Homeಕರ್ನಾಟಕಮೆಟ್ರೋ ಪಿಲ್ಲರ್‌ ಕುಸಿದು ಮಹಿಳೆ, ಮಗು ಸಾವು: 40% ಕಮಿಷನ್ ನಿದರ್ಶನವೆಂದ ಕಾಂಗ್ರೆಸ್

ಮೆಟ್ರೋ ಪಿಲ್ಲರ್‌ ಕುಸಿದು ಮಹಿಳೆ, ಮಗು ಸಾವು: 40% ಕಮಿಷನ್ ನಿದರ್ಶನವೆಂದ ಕಾಂಗ್ರೆಸ್

- Advertisement -
- Advertisement -

ಬೆಂಗಳೂರಿನ ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ ಒಂದರ ಕಬ್ಬಿಣದ ರಾಡ್‌ ಕುಸಿದು ತಾಯಿ ಹಾಗೂ ಮಗು ಮೃತಪಟ್ಟಿರುವ ದುರ್ಘಟನೆ ಜರುಗಿದೆ.

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಕಾಮಗಾರಿ ನಡೆಯುತ್ತಿರುವಾಗ ಪಿಲ್ಲರ್‌ಗೆ ನಿಲ್ಲಿಸಿದಂತಹ ರಾಡ್‌ಗಳು ಏಕಾಏಕಿ ರಸ್ತೆಗೆ ಬಿದ್ದಿವೆ. ಅದೇ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ತೇಜಸ್ವಿನಿ ಮತ್ತು ಅವರ ಪತಿ ಹಾಗೂ ಮಕ್ಕಳು ಅಪಘಾತಕ್ಕೆ ಗುರಿಯಾಗಿದ್ದಾರೆ.

ಮೃತ ತೇಜಸ್ವಿನಿ ಅವರು ಹಾಗೂ ಅವರ ಪತಿ ತಮ್ಮಿಬ್ಬರು ಅವಳಿ ಮಕ್ಕಳ ಜೊತೆಯಲ್ಲಿ ಬೈಕ್‌ನಲ್ಲಿ ಹೊರಟಿದ್ದರು. ಈ ವೇಳೆ ಪಿಲ್ಲರ್‌ ಅವರ ಬೈಕ್ ಮೇಲೆ ಬಿದ್ದಿತ್ತು. ಅವರ ಕುಟುಂಬದ ನಾಲ್ವರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಘಟನಾ ಸ್ಥಳದಲ್ಲಿ ನೆರೆದಿದ್ದ ಜನರು ಗಾಯಗೊಂಡಿದ್ದ ತಾಯಿ ಮತ್ತು ಮಗುವನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ತೇಜಸ್ವಿನಿ ಹಾಗೂ ಮಗು ವಿಹಾನ್ ಮೃತಟ್ಟಿದ್ದಾರೆ. ಒಂದು ವರ್ಷದ ಮಗು ಮತ್ತು ಲೋಹಿತ್‌ ಕುಮಾರ್ ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ.

ಸಂತ್ರಸ್ತರು ನೀಡಿದ ದೂರಿನ ಆಧಾರದ ಮೇಲೆ ಸಂಬಂಧಪಟ್ಟ ಬಿಎಂಆರ್‌ಸಿಎಲ್‌ ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಪ್ರಕರಣವನ್ನು ದಾಖಲಿಸಲಾಗುವುದು ಎಂದು ಗೋವಿಂದಪುರ ಠಾಣಾ ಪೊಲೀಸರು ತಿಳಿಸಿದ್ದಾರೆ.

“ಬೆಂಗಳೂರಿನ ನಾಗವಾರದ ಬಳಿ ಮೆಟ್ರೋ ಪಿಲ್ಲರ್ ಕುಸಿದು ಇಬ್ಬರು ಸಾವೀಗಿಡಾಗಿದ್ದು ಅತ್ಯಂತ ದುರದೃಷ್ಟಕರ ಸಂಗತಿಯಾಗಿದೆ. ಈ ಸಂಬಂಧ ಸಮಗ್ರ ತನಿಖೆ ನಡೆಸಲು ಆದೇಶಿಸಿದ್ದೇನೆ. ಮೃತರ ಕುಟುಂಬಕ್ಕೆ ಮೆಟ್ರೋ ಸಂಸ್ಥೆ ನೀಡುವ ಪರಿಹಾರದ ಜೊತೆ, ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಸಹ ಪರಿಹಾರ ನೀಡಲಾಗುವುದು” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇದು 40% ಕಮಿಷನ್ ನಿದರ್ಶನವೆಂದ ಕಾಂಗ್ರೆಸ್

ನಿರ್ಮಾಣ ಹಂತದಲ್ಲಿರುವ ಮೆಟ್ರೋ ಪಿಲ್ಲರ್ ಉರುಳಿ ಬಿದ್ದಿದ್ದು ಬಿಜೆಪಿ ಸರ್ಕಾರದ 40% ಕಮಿಷನ್ ಭ್ರಷ್ಟಾಚಾರ ಸಾರ್ವವ್ಯಾಪಿಯಾಗಿರುವುದಕ್ಕೆ ನಿದರ್ಶನ. ಬಿಜೆಪಿಯ ಭ್ರಷ್ಟಾಚಾರಕ್ಕೆ ಮತ್ತೆರಡು ಜೀವಗಳು ಬಲಿಯಾಗಿವೆ. ಬಸವರಾಜ ಬೊಮ್ಮಾಯಿಯವರೆ ಮೆಟ್ರೋ ಪಿಲ್ಲರ್‌ಗಳು ನಿರ್ಮಾಣದಲ್ಲೇ ಕುಸಿಯುತ್ತವೆ ಎಂದಾದರೆ ಮುಂದೆ ಜನತೆ ಧೈರ್ಯವಾಗಿ ಓಡಾಡಬಹುದೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಬಿಜೆಪಿಯ ಕಮಿಷನ್ ಲೂಟಿಯ ಕಾರಣದಿಂದ ಉಂಟಾದ ಮೆಟ್ರೋ ಪಿಲ್ಲರ್ ಕುಸಿತದ ಘಟನೆಯಿಂದ ಬೆಂಗಳೂರಿನ ಗೌರವ ಮಣ್ಣುಪಾಲಾಗಿದೆ. ಬೆಂಗಳೂರಿನ ಘನತೆಯ ಕಿರಿಟಕ್ಕೆ ಗರಿಯಾಗಿದ್ದ ಮೆಟ್ರೋಗೆ ಬಿಜೆಪಿಯ ಭ್ರಷ್ಟಾಚಾರ ಮಸಿ ಬಳಿದಿದೆ. ಕಮಿಷನ್ ಲೂಟಿಗೆ ಇದು ಸಾಕ್ಷಿಯಲ್ಲವೇ ಬೊಮ್ಮಾಯಿಯವರೆ ತಾಯಿ, ಮಗುವಿನ ಸಾವು ಸರ್ಕಾರ ನಡೆಸಿದ ಕೊಲೆಯಲ್ಲವೇ? ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಮೆಟ್ರೋ ಪಿಲ್ಲರ್ ಕುಸಿತಕ್ಕೆ, ಬಿಜೆಪಿಯ ಭ್ರಷ್ಟಾಚಾರಕ್ಕೆ ಬಲಿಯಾದ ತಾಯಿ, ಮಗುವಿನ ಸಾವು ಆಕಸ್ಮಿಕವಲ್ಲ, ಅದು ‘ಸರ್ಕಾರಿ ಕೊಲೆ’. ಮೃತರ ಕುಟುಂಬಕ್ಕೆ ಸರ್ಕಾರ 50 ಲಕ್ಷ ಪರಿಹಾರ ನೀಡಬೇಕು. ವೈಯುಕ್ತಿಕ ವೈಷಮ್ಯಕ್ಕೆ ಕೊಲೆಯಾದವರ ಮನೆಗೆ ಹೋಗಿ ಪರಿಹಾರ ನೀಡುವ ಸಿಎಂ ಬೊಮ್ಮಾಯಿಯವರು ಈ ವಿಚಾರದಲ್ಲಿ ಕುರುಡಾಗಿರುವುದೇಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇದನ್ನೂ ಓದಿ: ಮುಸ್ಲಿಂ ಯುವತಿಗೆ ಕಿರುಕುಳ ಕೊಡುತ್ತಿದ್ದ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆಗೆ ಯತ್ನ: ಸಾಗರ ಬಂದ್‌ಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...