Homeರಾಜಕೀಯತಮಿಳುನಾಡನ್ನು ‘ತಮಿಳಗಂ’ ಎಂದ ರಾಜ್ಯಪಾಲ; ಗೆಟ್‌ ಔಟ್‌‌ ಎಂದ ತಮಿಳರು!

ತಮಿಳುನಾಡನ್ನು ‘ತಮಿಳಗಂ’ ಎಂದ ರಾಜ್ಯಪಾಲ; ಗೆಟ್‌ ಔಟ್‌‌ ಎಂದ ತಮಿಳರು!

ರಾಜ್ಯಪಾಲ ಆರ್‌.ಎನ್‌. ರವಿ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಆಕ್ರೊಶ ವ್ಯಕ್ತವಾಗಿದ್ದು #GetOutRavi ಟ್ರೆಂಡ್ ಆಗಿದೆ

- Advertisement -
- Advertisement -

ತಮಿಳುನಾಡು ರಾಜ್ಯವನ್ನು ತಮಿಳಗಂ ಎಂದು ಉಲ್ಲೇಖಿಸಿದ್ದ ರಾಜ್ಯಪಾಲ ಆರ್‌.ಎನ್‌. ರವಿ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಆಕ್ರೊಶ ವ್ಯಕ್ತವಾಗಿದ್ದು #GetOutRavi ಟ್ರೆಂಡ್ ಆಗಿದೆ. ಇದಲ್ಲದೆ ಸೋಮವಾರದಂದು ಮುಖ್ಯಮಂತ್ರಿ ಸ್ಟಾಲಿನ್ ಅವರು ಸದನದಲ್ಲಿ ಮಾತನಾಡುತ್ತಿರುವಾಗಲೆ ಅವರು ಸದನದಿಂದ ಹೊರನಡೆದಿದ್ದರು.

ರಾಜಭವನದ ಪೊಂಗಲ್ ಹಬ್ಬದ ಆಹ್ವಾನ ಪತ್ರದಲ್ಲಿ ತಮಿಳುನಾಡನ್ನು ‘ತಮಿಳಗಂ’ ಎಂದು ತಮಿಳುಭಾಷೆಯಲ್ಲಿ ಉಲ್ಲೇಖಿಸಿದ್ದು ಮಾತ್ರವಲ್ಲದೆ, ರಾಜ್ಯ ಸರ್ಕಾರದ ಲಾಂಛನವನ್ನು ಕೈಬಿಟ್ಟಿದೆ. ಆಹ್ವಾನ ಪತ್ರಿಕೆಯಲ್ಲಿ ಕೇವಲ ಭಾರತ ಸರ್ಕಾರದ ಲಾಂಛನವನ್ನು ಮಾತ್ರ ಮುದ್ರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜಭವನದ ಈ ನಡೆಯು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಅವರ ಮಿತ್ರ ಪಕ್ಷಗಳನ್ನು ಕೆರಳಿಸಿದ್ದು, ರಾಜ್ಯಪಾಲ ರವಿಯನ್ನು ಪದಚ್ಯುತಗೊಳಿಸುವಂತೆ ಒತ್ತಾಯಿಸಿದ್ದಾರೆ. ಆಹ್ವಾನ ಪತ್ರಿಕೆಯ ಇಂಗ್ಲಿಷ್ ಆವೃತ್ತಿಯು ರಾಜ್ಯಕ್ಕೆ ‘ತಮಿಳುನಾಡು’ ಎಂಬ ಹೆಸರು ಬಳಸಲಾಗಿದೆ.

ಕಳೆದ ವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ರಾಜ್ಯಪಾಲ ರವಿ, “ಯಾವುದಾದರೂ ವಿಷಯವನ್ನು ಇಡೀ ದೇಶಕ್ಕೆ ಅನ್ವಯಿಸುವಾಗ ತಮಿಳುನಾಡು ಮಾತ್ರ ‘ಬೇಡ’ ಎಂದು ಹೇಳುತ್ತದೆ. ಇದೊಂದು ಅಭ್ಯಾಸವಾಗಿ ಮಾರ್ಪಟ್ಟಿದೆ. ಈ ಬಗ್ಗೆ ಅನೇಕ ಪ್ರಬಂಧಗಳನ್ನು ಬರೆಯಲಾಗಿದ್ದು, ಇವುಗಳೆಲ್ಲಾ ಸುಳ್ಳು ಮತ್ತು ಕಾಲ್ಪನಿಕ ಕತೆಗಳಾಗಿವೆ. ಇವುಗಳನ್ನು ಒಡೆಯಬೇಕು. ಸತ್ಯವು ಮೇಲುಗೈ ಸಾಧಿಸಬೇಕು. ರಾಜ್ಯಕ್ಕೆ ‘ತಮಿಳಗಂ’ ಎಂದು ಕರೆಯುವುದೆ ಹೆಚ್ಚು ಸೂಕ್ತವಾದ ಪದವಾಗಿದೆ. ದೇಶದ ಉಳಿದ ಭಾಗವು ದೀರ್ಘಕಾಲದವರೆಗೆ ವಿದೇಶಿಯರ ಕೈಯಲ್ಲಿ ಬಹಳಷ್ಟು ವಿನಾಶವನ್ನು ಅನುಭವಿಸಿತು” ಎಂದು ಹೇಳಿದ್ದರು.

‘ತಮಿಳುನಾಡು’ ಎಂದರೆ ‘ತಮಿಳರ ರಾಷ್ಟ್ರ’ ಎಂದು ಅರ್ಥ ಬರುತ್ತದೆ, ಆದರೆ ‘ತಮಿಳಗಂ’ ಎಂದರೆ ‘ತಮಿಳು ಜನರ ವಾಸಸ್ಥಾನ’ ಎಂದು ಅರ್ಥ. ಇದು ಈ ಪ್ರದೇಶದ ಪ್ರಾಚೀನ ಹೆಸರು ಎಂದು ರಾಜ್ಯಪಾಲರು ಹೇಳಿದ್ದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಆಡಳಿತಾರೂಢ ಡಿಎಂಕೆ ಮತ್ತು ಅದರ ಮಿತ್ರಪಕ್ಷಗಳು, ರಾಜ್ಯಪಾಲರು ಪ್ರತಿಪಕ್ಷ ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ವು ಕರೆಯುವ ‘ತಮಿಳಗಂ’ ಎಂಬ ಹೆಸರನ್ನು ರಾಜ್ಯಕ್ಕೆ ನೀಡುವ ಮೂಲಕ ಅವರ ಅಜೆಂಡಾವನ್ನು ಮುಂದಕ್ಕೆ ತಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

“ಅವರು ವಾಸ್ತವಿಕವಾಗಿ ತಪ್ಪಾದ ಮತ್ತು ಅಪಾಯಕಾರಿ ಹೇಳಿಕೆಗಳನ್ನು ನೀಡುತ್ತಾರೆ” ಎಂದು ಡಿಎಂಕೆ ನಾಯಕ ಟಿಆರ್ ಬಾಲು ಹೇಳಿದ್ದಾರೆ. ಪೊಂಗಲ್ ಆಹ್ವಾನ ಪತ್ರದ ವಿವಾದದ ನಂತರ, ರಾಜ್ಯಪಾಲರು ನಿನ್ನೆ ತಮಿಳುನಾಡು ವಿಧಾನಸಭೆಯಿಂದ ಹೊರನಡೆದು ಮತ್ತೆ ವಿವಾಸ ಸೃಷ್ಟಿಸಿದ್ದಾರೆ.

ಈ ನಡುವೆ #GetOutRavi ಎಂಬ ಹ್ಯಾಶ್‌ಟ್ಯಾಗ್ ಕೂಡ ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ.

ದಲಿತ ಹಕ್ಕುಗಳ ಹೋರಾಟಗಾರ್ತಿ, ಖ್ಯಾತ ಲೇಖಕಿ ಮೀನಾ ಕಂದಸಾಮಿ ಅವರು, “ನಾವು ರಾಜ್ಯಪಾಲರ ಹುದ್ದೆಯನ್ನು ರದ್ದುಪಡಿಸಿದಾಗ ಮಾತ್ರ  ನಿಜವಾಗಿಯೂ ವಸಾಹತುಶಾಹಿಯನ್ನು ತೊಡೆದುಹಾಕಲು ಸಾಧ್ಯ. ಗೆಟ್‌ ಓಟ್‌ ರವಿ” ಎಂದು ಟ್ವೀಟ್ ಮಾಡಿದ್ದಾರೆ.

ಆಡಳಿತರೂಢ ಡಿಎಂಕೆ ನಾಯಕ ಇಸೈ ಅವರು, “ಸಾಮಾಜಿಕ ಜಾಲತಾಣದಿಂದ ನಗರಗಳ ಗೋಡೆಗಳ ವರೆಗೂ ಗೆಟ್‌ ಔಟ್ ರವಿ ಎಂದು ಹೇಳುತ್ತಿದೆ” ಎಂದು ಟ್ವೀಟ್ ಮಾಡಿದ್ದು ನಗರದ ಗೋಡೆಯೊಂದರಲ್ಲಿನ ಚಿತ್ರಗಳನ್ನು ಪೋಸ್ಟ್‌ ಮಾಡಿದ್ದಾರೆ.

ಈ ನಡುವೆ ತೆಲಂಗಾಣದ ಆಡಳಿತರೂಢ ಟಿಆರ್‌ಎಸ್‌ ನಾಯಕರು ಕೂಡಾ ತಮಿಳುನಾಡು ಸರ್ಕಾರಕ್ಕೆ ಬೆಂಬಲ ನೀಡಿದ್ದು, “ಉತ್ತರಿಸಲು ಸಾಧ್ಯವಾಗದ ತಮಿಳುನಾಡು ರಾಜ್ಯಪಾಲರು ಅಧಿವೇಶನದ ಮಧ್ಯೆಯೇ ಹೊರನಡೆದರು!” ಎಂದು ವಿಡಿಯೊವನ್ನು ಪೋಸ್ಟ್‌ ಮಾಡಿದ್ದಾರೆ.

ತಮಿಳುನಾಡು ಕಾಂಗ್ರೆಸ್ ನಾಯಕ ಕೆಟಿಎಲ್ ಟ್ವೀಟ್

ನನ್ನ ರಾಜ್ಯವನ್ನು ತಮಿಳುನಾಡು ಎಂದು ಕರೆಯಲು ನಿಮಗೆ ಸಮಸ್ಯೆ ಇದ್ದರೆ, ನೀವು ರಾಜ್ಯವನ್ನು ತೊರೆಯಬಹುದು ಎಂದು ಮೋಹನ್ ವಿನೋದ್ ಟ್ವೀಟ್ ಮಾಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...