Homeಕರ್ನಾಟಕನಾಡಿನ ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ (87) ಇನ್ನಿಲ್ಲ

ನಾಡಿನ ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ (87) ಇನ್ನಿಲ್ಲ

- Advertisement -
- Advertisement -

ವಯೋಸಹಜ ಅನಾರೋಗ್ಯದ ಕಾರಣ ಆಸ್ಪತ್ರೆಯಲ್ಲಿದ್ದ ನಾಡಿನ ಖ್ಯಾತ ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್‌ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರು ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ಅವರಿಗೆ 87 ವರ್ಷ ವಯಸ್ಸಾಗಿತ್ತು.

ನ್ಯಾಯವಾದಿಯಾಗಿದ್ದ ತಂದೆ ಪಿ. ಅಹಮದ್, ತಾಯಿ ಜೈನಾಬಿ ಅವರ ಮಗಳಾಗಿ ಸಾರಾ ಅಬೂಬಕ್ಕರ್ ಅವರು 1936ರ ಜೂನ್ 30 ರಂದು ಕೇರಳದ ಕಾಸರಗೋಡಿನ ಚಂದ್ರಗಿರಿ ನದಿಯ ತೀರದ  ಗ್ರಾಮವೊಂದರಲ್ಲಿ ಜನಿಸಿದರು. ಪ್ರಾಥಮಿಕ ವಿದ್ಯಾಭ್ಯಾಸ ತಮ್ಮ ಹುಟ್ಟೂರಿನಲ್ಲೇ ಪಡೆದ ಅವರು, ಹೈಸ್ಕೂಲು ವಿದ್ಯಾಭ್ಯಾಸವನ್ನು ಕಾಸರಗೋಡಿನಲ್ಲಿ ಮಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಂಜಿನಿಯರ್ ಆಗಿದ್ದ ಅಬೂಬಕ್ಕರ್‌‌ ಅವರನ್ನು ಸಾರಾ ವಿವಾಹವಾದ ನಂತರ ಅವರು ತಮ್ಮ ವಿದ್ಯಾಭ್ಯಾಸಕ್ಕೆ ವಿದಾಯ ಹೇಳುವಂತಾಯಿತು. ಆದರೆ ಅವರು ಓದಿನಲ್ಲಿ ನಿರಂತರ ಆಸಕ್ತರಾಗಿದ್ದ ಸಾಹಿತ್ಯ ಲೋಕದೆಡೆಗೆ ಆಕರ್ಷಿತರಾದರು. ಅವರ ಅಣ್ಣ ತಂದುಕೊಡುತ್ತಿದ್ದ ಕೇರಳದ ಪ್ರಸಿದ್ದ ಲೇಖಕ ವೈಕಂ ಮಹಮದ್ ಬಷೀರ್‌ ಅವರ ಕಾದಂಬರಿಗಳ ಓದಿನ ಪ್ರಭಾವದಿಂದ ಅವರು ಬರೆಯುವ ಆಸಕ್ತಿಯನ್ನು ತೆಳೆದರು.

ತಮ್ಮ ನಲವತ್ತನೆ ವಯಸ್ಸಿನ ನಂತರ ಬರೆಯಲು ಪ್ರಾರಂಬಿಸಿದ ಸಾರಾ ಅಬೂಬಕ್ಕರ್  ಅವರ ಮೊದಲ ಕಾದಂಬರಿ ‘ಚಂದ್ರಗಿರಿಯ ತೀರದಲ್ಲಿ’ ಲಂಕೇಶ್ ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡಿತು. ಈ ಕಥೆಯಲ್ಲಿ ಹೊರಹೊಮ್ಮಿದ ವಾಸ್ತವಿಕ ಬದುಕಿನ ಚಿತ್ರಣ ಮತ್ತು ಧರ್ಮದ ಕಟ್ಟುಪಾಡುಗಳಲ್ಲಿ ಶೋಷಿತಗೊಂಡ ಮಹಿಳೆಯರ ಧ್ವನಿಗಳು ಅಸಂಖ್ಯಾತ ಓದುಗರ ಹೃದಯವನ್ನು ತಟ್ಟಿ ಈ ಕಾದಂಬರಿ ಎಲ್ಲೆಡೆಯಿಂದ ಮೆಚ್ಚುಗೆ ಪಡೆಯಿದೆ.

ಚಂದ್ರಗಿರಿಯ ತೀರದಲ್ಲಿ- ೧೯೮೪, ಸಹನಾ, – ೧೯೮೫, ವಜ್ರಗಳು, ಕದನವಿರಾಮ, – ೧೯೮೮, ಸುಳಿಯಲ್ಲಿ ಸಿಕ್ಕವರು,೧೯೯೪, ಪ್ರವಾಹ-ಸುಳಿ (ಸುಳಿಯಲ್ಲಿ ಸಿಕ್ಕವರು ಕೃತಿಯ ಭಾಗ-೨), ತಳ ಒಡೆದ ದೋಣಿ, ೧೯೯೭, ಪಂಜರ, ಇಳಿಜಾರು, ಕಾಣಿಕೆ ಇವರ ಪ್ರಮುಖ ಕೃತಿಗಳಾಗಿವೆ.

ಚಪ್ಪಲಿಗಳು, ೧೯೮೯, ಪಯಣ ಮತ್ತು ಇತರ ಕಥೆಗಳು, ಅರ್ಧರಾತ್ರಿಯಲ್ಲಿ ಹುಟ್ಟಿದ ಕೂಸು, ೧೯೯೨, ಖೆಡ್ಡ, ಸುಮಯ್ಯಾ (ಜನಪದ ಆಧರಿಸಿದ ಕಥೆಗಳು), ೨೦೦೪, ಗಗನ ಸಖಿ, ೨೦೦೭ ಇವರ ಪ್ರಮುಖ ಕಥಾ ಸಂಕಲನಗಳಾಗಿವೆ.

ಕಮರಿದ ಕನಸು, ಮಗಳು ಹುಟ್ಟಿದಳು, ತೇಲಾಡುವ ಮೋಡಗಳು, ತಾಳ, ಹೀಗೂ ಒಂದು ಬದುಕು ಇವರ ಬರೆದ ಬಾನುಲಿ ನಾಟಕಗಳಾಗಿದ್ದು, ಲೇಖನ ಗುಚ್ಛ, ಮನೋಮಿ, ಬಲೆ, ನಾನಿನ್ನು ನಿದ್ರಿಸುವೆ (ಕಾದಂಬರಿಗಳು) ಇವರ ಪ್ರಮುಖ  ಲೇಖನ ಮತ್ತು ಅನುವಾದಗಳಾಗಿವೆ. ಐಷಾರಾಮದ ಆಳದಲ್ಲಿ ಎಂಬ ಪ್ರವಾಸಕಥನವನ್ನು ಕೂಡಾ ಸಾರಾ ಅವರು ಬರೆದಿದ್ದಾರೆ.

ಸಾರಾ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಬಿ. ಸರೋಜಾದೇವಿ ಪ್ರಶಸ್ತಿ, ‘ಸಹನಾ’ ಕಾದಂಬರಿಗೆ ವರ್ಧಮಾನ ಪ್ರಶಸ್ತಿ, ‘ಸುಳಿಯಲ್ಲಿ ಸಿಕ್ಕವರು’ ಕೃತಿಗೆ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿ, ಸಂದೇಶ ಪ್ರಶಸ್ತಿ, ಅನುಪಮ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ನೃಪತುಂಗ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಮುಖ ಪ್ರಶಸ್ತಿ ಗೌರವಗಳು ಸಂದಿವೆ.

ಮೃತರ ಪಾರ್ಥೀವ ಶರೀರವನ್ನು ಮಂಗಳೂರಿನ ಲೇಡಿಹಿಲ್ ಬಳಿ ಇರುವ ಅವರ ನಿವಾಸದಲ್ಲಿ ಮಧ್ಯಾಹ್ನ 3 ಗಂಟೆಯಿಂದ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ರಾತ್ರಿ 8 ಗಂಟೆಗೆ ಅಂತ್ಯ ಕ್ರಿಯೆ ನೆರವೇಸಿಸಲಾಗುತ್ತದೆ ಎಂದು ಅವರ ಆಪ್ತ ಮೂಲಕಗಳು ನಾನುಗೌರಿ.ಕಾಂಗೆ ತಿಳಿಸಿವೆ.

ಹಿರಿಯ ಸಾಹಿತಿಗೆ ನಾಡಿನ ಹಲವರು ಗಣ್ಯ ವ್ಯಕ್ತಿಗಳು ಶ್ರದ್ದಾಂಜಲಿ ಕೋರಿದ್ದು, ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಗೆ ಅವರ ಕೊಡುಗೆಗಳನ್ನು ನೆನೆಸಿಕೊಂಡಿದ್ದಾರೆ.

ಸಂಸ್ಕೃತಿ ಚಿಂತಕ, ಸಾಹಿತಿ ರಹಮತ್ ತರಿಕೆರೆ ಅವರು, “ನಿನ್ನೆಯಷ್ಟೆ ಅಕ್ಕರದವ್ವ ಫಾತಿಮಾ ಶೇಖರ ಜನ್ಮದಿನವಿತ್ತು. ಈ ದಿನ ‘ಮುಸ್ಲಿಂ‌ಹುಡುಗಿ ಶಾಲೆ‌ ಕಲಿತದ್ದು’ ಬರೆಹದ ಮೂಲಕ ಸಾಹಿತ್ಯಲೋಕ ಪ್ರವೇಶಿಸಿದ ಸಾರಾ ಇಲ್ಲವಾದರು. ಸಾರಾ ಎಂದರೆ ಅರಬ್ಬಿಯಲ್ಲಿ ಸಂತೋಷದಾಯಕಿ ರಾಜಕುಮಾರಿ ಎಂದರ್ಥಗಳಿವೆ. ಆದರೆ ಇವರು ಬದುಕೆಲ್ಲ ಬವಣೆಗೊಳಗಾದ ಮಹಿಳೆಯರ ಬಗ್ಗೆಯೇ ಧ್ಯಾನಿಸಿದರು. ಬರೆದರು. 25 ವರ್ಷಗಳ ಹಿಂದೆ ಅವರೊಡನೆ ಇಡೀ ದಿನವಿದ್ದು ಸಂದರ್ಶನ ಮಾಡಿ ಪ್ರಕಟಿಸಿದ್ದು ನೆ‌ನಪಾಗುತ್ತಿದೆ. ವೈಚಾರಿಕವಾಗಿ ಕಠೋರ ನಿಷ್ಠುರೆ; ಅಂತಃಕರಣದಲ್ಲಿ ತಾಯಿಯಾಗಿದ್ದರು” ಎಂದು ಹೇಳಿದ್ದಾರೆ.

“ತಾ‌ನು ನಂಬಿದ ಮೌಲ್ಯಗಳಿಗೆ ಬದ್ಧರಾಗಿ, ಎದುರಾದ ವಿರೋಧಗಳನ್ನು ದಿಟ್ಟತನದಿಂದ ಎದುರಿಸಿ, ಮುಸ್ಲಿಂ ಲೋಕದ ತವಕ-ತಲ್ಲಣಗಳಿಗೆ ದನಿಯಾಗಿದ್ದ ಹಿರಿಯ ಸಾಹಿತಿ ಸಾರಾ ಅಬೂಬಕರ್ ನಿಧನ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ. ಅವರ ಬಂಧುಗಳು ಮತ್ತು ಓದುಗ ಬಳಗದ ದುಃಖದಲ್ಲಿ ನಾನೂ ಭಾಗಿಯಾಗಿದ್ದೇ‌ನೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ವಿಧಾನಪರಿಷತ್‌‌ನ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಅವರು, “ಕರಾವಳಿ ಸೌಹಾರ್ದತೆಯ ಗಟ್ಟಿ ಧ್ವನಿ,ಕೋಮುವಾದದ ವಿರುದ್ಧದ ದಿಟ್ಟ ದನಿ ಅಸ್ತಂಗತವಾಗಿದೆ. ಲೇಖಕಿ ಸಾರಾ ಅಬೂಬಕ್ಕರ್ ನಿಧನ ಸಾಹಿತ್ಯ ಲೋಕಕ್ಕೆ ತುಂಬಿ ಬಾರದ ನಷ್ಟ. ದುರಿತ ಕಾಲದಲ್ಲಿ ಸಾರಾ ಅವರ ಅಗಲಿಕೆ ಕುಟುಂಬದ ಸದಸ್ಯರನ್ನೇ ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬಸ್ಥರು ಹಾಗೂ ಅವರ ಒಡನಾಡಿಗಳ ನೋವಲ್ಲಿ ನಾನು ಭಾಗಿ” ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಖ್ಯಾತ ವ್ಯಂಗ್ಯಚಿತ್ರಕಾರ ಪಿ.ಮೊಹಮದ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...