Homeರಾಜಕೀಯಬಿಜೆಪಿ ರಾಜ್ಯಪಾಲರನ್ನು ಕಾರ್ಯಕರ್ತನಂತೆ ಬಳಸುತ್ತಿದೆ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ರಾಜ್ಯಪಾಲರನ್ನು ಕಾರ್ಯಕರ್ತನಂತೆ ಬಳಸುತ್ತಿದೆ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್.ಎನ್. ರವಿ ನಡುವಿನ ಸಂಘರ್ಷದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯು ರಾಜ್ಯಪಾಲರನ್ನು ಪಕ್ಷದ ‘ಕಾರ್ಯಕರ್ತ’ನಂತೆ ಬಳಸಿಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲ ರವಿ ಅವರು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಭಾಷಣ ಮಾಡುತ್ತಿರುವ ವೇಳೆ ಸದನದಿಂದ ಹೊರನಡೆದಿದ್ದರು. ಇದು ಭಾರಿ ವಿವಾದವನ್ನುಂಟು ಮಾಡಿತ್ತು.

“ವಿಪಕ್ಷಗಳ ಆಡಳಿತವಿರುವ ರಾಜ್ಯಗಳಲ್ಲಿ ರಾಜ್ಯಪಾಲರ ಸಾಂವಿಧಾನಿಕ ಕಚೇರಿಯನ್ನು ‘ಕಾರ್ಯಕರ್ತ’ ಎಂಬ ರೀತಿ ಬಳಸಿಕೊಳ್ಳುವ ಮೂಲಕ ಬಿಜೆಪಿಯು ಉದ್ದೇಶಪೂರ್ವಕ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸುತ್ತಿದೆ. ಇತ್ತೀಚೆಗೆ ಕೆಲವು ರಾಜ್ಯಪಾಲರು ಸಂವಿಧಾನದ ಮೇಲೆ ಲಜ್ಜೆಗೆಟ್ಟ ಅತಿಕ್ರಮಣ ನಡೆಸಿ ನಮ್ಮ ರಾಜಕೀಯ ಒಕ್ಕೂಟ ರಚನೆಯನ್ನು ಕಳಂಕಗೊಳಿಸಿದ್ದಾರೆ” ಎಂದು ಖರ್ಗೆ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರಾಜ್ಯಪಾಲರು ಸಂವಿಧಾನದ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು. ಅಲ್ಲದೆ ಅವರು ಕೂಡಾ ಭಾಗವಾಗಿರುವ ಶಾಸಕಾಂಗವನ್ನು ಅವಮಾನಿಸಲು ಸಾಧ್ಯವಿಲ್ಲ. ಆದರೆ ಬಿಜೆಪಿ ಹೊರತುಪಡಿಸಿ ಇತರ ಪಕ್ಷಗಳು ಆಳುವ ರಾಜ್ಯಗಳಲ್ಲಿ ಸಾಮಾಜಿಕ ಮತ್ತು ರಾಜಕೀಯ ಅಶಾಂತಿಯನ್ನು ಸೃಷ್ಟಿಸಲು ರಾಜ್ಯಪಾಲರನ್ನು ದೆಹಲಿಯ ಯಜಮಾನರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ, ಇದು ಅಪಾಯಕಾರಿ” ಎಂದು ಕಾಂಗ್ರೆಸ್ ಖರ್ಗೆ ಹೇಳಿದ್ದಾರೆ.

ರಾಜಭವನವು ಪೊಂಗಲ್ ಹಬ್ಬದ ಆಹ್ವಾನ ಪತ್ರದಲ್ಲಿ ತಮಿಳುನಾಡನ್ನು ‘ತಮಿಳಗಂ’ ಎಂದು ತಮಿಳುಭಾಷೆಯಲ್ಲಿ ಉಲ್ಲೇಖಿಸಿದೆ. ಅಲ್ಲದೆ ರಾಜ್ಯ ಸರ್ಕಾರದ ಲಾಂಛನವನ್ನು ಕೈಬಿಟ್ಟು, ಆಹ್ವಾನ ಪತ್ರಿಕೆಯಲ್ಲಿ ಕೇವಲ ಭಾರತ ಸರ್ಕಾರದ ಲಾಂಛನವನ್ನು ಮಾತ್ರ ಮುದ್ರಿಸಿತ್ತು.

ರಾಜಭವನದ ಈ ನಡೆಯು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಅವರ ಮಿತ್ರ ಪಕ್ಷಗಳನ್ನು ಕೆರಳಿಸಿದ್ದು, ರಾಜ್ಯಪಾಲ ರವಿಯನ್ನು ಪದಚ್ಯುತಗೊಳಿಸುವಂತೆ ಒತ್ತಾಯಿಸಿದ್ದಾರೆ. ಆಹ್ವಾನ ಪತ್ರಿಕೆಯ ಇಂಗ್ಲಿಷ್ ಆವೃತ್ತಿಯು ರಾಜ್ಯಕ್ಕೆ ‘ತಮಿಳುನಾಡು’ ಎಂಬ ಹೆಸರು ಬಳಸಲಾಗಿದೆ.

ಕಳೆದ ವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ರಾಜ್ಯಪಾಲ ರವಿ, “ಯಾವುದಾದರೂ ವಿಷಯವನ್ನು ಇಡೀ ದೇಶಕ್ಕೆ ಅನ್ವಯಿಸುವಾಗ ತಮಿಳುನಾಡು ಮಾತ್ರ ‘ಬೇಡ’ ಎಂದು ಹೇಳುತ್ತದೆ. ಇದೊಂದು ಅಭ್ಯಾಸವಾಗಿ ಮಾರ್ಪಟ್ಟಿದೆ. ಈ ಬಗ್ಗೆ ಅನೇಕ ಪ್ರಬಂಧಗಳನ್ನು ಬರೆಯಲಾಗಿದ್ದು, ಇವುಗಳೆಲ್ಲಾ ಸುಳ್ಳು ಮತ್ತು ಕಾಲ್ಪನಿಕ ಕತೆಗಳಾಗಿವೆ. ಇವುಗಳನ್ನು ಒಡೆಯಬೇಕು. ಸತ್ಯವು ಮೇಲುಗೈ ಸಾಧಿಸಬೇಕು. ರಾಜ್ಯಕ್ಕೆ ‘ತಮಿಳಗಂ’ ಎಂದು ಕರೆಯುವುದೆ ಹೆಚ್ಚು ಸೂಕ್ತವಾದ ಪದವಾಗಿದೆ. ದೇಶದ ಉಳಿದ ಭಾಗವು ದೀರ್ಘಕಾಲದವರೆಗೆ ವಿದೇಶಿಯರ ಕೈಯಲ್ಲಿ ಬಹಳಷ್ಟು ವಿನಾಶವನ್ನು ಅನುಭವಿಸಿತು” ಎಂದು ಹೇಳಿದ್ದರು.

‘ತಮಿಳುನಾಡು’ ಎಂದರೆ ‘ತಮಿಳರ ರಾಷ್ಟ್ರ’ ಎಂದು ಅರ್ಥ ಬರುತ್ತದೆ, ಆದರೆ ‘ತಮಿಳಗಂ’ ಎಂದರೆ ‘ತಮಿಳು ಜನರ ವಾಸಸ್ಥಾನ’ ಎಂದು ಅರ್ಥ. ಇದು ಈ ಪ್ರದೇಶದ ಪ್ರಾಚೀನ ಹೆಸರು ಎಂದು ರಾಜ್ಯಪಾಲರು ಹೇಳಿದ್ದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಆಡಳಿತಾರೂಢ ಡಿಎಂಕೆ ಮತ್ತು ಅದರ ಮಿತ್ರಪಕ್ಷಗಳು, ರಾಜ್ಯಪಾಲರು ಪ್ರತಿಪಕ್ಷ ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ವು ಕರೆಯುವ ‘ತಮಿಳಗಂ’ ಎಂಬ ಹೆಸರನ್ನು ರಾಜ್ಯಕ್ಕೆ ನೀಡುವ ಮೂಲಕ ಅವರ ಅಜೆಂಡಾವನ್ನು ಮುಂದಕ್ಕೆ ತಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

“ಅವರು ವಾಸ್ತವಿಕವಾಗಿ ತಪ್ಪಾದ ಮತ್ತು ಅಪಾಯಕಾರಿ ಹೇಳಿಕೆಗಳನ್ನು ನೀಡುತ್ತಾರೆ” ಎಂದು ಡಿಎಂಕೆ ನಾಯಕ ಟಿಆರ್ ಬಾಲು ಹೇಳಿದ್ದಾರೆ. ಪೊಂಗಲ್ ಆಹ್ವಾನ ಪತ್ರದ ವಿವಾದದ ನಂತರ, ರಾಜ್ಯಪಾಲರು ತಮಿಳುನಾಡು ವಿಧಾನಸಭೆಯಿಂದ ಹೊರನಡೆದು ಮತ್ತೆ ವಿವಾದೆ ಸೃಷ್ಟಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...