Homeಕರ್ನಾಟಕಇಡಬ್ಲ್ಯೂಎಸ್‌ ಜಾರಿಗೆ ಯಾವ ಉಪಸಮಿತಿ ಮಾಡಿದ್ರಿ?: ಒಳಮೀಸಲಾತಿ ಹೋರಾಟದಲ್ಲಿ ಜ್ಞಾನಪ್ರಕಾಶ ಸ್ವಾಮೀಜಿ ವಾಗ್ದಾಳಿ

ಇಡಬ್ಲ್ಯೂಎಸ್‌ ಜಾರಿಗೆ ಯಾವ ಉಪಸಮಿತಿ ಮಾಡಿದ್ರಿ?: ಒಳಮೀಸಲಾತಿ ಹೋರಾಟದಲ್ಲಿ ಜ್ಞಾನಪ್ರಕಾಶ ಸ್ವಾಮೀಜಿ ವಾಗ್ದಾಳಿ

- Advertisement -
- Advertisement -

“ಮೂರು ಪರ್ಸೆಂಟ್ ಇರುವ ಮೇಲ್ಜಾತಿಯವರಿಗೆ ಹತ್ತು ಪರ್ಸೆಂಟ್ (ಇಡಬ್ಲ್ಯೂಎಸ್) ಮೀಸಲಾತಿ ನೀಡಲು ಯಾವ ಉಪಸಮಿತಿ ಮಾಡಿದ್ರಿ, ಯಾವ ಆಯೋಗ ವರದಿ ನೀಡಿತ್ತು?” ಎಂದು ಉರಿಲಿಂಗಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ ಪ್ರಶ್ನಿಸಿದರು.

ಪುನಾರಂಭಗೊಂಡಿರುವ ಒಳಮೀಸಲಾತಿ ಹೋರಾಟ 30ನೇ ದಿನಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ಗೆ ಆಗಮಿಸಿ, ಹೋರಾಟವನ್ನು ಉದ್ದೇಶಿಸಿ ಅವರು ಮಾತನಾಡಿದರು.

“ನಮ್ಮ ಸಮುದಾಯಗಳನ್ನು ಒಡೆದು ಆಳುವ ಷಡ್ಯಂತ್ರ ನಡೆಯುತ್ತಿರುವುದು ನಮಗೆ ತಿಳಿದಿದೆ. ಮತಕ್ಕಾಗಿ ನಮ್ಮನ್ನು ಛಿದ್ರ ಛಿದ್ರ ಮಾಡಿದ್ದಾರೆ. ನಾವು ಯಾರ ತಟ್ಟೆಗೂ ಕೈ ಹಾಕುತ್ತಿಲ್ಲ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹಂಚಿಕೆಯಾಗಬೇಕು ಎಂಬುದು ಸಂವಿಧಾನ ಹಾಗೂ ಬಾಬಾ ಸಾಹೇಬ್‌ ಅಂಬೇಡ್ಕರರ ಆಶಯ. ಉಪಸಮಿತಿ ರಚಿಸಿರುವುದಾಗಿ ಹೇಳುತ್ತಾರೆ. ಆದರೆ ಹತ್ತು ಪರ್ಸೆಂಟ್ ಮೀಸಲಾತಿ ಜಾರಿಗೆ ಯಾವ ಉಪಸಮಿತಿ ಮಾಡಿದ್ದರು? ಯಾವ ಆಯೋಗ ಮಾಡಿದ್ದರು? ಯಾವ ವರದಿ ಪಡೆದಿದ್ದರು? ಹೇಗೆ ಇಡಬ್ಲ್ಯೂಎಸ್‌ ಜಾರಿಯಾಯಿತು?” ಎಂದು ಕೇಳಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಂವಿಧಾನ ಜಾರಿಗೊಳಿಸುವ ಜಾಗದಲ್ಲಿ ನಾವಿಲ್ಲ. ನಮ್ಮ ಪ್ರತಿನಿಧಿಗಳಾಗಿ ಹೋದವರು ಬಾಯಿ ಕಟ್ಟಿದ ನಾಯಿಗಳಾಗಿ ಕೂತಿದ್ದಾರೆ. ನಾವಿಲ್ಲಿ ಟೆಂಟ್ ಹಾಕಿಕೊಂಡು ಧಿಕ್ಕಾರ ಕೂಗುತ್ತಿದ್ದೇವೆ. ನಮ್ಮನ್ನು ಒಡೆದು ಆಳುತ್ತಿದ್ದಾರೆ. ಜಲ್ಲಿ, ಸಿಮೆಂಟ್, ಕಬ್ಬಿಣ, ನೀರು- ಎಲ್ಲವನ್ನು ಬೇರ್ಪಡಿಸಿ ಕಾಂಕ್ರೀಟ್ ಮಾಡಲು ಸಾಧ್ಯವೇ? ಜೇನು ನೊಣಗಳಂತೆ ಒಂದಾಗಿ” ಎಂದು ಸಂದೇಶ ನೀಡಿದರು.

“ಗ್ರಾಮ ಪಂಚಾಯಿತಿ ಮೆಂಬರ್‌ ಕೂಡ ಆಗಲು ಸಾಧ್ಯವಿಲ್ಲದಂತಹ ಬುಡುಬುಡಕೆ, ದೊಂಬಿದಾಸ, ಶಿಳ್ಳೆಕ್ಯಾತರಿದ್ದಾರೆ. ಅವರಿಗೆಲ್ಲರಿಗೂ ಪ್ರಾತಿನಿಧ್ಯ ಕೊಡಬೇಕು. ಆದರೆ ಮೆಜಾರಿಟಿ ಇಲ್ಲದ ಬ್ರಾಹ್ಮಣರು 127 ಮಂದಿ ಎಂಪಿಗಳನ್ನು ಹೊಂದಿದ್ದಾರೆ. ಅವರನ್ನು ಗೆದ್ದು ಕಳಿಸಿದ್ದು ಯಾರು? ನಿಮ್ಮ ಹೆಗಲ ಮೇಲೆ ಕಾಲುಗಳನ್ನು ಇಟ್ಟುಕೊಂಡು ನಿಂತಿದ್ದಾರೆ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗವೆಲ್ಲ ಅವರ ಹಿಡಿತದಲ್ಲಿವೆ. ಹೀಗಾಗಿ ಹತ್ತು ಪರ್ಸೆಂಟ್ ಮೀಸಲಾತಿ ಒಂದೇ ದಿನದಲ್ಲಿ ಮಾಡಿಕೊಳ್ಳುತ್ತಾರೆ. ಯಾಕೆಂದರೆ ಅವರ ಬಳಿ ಅಧಿಕಾರವಿದೆ. ಅಂಬೇಡ್ಕರ್‌ರವರು ಹೇಳಿದಂತೆ ಅಧಿಕಾರ ಹೀನತೆಯೇ ಅಸ್ಪೃಶ್ಯತೆ” ಎಂದು ಅಭಿಪ್ರಾಯಪಟ್ಟರು.

“ಒಂದೇ ದಿನದಲ್ಲಿ ಹತ್ತು ಪರ್ಸೆಂಟ್ ಮೀಸಲಾತಿ ಜಾರಿಗೊಳಿಸಿದಂತೆ ಒಳಮೀಸಲಾತಿ ಜಾರಿಗೊಳಿಸಿ. ಸುಗ್ರೀವಾಜ್ಞೆ ಮೂಲಕ ಜಾರಿಗೆ ತನ್ನಿರಿ. ಆಜಾದಿ ಕಾ ಅಮೃತ ಮಹೋತ್ಸವ ಎನ್ನುತ್ತಿದ್ದಾರೆ. ಯಾರಿಗೆ ಅಮೃತ? ಆರು ನಿಮಿಷಕ್ಕೊಮ್ಮೆ ದಲಿತ ಹೆಣ್ಣುಮಕ್ಕಳ ರೇಪ್ ಆಗುತ್ತಿದೆ. ಎಂಟು ನಿಮಿಷಕ್ಕೊಂದು ಗುಡಿಸಲಿಗೆ ಬೆಂಕಿ ಬೀಳುತ್ತಿದೆ, ಅರವತ್ತು ಸಾವಿರ ವಿದ್ಯಾರ್ಥಿಗಳ ಸ್ಕಾಲರ್‌ ಶಿಪ್ ಬಂದ್‌ ಆಗಿದೆ, ಏಳು ಸಾವಿರ ವಿದ್ಯಾರ್ಥಿಗಳ ಪಿಎಚ್‌.ಡಿ ಬಂದ್ ಆಗಿದೆ, ಬೈಕ್‌ ರೈಡ್ ಮಾಡಿದ್ದಕ್ಕೆ ದಲಿತ ವಿದ್ಯಾರ್ಥಿಗೆ ಕೋಲಾರದಲ್ಲಿ ಥಳಿಸಿದ್ದಾರೆ, ಇದಕ್ಕೆಲ್ಲ ಯಾರು ಉತ್ತರ ಕೊಡಬೇಕು” ಎಂದು ಮಾರ್ಮಿಕವಾಗಿ ನುಡಿದರು.

“ಜಾತಿ ಜಾತಿಗಳ ನಡುವೆ ಒಡಕುಗಳು ಬೇಡ. ಎಸ್.ಸಿ., ಎಸ್‌.ಟಿ. ಸ್ವಾಮೀಜಿಗಳು ಏಕೆ ಒಂದಾಗಬೇಕು ಎಂಬ ವಿಷಯವನ್ನಿಟ್ಟುಕೊಂಡು 31 ಜಿಲ್ಲೆಗಳಲ್ಲೂ ಹೋರಾಟ ಮಾಡುತ್ತಿದ್ದೇವೆ. ಪರಿಶಿಷ್ಟ ಜನಾಂಗದ ಸ್ವಾಮೀಜಿಗಳನ್ನೇ ಒಡೆಯಬೇಕೆಂದು ಹೊರಟಿದ್ದಾರೆ. ಒಂದಿಷ್ಟು ಸಮುದಾಯದ ಸ್ವಾಮೀಜಿಗಳನ್ನು ಎತ್ತಿಕಟ್ಟಿ ನಮ್ಮ ವಿರುದ್ಧ ಬಿಟ್ಟಿದ್ದಾರೆ. ನಾವು ಯಾರೂ ವಿಚಲಿತರಾಗಿಲ್ಲ. ನಾವು ಒಗ್ಗಟ್ಟಿನಿಂದ ಇದ್ದೇವೆ. ನಾಲ್ಕು ವಿಭಾಗೀಯ ಸಮಾವೇಶ ಮಾಡುತ್ತೇವೆ, ದಲಿತ ಮುಖಂಡರೆಲ್ಲ ಅದರಲ್ಲಿ ಪಾಲ್ಗೊಳ್ಳಿದ್ದಾರೆ” ಎಂದು ಗುಡುಗಿದರು.

ನಮ್ಮ ಪಾಲು ಕೇಳಲು ದೊಣ್ಣೆನಾಯಕನ ಅಪ್ಪಣೆ ಬೇಕಿಲ್ಲ: ಮಾವಳ್ಳಿ ಶಂಕರ್‌

ಹಿರಿಯ ದಲಿತ ಮುಖಂಡರಾದ ಮಾವಳ್ಳಿ ಶಂಕರ್‌ ಮಾತನಾಡಿ, “ಯಾರ ಪಾಲನ್ನು ನಾವು ಕಿತ್ತುಕೊಳ್ಳುತ್ತಿಲ್ಲ, ಯಾರ ಆಸ್ತಿಗೂ, ತಟ್ಟೆಗೂ ಕೈಹಾಕಿಲ್ಲ. ಹಿಂದುಳಿದ ಜಾತಿಗಳಿಗೆ ಮೀಸಲಾತಿ ವರ್ಗೀಕರಣ ಮಾಡಲು ಸಾಧ್ಯವಾದರೆ ಪರಿಶಿಷ್ಟ ಜಾತಿಯಲ್ಲಿ ಏಕೆ ಸಾಧ್ಯವಾಗುತ್ತಿಲ್ಲ? ನಮ್ಮ ಪಾಲನ್ನು ನಾವು ಕೇಳೋದಕ್ಕೆ ಯಾವುದೇ ದೊಣ್ಣೆ ನಾಯಕನ ಅಪ್ಪಣೆ ಬೇಕಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎ.ಜೆ.ಸದಾಶಿವ ಆಯೋಗದ ಜಾರಿಗಾಗಿ ನಡೆದ ಹೋರಾಟದಲ್ಲಿ ಪಾಲ್ಗೊಂಡು ಮಾವಳ್ಳಿ ಶಂಕರ್‌ ಮಾತನಾಡಿದರು.

“ಒಳಮೀಸಲಾತಿ ಕುರಿತು ಚರ್ಚೆ ಮಾಡುತ್ತಿರುವಾಗ ಖಾಸಗೀಕರಣ ಹೆಚ್ಚಾಗಿರುವುದನ್ನು ಪ್ರಸ್ತಾಪಿಸುತ್ತಾರೆ. ಅದರ ವಿರುದ್ಧ ಹೋರಾಟ ಮಾಡುವುದು ಹೇಗೆಂದು ಬಾಬಾ ಸಾಹೇಬರ ಅನುಯಾಯಿಗಳಿಗೆ ಗೊತ್ತಿದೆ. ಆದರೆ ಖಾಸಗೀಕರಣವನ್ನು ತೋರಿಸಿ, ಈ ಹೋರಾಟವನ್ನು ತಡೆಯಬಾರದು” ಎಂದು ಎಚ್ಚರಿಕೆ ನೀಡಿದರು.

“ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಗಳಲ್ಲಿ ಹೇಡಿಗಳು ಗೆದ್ದು ಬರುತ್ತಿದ್ದಾರೆ. ಅವರೆಲ್ಲ ಈ ಸಮುದಾಯವನ್ನು ಪ್ರತಿನಿಧಿಸಿ ಮೇಲ್ಜಾತಿಯ ಗುಲಾಮಗಿರಿ ಮಾಡದಿದ್ದರೆ ಒಳಮೀಸಲಾತಿ ದೊಡ್ಡ ಪ್ರಶ್ನೆಯೇ ಆಗುತ್ತಿರಲಿಲ್ಲ. ರಾಜಕೀಯ ಅಧಿಕಾರಕ್ಕಾಗಿ ಬೇರೆಯವರ ಜೀತ ಮಾಡಿದರೆ ಸಮುದಾಯ ಹಿಂದುಳಿಯುತ್ತದೆ. ಬಾಬಾ ಸಾಹೇಬರ ಆಶಯದಂತೆ ಪ್ರತ್ಯೇಕ ಮತದಾನದ ಹಕ್ಕು ನಮಗೆ ಸಿಕ್ಕಿದ್ದರೆ ನಮ್ಮ ಕಾಲ ಬುಡಕ್ಕೆ ಮೇಲ್ಜಾತಿಗಳು ಬರುತ್ತಿದ್ದವು. ಪರಿಶಿಷ್ಟ ರಾಜಕಾರಣಗಳು ಒಳಮೀಸಲಾತಿ ಪರ ಮಾತನಾಡಲು ಸಾಧ್ಯವಾಗುತ್ತಿಲ್ಲ. ದಲಿತ ರಾಜಕಾರಣಿಗಳು ಮೇಲ್ಜಾತಿಗಳ ಮರ್ಜಿಗೆ ಬಿದ್ದಿದ್ದಾರೆ” ಎಂದು ವಿಷಾದಿಸಿದರು.

ಒಳಮೀಸಲಾತಿ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ದಲಿತ ಹೋರಾಟಗಾರ ಅಂಬಣ್ಣ ಅರೋಲಿಕರ್ ಮಾತನಾಡಿ, “ಈ ಮೂವತ್ತು ವರ್ಷದ ಹೋರಾಟದಲ್ಲಿ ಹಲವಾರು ನಾಯಕರು ಸತ್ತಿದ್ದಾರೆ, ಜೈಲಿಗೆ ಹೋಗಿದ್ದಾರೆ, ನೌಕರಿ ಬಿಟ್ಟಿದ್ದಾರೆ, ಲಾಠಿ ಏಟು ತಿಂದಿದ್ದಾರೆ- ಯಾವುದೇ ಕಾರಣಕ್ಕೂ ಒಂದು ದಿನಕ್ಕೆ ಮಾತ್ರ ಹೋರಾಟ ಸೀಮಿತಗೊಳಿಸಬಾರದು ಎಂದು ಭೀಮ ಸೈನಿಕರು ಎಚ್ಚರಿಕೆ ಕೊಟ್ಟು ನಮ್ಮನ್ನು ಕಳಿಸಿದ್ದಾರೆ. ಹೀಗಾಗಿ ಹೋರಾಟ ಮುಂದುವರಿಸಿದೆ. ನವೆಂಬರ್‌ ತಿಂಗಳಿನಿಂದ ನಿರಂತರ ಹೋರಾಟ ನಡೆಯುತ್ತಿದೆ. ಡಿಸೆಂಬರ್‌ 11ರಿಂದ ಬೆಂಗಳೂರಿನಲ್ಲಿ ಹೋರಾಟ ಜರುಗಿದೆ” ಎಂದರು.

“ಒಂದು ಸಂಘಟನೆ, ಒಂದು ಸಮುದಾಯ ಈ ಹೋರಾಟದ ಮುಂದಾಳತ್ವ ವಹಿಸಿತ್ತು. ಆದರೆ ಎಲ್ಲ ಜಾತಿಗಳು ಈ ಚಳವಳಿಯ ಭಾಗವಾಗಬೇಕೆಂದು ನಿರಂತರ ಚರ್ಚೆಗಳು ನಡೆಸಿದ್ದೇವೆ. ಎಲ್ಲ ಸಮುದಾಯಗಳು ಒಳಗೊಂಡಿದ್ದರಿಂದ ನಮ್ಮ ಟೈಟಲ್‌ ಬದಲಾಗಿದೆ, ನಡೆ, ನುಡಿ, ವರ್ತನೆ ಬದಲಾಗಿದೆ. ಎಲ್ಲ ರೀತಿಯಲ್ಲೂ ನಮ್ಮ ಹೋರಾಟ ವಿಸ್ತರಣೆಯಾಗಿದೆ. ಮೂರು ಪಕ್ಷಗಳು ಮಾತನಾಡುವಂತಾಗಿದೆ. ಇದು ರಾಜಕೀಯೇತರ ಚಳವಳಿ” ಎಂದು ಸ್ಪಷ್ಟಪಡಿಸಿದರು.

ದಲಿತ ಹೋರಾಟಗಾರರಾದ ಬಿ.ಗೋಪಾಲ್ ಮಾತನಾಡಿ, “ಯಾರದೇ ಮೀಸಲಾತಿಯನ್ನು ಕಿತ್ತುಹಾಕುವ ಪ್ರಸ್ತಾವನ್ನು ಯಾರೂ ಮಾಡಿಲ್ಲ. ಮಾಡಲೂಬಾರದು” ಎಂದು ಆಶಿಸಿದರು.

ಒಳಮೀಸಲಾತಿ ಜಾರಿಗಾಗಿ ನಡೆಯುತ್ತಿರುವ ಹೋರಾಟ 30ನೇ ದಿನಕ್ಕೆ ಕಾಲಿಟ್ಟಿದೆ.

ಹೋರಾಟದಲ್ಲಿ ದಲಿತ ಮುಖಂಡರಾದ ಎನ್.ವೆಂಕಟೇಶ್, ಹೆಣ್ಣೂರು ಶ್ರೀನಿವಾಸ್, ಬಸವರಾಜ ಕೌತಾಳ್, ಮೋಹನ್ ರಾಜ್, ಹೆಣ್ಣೂರು ಲಕ್ಷ್ಮೀನಾರಾಯಣ್, ಡಿ.ಶಿವಶಂಕರ್, ಕನಕಪುರ ಬಿ.ಶಿವಣ್ಣ, ಶಿವರಾಜ ಯಕ್ಕರಕಿ, ಗುರುಮೂರ್ತಿ, ಶಿವಸುಂದರ್, ಗೌರಿ ಜನಶಕ್ತಿ, ನಾಗಮಣಿ, ಸವಿತಾ, ಹ.ರಾ.ಮಹೇಶ್, ಸೂಲಿಕುಂಟೆ ರಮೇಶ್, ಗಣೇಶ್ ಮೇತ್ರಿ, ಕಮಲಾನಗರ ಚಿಕ್ಕಣ್ಣ, ರಾಜಗೋಪಾಲ್, ಹನುಮೇಗೌಡ, ಕರಿಯಪ್ಪ ಗುಡಿಮನಿ, ವೇಣುಗೋಪಾಲ್ ಮೌರ್ಯ, ಹನುಮೇಶ್ ಗುಂಡೂರು, ಡಿಬಿಎಂ ವೆಂಕಟೇಶ್, ಕೋದಂಡರಾಮ್, ಹೆಗ್ಗನಹಳ್ಳಿ ಮೂರ್ತಿ, ಕನಕೇನಹಳ್ಳಿ ಕೃಷ್ಣ, ಡಾ.ರವಿಕುಮಾರ್ ಬಾಗಿ, ಹಾಡುಗಾರರಾದ ಕೆ.ಎನ್.ನಾಗೇಶ್, ಸಬ್ಬನಹಳ್ಳಿ ರಾಜು, ಪ್ರಶಾಂತ್ ದಾನಪ್ಪ, ಸುಧಾಕರ್, ಸಿದ್ದಯ್ಯ, ಎಲ್.ವಿ.ಸುರೇಶ್, ಮೌನೇಶ್ ದೇವತೆಗಲ್, ಮೌಲಪ್ಪ ಐಹೊಳೆ, ಹನುಮೇಶ್ ಬೇರಿ, ಎಂ.ಡೇವಿಡ್ ಸಿರವಾರ, ಎಸ್.ಎಚ್.ನಾಗೇಶ್ ಮೊದಲಾದವರು ಪಾಲ್ಗೊಂಡಿದ್ದರು.

ಇದನ್ನೂ ಓದಿರಿ: ಮಾಂಸಾಹಾರದ ಮೇಲೆ ಮತ್ತೆ ಪ್ರಹಾರ: ಮಠಾಧೀಶರ ಸಲಹೆಗಳಿಗೆ ತೀವ್ರ ವಿರೋಧ

ಲಂಬಾಣಿ, ಭೋವಿ ಸಮುದಾಯ ಬೃಹತ್‌ ಪ್ರತಿಭಟನೆ

ಭೋವಿ, ಲಂಬಾಣಿ ಮುಖಂಡರು ಮುಂಚೂಣಿಯಲ್ಲಿರುವ ‘ಕರ್ನಾಟಕ ಮೀಸಲಾತಿ ಸಂರಕ್ಷಣ ಒಕ್ಕೂಟದ ನೇತೃತ್ವ’ದಲ್ಲಿ ಅದೇ ಫ್ರೀಡಂ ಪಾರ್ಕ್‌‌ನಲ್ಲಿ ಬೃಹತ್ ಹೋರಾಟ ಜರುಗಿತು.

ಎ.ಜೆ.ಸದಾಶಿವ ಆಯೋಗದ ವರದಿಯನ್ನು ತರಾತುರಿಯಲ್ಲಿ ಕೇಂದ್ರಕ್ಕೆ ಶಿಫಾರಸ್ಸು ಮಾಡಬಾರದು ಎಂಬುದು ಒಕ್ಕೂಟದ ಆಗ್ರಹವಾಗಿತ್ತು. ಎರಡು ಭಿನ್ನ ನಿಲುವಿನ ಹೋರಾಟಗಳು ಒಂದೇ ಸ್ಥಳದಲ್ಲಿ ಜರುಗಿದ್ದರಿಂದ ಪೊಲೀಸರು ಕಟ್ಟೆಚ್ಚರ ವಹಿಸಿದ್ದರು. ಒಂದು ಸಾವಿರ ಪೊಲೀಸರು ಸ್ಥಳದಲ್ಲಿ ಜಮಾಯಿಸಿದ್ದರು. ಎ.ಜೆ.ಸದಾಶಿವ ಆಯೋಗದ ಪರ ನಡೆಯುತ್ತಿರುವ 30ನೇ ದಿನದ ಹೋರಾಟದ ಸ್ಥಳಕ್ಕೆ ಹೋಗುವವರನ್ನು ಪರಿಶೀಲಿಸಿ ಬಿಡಲಾಗುತ್ತಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈಗಾಲಾದರೂ ಸನಾತನಿ ಬ್ರಾಹ್ಮಣ್ಯದ ಎದುರು ಗಟ್ಟಿಯಾಗಿ ಮಾತಾಡುತ್ತದ್ದಾರಲ್ಲಾ?,🙏

LEAVE A REPLY

Please enter your comment!
Please enter your name here

- Advertisment -

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...

Karnataka SIR : ಇಂದು ಕರಡು ಪಟ್ಟಿ ಪ್ರಕಟ; 43.80 ಲಕ್ಷ ಮತದಾರರಿಗೆ ದಾಖಲೆ ಕೇಳಿ ನೋಟಿಸ್

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಮನೆ ಮನೆ ಗಣತಿಯ (ಎನ್ಯುಮರೇಷನ್ ಫಾರಂ ಹಂತ) ಬಳಿಕ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಇಂದು (ಆ.24, ಸೋಮವಾರ) ಪ್ರಕಟಿಸಲಿದೆ....

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...