Homeಮುಖಪುಟ“ಡಿವೈಡ್ ಆಂಡ್ ರೂಲ್ ಪಾಲಿಸಿ”ಯ ಜನಕರು ವೈದಿಕರೇ ಹೊರತು ಬ್ರಿಟಿಶರಲ್ಲ.

“ಡಿವೈಡ್ ಆಂಡ್ ರೂಲ್ ಪಾಲಿಸಿ”ಯ ಜನಕರು ವೈದಿಕರೇ ಹೊರತು ಬ್ರಿಟಿಶರಲ್ಲ.

- Advertisement -
- Advertisement -

ಒಂದು ಪತ್ರ

ಮಾನ್ಯರೇ,
“ಡಿವೈಡ್ ಆಂಡ್ ರೂಲ್ ಪಾಲಿಸಿ” ಅರ್ಥಾತ್ ವಿಭಜಿಸಿ ಆಳು ಎಂಬ ರಾಜನೀತಿ ಬ್ರಿಟಿಷರದ್ದು ಎಂಬ ಆರೋಪ ಯಾವಾಗಲೂ ಕೇಳಿ ಬರುತ್ತದೆ. ಆದರೆ ಮೂಲತಃ “ವಿಭಜಿಸಿ ಆಳು” ಎಂಬ ಕುತ್ಸಿತ ನೀತಿಯ ಜನಕರು ವೈದಿಕರೇ ಹೊರತು ಬ್ರಿಟಿಶರಲ್ಲ.

ಮೂರು ಸಾವಿರ ವರ್ಷಗಳ ಹಿಂದೆ ವೈದಿಕರು ಇದೇ ಡಿವೈಡ್ & ರೂಲ್ ಪಾಲಿಸಿ ಸಮಾಜದಲ್ಲಿ ಬಿತ್ತಲು “ವರ್ಣ” ಗಳನ್ನು ನಯವಾಗಿ ಸೃಷ್ಟಿಸಿ ಜಾರಿಗೊಳಿಸಿದರು. ನಂತರ ಕುಲಕಸುಬು ಆಧಾರದಲ್ಲಿ ಜಾತಿ-ಉಪಜಾತಿಗಳನ್ನು ಹುಟ್ಟು ಹಾಕಿ ಮೇಲು-ಕೀಳು ಎಂಬ ಶ್ರೇಣೀಕೃತ ಸಾಮಾಜಿಕ ವ್ಯವಸ್ಥೆ ಜಾರಿಗೆ ತಂದು ಜಾತಿ-ಜಾತಿಯೊಳಗೆ ಪಂಥ-ಪಂಥ ಗಳೊಳಗೆ ದ್ವೇಷ ಹುಟ್ಟಿಸಿ ತಮ್ಮ ಬೇಳೆ ಬೇಯಿಸಿಕೊಂಡರು.

ವೈದಿಕರು ತಾವೇ ಚಿತ್ರವಿಚಿತ್ರ ಮನುಷ್ಯ ಮತ್ತು ಪ್ರಾಣಿ ರೂಪದ ದೇವರ ಕಲ್ಪನೆ ಹುಟ್ಟು ಹಾಕಿ ಕೊನೆಗೆ ಆ ದೇವರೊಳಗೂ ಮೇಲು-ಕೀಳು ಹೆಣ್ಣು-ಗಂಡು ಎಂಬ ವಿಭಜನೆ ಮಾಡಿ, ಆ ವಿಚಿತ್ರ ಸ್ವರೂಪದ ದೇವರುಗಳ ಹೆಸರಲ್ಲಿ ಜನರು ತಮ್ಮ ತಮ್ಮಲ್ಲೇ ಕಚ್ಚಾಡುವಂತೆ ಷಡ್ಯಂತ್ರ ರಚಿಸಿ ಯಶಸ್ವಿಯಾದರು. ಎಲ್ಲಾ ಬಿಟ್ಟು ದೇವಸ್ಥಾನದ ಆನೆಯ ಹಣೆಗೆ ಯಾವ ವಿನ್ಯಾಸದ ನಾಮ ಹಾಕಬೇಕು ಎಂಬ ಬಗ್ಗೆಯೂ ಒಮ್ಮತ ಹುಟ್ಟದಂತಹಾ ಮಾನಸಿಕತೆ ಸಮಾಜದಲ್ಲಿ ಹುಟ್ಟು ಹಾಕಿದವರೂ ಈ ವೈದಿಕರೇ!

ಬ್ರಿಟಿಷರು ಭಾರತಕ್ಕೆ ಬಂದಾಗ ಅವರು ಇಂತಹಾ 6200 ಜಾತಿಗಳಿರುವ ವೈದಿಕ ಧರ್ಮ ನೋಡಿ ಆಘಾತಗೊಂಡರು ಹಾಗೂ ಕೇವಲ 3% ಇರುವ ಬ್ರಾಹ್ಮಣರು ಜಾತಿ-ಉಪಜಾತಿ- ವರ್ಗ-ಪಂಥಗಳ ಮೂಲಕ 97% ಜನರನ್ನು ಮಾನಸಿಕ ದಾಸ್ಯಕ್ಕೆ ಒಳಪಡಿಸಿಕೊಂಡು ಸಮಾಜವನ್ನು ತಮ್ಮ ಮುಷ್ಟಿಯಲ್ಲಿ ಇಟ್ಟಿಕೊಂಡಿರುವುದನ್ನು ಕಂಡು ಬುದ್ದಿವಂತ ಬ್ರಿಟಿಷರು ತಾವೂ ಅದನ್ನೇ ಅನುಸರಿಸಿ ಹಿಂದೂ-ಮುಸ್ಲಿಂ ಒಡಕು ಹುಟ್ಟು ಹಾಕಿದರು. ಈ ಒಡಕನ್ನೇ ಸಂಘ ಪರಿವಾರ ಇಂದು ಬಂಡವಾಳ ಮಾಡಿಕೊಂಡು ಮತ್ತೆ ಮತ್ತೆ ಅಧಿಕಾರಕ್ಕೆ ಬರುತ್ತಿರುವುದು.

ಹಳೆಯದರೊಂದಿಗೆ ಆಧುನಿಕತೆ ಸಹಾ ಇರಲಿ ಎಂಬಂತೆ ಬಿ‌ಜೆ‌ಪಿಯವರಿಂದ ಇವಿಎಂ ತಿರುಚಾಟ ಸಹಾ ನಡೆಯುತ್ತಿದೆ ಬಿಡಿ. ಆದರೆ ಈ ಇವಿಎಂ ತಿರುಚಾಟದ ವಿರುದ್ಧ ಯಾರೂ ದನಿ ಎತ್ತದಂತೆ ಕಾಂಗ್ರೆಸ್ಸಿನೊಳಗಿನ ಆರೆಸ್ಸೆಸ್ಸಿಗರು ತಡೆಯುತ್ತಿದ್ದಾರೆ. ಹಾಗಾಗಿ ಬಿ‌ಜೆ‌ಪಿಯ ಇವಿಎಂ ವಂಚನೆಯ ವಿರುದ್ಧದ ಹೋರಾಟವೂ ಜಾತಿಯ ಸ್ವರೂಪ ಪಡೆದು ಈಗ ಚುನಾವಣೆಯಲ್ಲಿ ಮತಪತ್ರ/ ಬ್ಯಾಲೆಟ್ ಪೇಪರ್ ಮರಳಿ ತರುವುದಕ್ಕಾಗಿ ನಡೆಯುತ್ತಿರುವ ಹೋರಾಟ ಕೇವಲ ದಲಿತ ಸಂಘಟನೆಗಳಿಗೆ ಮಾತ್ರ ಸೀಮಿತವಾಗುವಂತೆ ಎಲ್ಲಾ ವಿರೋಧ ಪಕ್ಷಗಳ ಒಳಗೆ ತೂರಿಕೊಂಡಿರುವ ಆರೆಸ್ಸೆಸ್ಸಿಗರು ನೋಡಿಕೊಂಡಿದ್ದಾರೆ. ಈ ರೀತಿ ವಿರೋಧ ಪಕ್ಷದೊಳಗೂ ಈ ವೈದಿಕರ ಡಿವೈಡ್ ಆಂಡ್ ರೂಲ್ ನೀತಿ ಯಶಸ್ವಿಯಾಗಿ ಅನುಷ್ಟಾನಗೊಂಡಿದೆ. ಇದಕ್ಕೆಲ್ಲಾ ಬ್ರಿಟಿಷರನ್ನು ದೂರಲು ಸಾಧ್ಯವೇ!

ತಮ್ಮ ವಿಶ್ವಾಸಿ,
ಪ್ರವೀಣ್ ಎಸ್ ಶೆಟ್ಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...