Homeರಾಜಕೀಯರಾಜ್ಯದಲ್ಲಿ EWS ಮೀಸಲಾತಿ ಜಾರಿಗೊಳಿಸುವುದಿಲ್ಲ: ತಮಿಳುನಾಡು ಸರ್ಕಾರ

ರಾಜ್ಯದಲ್ಲಿ EWS ಮೀಸಲಾತಿ ಜಾರಿಗೊಳಿಸುವುದಿಲ್ಲ: ತಮಿಳುನಾಡು ಸರ್ಕಾರ

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಆರ್ಥಿಕವಾಗಿ ದುರ್ಬಲ ವರ್ಗದ (ಇಡಬ್ಲ್ಯುಎಸ್) 10% ಕೋಟಾ ಸಾಮಾಜಿಕ ನ್ಯಾಯದ ಆದರ್ಶಗಳಿಗೆ ವಿರುದ್ಧವಾಗಿದ್ದು, ಹಾಗಾಗಿ ತಮಿಳುನಾಡಿನಲ್ಲಿ ಅದನ್ನು ಜಾರಿಗೊಳಿಸಲಾಗುವುದಿಲ್ಲ ಎಂದು ತಮಿಳುನಾಡು ಸರ್ಕಾರ ಹೇಳಿದೆ. ರಾಜ್ಯದಲ್ಲಿ ಪ್ರಸ್ತುತ ಇರುವ 69% ಮೀಸಲಾತಿ ನೀತಿಯನ್ನು ಮುಂದುವರಿಸಲು ರಾಜ್ಯವು ಬದ್ದವಾಗಿದೆ ಎಂದು ಸರ್ಕಾರವು ಸೋಮವಾರ ಸ್ಪಷ್ಟವಾಗಿ ಹೇಳಿದೆ.

“ರಾಜ್ಯದಲ್ಲಿ ಸಾಮಾಜಿಕ ನ್ಯಾಯವನ್ನು ಮತ್ತಷ್ಟು ಹೆಚ್ಚಿಸಲು ಮತ್ತು ಸಾಮಾಜಿಕವಾಗಿ ಹಿಂದುಳಿದ ವರ್ಗಗಳ ಪ್ರಗತಿಯನ್ನು ಖಚಿತಪಡಿಸಿಕೊಳ್ಳಲು ತಮಿಳುನಾಡು ವಿಶಿಷ್ಟವಾದ ಮೀಸಲಾತಿ ವ್ಯವಸ್ಥೆಯನ್ನು ಅಳವಡಿಸಿಕೊಂಡಿದೆ. ಈ ಸರ್ಕಾರವು ರಾಜ್ಯದಲ್ಲಿ ಪ್ರಸ್ತುತ ಮೀಸಲಾತಿ ನೀತಿಯನ್ನು ಮುಂದುವರಿಸಲು ದೃಡವಾಗಿ ನಿಂತಿದ್ದು, ಏಕೆಂದರೆ EWS ಗೆ 10% ಕೋಟಾವು ಸಾಮಾಜಿಕ ನ್ಯಾಯದ ಆದರ್ಶಗಳಿಗೆ ವಿರುದ್ಧವಾಗಿದೆ’’ ಎಂದು ವಿಧಾನಸಭೆಯಲ್ಲಿ ಮಂಡಿಸಿದ ರಾಜ್ಯಪಾಲ ಆರ್.ಎನ್. ರವಿ ಭಾಷಣದ ಪಠ್ಯದಲ್ಲಿ ಹೇಳಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2022ರ ನವೆಂಬರ್‌ನಲ್ಲಿ ಸುಪ್ರೀಂಕೋರ್ಟ್ EWS ಗೆ ನೀಡಿದ್ದ 10% ಮೀಸಲಾತಿಯ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿದಿದೆ. 2022 ರಲ್ಲಿ ಒಕ್ಕೂಟ ಸರ್ಕಾರವು ಇಡಬ್ಲ್ಯೂಎಸ್ ಮೀಸಲಾತಿಗಳನ್ನು ಜಾರಿಗೆ ತರಬೇಕೆ ಅಥವಾ ಬೇಡವೇ ಎಂಬುದು ರಾಜ್ಯಗಳ ಹಕ್ಕು ಎಂದು ಹೇಳಿತ್ತು.

ಈ ನಡುವೆ ಆಡಳಿತರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಮತ್ತು ಅವರ ಮಿತ್ರಪಕ್ಷಗಳು ಇಡಬ್ಲ್ಯೂಎಸ್ ಮೀಸಲಾತಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ತಮಿಳುನಾಡಿನಲ್ಲಿ ಅದನ್ನು ಜಾರಿಗೊಳಿಸುವುದಿಲ್ಲ ಎಂದು ಹೇಳಿವೆ.

ಸುಪ್ರೀಕೋರ್ಟ್‌ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ್ದ ಡಿಎಂಕೆ ಸಂಸದ ಪಿ. ವಿಲ್ಸನ್, “ಕೇವಲ ಆರ್ಥಿಕ ಮಾನದಂಡಗಳ ಆಧಾರದ ಮೇಲೆ ಮೀಸಲಾತಿಯನ್ನು ಎತ್ತಿಹಿಡಿಯುವ ತೀರ್ಪು ಮೀಸಲಾತಿಯ ಮೇಲಿನ ಈ ಹಿಂದಿನ ಪೂರ್ವನಿದರ್ಶನಗಳನ್ನು ಅಲ್ಲಗೆಳೆದಿದೆ” ಎಂದು ಹೇಳಿದ್ದರು.

ಸುಪ್ರೀಂಕೋರ್ಟ್‌ ತೀರ್ಪು ನೀಡುತ್ತಿದ್ದಂತೆ ಅದರ ಬಗ್ಗೆ ಪ್ರತಿಕ್ರಿಯಿಸಿದ್ದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಇಡಬ್ಲ್ಯೂಎಸ್ ಬೆಳವಣಿಗೆಯು ಸಾಮಾಜಿಕ ನ್ಯಾಯದ ಶತಮಾನಗಳಷ್ಟು ಹಳೆಯದಾದ ಹೋರಾಟಕ್ಕೆ ಹಿನ್ನಡೆ ಎಂದು ಹೇಳಿದ್ದರು. ಅಲ್ಲದೆ, ರಾಜ್ಯದ ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಇತರ ಸಂಘಟನೆಗಳು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಲು ಕೈಜೋಡಿಸಬೇಕೆಂದು ಅವರು ಕರೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...