Homeರಾಜಕೀಯತಮಿಳುನಾಡನ್ನು ‘ತಮಿಳಗಂ’ ಎಂದ ರಾಜ್ಯಪಾಲ; ಗೆಟ್‌ ಔಟ್‌‌ ಎಂದ ತಮಿಳರು!

ತಮಿಳುನಾಡನ್ನು ‘ತಮಿಳಗಂ’ ಎಂದ ರಾಜ್ಯಪಾಲ; ಗೆಟ್‌ ಔಟ್‌‌ ಎಂದ ತಮಿಳರು!

ರಾಜ್ಯಪಾಲ ಆರ್‌.ಎನ್‌. ರವಿ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಆಕ್ರೊಶ ವ್ಯಕ್ತವಾಗಿದ್ದು #GetOutRavi ಟ್ರೆಂಡ್ ಆಗಿದೆ

- Advertisement -
- Advertisement -

ತಮಿಳುನಾಡು ರಾಜ್ಯವನ್ನು ತಮಿಳಗಂ ಎಂದು ಉಲ್ಲೇಖಿಸಿದ್ದ ರಾಜ್ಯಪಾಲ ಆರ್‌.ಎನ್‌. ರವಿ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಆಕ್ರೊಶ ವ್ಯಕ್ತವಾಗಿದ್ದು #GetOutRavi ಟ್ರೆಂಡ್ ಆಗಿದೆ. ಇದಲ್ಲದೆ ಸೋಮವಾರದಂದು ಮುಖ್ಯಮಂತ್ರಿ ಸ್ಟಾಲಿನ್ ಅವರು ಸದನದಲ್ಲಿ ಮಾತನಾಡುತ್ತಿರುವಾಗಲೆ ಅವರು ಸದನದಿಂದ ಹೊರನಡೆದಿದ್ದರು.

ರಾಜಭವನದ ಪೊಂಗಲ್ ಹಬ್ಬದ ಆಹ್ವಾನ ಪತ್ರದಲ್ಲಿ ತಮಿಳುನಾಡನ್ನು ‘ತಮಿಳಗಂ’ ಎಂದು ತಮಿಳುಭಾಷೆಯಲ್ಲಿ ಉಲ್ಲೇಖಿಸಿದ್ದು ಮಾತ್ರವಲ್ಲದೆ, ರಾಜ್ಯ ಸರ್ಕಾರದ ಲಾಂಛನವನ್ನು ಕೈಬಿಟ್ಟಿದೆ. ಆಹ್ವಾನ ಪತ್ರಿಕೆಯಲ್ಲಿ ಕೇವಲ ಭಾರತ ಸರ್ಕಾರದ ಲಾಂಛನವನ್ನು ಮಾತ್ರ ಮುದ್ರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜಭವನದ ಈ ನಡೆಯು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಅವರ ಮಿತ್ರ ಪಕ್ಷಗಳನ್ನು ಕೆರಳಿಸಿದ್ದು, ರಾಜ್ಯಪಾಲ ರವಿಯನ್ನು ಪದಚ್ಯುತಗೊಳಿಸುವಂತೆ ಒತ್ತಾಯಿಸಿದ್ದಾರೆ. ಆಹ್ವಾನ ಪತ್ರಿಕೆಯ ಇಂಗ್ಲಿಷ್ ಆವೃತ್ತಿಯು ರಾಜ್ಯಕ್ಕೆ ‘ತಮಿಳುನಾಡು’ ಎಂಬ ಹೆಸರು ಬಳಸಲಾಗಿದೆ.

ಕಳೆದ ವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ರಾಜ್ಯಪಾಲ ರವಿ, “ಯಾವುದಾದರೂ ವಿಷಯವನ್ನು ಇಡೀ ದೇಶಕ್ಕೆ ಅನ್ವಯಿಸುವಾಗ ತಮಿಳುನಾಡು ಮಾತ್ರ ‘ಬೇಡ’ ಎಂದು ಹೇಳುತ್ತದೆ. ಇದೊಂದು ಅಭ್ಯಾಸವಾಗಿ ಮಾರ್ಪಟ್ಟಿದೆ. ಈ ಬಗ್ಗೆ ಅನೇಕ ಪ್ರಬಂಧಗಳನ್ನು ಬರೆಯಲಾಗಿದ್ದು, ಇವುಗಳೆಲ್ಲಾ ಸುಳ್ಳು ಮತ್ತು ಕಾಲ್ಪನಿಕ ಕತೆಗಳಾಗಿವೆ. ಇವುಗಳನ್ನು ಒಡೆಯಬೇಕು. ಸತ್ಯವು ಮೇಲುಗೈ ಸಾಧಿಸಬೇಕು. ರಾಜ್ಯಕ್ಕೆ ‘ತಮಿಳಗಂ’ ಎಂದು ಕರೆಯುವುದೆ ಹೆಚ್ಚು ಸೂಕ್ತವಾದ ಪದವಾಗಿದೆ. ದೇಶದ ಉಳಿದ ಭಾಗವು ದೀರ್ಘಕಾಲದವರೆಗೆ ವಿದೇಶಿಯರ ಕೈಯಲ್ಲಿ ಬಹಳಷ್ಟು ವಿನಾಶವನ್ನು ಅನುಭವಿಸಿತು” ಎಂದು ಹೇಳಿದ್ದರು.

‘ತಮಿಳುನಾಡು’ ಎಂದರೆ ‘ತಮಿಳರ ರಾಷ್ಟ್ರ’ ಎಂದು ಅರ್ಥ ಬರುತ್ತದೆ, ಆದರೆ ‘ತಮಿಳಗಂ’ ಎಂದರೆ ‘ತಮಿಳು ಜನರ ವಾಸಸ್ಥಾನ’ ಎಂದು ಅರ್ಥ. ಇದು ಈ ಪ್ರದೇಶದ ಪ್ರಾಚೀನ ಹೆಸರು ಎಂದು ರಾಜ್ಯಪಾಲರು ಹೇಳಿದ್ದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಆಡಳಿತಾರೂಢ ಡಿಎಂಕೆ ಮತ್ತು ಅದರ ಮಿತ್ರಪಕ್ಷಗಳು, ರಾಜ್ಯಪಾಲರು ಪ್ರತಿಪಕ್ಷ ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ವು ಕರೆಯುವ ‘ತಮಿಳಗಂ’ ಎಂಬ ಹೆಸರನ್ನು ರಾಜ್ಯಕ್ಕೆ ನೀಡುವ ಮೂಲಕ ಅವರ ಅಜೆಂಡಾವನ್ನು ಮುಂದಕ್ಕೆ ತಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

“ಅವರು ವಾಸ್ತವಿಕವಾಗಿ ತಪ್ಪಾದ ಮತ್ತು ಅಪಾಯಕಾರಿ ಹೇಳಿಕೆಗಳನ್ನು ನೀಡುತ್ತಾರೆ” ಎಂದು ಡಿಎಂಕೆ ನಾಯಕ ಟಿಆರ್ ಬಾಲು ಹೇಳಿದ್ದಾರೆ. ಪೊಂಗಲ್ ಆಹ್ವಾನ ಪತ್ರದ ವಿವಾದದ ನಂತರ, ರಾಜ್ಯಪಾಲರು ನಿನ್ನೆ ತಮಿಳುನಾಡು ವಿಧಾನಸಭೆಯಿಂದ ಹೊರನಡೆದು ಮತ್ತೆ ವಿವಾಸ ಸೃಷ್ಟಿಸಿದ್ದಾರೆ.

ಈ ನಡುವೆ #GetOutRavi ಎಂಬ ಹ್ಯಾಶ್‌ಟ್ಯಾಗ್ ಕೂಡ ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ.

ದಲಿತ ಹಕ್ಕುಗಳ ಹೋರಾಟಗಾರ್ತಿ, ಖ್ಯಾತ ಲೇಖಕಿ ಮೀನಾ ಕಂದಸಾಮಿ ಅವರು, “ನಾವು ರಾಜ್ಯಪಾಲರ ಹುದ್ದೆಯನ್ನು ರದ್ದುಪಡಿಸಿದಾಗ ಮಾತ್ರ  ನಿಜವಾಗಿಯೂ ವಸಾಹತುಶಾಹಿಯನ್ನು ತೊಡೆದುಹಾಕಲು ಸಾಧ್ಯ. ಗೆಟ್‌ ಓಟ್‌ ರವಿ” ಎಂದು ಟ್ವೀಟ್ ಮಾಡಿದ್ದಾರೆ.

ಆಡಳಿತರೂಢ ಡಿಎಂಕೆ ನಾಯಕ ಇಸೈ ಅವರು, “ಸಾಮಾಜಿಕ ಜಾಲತಾಣದಿಂದ ನಗರಗಳ ಗೋಡೆಗಳ ವರೆಗೂ ಗೆಟ್‌ ಔಟ್ ರವಿ ಎಂದು ಹೇಳುತ್ತಿದೆ” ಎಂದು ಟ್ವೀಟ್ ಮಾಡಿದ್ದು ನಗರದ ಗೋಡೆಯೊಂದರಲ್ಲಿನ ಚಿತ್ರಗಳನ್ನು ಪೋಸ್ಟ್‌ ಮಾಡಿದ್ದಾರೆ.

ಈ ನಡುವೆ ತೆಲಂಗಾಣದ ಆಡಳಿತರೂಢ ಟಿಆರ್‌ಎಸ್‌ ನಾಯಕರು ಕೂಡಾ ತಮಿಳುನಾಡು ಸರ್ಕಾರಕ್ಕೆ ಬೆಂಬಲ ನೀಡಿದ್ದು, “ಉತ್ತರಿಸಲು ಸಾಧ್ಯವಾಗದ ತಮಿಳುನಾಡು ರಾಜ್ಯಪಾಲರು ಅಧಿವೇಶನದ ಮಧ್ಯೆಯೇ ಹೊರನಡೆದರು!” ಎಂದು ವಿಡಿಯೊವನ್ನು ಪೋಸ್ಟ್‌ ಮಾಡಿದ್ದಾರೆ.

ತಮಿಳುನಾಡು ಕಾಂಗ್ರೆಸ್ ನಾಯಕ ಕೆಟಿಎಲ್ ಟ್ವೀಟ್

ನನ್ನ ರಾಜ್ಯವನ್ನು ತಮಿಳುನಾಡು ಎಂದು ಕರೆಯಲು ನಿಮಗೆ ಸಮಸ್ಯೆ ಇದ್ದರೆ, ನೀವು ರಾಜ್ಯವನ್ನು ತೊರೆಯಬಹುದು ಎಂದು ಮೋಹನ್ ವಿನೋದ್ ಟ್ವೀಟ್ ಮಾಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...