Homeಕರ್ನಾಟಕಮಾಂಸಾಹಾರದ ಮೇಲೆ ಮತ್ತೆ ಪ್ರಹಾರ: ಮಠಾಧೀಶರ ಸಲಹೆಗಳಿಗೆ ತೀವ್ರ ವಿರೋಧ

ಮಾಂಸಾಹಾರದ ಮೇಲೆ ಮತ್ತೆ ಪ್ರಹಾರ: ಮಠಾಧೀಶರ ಸಲಹೆಗಳಿಗೆ ತೀವ್ರ ವಿರೋಧ

- Advertisement -
- Advertisement -

ರಾಜ್ಯದಲ್ಲಿ ಮಾಂಸಾಹಾರದ ಕುರಿತು ಚರ್ಚೆ ಮತ್ತೆ ಭುಗಿಲೆದ್ದಿದೆ. ಶಾಲಾ ಶಿಕ್ಷಣದಲ್ಲಿ ಮೌಲ್ಯ ಶಿಕ್ಷಣ ಶಿಕ್ಷಣವನ್ನು ಅನುಷ್ಠಾನಗೊಳಿಸುವುದರ ಕುರಿತು ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮಠಾಧೀಶರು ಮಾಂಸಾಹಾರದ ಮೇಲೆ ಮತ್ತೆ ಪ್ರಹಾರ ನಡೆಸಿದ್ದಾರೆ. ಮಕ್ಕಳಿಗೆ ಸಾತ್ವಿಕ ಆಹಾರ ನೀಡಬೇಕು, ಅಂಗಡಿಗಳ ಮುಂದೆ ಮಾಂಸ ನೇತು ಹಾಕುವುದನ್ನು ಬ್ಯಾನ್ ಮಾಡಬೇಕೆಂಬ ಆಗ್ರಹಗಳು ಕೇಳಿಬಂದಿವೆ. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಕಂಡುಬಂದಿದೆ.

ಸಭೆಯಲ್ಲಿ ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಮಾತನಾಡಿ, “ಆಹಾರಕ್ಕೂ ವ್ಯಕ್ತಿತ್ವಕ್ಕೂ ಸಂಬಂಧವಿದೆ.  ಕೆಲವು ಆಹಾರಗಳು ಮಕ್ಕಳಲ್ಲಿ ನಕರಾತ್ಮಕ ಮನೋಭಾವ ಬೆಳೆಸುತ್ತವೆ. ಹಾಗಾಗಿ ಮಕ್ಕಳಿಗೆ ಸಾತ್ವಿಕ ಆಹಾರ ನೀಡಬೇಕು ಮತ್ತು ಭಗವದ್ಗೀತೆಯನ್ನು ಮುಕ್ತವಾಗಿ ಬೋಧಿಸಬೇಕು” ಎಂದು ಪ್ರತಿಪಾದಿಸಿದ್ದಾರೆ.

ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮಾತನಾಡಿ, “ಮಕ್ಕಳ ಮೇಲೆ ಹಿಂಸೆಯ ಪ್ರಭಾವವನ್ನು ಕಡಿಮೆ ಮಾಡಬೇಕು. ಹಾಗಾಗಿ ಮಕ್ಕಳ ಮುಂದೆ ಪ್ರಾಣಿವಧೆ ಮಾಡಬಾರದು ಮತ್ತು ಅಂಗಡಿಗಳ ಮುಂದೆ ಮಾಂಸ ನೇತುಹಾಕಬಾರದು ಅಥವಾ ಅದನ್ನು ಮುಚ್ಚಬೇಕು ಎಂದು ಸಲಹೆ ನೀಡಿದ್ದಾರೆ.

ಮಕ್ಕಳು ಅಪೌಷ್ಠಿಕತೆಯಿಂದ ನರಳುತ್ತಿರುವ ಸಂದರ್ಭದಲ್ಲಿ ಮಾಂಸಾಹಾರದಂತಹ ಪೌಷ್ಠಿಕ ಆಹಾರದ ಮೇಲಿನ ಸ್ವಾಮೀಜಿಗಳ ಪ್ರಹಾರವನ್ನು ಹಲವಾರು ಜನ ಸಾಮಾಜಿಕ ಜಾಲತಾಣಗಳಲ್ಲಿ ಖಂಡಿಸಿದ್ದಾರೆ.

“ಬುದ್ಧನೂ, ರಾಮನೂ, ಕೃಷ್ಣನೂ, ಬಾಬಾ ಸಾಹೇಬರೂ, ವಿವೇಕರೂ ತಿಂದದ್ದು ನೀವು ಹೇಳುವ ಸಾತ್ವಿಕ ಆಹಾರ ಅಲ್ಲ!” ಅಂತ ನಿಮ್ಮ ಮಠಗಳಿಗೊಂದು ಮೈಲ್ ಹಾಕಬೇಕು. ಐಡಿ ಕಳಿಸಿ ಸ್ವಾಮಿಗೋಳೇ! ಹಂಗೇ, “ಹೆಣ್ಮಕ್ಕಳನ್ನು ಹರಿದು ತಿಂದ, ಕಪ್ಪುಹಣ ಬಚ್ಚಿಡುವ, ಸಾವುಗಳನ್ನು ಮುಚ್ಚಿಡುವ ಕಾವಿಗಳ ಆಹಾರ- ಶುದ್ಧ ಸಾತ್ವಿಕವಾದುದೇ!” ಅಂತ ತಿಳಿಸಿ ನಿಮಗೊಂದು ವಾಟ್ಸಾಪೂ ಮಾಡಬೇಕಿದೆ. ನಂಬರೂ ಕಳಿಸಿ ಸ್ವಾಮಿಗೋಳೇ! ಎಂದು ಖ್ಯಾತ ವ್ಯಂಗ್ಯಚಿತ್ರಕಾರ ದಿನೇಶ್ ಕುಕ್ಕಜಡ್ಕ ವ್ಯಂಗ್ಯವಾಡಿದ್ದಾರೆ.

ತೊಂಬತ್ತು ಭಾಗ ಜನರು ತಿನ್ನುವ ಆಹಾರವನ್ನು ತೆಗಳ್ತಾರಲ್ಲ! ಇವರುಗಳು ಸೈಕೊಗಳಿಗಿಂತ ಕ್ರೂರ ಎಂದು ಸಾಮಾಜಿಕ ಕಾರ್ಯಕರ್ತ ವಿ.ಎಲ್ ಬಾಲು ಕಿಡಿಕಾರಿದ್ದಾರೆ.

ಮೌಲಿಕ ಶಿಕ್ಷಣದ ಬಗ್ಗೆ ಶೈಕ್ಷಣಿಕ ತಜ್ಞರ ಸಲಹೆ ಪಡೆಯಬೇಕಿದ್ದ ಸರ್ಕಾರವು ಮಠಾಧೀಶರ ಸಲಹೆಗಳನ್ನು ಪಡೆಯುತ್ತಿರುವುದು ಹಾಸ್ಯಾಸ್ಪದ ಇದರಲ್ಲಿ ಪೇಜಾವರ ಮಠದ ಸ್ವಾಮೀಜಿಯು ಮಾಂಸಹಾರದ ಬಗ್ಗೆ ಅಸಹನೆ ತೋರುವುದನ್ನೇ ಮೌಲ್ಯ ಎಂದಿದ್ದರೆ ಇನ್ನೊಬ್ಬ ಮಹಾಶಯರು ಪುನರ್ಜನ್ಮದ ಬಗ್ಗೆ ತಿಳಿಸಿಕೊಡಿ ಎಂದು ಹೇಳಿರುತ್ತಾರೆ ಇವು ಮೌಲಿಕ ಶಿಕ್ಷಣದ ಸಲಹೆಗಳೇ? ಎಂದು ಮಾಜಿ ಸಚಿವ ಡಾ.ಎಚ್.ಸಿ ಮಹಾದೇವಪ್ಪ ಟ್ವೀಟ್ ಮಾಡಿದ್ದಾರೆ.

RSS ನ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವ ರಾಜ್ಯ ಸರ್ಕಾರವು RSS ಗೆ ಬೇಕಾದ ಆಹಾರ ವಿರೋಧಿಯಾದ, ಮೌಢ್ಯತೆಯಿಂದ ಕೂಡಿದ, ಕೋಮುವಾದಿ ಪಠ್ಯಗಳನ್ನು ರೂಪಿಸುವ ದುರುದ್ದೇಶವನ್ನು ಹೊಂದಿ ಅದಕ್ಕೆ ತಕ್ಕನಾದ ರೀತಿಯಲ್ಲಿ ಅಭಿಪ್ರಾಯಗಳನ್ನು ಸಂಗ್ರಹ ಮಾಡಿಸಿದೆ. ಇದನ್ನೆಲ್ಲಾ ಮೌಲಿಕ ಸಲಹೆಗಳು ಎಂದು ಒಪ್ಪಲು ಆದೀತೇ? ಎಂದು ಅವರು ಪ್ರಶ್ನಿಸಿದ್ದಾರೆ.

ನಮ್ಮೂರ ಮಾರಿ ಜಾತ್ರೆಯಲ್ಲಿ ಪ್ರತಿ ಮನೆಯಿಂದ ಬರುವ ಮಾಂಸದ ಆಮ್ರದ ಪರಿಮಳದಲ್ಲಿ ನಾನು ಅನುಭವಿಸಿದ ಸಾತ್ವಿಕತೆಯ ಭಾವನೆಯನ್ನು… ಇನ್ಯಾವ ಸಂರ್ಭದಲ್ಲೂ ಅನುಭವಿಸಿಲ್ಲ…
ನನ್ನ ಆಹಾರ ನನ್ನ ಹಕ್ಕು ಎಂದು ಅಕ್ಷತಾ ಹುಂಚದಕಟ್ಟೆಯವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕರೆಕ್ಟಾಗಿ ಹೇಳಿದಾರೆ! ಸಾತ್ವಿಕ ಆಹಾರ ಅಂದರೆ ಸತ್ವಯುತ ಆಹಾರ! ಅಂದರೆ ಮೊಟ್ಟೆ, ಮಾಂಸ ಇತ್ಯಾದಿ! ಎಂದು ಚಿಂತಕ ಸುರೇಶ್ ಕಂಜರ್ಪಣೆ ತಿಳಿಸಿದ್ದಾರೆ.

ಮಾಂಸದ ಅಂಗಡಿ ಮುಂದೆ ಮಾಂಸ ನೋಡಿದ್ರೆ ಮಕ್ಕಳ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ ಆದ್ರೆ ಮಠಗಳಲ್ಲಿ ನೀವು ಮಾಡೋ ಪಂಕ್ತಿ ಭೇದ, ಜಾತಿ ಭೇದ ಮಾಡೋದ್ರಿಂದ ಮಕ್ಕಳ ಮನಸ್ಸಿನ ಮೇಲೆ ಯಾವ ಕೆಟ್ಟ ಪರಿಣಾಮ ಬೀರಲ್ಲ ಅಲ್ವಾ ಸ್ವಾಮ್ಗಳೇ ಎಂದು ರಘುನಂದನರವರು ಪ್ರಶ್ನಿಸಿದ್ದಾರೆ.

ಮಾಂಸಾಹಾರವನ್ನು ಕನಿಷ್ಟಗೊಳಿಸಿ ನೋಡುವ, ಸಾತ್ವಿಕ ಆಹಾರವೇ ಉತ್ತಮ ಎಂದು ಪ್ರತಿಪಾದಿಸುವ ಶ್ರೇ‍ಷ್ಠತೆಯ ವ್ಯಸನ ನಿಲ್ಲಬೇಕೆಂದು ಹಲವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ; ದೇವರಿಗೆ ಮಾಂಸಾಹಾರದ ಎಡೆ: ಚಾರಿತ್ರಿಕ, ಜಾನಪದೀಯ ಅಧ್ಯಯನಗಳು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...