Homeಕರ್ನಾಟಕಅಗ್ನಿ ಶ್ರೀಧರ್ ಅಧ್ಯಕ್ಷತೆಯಲ್ಲಿ ನಾಳೆ ರಾಷ್ಟ್ರೀಯ ದ್ರಾವಿಡ ಸಂಘ ಉದ್ಘಾಟನೆ

ಅಗ್ನಿ ಶ್ರೀಧರ್ ಅಧ್ಯಕ್ಷತೆಯಲ್ಲಿ ನಾಳೆ ರಾಷ್ಟ್ರೀಯ ದ್ರಾವಿಡ ಸಂಘ ಉದ್ಘಾಟನೆ

ಕಾಂಗ್ರೆಸ್ ನಾಯಕರಾದ ಸತೀಶ್ ಜಾರಕಿಹೊಳಿಯವರು ಸಂಘವನ್ನು ಉದ್ಘಾಟಿಸಲಿದ್ದಾರೆ

- Advertisement -
- Advertisement -

ಹೋರಾಟಗಾರ ಅಗ್ನಿ ಶ್ರೀಧರ್ ಅಧ್ಯಕ್ಷತೆಯಲ್ಲಿ ಜನವರಿ 12ರಂದು ರಾಷ್ಟ್ರೀಯ ದ್ರಾವಿಡ ಸಂಘ ಉದ್ಘಾಟನೆ ಮಾಡಲಾಗುತ್ತಿದೆ. ಕಾಂಗ್ರೆಸ್ ನಾಯಕ, ಮಾಜಿ ಸಚಿವ ಸತೀಶ್ ಜಾರಕಿಹೊಳಿಯವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಬೆಂಗಳೂರಿನ ಮಹಾರಾಣಿ ಕಾಲೇಜು ಪಕ್ಕದ ಭಾರತ್ ಸ್ಕೌಟ್‌ ಮತ್ತು ಗೈಡ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಚಿಂತಕರಾದ ಬಂಜಗೆರೆ ಜಯಪ್ರಕಾಶ್ ಪ್ರಸ್ತಾವಿಕವಾಗಿ ಮಾತನಾಡಲಿದ್ದಾರೆ. ಜಾಗತಿಕ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಕಾರ್ಯದರ್ಶಿ ಜಿ.ಬಿ.ಪಾಟೀಲ್, ಚಿತ್ರ ಸಾಹಿತಿ ಕವಿರಾಜ್‌, ಕ್ರಿಕೆಟ್‌ ಪಟು ವೇದ ಕೃಷ್ಣಮೂರ್ತಿ ಅತಿಥಿಗಳಾಗಿ ಪಾಲ್ಗೊಳ್ಳುತ್ತಿದ್ದಾರೆ.

“ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ನಾಡಿನಲ್ಲಿ ಹಿಂದಿ ಹೇರಿಕೆ, ಆರ್ಯ ಸಂಸ್ಕೃತಿಯ ಪ್ರಭಾವ ಹೆಚ್ಚಾಗಿದೆ. ಇದರಿಂದ ಕನ್ನಡ ಭಾಷೆಯ ಜೊತೆಗೆ ಈ ನೆಲದ ಸಂಸ್ಕೃತಿಯು ಅಳಿದುಹೋಗುತ್ತಿದೆ ಎನ್ನುವ ಕಾರಣಕ್ಕೆ ಸಂಘವನ್ನು ತೆರೆಯಲಾಗುತ್ತಿದೆ” ಎಂದು ಸಂಘಟಕರು ತಿಳಿಸಿದ್ದಾರೆ.

“ಇಂದು ನಾವು ಸಂದಿಗ್ಧ ಪರಿಸ್ಥಿತಿಯಲ್ಲಿದ್ದೇವೆ. ದೇಶ ಸಾಗುತ್ತಿರುವ ಹಾದಿ ಯಾರಲ್ಲೂ ಭರವಸೆ ಮೂಡಿಸಿಲ್ಲ. ಆರ್‌ಎಸ್ಎಸ್ ಎನ್ನುವ ರಾಷ್ಟ್ರೀಯ ಸನಾತನ ಸಂಘ ನಮ್ಮನ್ನೆಲ್ಲಾ ಶಾಶ್ವತವಾಗಿ ಗುಲಾಮಗಿರಿಗೆ ದೂಡುತ್ತಿದೆ. ಈ ನೆಲದ ಜನರ ಜೀವನ ಶೈಲಿಯನ್ನೇ ಬದಲಾಯಿಸುತ್ತಿದೆ. ಧರ್ಮದ ಹೆಸರಿನಲ್ಲಿ ಜಾತೀಯತೆಯನ್ನು ಜೀವಂತವಾಗಿಡುವ ಪ್ರಯತ್ನ ನಡೆಸುತ್ತಿದೆ. ದ್ರಾವಿಡರ ಆಹಾರ ಸಂಸ್ಕೃತಿಯನ್ನು ಹಾಳುಗೆಡವಲು ಮೇಲು-ಕೀಳು ಎನ್ನುವ ವಿಚಾರವನ್ನು ಜನರ ಮನಸ್ಸಿನಲ್ಲಿ ತುಂಬಲಾಗುತ್ತಿದೆ” ಎಂದಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ‘ನಾವು ದ್ರಾವಿಡ ಕನ್ನಡಿಗರು’ ಚಳವಳಿಯ ಅಭಿಗೌಡ ಹನಕೆರೆಯವರು, “ಸರ್ಕಾರ ಕೂಡ ಆರ್‌ಎಸ್‌ಎಸ್‌ನ ಅಣತಿಯಂತೆ ಕೆಲಸ ಮಾಡುತ್ತಿದೆ. ಶಾಲಾ ಗೋಡೆಗೆ ಕೇಸರಿ ಬಣ್ಣ ಬಳಿಯುತ್ತದೆ. ಶಾಲೆಯಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ವಿಚಾರದಲ್ಲೂ ಕೇವಲ ಸಸ್ಯಾಹಾರವನ್ನೇ ನೀಡಬೇಕು ಎನ್ನುವ ನೀತಿ ತರಲಾಗುತ್ತಿದೆ. ಇವೆಲ್ಲಾ ನಮ್ಮ ದ್ರಾವಿಡ ಸಂಸ್ಕೃತಿಯನ್ನು ನಾಶಪಡಿಸುವ ಹುನ್ನಾರವಾಗಿದೆ” ಎಂದು ಕಿಡಿಕಾರಿದರು.

No photo description available.
‘ನಾವು ದ್ರಾವಿಡ ಕನ್ನಡಿಗರು’ ಚಳವಳಿಯ ಅಭಿಗೌಡ ಹನಕೆರೆ

ಇದನ್ನೂ ಓದಿರಿ: ಕಾಂತಾರವಷ್ಟೇ ಅಲ್ಲ, ನಿಮ್ಮ ಸಿನಿಮಾವೂ ಆಸ್ಕರ್‌ಗೆ ಅರ್ಹತೆ ಪಡೆಯಬಹುದು: ಷರತ್ತುಗಳು ಅನ್ವಯ!

“ಈ ಸಂಘಟನೆಯ ಮುಖ್ಯ ಉದ್ದೇಶ ಯಾರನ್ನೋ ವಿರೋಧಿಸುವುದಲ್ಲ. ನಮ್ಮ ನೆಲದ ಸಂಸ್ಕೃತಿಯನ್ನು ಉಳಿಸುವುದು ಹಾಗೂ ಬೆಳೆಸುವುದಾಗಿದೆ. ಎಲ್ಲರೂ ಸಮಾನವಾಗಿ ಬದುಕಬೇಕು ಎನ್ನುವುದು ದ್ರಾವಿಡ ತತ್ವ ಸಿದ್ಧಾಂತವಾಗಿದೆ. ಈ ಸಿದ್ದಾಂತದಲ್ಲಿ ಮೇಲು-ಕೀಳುಗಳಿಲ್ಲ, ರಾಜಸೇವಕನಿಲ್ಲ, ಎಲ್ಲರೂ ಪ್ರಜೆಗಳೇ ಆಗಿದ್ದು, ಎಲ್ಲರಿಗೂ ಮಾನ್ಯತೆ ನೀಡಬೇಕು. ಧರ್ಮ-ಜಾತಿ ಹೆಸರಿನಲ್ಲಿ ನಮ್ಮನ್ನು ಮಾನಸಿಕವಾಗಿ ದಿಕ್ಕು ತಪ್ಪಿಸಿ, ನಮ್ಮೊಳಗೆ ಅಸೂಯೆ, ದ್ವೇಷ ಬಿತ್ತಲಾಗುತ್ತಿದೆ. ನಾವು ಅದನ್ನು ತಡೆಯಬೇಕಿದೆ. ಹಾಗಾಗಿ ದ್ರಾವಿಡ ಸಂಘ ಹುಟ್ಟುಹಾಕುತ್ತಿದ್ದೇವೆ” ಎಂದು ವಿವರಿಸಿದರು.

“ಈ ದ್ರಾವಿಡ ಸಂಘ ಕುರುಡು ಭಕ್ತರಿಗಲ್ಲ; ತೆರೆದ ಮನಸ್ಸಿನವರಿಗೆ, ಪ್ರಬುದ್ಧರಿಗೆ, ಅಬಲೆಯರಿಗಾಗಿ ಸಂಘಟಿಸಲಾಗುತ್ತಿದೆ. ದ್ರಾವಿಡ ಸಂಸ್ಕೃತಿ ಒಂದು ಮಹಾ ಸಮುದ್ರ. ಅದಕ್ಕೆ ಅಂಟಿಕೊಂಡು ಬಂದಿರುವ ಒಂದು ಉಪ ನದಿ, ಹಿನ್ನೀರು ಈ ಆರ್ಯ ಧರ್ಮ. ದುರಂತವೆಂದರೆ ಈ ಆರ್ಯ ಧರ್ಮ ಇಡೀ ಕಡಲನ್ನೇ ವಿಷಮಗೊಳಿಸುತ್ತಿದೆ. ಇಂದು ನಾವೆಲ್ಲರೂ ಸೇರಿ ಆ ಕಡಲನ್ನು ವಿಷಮುಕ್ತ ಮಾಡಬೇಕಿದೆ. ನಮ್ಮ ದ್ರಾವಿಡ ಸಂಸ್ಕೃತಿಯನ್ನು ಮುನ್ನೆಲೆಗೆ ತರಬೇಕಿದೆ. ಹಾಗಾಗಿ ಈ ದ್ರಾವಿಡ ಸಂಘದ ಜೊತೆ ಕೈ ಜೋಡಿಸಿ” ಎಂದು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...