Homeರಾಜಕೀಯತೆಲಂಗಾಣ: ಆಡಳಿತರೂಢ ಬಿಆರ್‌ಎಸ್‌‌ ಪಕ್ಷದ ನಾಯಕ ಬಿಜೆಪಿ ಸೇರುವ ಸಾಧ್ಯತೆ

ತೆಲಂಗಾಣ: ಆಡಳಿತರೂಢ ಬಿಆರ್‌ಎಸ್‌‌ ಪಕ್ಷದ ನಾಯಕ ಬಿಜೆಪಿ ಸೇರುವ ಸಾಧ್ಯತೆ

ತೆಲಂಗಾಣದಲ್ಲಿ ಮುಂದಿನ ಡಿಸೆಂಬರ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ

- Advertisement -
- Advertisement -

ತೆಲಂಗಾಣದಲ್ಲಿ ಮುಂದಿನ ಡಿಸೆಂಬರ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ನಡುವೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ. ಆಡಳಿತರೂಢ ಬಿಆರ್‌‌ಎಸ್‌‌ ನಾಯಕ ಮಾಜಿ ಸಂಸದ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಅವರು ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇದೇ ಹಿನ್ನಲೆಯಲ್ಲಿ ಖಮ್ಮಂನಲ್ಲಿ ಬಿಆರ್‌ಎಸ್ ಅದ್ಧೂರಿ ಸಭೆ ನಡೆಸಲು ತೀರ್ಮಾನಿಸಿದೆ.

ಶ್ರೀನಿವಾಸ್‌ ರೆಡ್ಡಿ ಅವರು 2014 ರಲ್ಲಿ ಖಮ್ಮಮ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಇದೀಗ ಅವರು ನವದೆಹಲಿಯಲ್ಲಿ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಜನವರಿ 18 ರಂದು ಬಿಜೆಪಿ ಸೇರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಅಲ್ಲದೆ ಜನವರಿ 19 ರಂದು ಹೈದರಾಬಾದ್‌ಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಫ್ಲ್ಯಾಗ್ ಆಫ್ ಮಾಡುವ ಸಾಧ್ಯತೆ ಕೂಡಾ ಇದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅದೇ ದಿನ ಬಿಆರ್‌ಎಸ್ ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಖಮ್ಮಂನಲ್ಲಿ ಅದ್ಧೂರಿ ಸಾರ್ವಜನಿಕ ಸಭೆ ನಡೆಸಲು ಯೋಜಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಚಿವರುಗಳಾದ ಪುವ್ವಾಡ ಅಜಯ್ ಕುಮಾರ್, ಹರೀಶ್ ರಾವ್ ಸೇರಿದಂತೆ ಹಲವಾರು ನಾಯಕರು ಭಾಗವಹಿಸಲಿದ್ದಾರೆ.

ಖಮ್ಮಂನಲ್ಲಿ ಕ್ಷಿಪ್ರವಾಗಿ ಬದಲಾಗುತ್ತಿರುವ ರಾಜಕೀಯ ಬೆಳವಣಿಗೆಗಳು ಗಮನಾರ್ಹವಾಗಿದ್ದು, ಖಮ್ಮಂ ಬಿಆರ್‌ಎಸ್‌ನ ಪ್ರಾಬಲ್ಯವಿರುವ ಪ್ರದೇಶವಲ್ಲ. ತೆಲಂಗಾಣ ರಾಜ್ಯದ ರಚನೆಯ ಆಂದೋಲನದ ಉತ್ತುಂಗದಲ್ಲಿಯೂ ಕೂಡಾ ಈ ಪ್ರದೇಶದಲ್ಲಿ ಹೆಚ್ಚು ಧ್ವನಿಗಳು ಬಂದಿರಲಿಲ್ಲ. ಆಂಧ್ರಪ್ರದೇಶದ ಗಡಿಯಾಗಿರುವ ಖಮ್ಮಂ ಕಮ್ಮ ಸಮುದಾಯದ ಪ್ರಾಬಲ್ಯವಿರುವ ಜಿಲ್ಲೆಯಾಗಿದೆ.

2014 ರಲ್ಲಿ ಟಿಆರ್‌ಎಸ್ ಅಧಿಕಾರಕ್ಕೆ ಬಂದ ನಂತರ, ಖಮ್ಮಂನಲ್ಲಿ ತನ್ನ ನೆಲೆಯನ್ನು ಬಲಪಡಿಸಲು ಪಕ್ಷವೂ ಶ್ರೀನಿವಾಸ ರೆಡ್ಡಿ ಸೇರಿದಂತೆ ಹಲವಾರು ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಂಡಿತ್ತು. ಅಲ್ಲದೆ, ವೈಎಸ್‌ಆರ್‌ಟಿಪಿ ಮುಖ್ಯಸ್ಥೆ ವೈಎಸ್ ಶರ್ಮಿಳಾ ಅವರು ಈಗಾಗಲೇ ಖಮ್ಮಂನ ಪಲೈರ್ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿರುವುದರಿಂದ ಖಮ್ಮಂ ಈಗಾಗಲೇ ರಣರಂಗವಾಗಿ ಮಾರ್ಪಟ್ಟಿದೆ.

ಕೆಲವು ತಿಂಗಳ ಹಿಂದಿನಿಂದಲೇ ಬಿಆರ್‌ಎಸ್‌ನಲ್ಲಿ ಬಿಕ್ಕಟ್ಟು ತೀವ್ರಗೊಂಡಿದ್ದು, ಖಮ್ಮಂನ ನಾಯಕರಾದ ತುಮ್ಮಲ ನಾಗೇಶ್ವರ ರಾವ್, ಜಲಗಂ ವೆಂಕಟ್ ರಾವ್ ಮತ್ತು ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಖಮ್ಮಂನಿಂದ ಬಿಆರ್‌ಎಸ್ ಟಿಕೆಟ್‌ನಲ್ಲಿ ಸ್ಪರ್ಧಿಸಲು ತಮ್ಮ ಆಸಕ್ತಿಯನ್ನು ವ್ಯಕ್ತಪಡಿಸಿದ್ದಾರೆ. ಎಲ್ಲರಿಗೂ ಪಕ್ಷ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ ಎಂಬುದನ್ನು ಮನಗಂಡಿದ್ದು ಅವರು ಬೇರೆ ಪಕ್ಷಗಳಿಗೆ ಅಥವಾ ಸ್ವತಂತ್ರವಾಗಿ ಸ್ಪರ್ಧಿಸಲು ತಮ್ಮ ಆಯ್ಕೆಗಳ ಬಗ್ಗೆ ಯೋಜನೆ ರೂಪಿಸುತ್ತಿದ್ದಾರೆ.

ಶ್ರೀನಿವಾಸ ರೆಡ್ಡಿ ಅವರು 2014 ರಲ್ಲಿ ವೈಎಸ್‌ಆರ್‌ಸಿಪಿ (ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷ) ಟಿಕೆಟ್‌ನಲ್ಲಿ ಖಮ್ಮಂ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದ ಮಾಜಿ ಸಂಸದರಾಗಿದ್ದಾರೆ. ನಂತರ ಅವರು 2016 ರಲ್ಲಿ ಬಿಆರ್‌ಎಸ್‌‌ಗೆ ಪಕ್ಷಾಂತರವಾಗಿದ್ದರು. ಆದರೆ 2019 ರಲ್ಲಿ BRS ಅವರಿಗೆ ಖಮ್ಮಂ ಕ್ಷೇತ್ರದಿಂದ ಸಂಸದರಾಗಿ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿ, ಅವರನ್ನು ಪಕ್ಷದಿಂದ ದೂರವಿಡಲಾಗಿತ್ತು.

ಮಂಗಳವಾರ ಪಿನಪಾಕದಲ್ಲಿ ತಮ್ಮ ಬೆಂಬಲಿಗರೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ್ದ ಶ್ರೀನಿವಾಸ ರೆಡ್ಡಿ, ಬಿಆರ್‌ಎಸ್‌ನಿಂದ ದೂರವಾಗಲು ಇದ್ದ ಕಾರಣವನ್ನು ಶೀಘ್ರದಲ್ಲೇ ಬಹಿರಂಗಪಡಿಸುತ್ತೇನೆ ಎಂದು ಹೇಳಿದ್ದಾರೆ. “ನಾನೇಕೆ ಅಧಿಕಾರದಲ್ಲಿ ಇಲ್ಲ? ಜನ ನನ್ನನ್ನು ತಿರಸ್ಕರಿಸಿದರೇ? ಇತರ ಸ್ಪರ್ಧಿಗಳು ನನ್ನನ್ನು ಸೋಲಿಸಿದರೇ? ಕಾರಣ ಗೊತ್ತೇ ಇದೆ. ಆದರೆ, ಕೆಟಿಆರ್‌ ಮೇಲಿನ ಪ್ರೀತಿಯಿಂದ ನಾನು ಬಿಆರ್‌ಎಸ್‌ ಪಕ್ಷದಲ್ಲಿ ಮುಂದುವರಿದಿದ್ದೇನೆ” ಎಂದು ಅವರು ಹೇಳಿದ್ದರು.

ತಮಗೆ ಹಾಗೂ ತಮ್ಮ ಬೆಂಬಲಿಗರಿಗೆ ಹುದ್ದೆ ನೀಡಲು ಅವಕಾಶವಿದ್ದರೂ ಹಲವು ಬಾರಿ ನಿರಾಕರಿಸಲಾಗಿದೆ ಎಂದು ಅವರು ಆರೋಪಿಸಿದ್ದು, ಅವರೆಲ್ಲರೂ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ಖಚಿತಪಡಿಸಿಕೊಳ್ಳುವುದಾಗಿ ಶ್ರೀನಿವಾಸ ರೆಡ್ಡಿ ತಮ್ಮ ಬೆಂಬಲಿಗರಿಗೆ ಭರವಸೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...