Homeಕರ್ನಾಟಕಮೆಟ್ರೋ ಪಿಲ್ಲರ್‌ ಕುಸಿದು ಮಹಿಳೆ, ಮಗು ಸಾವು: 40% ಕಮಿಷನ್ ನಿದರ್ಶನವೆಂದ ಕಾಂಗ್ರೆಸ್

ಮೆಟ್ರೋ ಪಿಲ್ಲರ್‌ ಕುಸಿದು ಮಹಿಳೆ, ಮಗು ಸಾವು: 40% ಕಮಿಷನ್ ನಿದರ್ಶನವೆಂದ ಕಾಂಗ್ರೆಸ್

- Advertisement -
- Advertisement -

ಬೆಂಗಳೂರಿನ ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ ಒಂದರ ಕಬ್ಬಿಣದ ರಾಡ್‌ ಕುಸಿದು ತಾಯಿ ಹಾಗೂ ಮಗು ಮೃತಪಟ್ಟಿರುವ ದುರ್ಘಟನೆ ಜರುಗಿದೆ.

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಕಾಮಗಾರಿ ನಡೆಯುತ್ತಿರುವಾಗ ಪಿಲ್ಲರ್‌ಗೆ ನಿಲ್ಲಿಸಿದಂತಹ ರಾಡ್‌ಗಳು ಏಕಾಏಕಿ ರಸ್ತೆಗೆ ಬಿದ್ದಿವೆ. ಅದೇ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ತೇಜಸ್ವಿನಿ ಮತ್ತು ಅವರ ಪತಿ ಹಾಗೂ ಮಕ್ಕಳು ಅಪಘಾತಕ್ಕೆ ಗುರಿಯಾಗಿದ್ದಾರೆ.

ಮೃತ ತೇಜಸ್ವಿನಿ ಅವರು ಹಾಗೂ ಅವರ ಪತಿ ತಮ್ಮಿಬ್ಬರು ಅವಳಿ ಮಕ್ಕಳ ಜೊತೆಯಲ್ಲಿ ಬೈಕ್‌ನಲ್ಲಿ ಹೊರಟಿದ್ದರು. ಈ ವೇಳೆ ಪಿಲ್ಲರ್‌ ಅವರ ಬೈಕ್ ಮೇಲೆ ಬಿದ್ದಿತ್ತು. ಅವರ ಕುಟುಂಬದ ನಾಲ್ವರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಘಟನಾ ಸ್ಥಳದಲ್ಲಿ ನೆರೆದಿದ್ದ ಜನರು ಗಾಯಗೊಂಡಿದ್ದ ತಾಯಿ ಮತ್ತು ಮಗುವನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ತೇಜಸ್ವಿನಿ ಹಾಗೂ ಮಗು ವಿಹಾನ್ ಮೃತಟ್ಟಿದ್ದಾರೆ. ಒಂದು ವರ್ಷದ ಮಗು ಮತ್ತು ಲೋಹಿತ್‌ ಕುಮಾರ್ ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ.

ಸಂತ್ರಸ್ತರು ನೀಡಿದ ದೂರಿನ ಆಧಾರದ ಮೇಲೆ ಸಂಬಂಧಪಟ್ಟ ಬಿಎಂಆರ್‌ಸಿಎಲ್‌ ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಪ್ರಕರಣವನ್ನು ದಾಖಲಿಸಲಾಗುವುದು ಎಂದು ಗೋವಿಂದಪುರ ಠಾಣಾ ಪೊಲೀಸರು ತಿಳಿಸಿದ್ದಾರೆ.

“ಬೆಂಗಳೂರಿನ ನಾಗವಾರದ ಬಳಿ ಮೆಟ್ರೋ ಪಿಲ್ಲರ್ ಕುಸಿದು ಇಬ್ಬರು ಸಾವೀಗಿಡಾಗಿದ್ದು ಅತ್ಯಂತ ದುರದೃಷ್ಟಕರ ಸಂಗತಿಯಾಗಿದೆ. ಈ ಸಂಬಂಧ ಸಮಗ್ರ ತನಿಖೆ ನಡೆಸಲು ಆದೇಶಿಸಿದ್ದೇನೆ. ಮೃತರ ಕುಟುಂಬಕ್ಕೆ ಮೆಟ್ರೋ ಸಂಸ್ಥೆ ನೀಡುವ ಪರಿಹಾರದ ಜೊತೆ, ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಸಹ ಪರಿಹಾರ ನೀಡಲಾಗುವುದು” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇದು 40% ಕಮಿಷನ್ ನಿದರ್ಶನವೆಂದ ಕಾಂಗ್ರೆಸ್

ನಿರ್ಮಾಣ ಹಂತದಲ್ಲಿರುವ ಮೆಟ್ರೋ ಪಿಲ್ಲರ್ ಉರುಳಿ ಬಿದ್ದಿದ್ದು ಬಿಜೆಪಿ ಸರ್ಕಾರದ 40% ಕಮಿಷನ್ ಭ್ರಷ್ಟಾಚಾರ ಸಾರ್ವವ್ಯಾಪಿಯಾಗಿರುವುದಕ್ಕೆ ನಿದರ್ಶನ. ಬಿಜೆಪಿಯ ಭ್ರಷ್ಟಾಚಾರಕ್ಕೆ ಮತ್ತೆರಡು ಜೀವಗಳು ಬಲಿಯಾಗಿವೆ. ಬಸವರಾಜ ಬೊಮ್ಮಾಯಿಯವರೆ ಮೆಟ್ರೋ ಪಿಲ್ಲರ್‌ಗಳು ನಿರ್ಮಾಣದಲ್ಲೇ ಕುಸಿಯುತ್ತವೆ ಎಂದಾದರೆ ಮುಂದೆ ಜನತೆ ಧೈರ್ಯವಾಗಿ ಓಡಾಡಬಹುದೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಬಿಜೆಪಿಯ ಕಮಿಷನ್ ಲೂಟಿಯ ಕಾರಣದಿಂದ ಉಂಟಾದ ಮೆಟ್ರೋ ಪಿಲ್ಲರ್ ಕುಸಿತದ ಘಟನೆಯಿಂದ ಬೆಂಗಳೂರಿನ ಗೌರವ ಮಣ್ಣುಪಾಲಾಗಿದೆ. ಬೆಂಗಳೂರಿನ ಘನತೆಯ ಕಿರಿಟಕ್ಕೆ ಗರಿಯಾಗಿದ್ದ ಮೆಟ್ರೋಗೆ ಬಿಜೆಪಿಯ ಭ್ರಷ್ಟಾಚಾರ ಮಸಿ ಬಳಿದಿದೆ. ಕಮಿಷನ್ ಲೂಟಿಗೆ ಇದು ಸಾಕ್ಷಿಯಲ್ಲವೇ ಬೊಮ್ಮಾಯಿಯವರೆ ತಾಯಿ, ಮಗುವಿನ ಸಾವು ಸರ್ಕಾರ ನಡೆಸಿದ ಕೊಲೆಯಲ್ಲವೇ? ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಮೆಟ್ರೋ ಪಿಲ್ಲರ್ ಕುಸಿತಕ್ಕೆ, ಬಿಜೆಪಿಯ ಭ್ರಷ್ಟಾಚಾರಕ್ಕೆ ಬಲಿಯಾದ ತಾಯಿ, ಮಗುವಿನ ಸಾವು ಆಕಸ್ಮಿಕವಲ್ಲ, ಅದು ‘ಸರ್ಕಾರಿ ಕೊಲೆ’. ಮೃತರ ಕುಟುಂಬಕ್ಕೆ ಸರ್ಕಾರ 50 ಲಕ್ಷ ಪರಿಹಾರ ನೀಡಬೇಕು. ವೈಯುಕ್ತಿಕ ವೈಷಮ್ಯಕ್ಕೆ ಕೊಲೆಯಾದವರ ಮನೆಗೆ ಹೋಗಿ ಪರಿಹಾರ ನೀಡುವ ಸಿಎಂ ಬೊಮ್ಮಾಯಿಯವರು ಈ ವಿಚಾರದಲ್ಲಿ ಕುರುಡಾಗಿರುವುದೇಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇದನ್ನೂ ಓದಿ: ಮುಸ್ಲಿಂ ಯುವತಿಗೆ ಕಿರುಕುಳ ಕೊಡುತ್ತಿದ್ದ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆಗೆ ಯತ್ನ: ಸಾಗರ ಬಂದ್‌ಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...