Homeರಾಜಕೀಯಖಾಕಿ ಚಡ್ಡಿಯ ಆರೆಸ್ಸೆಸ್ಸ್‌‌ 21ನೇ ಶತಮಾನದ ಕೌರವರು: ರಾಹುಲ್ ಗಾಂಧಿ

ಖಾಕಿ ಚಡ್ಡಿಯ ಆರೆಸ್ಸೆಸ್ಸ್‌‌ 21ನೇ ಶತಮಾನದ ಕೌರವರು: ರಾಹುಲ್ ಗಾಂಧಿ

- Advertisement -
- Advertisement -

ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್‌ ಜೋಡೋ ಯಾತ್ರೆಯು ಹರಿಯಾಣದ ಅಂಬಾಲಾ ಜಿಲ್ಲೆಗೆ ತಲುಪಿದ್ದು ಅಲ್ಲಿ ಸೋಮವಾರ ಮಾತನಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ವಿರುದ್ಧ ವಾಗ್ದಾಳಿ ನಡೆಸಿದ್ದು, ಅವರು 21ನೇ ಶತಮಾನದ ಕೌರವರು ಎಂದು ಕರೆದಿದ್ದಾರೆ.

“ಕೌರವರು ಯಾರು? ನಾನು ಮೊದಲು ನಿಮಗೆ 21 ನೇ ಶತಮಾನದ ಕೌರವರ ಬಗ್ಗೆ ಹೇಳುತ್ತೇನೆ. ಅವರು ಖಾಕಿ ಚಡ್ಡಿ ಧರಿಸುತ್ತಾರೆ, ಅವರು ಶಾಖೆಗಳನ್ನು ಮಾಡಿ ತಮ್ಮ ಕೈಯಲ್ಲಿ ಲಾಠಿ ಹಿಡಿದುಕೊಳ್ಳುತ್ತಾರೆ… ಭಾರತದ ಇಬ್ಬರು ಮೂವರು ಬಿಲಿಯನೇರ್‌ಗಳು ಈ ಕೌರವರ ಜೊತೆ ನಿಂತಿದ್ದಾರೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಿಎಂ ಮೋದಿ ನೇತೃತ್ವದ ಆಡಳಿತಾರೂಢ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್ ನಾಯಕ, “ಪಾಂಡವರು ನೋಟು ಅಮಾನ್ಯೀಕರಣವನ್ನು ಮಾಡಿ, ತಪ್ಪು ಜಿಎಸ್‌ಟಿಯನ್ನು ಜಾರಿಗೆ ತಂದಿದ್ದಾರೆಯೇ? ಅವರು ಎಂದಾದರೂ ಹಾಗೆ ಮಾಡುತ್ತಾರೆಯೇ? ಎಂದಿಗೂ ಇಲ್ಲ. ಏಕೆಂದರೆ, ಅವರು ತಪಸ್ವಿಗಳಾಗಿರುವುದರಿಂದ ಮತ್ತು ನೋಟು ಅಮಾನ್ಯೀಕರಣ, ತಪ್ಪು ಜಿಎಸ್‌ಟಿ, ಕೃಷಿ ಕಾನೂನುಗಳು ಈ ನೆಲದ ತಪಸ್ವಿಗಳಿಂದ ಕದಿಯಲು ಒಂದು ಮಾರ್ಗವಾಗಿದೆ ಎಂದು ಅವರಿಗೆ ತಿಳಿದಿತ್ತು….”

“ನರೇಂದ್ರ ಮೋದಿ ಅವರು ಈ ನಿರ್ಧಾರಗಳಿಗೆ ಸಹಿ ಹಾಕಿದರು. ನೀವು ನಂಬಿ ಅಥವಾ ಬಿಡಿ, ಭಾರತದ ಇಬ್ಬರಿಂದ ಮೂವರು ಬಿಲಿಯನೇರ್‌ಗಳ ಶಕ್ತಿ ಇದರ ಹಿಂದೆ ಇತ್ತು” ಎಂದು ಅವರು ಹೇಳಿದ್ದಾರೆ.

“ಜನರಿಗೆ ಇದು ಅರ್ಥವಾಗುತ್ತಿಲ್ಲ, ಆದರೆ ಅಂದಿನ ಹೋರಾಟವೇ ಇಂದು ಕೂಡಾ ಇದೆ. ಯಾರ ನಡುವೆ ಈ ಹೋರಾಟ? ಪಾಂಡವರು ಯಾರು?. ಪಾಂಡವರು ಈ ನೆಲದ ಮೇಲೆ ಎಂದಾದರೂ ದ್ವೇಷವನ್ನು ಹರಡುತ್ತಾರೆಯೆ? ಮತ್ತು ಅಮಾಯಕರ ಮೇಲೆ ಯಾವುದಾದರೂ ಅಪರಾಧ ಮಾಡಿರುವ ಬಗ್ಗೆ ಎಂದಾದರೂ ಜನರು ಕೇಳಿದ್ದಾರೆಯೇ?” ಎಂದು ಅವರು ಕೇಳಿದ್ದಾರೆ.

“ಒಂದೆಡೆ ಈ ಐವರು ತಪಸ್ವಿಗಳಿದ್ದರೆ ಮತ್ತೊಂದೆಡೆ ಕಿಕ್ಕಿರಿದ ಸಂಘಟನೆ. ಪಾಂಡವರೊಂದಿಗೆ ಎಲ್ಲ ಧರ್ಮದವರೂ ಇದ್ದಾರೆ. ಈ ಭಾರತ್ ಜೋಡೋ ಯಾತ್ರೆಯಂತೆ, ಯಾರೂ ಎಲ್ಲಿಂದ ಬರುತ್ತಾರೆ ಎಂದು ಯಾರನ್ನೂ ಕೇಳುವುದಿಲ್ಲ. ಇದು ಪ್ರೀತಿಯ ಅಂಗಡಿ. ಪಾಂಡವರೂ ಅನ್ಯಾಯದ ವಿರುದ್ಧ ನಿಂತಿದ್ದರು, ಅವರೂ ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿಯನ್ನು ತೆರೆದಿದ್ದರು.  ಇದು ಮಹಾಭಾರತದ ನಾಡು” ಎಂದು ರಾಹುಲ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. RSS ನವರು ಕೌರವರು ಅಲ್ಲ ! ☺️☺️
    ಚಡ್ಡಿಗಳು ಶಕುನಿಗಳು, BJP ಯವರು ಕೌರವರು. 😢😢

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...