Homeಕರ್ನಾಟಕಬುಧವಾರದಿಂದ ‘ಪ್ರಜಾಧ್ವನಿ ಯಾತ್ರೆ’ ಪ್ರಾರಂಭಿಸಲಿರುವ ರಾಜ್ಯ ಕಾಂಗ್ರೆಸ್‌‌‌

ಬುಧವಾರದಿಂದ ‘ಪ್ರಜಾಧ್ವನಿ ಯಾತ್ರೆ’ ಪ್ರಾರಂಭಿಸಲಿರುವ ರಾಜ್ಯ ಕಾಂಗ್ರೆಸ್‌‌‌

- Advertisement -
- Advertisement -

ರಾಜ್ಯ ಕಾಂಗ್ರೆಸ್‌ ತನ್ನ ಮಹತ್ವಾಕಾಂಕ್ಷೆಯ ಬಸ್‌ ಯಾತ್ರೆ ಅಭಿಯಾನವನ್ನು ಬೆಳಗಾವಿಯಲ್ಲಿ ಬುಧವಾರದಿಂದ ಪ್ರಾರಂಭಿಸುವುದಾಗಿ ಘೋಷಿಸಿದೆ. ‘ಪ್ರಜಾಧ್ವನಿ ಯಾತ್ರೆ’ ಅಭಿಯಾನದ ಲೋಗೋವನ್ನು ರಾಜ್ಯ ಕಾಂಗ್ರೆಸ್‌‌ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅನಾವರಣಗೊಳಿಸಿದರು.

ಆಡಳಿತಾರೂಢ ಬಿಜೆಪಿ ಸರ್ಕಾರದ ಆಪರೇಷನ್ ಕಮಲದ ಬಗ್ಗೆ ವಾಗ್ದಾಳಿ ನಡೆಸಿದ ಡಿ.ಕೆ. ಶಿವಕುಮಾರ್‌, ಇದು ಅನೈತಿಕ ಮತ್ತು ಸಂವಿಧಾನ ವಿರೋಧಿಯಾಗಿದೆ ಎಂದು ಹೇಳಿದ್ದಾರೆ. ಮುಂಬರುವ ಚುನಾವಣೆಯಲ್ಲಿ ರಾಜ್ಯದಿಂದ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವುದಾಗಿ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಿಜೆಪಿ ಆದ್ಯತೆ 40% ಕಮಿಷನ್ ಲೂಟಿ ಹೊಡೆಯುವುದು ಮಾತ್ರವೆ ಹೊರತು, ಕರ್ನಾಟಕದ ಪ್ರಗತಿ ಎಂದಿಗೂ ಬಿಜೆಪಿಯ ಆದ್ಯತೆಯಲ್ಲ. ಬಿಜೆಪಿ 2018ರ ಚುನಾವಣೆಯಲ್ಲಿ ನೀಡಿದ್ದ 90% ದಷ್ಟು ಭರವಸೆಗಳನ್ನು ಮರೆತು ಕೋಮುವಾದಿ ರಾಜಕೀಯ ಮತ್ತು ಪಾರ್ಶ್ವವಾಯು ನೀತಿಯತ್ತ ಗಮನ ಹರಿಸುವುದರಲ್ಲಿ ನಿರತವಾಗಿದೆ” ಎಂದು ಶಿವಕುಮಾರ್ ಆರೋಪಿಸಿದರು.

ರಾಜ್ಯದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, “ರಾಜ್ಯ ಸರ್ಕಾರದ ಭ್ರಷ್ಟಾಚಾರವನ್ನು ಹಾಗೂ ಸುಳ್ಳುಗಳನ್ನು ಬಯಲಿಗೆಳೆಯಲು ಬಸ್ ಯಾತ್ರೆ ಅಭಿಯಾನ ಹಮ್ಮಿಕೊಳ್ಳಲಾಗಿದೆ” ಎಂದು ಹೇಳಿದ್ದಾರೆ. ‘ಡಬಲ್ ಇಂಜಿನ್ ಸರ್ಕಾರದ ವಿಫಲ ನೀತಿ’ಗಳನ್ನು ಯಾತ್ರೆಗಳಲ್ಲಿ ಎತ್ತಿ ತೋರಿಸುವುದಾಗಿ ಅವರು ಹೇಳಿದ್ದಾರೆ.

ಎಲ್ಲಾ ಜಿಲ್ಲೆಗಳಲ್ಲಿ ಯಾತ್ರೆಗಳು ನಡೆಯಲಿದ್ದು, ಸಮಯದ ಅಭಾವದಿಂದಾಗಿ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನೇತೃತ್ವದ ಎರಡು ವಿಭಿನ್ನ ಗುಂಪುಗಳು ಮತ್ತು ಬಹು ಹಂತಗಳಲ್ಲಿ ಯಾತ್ರೆಗಳು ನಡೆಸಲಿವೆ ಎಂದು ಪಕ್ಷವೂ ಹೇಳಿದೆ.

ಮೊದಲ ಹಂತದ ಪ್ರಚಾರದಲ್ಲಿ ಸಿದ್ದರಾಮಯ್ಯ ಉತ್ತರಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕದಲ್ಲಿ ಹಾಗೂ ಶಿವಕುಮಾರ್ ಹಳೆ ಮೈಸೂರು ಭಾಗದಲ್ಲಿ ಯಾತ್ರೆ ಮಾಡಲಿದ್ದಾರೆ. ಎರಡನೇ ಹಂತದಲ್ಲಿ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಮತ್ತು ಉತ್ತರಕರ್ನಾಟಕದಲ್ಲಿ ಕೆಲಸ ಮಾಡಲಿದ್ದಾರೆ.

“ಪ್ರಸ್ತುತ ಬಿಜೆಪಿ ಸರ್ಕಾರದ ದ್ವೇಷ ಮತ್ತು ಸೇಡಿನ ರಾಜಕಾರಣದಿಂದ ಕನ್ನಡಿಗರು ಬೇಸತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಹಳಿತಪ್ಪಿದ್ದು, ಜನರು ಮುಕ್ತವಾಗಿ ಜೀವಿಸಲು ಸಾಧ್ಯವಾಗುತ್ತಿಲ್ಲ” ಎಂದು ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ.

ದೇಶದಲ್ಲಿ ಅತಿ ಹೆಚ್ಚು ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಕರ್ನಾಟಕ ಎರಡನೇ ಸ್ಥಾನಕ್ಕೆ ಬಂದಿರುವುದು ಬಿಜೆಪಿಯಿಂದಾಗಿ ಎಂದು ಅವರು ಕಿಡಿಕಾರಿದ್ದಾರೆ. 40% ಕಮಿಷನ್‌ ಮೇಲೆ ಬಿಜೆಪಿಯ ಕಣ್ಣು ಇದ್ದು, ಇದು ಸಾಂಕ್ರಾಮಿಕ ಸಮಯದಲ್ಲಿ 3.5 ಲಕ್ಷಕ್ಕೂ ಹೆಚ್ಚು ಕನ್ನಡಿಗರ ಸಾವಿಗೆ ಕಾರಣವಾಯಿತು ಎಂದು ಅವರು ಹೇಳಿದ್ದಾರೆ.

“40% ಕಮೀಷನ್‌ ಅಮಾಯಕ ಗುತ್ತಿಗೆದಾರರನ್ನು ಆತ್ಮಹತ್ಯೆಗೆ ತಳ್ಳಿತು. ಬಿಜೆಪಿ ಹೈಕಮಾಂಡ್ ಕೈಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೈಗೊಂಬೆಯಾಗಿದ್ದಾರೆ. ರಾಜ್ಯದ ಆಕಾಂಕ್ಷೆಗಳು ಮತ್ತು ಜನರ ಧ್ವನಿಯನ್ನು ಹತ್ತಿಕ್ಕಲಾಗಿದೆ” ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...