ಕುಗಳ ಉಲ್ಲಂಘನೆಯ ಬಗ್ಗೆ ಸ್ವಯಂ-ಪ್ರೇರಿತ ದೂರು ದಾಖಲಿಸಿಕೊಳ್ಳಬೇಕು. ಮುಸ್ಲಿಂ ಮಹಿಳೆಯರು ಮತ್ತು ಅಪ್ರಾಪ್ತ ವಯಸ್ಕರು, ಮತ್ತು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕಿರುಕುಳ, ತಾರತಮ್ಯ ಮತ್ತು ದ್ವೇಷ ಭಾಷಣದ ಪ್ರಕರಣಗಳಲ್ಲಿ ಮಧ್ಯಪ್ರವೇಶಿಸಬೇಕು” ಎಂದು ಸಲಹೆ ನೀಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...