Homeರಾಜಕೀಯಬಿಜೆಪಿ ರಾಜ್ಯಪಾಲರನ್ನು ಕಾರ್ಯಕರ್ತನಂತೆ ಬಳಸುತ್ತಿದೆ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ರಾಜ್ಯಪಾಲರನ್ನು ಕಾರ್ಯಕರ್ತನಂತೆ ಬಳಸುತ್ತಿದೆ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್.ಎನ್. ರವಿ ನಡುವಿನ ಸಂಘರ್ಷದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯು ರಾಜ್ಯಪಾಲರನ್ನು ಪಕ್ಷದ ‘ಕಾರ್ಯಕರ್ತ’ನಂತೆ ಬಳಸಿಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲ ರವಿ ಅವರು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಭಾಷಣ ಮಾಡುತ್ತಿರುವ ವೇಳೆ ಸದನದಿಂದ ಹೊರನಡೆದಿದ್ದರು. ಇದು ಭಾರಿ ವಿವಾದವನ್ನುಂಟು ಮಾಡಿತ್ತು.

“ವಿಪಕ್ಷಗಳ ಆಡಳಿತವಿರುವ ರಾಜ್ಯಗಳಲ್ಲಿ ರಾಜ್ಯಪಾಲರ ಸಾಂವಿಧಾನಿಕ ಕಚೇರಿಯನ್ನು ‘ಕಾರ್ಯಕರ್ತ’ ಎಂಬ ರೀತಿ ಬಳಸಿಕೊಳ್ಳುವ ಮೂಲಕ ಬಿಜೆಪಿಯು ಉದ್ದೇಶಪೂರ್ವಕ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸುತ್ತಿದೆ. ಇತ್ತೀಚೆಗೆ ಕೆಲವು ರಾಜ್ಯಪಾಲರು ಸಂವಿಧಾನದ ಮೇಲೆ ಲಜ್ಜೆಗೆಟ್ಟ ಅತಿಕ್ರಮಣ ನಡೆಸಿ ನಮ್ಮ ರಾಜಕೀಯ ಒಕ್ಕೂಟ ರಚನೆಯನ್ನು ಕಳಂಕಗೊಳಿಸಿದ್ದಾರೆ” ಎಂದು ಖರ್ಗೆ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರಾಜ್ಯಪಾಲರು ಸಂವಿಧಾನದ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು. ಅಲ್ಲದೆ ಅವರು ಕೂಡಾ ಭಾಗವಾಗಿರುವ ಶಾಸಕಾಂಗವನ್ನು ಅವಮಾನಿಸಲು ಸಾಧ್ಯವಿಲ್ಲ. ಆದರೆ ಬಿಜೆಪಿ ಹೊರತುಪಡಿಸಿ ಇತರ ಪಕ್ಷಗಳು ಆಳುವ ರಾಜ್ಯಗಳಲ್ಲಿ ಸಾಮಾಜಿಕ ಮತ್ತು ರಾಜಕೀಯ ಅಶಾಂತಿಯನ್ನು ಸೃಷ್ಟಿಸಲು ರಾಜ್ಯಪಾಲರನ್ನು ದೆಹಲಿಯ ಯಜಮಾನರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ, ಇದು ಅಪಾಯಕಾರಿ” ಎಂದು ಕಾಂಗ್ರೆಸ್ ಖರ್ಗೆ ಹೇಳಿದ್ದಾರೆ.

ರಾಜಭವನವು ಪೊಂಗಲ್ ಹಬ್ಬದ ಆಹ್ವಾನ ಪತ್ರದಲ್ಲಿ ತಮಿಳುನಾಡನ್ನು ‘ತಮಿಳಗಂ’ ಎಂದು ತಮಿಳುಭಾಷೆಯಲ್ಲಿ ಉಲ್ಲೇಖಿಸಿದೆ. ಅಲ್ಲದೆ ರಾಜ್ಯ ಸರ್ಕಾರದ ಲಾಂಛನವನ್ನು ಕೈಬಿಟ್ಟು, ಆಹ್ವಾನ ಪತ್ರಿಕೆಯಲ್ಲಿ ಕೇವಲ ಭಾರತ ಸರ್ಕಾರದ ಲಾಂಛನವನ್ನು ಮಾತ್ರ ಮುದ್ರಿಸಿತ್ತು.

ರಾಜಭವನದ ಈ ನಡೆಯು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಅವರ ಮಿತ್ರ ಪಕ್ಷಗಳನ್ನು ಕೆರಳಿಸಿದ್ದು, ರಾಜ್ಯಪಾಲ ರವಿಯನ್ನು ಪದಚ್ಯುತಗೊಳಿಸುವಂತೆ ಒತ್ತಾಯಿಸಿದ್ದಾರೆ. ಆಹ್ವಾನ ಪತ್ರಿಕೆಯ ಇಂಗ್ಲಿಷ್ ಆವೃತ್ತಿಯು ರಾಜ್ಯಕ್ಕೆ ‘ತಮಿಳುನಾಡು’ ಎಂಬ ಹೆಸರು ಬಳಸಲಾಗಿದೆ.

ಕಳೆದ ವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ರಾಜ್ಯಪಾಲ ರವಿ, “ಯಾವುದಾದರೂ ವಿಷಯವನ್ನು ಇಡೀ ದೇಶಕ್ಕೆ ಅನ್ವಯಿಸುವಾಗ ತಮಿಳುನಾಡು ಮಾತ್ರ ‘ಬೇಡ’ ಎಂದು ಹೇಳುತ್ತದೆ. ಇದೊಂದು ಅಭ್ಯಾಸವಾಗಿ ಮಾರ್ಪಟ್ಟಿದೆ. ಈ ಬಗ್ಗೆ ಅನೇಕ ಪ್ರಬಂಧಗಳನ್ನು ಬರೆಯಲಾಗಿದ್ದು, ಇವುಗಳೆಲ್ಲಾ ಸುಳ್ಳು ಮತ್ತು ಕಾಲ್ಪನಿಕ ಕತೆಗಳಾಗಿವೆ. ಇವುಗಳನ್ನು ಒಡೆಯಬೇಕು. ಸತ್ಯವು ಮೇಲುಗೈ ಸಾಧಿಸಬೇಕು. ರಾಜ್ಯಕ್ಕೆ ‘ತಮಿಳಗಂ’ ಎಂದು ಕರೆಯುವುದೆ ಹೆಚ್ಚು ಸೂಕ್ತವಾದ ಪದವಾಗಿದೆ. ದೇಶದ ಉಳಿದ ಭಾಗವು ದೀರ್ಘಕಾಲದವರೆಗೆ ವಿದೇಶಿಯರ ಕೈಯಲ್ಲಿ ಬಹಳಷ್ಟು ವಿನಾಶವನ್ನು ಅನುಭವಿಸಿತು” ಎಂದು ಹೇಳಿದ್ದರು.

‘ತಮಿಳುನಾಡು’ ಎಂದರೆ ‘ತಮಿಳರ ರಾಷ್ಟ್ರ’ ಎಂದು ಅರ್ಥ ಬರುತ್ತದೆ, ಆದರೆ ‘ತಮಿಳಗಂ’ ಎಂದರೆ ‘ತಮಿಳು ಜನರ ವಾಸಸ್ಥಾನ’ ಎಂದು ಅರ್ಥ. ಇದು ಈ ಪ್ರದೇಶದ ಪ್ರಾಚೀನ ಹೆಸರು ಎಂದು ರಾಜ್ಯಪಾಲರು ಹೇಳಿದ್ದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಆಡಳಿತಾರೂಢ ಡಿಎಂಕೆ ಮತ್ತು ಅದರ ಮಿತ್ರಪಕ್ಷಗಳು, ರಾಜ್ಯಪಾಲರು ಪ್ರತಿಪಕ್ಷ ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ವು ಕರೆಯುವ ‘ತಮಿಳಗಂ’ ಎಂಬ ಹೆಸರನ್ನು ರಾಜ್ಯಕ್ಕೆ ನೀಡುವ ಮೂಲಕ ಅವರ ಅಜೆಂಡಾವನ್ನು ಮುಂದಕ್ಕೆ ತಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

“ಅವರು ವಾಸ್ತವಿಕವಾಗಿ ತಪ್ಪಾದ ಮತ್ತು ಅಪಾಯಕಾರಿ ಹೇಳಿಕೆಗಳನ್ನು ನೀಡುತ್ತಾರೆ” ಎಂದು ಡಿಎಂಕೆ ನಾಯಕ ಟಿಆರ್ ಬಾಲು ಹೇಳಿದ್ದಾರೆ. ಪೊಂಗಲ್ ಆಹ್ವಾನ ಪತ್ರದ ವಿವಾದದ ನಂತರ, ರಾಜ್ಯಪಾಲರು ತಮಿಳುನಾಡು ವಿಧಾನಸಭೆಯಿಂದ ಹೊರನಡೆದು ಮತ್ತೆ ವಿವಾದೆ ಸೃಷ್ಟಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...