Homeಕರ್ನಾಟಕಬುಧವಾರದಿಂದ ‘ಪ್ರಜಾಧ್ವನಿ ಯಾತ್ರೆ’ ಪ್ರಾರಂಭಿಸಲಿರುವ ರಾಜ್ಯ ಕಾಂಗ್ರೆಸ್‌‌‌

ಬುಧವಾರದಿಂದ ‘ಪ್ರಜಾಧ್ವನಿ ಯಾತ್ರೆ’ ಪ್ರಾರಂಭಿಸಲಿರುವ ರಾಜ್ಯ ಕಾಂಗ್ರೆಸ್‌‌‌

- Advertisement -
- Advertisement -

ರಾಜ್ಯ ಕಾಂಗ್ರೆಸ್‌ ತನ್ನ ಮಹತ್ವಾಕಾಂಕ್ಷೆಯ ಬಸ್‌ ಯಾತ್ರೆ ಅಭಿಯಾನವನ್ನು ಬೆಳಗಾವಿಯಲ್ಲಿ ಬುಧವಾರದಿಂದ ಪ್ರಾರಂಭಿಸುವುದಾಗಿ ಘೋಷಿಸಿದೆ. ‘ಪ್ರಜಾಧ್ವನಿ ಯಾತ್ರೆ’ ಅಭಿಯಾನದ ಲೋಗೋವನ್ನು ರಾಜ್ಯ ಕಾಂಗ್ರೆಸ್‌‌ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅನಾವರಣಗೊಳಿಸಿದರು.

ಆಡಳಿತಾರೂಢ ಬಿಜೆಪಿ ಸರ್ಕಾರದ ಆಪರೇಷನ್ ಕಮಲದ ಬಗ್ಗೆ ವಾಗ್ದಾಳಿ ನಡೆಸಿದ ಡಿ.ಕೆ. ಶಿವಕುಮಾರ್‌, ಇದು ಅನೈತಿಕ ಮತ್ತು ಸಂವಿಧಾನ ವಿರೋಧಿಯಾಗಿದೆ ಎಂದು ಹೇಳಿದ್ದಾರೆ. ಮುಂಬರುವ ಚುನಾವಣೆಯಲ್ಲಿ ರಾಜ್ಯದಿಂದ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವುದಾಗಿ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಿಜೆಪಿ ಆದ್ಯತೆ 40% ಕಮಿಷನ್ ಲೂಟಿ ಹೊಡೆಯುವುದು ಮಾತ್ರವೆ ಹೊರತು, ಕರ್ನಾಟಕದ ಪ್ರಗತಿ ಎಂದಿಗೂ ಬಿಜೆಪಿಯ ಆದ್ಯತೆಯಲ್ಲ. ಬಿಜೆಪಿ 2018ರ ಚುನಾವಣೆಯಲ್ಲಿ ನೀಡಿದ್ದ 90% ದಷ್ಟು ಭರವಸೆಗಳನ್ನು ಮರೆತು ಕೋಮುವಾದಿ ರಾಜಕೀಯ ಮತ್ತು ಪಾರ್ಶ್ವವಾಯು ನೀತಿಯತ್ತ ಗಮನ ಹರಿಸುವುದರಲ್ಲಿ ನಿರತವಾಗಿದೆ” ಎಂದು ಶಿವಕುಮಾರ್ ಆರೋಪಿಸಿದರು.

ರಾಜ್ಯದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, “ರಾಜ್ಯ ಸರ್ಕಾರದ ಭ್ರಷ್ಟಾಚಾರವನ್ನು ಹಾಗೂ ಸುಳ್ಳುಗಳನ್ನು ಬಯಲಿಗೆಳೆಯಲು ಬಸ್ ಯಾತ್ರೆ ಅಭಿಯಾನ ಹಮ್ಮಿಕೊಳ್ಳಲಾಗಿದೆ” ಎಂದು ಹೇಳಿದ್ದಾರೆ. ‘ಡಬಲ್ ಇಂಜಿನ್ ಸರ್ಕಾರದ ವಿಫಲ ನೀತಿ’ಗಳನ್ನು ಯಾತ್ರೆಗಳಲ್ಲಿ ಎತ್ತಿ ತೋರಿಸುವುದಾಗಿ ಅವರು ಹೇಳಿದ್ದಾರೆ.

ಎಲ್ಲಾ ಜಿಲ್ಲೆಗಳಲ್ಲಿ ಯಾತ್ರೆಗಳು ನಡೆಯಲಿದ್ದು, ಸಮಯದ ಅಭಾವದಿಂದಾಗಿ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನೇತೃತ್ವದ ಎರಡು ವಿಭಿನ್ನ ಗುಂಪುಗಳು ಮತ್ತು ಬಹು ಹಂತಗಳಲ್ಲಿ ಯಾತ್ರೆಗಳು ನಡೆಸಲಿವೆ ಎಂದು ಪಕ್ಷವೂ ಹೇಳಿದೆ.

ಮೊದಲ ಹಂತದ ಪ್ರಚಾರದಲ್ಲಿ ಸಿದ್ದರಾಮಯ್ಯ ಉತ್ತರಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕದಲ್ಲಿ ಹಾಗೂ ಶಿವಕುಮಾರ್ ಹಳೆ ಮೈಸೂರು ಭಾಗದಲ್ಲಿ ಯಾತ್ರೆ ಮಾಡಲಿದ್ದಾರೆ. ಎರಡನೇ ಹಂತದಲ್ಲಿ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಮತ್ತು ಉತ್ತರಕರ್ನಾಟಕದಲ್ಲಿ ಕೆಲಸ ಮಾಡಲಿದ್ದಾರೆ.

“ಪ್ರಸ್ತುತ ಬಿಜೆಪಿ ಸರ್ಕಾರದ ದ್ವೇಷ ಮತ್ತು ಸೇಡಿನ ರಾಜಕಾರಣದಿಂದ ಕನ್ನಡಿಗರು ಬೇಸತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಹಳಿತಪ್ಪಿದ್ದು, ಜನರು ಮುಕ್ತವಾಗಿ ಜೀವಿಸಲು ಸಾಧ್ಯವಾಗುತ್ತಿಲ್ಲ” ಎಂದು ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ.

ದೇಶದಲ್ಲಿ ಅತಿ ಹೆಚ್ಚು ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಕರ್ನಾಟಕ ಎರಡನೇ ಸ್ಥಾನಕ್ಕೆ ಬಂದಿರುವುದು ಬಿಜೆಪಿಯಿಂದಾಗಿ ಎಂದು ಅವರು ಕಿಡಿಕಾರಿದ್ದಾರೆ. 40% ಕಮಿಷನ್‌ ಮೇಲೆ ಬಿಜೆಪಿಯ ಕಣ್ಣು ಇದ್ದು, ಇದು ಸಾಂಕ್ರಾಮಿಕ ಸಮಯದಲ್ಲಿ 3.5 ಲಕ್ಷಕ್ಕೂ ಹೆಚ್ಚು ಕನ್ನಡಿಗರ ಸಾವಿಗೆ ಕಾರಣವಾಯಿತು ಎಂದು ಅವರು ಹೇಳಿದ್ದಾರೆ.

“40% ಕಮೀಷನ್‌ ಅಮಾಯಕ ಗುತ್ತಿಗೆದಾರರನ್ನು ಆತ್ಮಹತ್ಯೆಗೆ ತಳ್ಳಿತು. ಬಿಜೆಪಿ ಹೈಕಮಾಂಡ್ ಕೈಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೈಗೊಂಬೆಯಾಗಿದ್ದಾರೆ. ರಾಜ್ಯದ ಆಕಾಂಕ್ಷೆಗಳು ಮತ್ತು ಜನರ ಧ್ವನಿಯನ್ನು ಹತ್ತಿಕ್ಕಲಾಗಿದೆ” ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...