Homeಕರ್ನಾಟಕಅಗ್ನಿ ಶ್ರೀಧರ್ ಅಧ್ಯಕ್ಷತೆಯಲ್ಲಿ ನಾಳೆ ರಾಷ್ಟ್ರೀಯ ದ್ರಾವಿಡ ಸಂಘ ಉದ್ಘಾಟನೆ

ಅಗ್ನಿ ಶ್ರೀಧರ್ ಅಧ್ಯಕ್ಷತೆಯಲ್ಲಿ ನಾಳೆ ರಾಷ್ಟ್ರೀಯ ದ್ರಾವಿಡ ಸಂಘ ಉದ್ಘಾಟನೆ

ಕಾಂಗ್ರೆಸ್ ನಾಯಕರಾದ ಸತೀಶ್ ಜಾರಕಿಹೊಳಿಯವರು ಸಂಘವನ್ನು ಉದ್ಘಾಟಿಸಲಿದ್ದಾರೆ

- Advertisement -
- Advertisement -

ಹೋರಾಟಗಾರ ಅಗ್ನಿ ಶ್ರೀಧರ್ ಅಧ್ಯಕ್ಷತೆಯಲ್ಲಿ ಜನವರಿ 12ರಂದು ರಾಷ್ಟ್ರೀಯ ದ್ರಾವಿಡ ಸಂಘ ಉದ್ಘಾಟನೆ ಮಾಡಲಾಗುತ್ತಿದೆ. ಕಾಂಗ್ರೆಸ್ ನಾಯಕ, ಮಾಜಿ ಸಚಿವ ಸತೀಶ್ ಜಾರಕಿಹೊಳಿಯವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಬೆಂಗಳೂರಿನ ಮಹಾರಾಣಿ ಕಾಲೇಜು ಪಕ್ಕದ ಭಾರತ್ ಸ್ಕೌಟ್‌ ಮತ್ತು ಗೈಡ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಚಿಂತಕರಾದ ಬಂಜಗೆರೆ ಜಯಪ್ರಕಾಶ್ ಪ್ರಸ್ತಾವಿಕವಾಗಿ ಮಾತನಾಡಲಿದ್ದಾರೆ. ಜಾಗತಿಕ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಕಾರ್ಯದರ್ಶಿ ಜಿ.ಬಿ.ಪಾಟೀಲ್, ಚಿತ್ರ ಸಾಹಿತಿ ಕವಿರಾಜ್‌, ಕ್ರಿಕೆಟ್‌ ಪಟು ವೇದ ಕೃಷ್ಣಮೂರ್ತಿ ಅತಿಥಿಗಳಾಗಿ ಪಾಲ್ಗೊಳ್ಳುತ್ತಿದ್ದಾರೆ.

“ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ನಾಡಿನಲ್ಲಿ ಹಿಂದಿ ಹೇರಿಕೆ, ಆರ್ಯ ಸಂಸ್ಕೃತಿಯ ಪ್ರಭಾವ ಹೆಚ್ಚಾಗಿದೆ. ಇದರಿಂದ ಕನ್ನಡ ಭಾಷೆಯ ಜೊತೆಗೆ ಈ ನೆಲದ ಸಂಸ್ಕೃತಿಯು ಅಳಿದುಹೋಗುತ್ತಿದೆ ಎನ್ನುವ ಕಾರಣಕ್ಕೆ ಸಂಘವನ್ನು ತೆರೆಯಲಾಗುತ್ತಿದೆ” ಎಂದು ಸಂಘಟಕರು ತಿಳಿಸಿದ್ದಾರೆ.

“ಇಂದು ನಾವು ಸಂದಿಗ್ಧ ಪರಿಸ್ಥಿತಿಯಲ್ಲಿದ್ದೇವೆ. ದೇಶ ಸಾಗುತ್ತಿರುವ ಹಾದಿ ಯಾರಲ್ಲೂ ಭರವಸೆ ಮೂಡಿಸಿಲ್ಲ. ಆರ್‌ಎಸ್ಎಸ್ ಎನ್ನುವ ರಾಷ್ಟ್ರೀಯ ಸನಾತನ ಸಂಘ ನಮ್ಮನ್ನೆಲ್ಲಾ ಶಾಶ್ವತವಾಗಿ ಗುಲಾಮಗಿರಿಗೆ ದೂಡುತ್ತಿದೆ. ಈ ನೆಲದ ಜನರ ಜೀವನ ಶೈಲಿಯನ್ನೇ ಬದಲಾಯಿಸುತ್ತಿದೆ. ಧರ್ಮದ ಹೆಸರಿನಲ್ಲಿ ಜಾತೀಯತೆಯನ್ನು ಜೀವಂತವಾಗಿಡುವ ಪ್ರಯತ್ನ ನಡೆಸುತ್ತಿದೆ. ದ್ರಾವಿಡರ ಆಹಾರ ಸಂಸ್ಕೃತಿಯನ್ನು ಹಾಳುಗೆಡವಲು ಮೇಲು-ಕೀಳು ಎನ್ನುವ ವಿಚಾರವನ್ನು ಜನರ ಮನಸ್ಸಿನಲ್ಲಿ ತುಂಬಲಾಗುತ್ತಿದೆ” ಎಂದಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ‘ನಾವು ದ್ರಾವಿಡ ಕನ್ನಡಿಗರು’ ಚಳವಳಿಯ ಅಭಿಗೌಡ ಹನಕೆರೆಯವರು, “ಸರ್ಕಾರ ಕೂಡ ಆರ್‌ಎಸ್‌ಎಸ್‌ನ ಅಣತಿಯಂತೆ ಕೆಲಸ ಮಾಡುತ್ತಿದೆ. ಶಾಲಾ ಗೋಡೆಗೆ ಕೇಸರಿ ಬಣ್ಣ ಬಳಿಯುತ್ತದೆ. ಶಾಲೆಯಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ವಿಚಾರದಲ್ಲೂ ಕೇವಲ ಸಸ್ಯಾಹಾರವನ್ನೇ ನೀಡಬೇಕು ಎನ್ನುವ ನೀತಿ ತರಲಾಗುತ್ತಿದೆ. ಇವೆಲ್ಲಾ ನಮ್ಮ ದ್ರಾವಿಡ ಸಂಸ್ಕೃತಿಯನ್ನು ನಾಶಪಡಿಸುವ ಹುನ್ನಾರವಾಗಿದೆ” ಎಂದು ಕಿಡಿಕಾರಿದರು.

No photo description available.
‘ನಾವು ದ್ರಾವಿಡ ಕನ್ನಡಿಗರು’ ಚಳವಳಿಯ ಅಭಿಗೌಡ ಹನಕೆರೆ

ಇದನ್ನೂ ಓದಿರಿ: ಕಾಂತಾರವಷ್ಟೇ ಅಲ್ಲ, ನಿಮ್ಮ ಸಿನಿಮಾವೂ ಆಸ್ಕರ್‌ಗೆ ಅರ್ಹತೆ ಪಡೆಯಬಹುದು: ಷರತ್ತುಗಳು ಅನ್ವಯ!

“ಈ ಸಂಘಟನೆಯ ಮುಖ್ಯ ಉದ್ದೇಶ ಯಾರನ್ನೋ ವಿರೋಧಿಸುವುದಲ್ಲ. ನಮ್ಮ ನೆಲದ ಸಂಸ್ಕೃತಿಯನ್ನು ಉಳಿಸುವುದು ಹಾಗೂ ಬೆಳೆಸುವುದಾಗಿದೆ. ಎಲ್ಲರೂ ಸಮಾನವಾಗಿ ಬದುಕಬೇಕು ಎನ್ನುವುದು ದ್ರಾವಿಡ ತತ್ವ ಸಿದ್ಧಾಂತವಾಗಿದೆ. ಈ ಸಿದ್ದಾಂತದಲ್ಲಿ ಮೇಲು-ಕೀಳುಗಳಿಲ್ಲ, ರಾಜಸೇವಕನಿಲ್ಲ, ಎಲ್ಲರೂ ಪ್ರಜೆಗಳೇ ಆಗಿದ್ದು, ಎಲ್ಲರಿಗೂ ಮಾನ್ಯತೆ ನೀಡಬೇಕು. ಧರ್ಮ-ಜಾತಿ ಹೆಸರಿನಲ್ಲಿ ನಮ್ಮನ್ನು ಮಾನಸಿಕವಾಗಿ ದಿಕ್ಕು ತಪ್ಪಿಸಿ, ನಮ್ಮೊಳಗೆ ಅಸೂಯೆ, ದ್ವೇಷ ಬಿತ್ತಲಾಗುತ್ತಿದೆ. ನಾವು ಅದನ್ನು ತಡೆಯಬೇಕಿದೆ. ಹಾಗಾಗಿ ದ್ರಾವಿಡ ಸಂಘ ಹುಟ್ಟುಹಾಕುತ್ತಿದ್ದೇವೆ” ಎಂದು ವಿವರಿಸಿದರು.

“ಈ ದ್ರಾವಿಡ ಸಂಘ ಕುರುಡು ಭಕ್ತರಿಗಲ್ಲ; ತೆರೆದ ಮನಸ್ಸಿನವರಿಗೆ, ಪ್ರಬುದ್ಧರಿಗೆ, ಅಬಲೆಯರಿಗಾಗಿ ಸಂಘಟಿಸಲಾಗುತ್ತಿದೆ. ದ್ರಾವಿಡ ಸಂಸ್ಕೃತಿ ಒಂದು ಮಹಾ ಸಮುದ್ರ. ಅದಕ್ಕೆ ಅಂಟಿಕೊಂಡು ಬಂದಿರುವ ಒಂದು ಉಪ ನದಿ, ಹಿನ್ನೀರು ಈ ಆರ್ಯ ಧರ್ಮ. ದುರಂತವೆಂದರೆ ಈ ಆರ್ಯ ಧರ್ಮ ಇಡೀ ಕಡಲನ್ನೇ ವಿಷಮಗೊಳಿಸುತ್ತಿದೆ. ಇಂದು ನಾವೆಲ್ಲರೂ ಸೇರಿ ಆ ಕಡಲನ್ನು ವಿಷಮುಕ್ತ ಮಾಡಬೇಕಿದೆ. ನಮ್ಮ ದ್ರಾವಿಡ ಸಂಸ್ಕೃತಿಯನ್ನು ಮುನ್ನೆಲೆಗೆ ತರಬೇಕಿದೆ. ಹಾಗಾಗಿ ಈ ದ್ರಾವಿಡ ಸಂಘದ ಜೊತೆ ಕೈ ಜೋಡಿಸಿ” ಎಂದು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...