Homeಕರ್ನಾಟಕನಾಡಿನ ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ (87) ಇನ್ನಿಲ್ಲ

ನಾಡಿನ ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ (87) ಇನ್ನಿಲ್ಲ

- Advertisement -
- Advertisement -

ವಯೋಸಹಜ ಅನಾರೋಗ್ಯದ ಕಾರಣ ಆಸ್ಪತ್ರೆಯಲ್ಲಿದ್ದ ನಾಡಿನ ಖ್ಯಾತ ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್‌ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರು ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ಅವರಿಗೆ 87 ವರ್ಷ ವಯಸ್ಸಾಗಿತ್ತು.

ನ್ಯಾಯವಾದಿಯಾಗಿದ್ದ ತಂದೆ ಪಿ. ಅಹಮದ್, ತಾಯಿ ಜೈನಾಬಿ ಅವರ ಮಗಳಾಗಿ ಸಾರಾ ಅಬೂಬಕ್ಕರ್ ಅವರು 1936ರ ಜೂನ್ 30 ರಂದು ಕೇರಳದ ಕಾಸರಗೋಡಿನ ಚಂದ್ರಗಿರಿ ನದಿಯ ತೀರದ  ಗ್ರಾಮವೊಂದರಲ್ಲಿ ಜನಿಸಿದರು. ಪ್ರಾಥಮಿಕ ವಿದ್ಯಾಭ್ಯಾಸ ತಮ್ಮ ಹುಟ್ಟೂರಿನಲ್ಲೇ ಪಡೆದ ಅವರು, ಹೈಸ್ಕೂಲು ವಿದ್ಯಾಭ್ಯಾಸವನ್ನು ಕಾಸರಗೋಡಿನಲ್ಲಿ ಮಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಂಜಿನಿಯರ್ ಆಗಿದ್ದ ಅಬೂಬಕ್ಕರ್‌‌ ಅವರನ್ನು ಸಾರಾ ವಿವಾಹವಾದ ನಂತರ ಅವರು ತಮ್ಮ ವಿದ್ಯಾಭ್ಯಾಸಕ್ಕೆ ವಿದಾಯ ಹೇಳುವಂತಾಯಿತು. ಆದರೆ ಅವರು ಓದಿನಲ್ಲಿ ನಿರಂತರ ಆಸಕ್ತರಾಗಿದ್ದ ಸಾಹಿತ್ಯ ಲೋಕದೆಡೆಗೆ ಆಕರ್ಷಿತರಾದರು. ಅವರ ಅಣ್ಣ ತಂದುಕೊಡುತ್ತಿದ್ದ ಕೇರಳದ ಪ್ರಸಿದ್ದ ಲೇಖಕ ವೈಕಂ ಮಹಮದ್ ಬಷೀರ್‌ ಅವರ ಕಾದಂಬರಿಗಳ ಓದಿನ ಪ್ರಭಾವದಿಂದ ಅವರು ಬರೆಯುವ ಆಸಕ್ತಿಯನ್ನು ತೆಳೆದರು.

ತಮ್ಮ ನಲವತ್ತನೆ ವಯಸ್ಸಿನ ನಂತರ ಬರೆಯಲು ಪ್ರಾರಂಬಿಸಿದ ಸಾರಾ ಅಬೂಬಕ್ಕರ್  ಅವರ ಮೊದಲ ಕಾದಂಬರಿ ‘ಚಂದ್ರಗಿರಿಯ ತೀರದಲ್ಲಿ’ ಲಂಕೇಶ್ ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡಿತು. ಈ ಕಥೆಯಲ್ಲಿ ಹೊರಹೊಮ್ಮಿದ ವಾಸ್ತವಿಕ ಬದುಕಿನ ಚಿತ್ರಣ ಮತ್ತು ಧರ್ಮದ ಕಟ್ಟುಪಾಡುಗಳಲ್ಲಿ ಶೋಷಿತಗೊಂಡ ಮಹಿಳೆಯರ ಧ್ವನಿಗಳು ಅಸಂಖ್ಯಾತ ಓದುಗರ ಹೃದಯವನ್ನು ತಟ್ಟಿ ಈ ಕಾದಂಬರಿ ಎಲ್ಲೆಡೆಯಿಂದ ಮೆಚ್ಚುಗೆ ಪಡೆಯಿದೆ.

ಚಂದ್ರಗಿರಿಯ ತೀರದಲ್ಲಿ- ೧೯೮೪, ಸಹನಾ, – ೧೯೮೫, ವಜ್ರಗಳು, ಕದನವಿರಾಮ, – ೧೯೮೮, ಸುಳಿಯಲ್ಲಿ ಸಿಕ್ಕವರು,೧೯೯೪, ಪ್ರವಾಹ-ಸುಳಿ (ಸುಳಿಯಲ್ಲಿ ಸಿಕ್ಕವರು ಕೃತಿಯ ಭಾಗ-೨), ತಳ ಒಡೆದ ದೋಣಿ, ೧೯೯೭, ಪಂಜರ, ಇಳಿಜಾರು, ಕಾಣಿಕೆ ಇವರ ಪ್ರಮುಖ ಕೃತಿಗಳಾಗಿವೆ.

ಚಪ್ಪಲಿಗಳು, ೧೯೮೯, ಪಯಣ ಮತ್ತು ಇತರ ಕಥೆಗಳು, ಅರ್ಧರಾತ್ರಿಯಲ್ಲಿ ಹುಟ್ಟಿದ ಕೂಸು, ೧೯೯೨, ಖೆಡ್ಡ, ಸುಮಯ್ಯಾ (ಜನಪದ ಆಧರಿಸಿದ ಕಥೆಗಳು), ೨೦೦೪, ಗಗನ ಸಖಿ, ೨೦೦೭ ಇವರ ಪ್ರಮುಖ ಕಥಾ ಸಂಕಲನಗಳಾಗಿವೆ.

ಕಮರಿದ ಕನಸು, ಮಗಳು ಹುಟ್ಟಿದಳು, ತೇಲಾಡುವ ಮೋಡಗಳು, ತಾಳ, ಹೀಗೂ ಒಂದು ಬದುಕು ಇವರ ಬರೆದ ಬಾನುಲಿ ನಾಟಕಗಳಾಗಿದ್ದು, ಲೇಖನ ಗುಚ್ಛ, ಮನೋಮಿ, ಬಲೆ, ನಾನಿನ್ನು ನಿದ್ರಿಸುವೆ (ಕಾದಂಬರಿಗಳು) ಇವರ ಪ್ರಮುಖ  ಲೇಖನ ಮತ್ತು ಅನುವಾದಗಳಾಗಿವೆ. ಐಷಾರಾಮದ ಆಳದಲ್ಲಿ ಎಂಬ ಪ್ರವಾಸಕಥನವನ್ನು ಕೂಡಾ ಸಾರಾ ಅವರು ಬರೆದಿದ್ದಾರೆ.

ಸಾರಾ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಬಿ. ಸರೋಜಾದೇವಿ ಪ್ರಶಸ್ತಿ, ‘ಸಹನಾ’ ಕಾದಂಬರಿಗೆ ವರ್ಧಮಾನ ಪ್ರಶಸ್ತಿ, ‘ಸುಳಿಯಲ್ಲಿ ಸಿಕ್ಕವರು’ ಕೃತಿಗೆ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿ, ಸಂದೇಶ ಪ್ರಶಸ್ತಿ, ಅನುಪಮ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ನೃಪತುಂಗ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಮುಖ ಪ್ರಶಸ್ತಿ ಗೌರವಗಳು ಸಂದಿವೆ.

ಮೃತರ ಪಾರ್ಥೀವ ಶರೀರವನ್ನು ಮಂಗಳೂರಿನ ಲೇಡಿಹಿಲ್ ಬಳಿ ಇರುವ ಅವರ ನಿವಾಸದಲ್ಲಿ ಮಧ್ಯಾಹ್ನ 3 ಗಂಟೆಯಿಂದ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ರಾತ್ರಿ 8 ಗಂಟೆಗೆ ಅಂತ್ಯ ಕ್ರಿಯೆ ನೆರವೇಸಿಸಲಾಗುತ್ತದೆ ಎಂದು ಅವರ ಆಪ್ತ ಮೂಲಕಗಳು ನಾನುಗೌರಿ.ಕಾಂಗೆ ತಿಳಿಸಿವೆ.

ಹಿರಿಯ ಸಾಹಿತಿಗೆ ನಾಡಿನ ಹಲವರು ಗಣ್ಯ ವ್ಯಕ್ತಿಗಳು ಶ್ರದ್ದಾಂಜಲಿ ಕೋರಿದ್ದು, ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಗೆ ಅವರ ಕೊಡುಗೆಗಳನ್ನು ನೆನೆಸಿಕೊಂಡಿದ್ದಾರೆ.

ಸಂಸ್ಕೃತಿ ಚಿಂತಕ, ಸಾಹಿತಿ ರಹಮತ್ ತರಿಕೆರೆ ಅವರು, “ನಿನ್ನೆಯಷ್ಟೆ ಅಕ್ಕರದವ್ವ ಫಾತಿಮಾ ಶೇಖರ ಜನ್ಮದಿನವಿತ್ತು. ಈ ದಿನ ‘ಮುಸ್ಲಿಂ‌ಹುಡುಗಿ ಶಾಲೆ‌ ಕಲಿತದ್ದು’ ಬರೆಹದ ಮೂಲಕ ಸಾಹಿತ್ಯಲೋಕ ಪ್ರವೇಶಿಸಿದ ಸಾರಾ ಇಲ್ಲವಾದರು. ಸಾರಾ ಎಂದರೆ ಅರಬ್ಬಿಯಲ್ಲಿ ಸಂತೋಷದಾಯಕಿ ರಾಜಕುಮಾರಿ ಎಂದರ್ಥಗಳಿವೆ. ಆದರೆ ಇವರು ಬದುಕೆಲ್ಲ ಬವಣೆಗೊಳಗಾದ ಮಹಿಳೆಯರ ಬಗ್ಗೆಯೇ ಧ್ಯಾನಿಸಿದರು. ಬರೆದರು. 25 ವರ್ಷಗಳ ಹಿಂದೆ ಅವರೊಡನೆ ಇಡೀ ದಿನವಿದ್ದು ಸಂದರ್ಶನ ಮಾಡಿ ಪ್ರಕಟಿಸಿದ್ದು ನೆ‌ನಪಾಗುತ್ತಿದೆ. ವೈಚಾರಿಕವಾಗಿ ಕಠೋರ ನಿಷ್ಠುರೆ; ಅಂತಃಕರಣದಲ್ಲಿ ತಾಯಿಯಾಗಿದ್ದರು” ಎಂದು ಹೇಳಿದ್ದಾರೆ.

“ತಾ‌ನು ನಂಬಿದ ಮೌಲ್ಯಗಳಿಗೆ ಬದ್ಧರಾಗಿ, ಎದುರಾದ ವಿರೋಧಗಳನ್ನು ದಿಟ್ಟತನದಿಂದ ಎದುರಿಸಿ, ಮುಸ್ಲಿಂ ಲೋಕದ ತವಕ-ತಲ್ಲಣಗಳಿಗೆ ದನಿಯಾಗಿದ್ದ ಹಿರಿಯ ಸಾಹಿತಿ ಸಾರಾ ಅಬೂಬಕರ್ ನಿಧನ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ. ಅವರ ಬಂಧುಗಳು ಮತ್ತು ಓದುಗ ಬಳಗದ ದುಃಖದಲ್ಲಿ ನಾನೂ ಭಾಗಿಯಾಗಿದ್ದೇ‌ನೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ವಿಧಾನಪರಿಷತ್‌‌ನ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಅವರು, “ಕರಾವಳಿ ಸೌಹಾರ್ದತೆಯ ಗಟ್ಟಿ ಧ್ವನಿ,ಕೋಮುವಾದದ ವಿರುದ್ಧದ ದಿಟ್ಟ ದನಿ ಅಸ್ತಂಗತವಾಗಿದೆ. ಲೇಖಕಿ ಸಾರಾ ಅಬೂಬಕ್ಕರ್ ನಿಧನ ಸಾಹಿತ್ಯ ಲೋಕಕ್ಕೆ ತುಂಬಿ ಬಾರದ ನಷ್ಟ. ದುರಿತ ಕಾಲದಲ್ಲಿ ಸಾರಾ ಅವರ ಅಗಲಿಕೆ ಕುಟುಂಬದ ಸದಸ್ಯರನ್ನೇ ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬಸ್ಥರು ಹಾಗೂ ಅವರ ಒಡನಾಡಿಗಳ ನೋವಲ್ಲಿ ನಾನು ಭಾಗಿ” ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಖ್ಯಾತ ವ್ಯಂಗ್ಯಚಿತ್ರಕಾರ ಪಿ.ಮೊಹಮದ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...