Homeಅಂಕಣಗಳುಕುವೆಂಪು ನೆಲದಲ್ಲಿ ಸುಳ್ಳಿನ ಚಕ್ರತೀರ್ಥ

ಕುವೆಂಪು ನೆಲದಲ್ಲಿ ಸುಳ್ಳಿನ ಚಕ್ರತೀರ್ಥ

- Advertisement -
- Advertisement -

ಕನ್ನಡದ ಸಾಂಸ್ಕೃತಿಕ ಲೋಕದೊಳಕ್ಕೆ ನುಗ್ಗಿರುವ ಪುರೋಹಿತಶಾಹಿಗಳ ಸುಳ್ಳುಗಳು ವಿಜೃಂಭಿಸತೊಡಗಿದೆಯಲ್ಲಾ. ಈ ಪೈಕಿ ಕುವೆಂಪು ಸಾಹಿತ್ಯವನ್ನು ’ತಿದ್ದಲು’ ಹೋಗಿ ರೋಹಿತ್ ಚಕ್ರತೀರ್ಥ ಎಂಬ ವ್ಯಕ್ತಿ ಸಿಕ್ಕಿಬಿದ್ದರಲ್ಲಾ. ಕುವೆಂಪು ನಡೆದಾಡಿದ ಪ್ರದೇಶಕ್ಕೆ ಬಂದು ಕುವೆಂಪು ಚಾತುವರ್ಣದ ವಿರೋಧಿಯಾಗಿರಲಿಲ್ಲ ಎಂದಿದ್ದಾರಲ್ಲ. ಸದರಿ ಹೇಳಿಕೆಗೆ ಅಂತಹಾ ಪ್ರತಿಭಟನೆ ಕಂಡುಬಂದಿಲ್ಲ. ಏಕೆಂದರೆ ಒಬ್ಬ ವ್ಯಕ್ತಿ ಸುಳ್ಳನ್ನೇ ಹೇಳುತ್ತ ಜೀವಿಸುವುದಾದರೆ ನಮ್ಮ ಜನ ತಾತ್ಸಾರ ಮಾಡುತ್ತಾರೆ. ಹಾಗೆಯೇ ನಾಡಿನ ಪ್ರಜ್ಞಾವಂತರ ತಾತ್ಸಾರಕ್ಕೆ ಗುರಿಯಾಗಿರುವ ಚಕ್ರತೀರ್ಥ ಕುವೆಂಪುರವರನ್ನು, ಪಟ್ಟಾಗಿ ಕುಳಿತು ಓದಿದ್ದಾದರೆ ಅಲ್ಲಿ ಚಾತುರ್ವಣಕ್ಕೆ ಚಾಟೀ ಬೀಸಿರುವ ಮಾತುಗಳು ಯಥೇಚ್ಛವಾಗಿ ಸಿಗುತ್ತವೆ. ಭಾರತದ ಸಮಾಜವನ್ನು ಛಿದ್ರವಿಚ್ಛಿದ್ರಗೈದ ಮತ್ತು ಇಂದಿನ ಭರತಖಂಡದ ಸಮಸ್ಯೆಗಳಿಗೆ ಮೂಲ ಕಾರಣವಾದ ಮನುಧರ್ಮ ಶಾಸ್ತ್ರವನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಸುಟ್ಟಿದ್ದರಲ್ಲಿ ದೊಡ್ಡ ಸಂದೇಶವಿದೆ. ಅದರ ಹೇಳಹೆಸರುಳಿಯದಂತೆ ಸುಟ್ಟು, ಬೂದಿಯನ್ನ ಅರಬ್ಬೀ ಸಮುದ್ರಕ್ಕೆರಚಿದಾಗ ಮಾತ್ರ ದೇಶ ಹಾಗೂ ಅಮಾಯಕ ಜನ ಅನಿಷ್ಠದ ಧರ್ಮಶೃಂಖಲೆಗಳಿಂದ ಪಾರಾಗುತ್ತಾರೆ. “ಶಾಸ್ತ್ರವೆಂಬುದು ಸಂತೆಯ ಸುದ್ದಿ, ಪುರಾಣವೆಂಬುದು ಪುಂಡರ ಗೋಷ್ಠಿ, ತರ್ಕವೆಂಬುದು ತಗರ ಹೋರಟೆ” ಎಂದು ಅಲ್ಲಮಪ್ರಭುಗಳು ಹೇಳಿದ್ದಾರಲ್ಲ. ಹಾಗೆಯೇ, “ಶಾಸ್ತ್ರಕ್ಕೆ ನಿಗಳನಿಕ್ಕುವೆ, ತರ್ಕದ ಬೆನ್ನ ಭಾರನೆತ್ತುವೆ, ಆಗಮದ ಮೂಗ ಕುಯ್ಯುವೆ” ಎಂಬ ಬಸವಣ್ಣನ ಮಾತನ್ನ ದಾಖಲಿಸಿರುವ ಕುವೆಂಪು ಅದಾವ ಮಾನದಂಡದಿಂದ ಚಾತುರ್ವರ್ಣ ಒಪ್ಪಿದ್ದರೆಂಬುದನ್ನ ಚಕ್ರತೀರ್ಥರೇ ತೋರಿಸಬೇಕಾಗಿದೆಯಲ್ಲಾ ಥೂತ್ತೇರಿ.

******

ಇತ್ತ ಸಾಹಿತ್ಯ ಪರಿಷತ್ತಿಗೆ ವಕ್ಕರಿಸಿರುವ ಜೋಶಿ ಎಂಬಾತನ ಸುಳ್ಳಿಗೆ ಇಡೀ ನಾಡೇ ಬೆಚ್ಚಿ ಬಿದ್ದಿದೆಯಲ್ಲಾ. ಶಿಶುನಾಳ ಶರೀಫರು ತಮ್ಮ ಆಧ್ಯಾತ್ಮದ ಗುರುವಾದ ಗೋವಿಂದ ಭಟ್ಟರನ್ನ ವಜ್ರದ ಹರಳೆಂದು ಕರೆದಿದ್ದಾರೆ. ಶಿಶುನಾಳ ಶರೀಫ ಈ ನಾಡುಕಂಡ ಮಹಾನ್ ಕವಿ. ಈ ಕವಿಯನ್ನ ಶೋಧಿಸಿ ನಾಡ ಗಾಯಕರೆಲ್ಲಾ ಹಾಡಿದ್ದಾರೆ. ಹಿಂದೂ ಮುಸ್ಲಿಂ ಭಾವೈಕ್ಯತೆಯ ಸಂಕೇತದಂತಿರುವ ಈ ಚೇತನಗಳು ಕನ್ನಡದ ನೆಲದಲ್ಲಿ ಅಜರಾಮರವಾಗಿವೆ. ಶರೀಫರ ಕುಲಬಾಂಧವರಾರೂ ಅವರ ಸಂಬಂಧಿಗಳೆಂದು ಈವರೆಗೆ ಹೇಳಿಕೊಂಡಿಲ್ಲ. ಆದರೆ ಸಂಸಾರವೇ ಇಲ್ಲದೆ ಕಾಲವಾದ ಗೋವಿಂದ ಭಟ್ಟರ ವಂಶದ ಕುಡಿಯೊಂದು ಪ್ರತಿ ಮೂರು ಮಾತಿನ ನಡುವೆ ನಾನು ಗೋವಿಂದ ಭಟ್ಟರ ಮರಿಮೊಮ್ಮಮಗನೆಂದು ಹೇಳುತ್ತದೆಲ್ಲಾ. ಏನಾದರೂ ಪ್ರತಿಪಾದಿಸಿಕೊಂಡು ಹಾಳಾಗಿ ಹೋಗಲಿ ಎಂದರೆ, ಕನ್ನಡ ಸಾಂಸ್ಕೃತಿಕ ಲೋಕದ ಜಾತ್ಯತೀತ ವೇದಿಕೆಯಾದ ಸಾಹಿತ್ಯ ಪರಿಷತ್‌ಗೆ ಜನಿವಾರ ತೊಡಿಸುತ್ತಾ, ಸರಿಪಡಿಸಲಾಗದ ಅವಾಂತರ ಸೃಷ್ಟಿಸತೊಡಗಿದ್ದಾರೆ. ಒಂದು ವೇಳೆ ಈತ ಅಕಸ್ಮಾತ್ ಗೋವಿಂದ ಭಟ್ಟರ ಮರಿಮೊಮ್ಮಗನೇ ಆಗಿದ್ದರೆ ಕನ್ನಡದ ಪ್ರಗತಿಪರ ಚಿಂತಕರನ್ನು ಮನೋರೋಗದಿಂದ ಬಳಲುತ್ತಿರುವ ಜನ ಎಂದು ಸಂಬೋಧಿಸುತ್ತಿರಲಿಲ್ಲವಲ್ಲವೇ? ಥೂತ್ತೇರಿ.

*******

ಗುಜರಾತಿನ ಅಮಿತ್ ಶಾ ಎಂಬ ಅಮುಲ್ ಗಿರಾಕಿ ಮಂಡ್ಯಕ್ಕೆ ಬಂದುದ್ದೂ ಅಲ್ಲದೆ, ಕರ್ನಾಟಕದ ನಂದಿನಿಯನ್ನು ಅಮುಲ್ ಜೊತೆಗೆ ಸೇರಿಸಬೇಕು ಎಂದು ಬಿಟ್ಟಿದ್ದಾರಂತಲ್ಲಾ. ಶಾ ಅವರ ಇಂತಹ ಹೇಳಿಕೆಗೆ ಮಂಡ್ಯದ ಆ ಸಭೆಯಲ್ಲಿ ಯಾವ ಪ್ರತಿರೋಧವೂ ಬರಲಿಲ್ಲ. ಕಾರಣ ಅಲ್ಲಿ ಚಪ್ಪಾಳೆಗಾಗಿ ಕರೆದುಕೊಂಡು ಬಂದವರಿಗೆ ಶಾ ಹೇಳುವುದೇನು ಎಂಬುದೇ ತಿಳಿಯಲಿಲ್ಲ. ತಿಳಿದರೂ ಅವರ ಮಾತನ್ನು ಕೇಳುವವರು ಯಾರಿದ್ದರು ಅಲ್ಲಿ? ಆದರೆ ತಿಳಿದುಕೊಳ್ಳಬೇಕಾದವರು ತಮ್ಮ ರಾಸುಗಳ ಜೊತೆಗಿದ್ದರು. ರಾಸುಗಳ ಮೈ ತೊಳೆಯುವುದು, ಹಾಲು ಕರೆಯುವುದು, ಹುಲ್ಲು ಹಾಕುವುದು ಇತ್ಯಾದಿ ನಿರಂತರ ಕೆಲಸಗಳ ನಡುವೆ, ಇಂತಹ ಚಪ್ಪಾಳೆ ಸಂಸ್ಕೃತಿಗೆ ಹೊರತಾದ ಜನ ಅವರು. ಅಮುಲ್ ಹಾಲಿನೊಳಕ್ಕೆ ನಂದಿನಿ ಮಿಕ್ಸ್ ಮಾಡಿ ಕಡೆಗೆ ಅಮುಲ್ ಮಾತ್ರ ಬಳಸಿಕೊಂಡು ನಂದಿನಿಗೆ ತಿಲಾಂಜಲಿ ಇಡುವ ಹಿಕಮತ್ತಿನ ಭಾಷಣ ಅವರಿಗೆ ತಲುಪಲೇಯಿಲ್ಲ. ತಲುಪಿದ್ದೇ ಆದರೆ ಶಾ ಕಡೆಯವರು ಮಂಡ್ಯದ ಕಡೆ ಮುಖಹಾಕುವುದು ಕಷ್ಟವೆಂದರಿತು, ಶಾ ಹಾಗೆ ಹೇಳಿಲ್ಲ, ಅಮುಲ್ ಹಾಲಿನ ಹಂಡೆಗಳು ಮಂಡ್ಯಕ್ಕೆ ಬರುತ್ತವೆ, ಮಂಡ್ಯದ ಹಳೆ ಹಾಲಿನ ಕ್ಯಾನ್‌ಗಳು ಗುಜರಾತಿನ ಗುಜರಿ ಸೇರಿ ಹೊಸ ಕ್ಯಾನ್ ಬರುತ್ತವೆ ಎಂದು ಮುಖ್ಯಮಂತ್ರಿಯಿಂದ ಹಿಡಿದು ಕೂಗುಮಾರಿ ಸಿ.ಟಿ ರವಿವರೆಗೆ ಕರ್ನಾಟಕದ ಬಿಜೆಪಿಗಳು ಕೂಗುತ್ತಿವೆಯಲ್ಲಾ. ಮಂಡ್ಯದ ನೆಲ ಹುಟ್ಟಿಸಿದ ಭಯಕ್ಕೆ ಇನ್ನೇನು ಬೇಕು, ಥೂತ್ತೇರಿ.

******

ಮೈಸೂರು ರಂಗಾಯಣದ ಪ್ರದೇಶಕ್ಕೆ ಬಂದು ಸೇರಿಕೊಂಡಿರುವ ಅಡ್ನಾಡಿಗಳ ಅವಾಂತರಕ್ಕೆ ಹೇಸಿದ ಪ್ರಜ್ಞಾವಂತರಾರೂ ಆ ಕಡೆ ಸುಳಿಯದಿರುವುದು ಹಳೆಯ ಸುದ್ದಿ. ಈಗಾಗಲೇ ಟಿಪ್ಪು ಜೀವನವನ್ನ ವಿಕೃತಗೊಳಿಸಿ ನಾಟಕ ರಚಿಸಿ ಬೈಸಿಕೊಂಡವರ ಪೈಕಿ ಒಬ್ಬರು, ಚಂದ್ರಶೇಖರ ಕಂಬಾರರ ಸಾಂಭಶಿವ ಪ್ರಹಸನಕ್ಕೂ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರರ ಕಾರ್ಯವೈಖರಿಗೂ ಸಂಬಂಧವೇ ಇಲ್ಲದಿದ್ದರೂ, ಅನ್ನಭಾಗ್ಯವನ್ನ ಆಡಿಕೊಂಡಿದ್ದಾರಂತಲ್ಲಾ. ವಾಸ್ತವವಾಗಿ ಈ ನಾಟಕ ನಿರ್ದೇಶಕನಿಗೆ ಬಂದ ಧೈರ್ಯದ ಪ್ರೇರಣೆಯಾವುದೆಂದರೆ ಟಿಪ್ಪುವಿನ ಚರಿತ್ರೆಯನ್ನು ವಿಕೃತವಾಗಿ ತಿರುಚಿ ಆಡಿಸಿದ ನಾಟಕವೇ. ಇಂತಹವರ ವಿಕೃತಿಗೆ ಅಂತ್ಯ ಅಡುವುದು ಮೈಸೂರಿನ ಪ್ರಜ್ಞಾವಂತರ ಕೆಲಸ. ಈ ದೇಶವೇ ಕೊಂಡಾಡಿದ ಮೈಸೂರಿನ ಮಹಾರಾಜರ ಕರ್ಮ ಭೂಮಿಯಲ್ಲಿ, ಅದರಲ್ಲೂ ರಂಗಾಯಣದ ಆವರಣದಲ್ಲಿ, ಇತಿಹಾಸವನ್ನೇ ತಿರುಚುವ ವಿಕೃತಿಗಳು, ಕಲೆ ಸಾಹಿತ್ಯ ಸಂಗೀತವನ್ನೇ ಹಾಳುಮಾಡುವ ಕ್ರಿಮಿ ಕೀಟಗಳು ಇರಬಾರದಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ನಿಜಕ್ಕೂ ಇಂತದ್ದೊಂದು ಪಾರ್ಟಿ ಬೇಕಿತ್ತು ಸಾರ್..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...