Homeಮುಖಪುಟಭಾರತದ ಎರಡು ಕೆಮ್ಮು ಸಿರಪ್ ಗಳ ಬಳಕೆ ಬಗ್ಗೆ ಎಚ್ಚರಿಕೆ ನೀಡಿದ WHO

ಭಾರತದ ಎರಡು ಕೆಮ್ಮು ಸಿರಪ್ ಗಳ ಬಳಕೆ ಬಗ್ಗೆ ಎಚ್ಚರಿಕೆ ನೀಡಿದ WHO

- Advertisement -
- Advertisement -

ಉಜ್ಬೇಕಿಸ್ತಾನ್‌ನಲ್ಲಿರುವ ಮಕ್ಕಳಿಗೆ ಭಾರತದಲ್ಲಿ ತಯಾರಿಸಿದ ಎರಡು ಕೆಮ್ಮು ಸಿರಪ್‌ಗಳನ್ನು ಬಳಸದಂತೆ ವಿಶ್ವ ಆರೋಗ್ಯ ಸಂಸ್ಥೆ (WHO) ಎಚ್ಚರಿಕೆ ನೀಡಿದ್ದು, ದೇಶದ 19 ಮಕ್ಕಳ ಸಾವಿನ ನಂತರ ಈ ಹೇಳಿಕೆಯನ್ನು ವಿಶ್ವ ಸಂಸ್ಥೆ ನೀಡಿದೆ.

ಭಾರತದ ಮರಿಯನ್ ಬಯೋಟೆಕ್ ತಯಾರಿಸಿದ ಎರಡು ಕೆಮ್ಮು ಸಿರಪ್‌ಗಳನ್ನು ಮಕ್ಕಳಿಗೆ ಬಳಸಬಾರದು ಎಂದು WHO ಹೇಳಿಕೆಯಲ್ಲಿ ತಿಳಿಸಿದೆ. ಕಳೆದ ಡಿಸೆಂಬರ್‌ನಲ್ಲಿ ಸಂಭವಿಸಿದ ಮಕ್ಕಳ ಸಾವಿಗೆ ಭಾರತೀಯ ಫಾರ್ಮಾಸ್ಯುಟಿಕಲ್ ಕಂಪನಿ ತಯಾರಿಸಿದ ಔಷಧಿ ಸೇವಿಸಿದ್ದ ಕಾರಣ ಎಂದು ಉಜ್ಬೇಕಿಸ್ತಾನ್‌ನ ಆರೋಗ್ಯ ಸಚಿವಾಲಯವು ಹೇಳಿಕೆ ನೀಡಿತ್ತು.

AMBRONOL ಸಿರಪ್ ಮತ್ತು DOK-1 ಮ್ಯಾಕ್ಸ್ ಸಿರಪ್ ಹೆಸರಿನ ಉತ್ಪನ್ನಗಳ ಪ್ರಯೋಗಾಲಯ ವಿಶ್ಲೇಷಣೆಯು ಸ್ವೀಕಾರಾರ್ಹವಲ್ಲದ ಪ್ರಮಾಣದ ಡೈಥಿಲೀನ್ ಗ್ಲೈಕೋಲ್ ಮತ್ತು / ಅಥವಾ ಎಥಿಲೀನ್ ಅನ್ನು ಹೊಂದಿರುವುದು ಕಂಡುಬಂದಿದೆ ಎಂದು ಹೇಳಿಕೆ ತಿಳಿಸಿದೆ. ಈ ಎರಡೂ ಔಷಧೀಯ ಕಂಪನಿ ನೋಯ್ಡಾ ಮೂಲದಲ್ಲಿದೆ. WHO ಎಚ್ಚರಿಕೆಯ ಬಗ್ಗೆ ಕಂಪನಿಯಿಂದ ಈ ವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ ಅದರ ವೆಬ್‌ಸೈಟ್ ಅನ್ನು ತೆಗೆದುಹಾಕಲಾಗಿದೆ.

WHO ನಿಷೇಧ ಹೇರಿದರೂ ಕೂಡ ಈವರೆಗೂ ತಯಾರಕರು ಈ ಉತ್ಪನ್ನಗಳ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ಮಾಹಿತಿ ನೀಡಿಲ್ಲ. ಹಾಗಾಗಿ ಇದೀಗ ಈ ಎರಡು ಉತ್ಪನ್ನಗಳು ಇತರ ದೇಶಗಳಲ್ಲಿ ಮಾರುಕಟ್ಟೆ ಅನುಮೋದನೆಯನ್ನು ಹೊಂದಿರಬಹುದು ಅಥವಾ ಅನೌಪಚಾರಿಕ ಮಾರುಕಟ್ಟೆಗಳ ಮೂಲಕ ಸರಬರಾಜು ಮಾಡಿರಬಹುದು ಎಂದು WHO ಕಳವಳ ವ್ಯಕ್ತಪಡಿಸಿದೆ.

ಇಂತಹ ಕೆಳದರ್ಜೆಯ ಔಷಧಿಗಳಿಂದ ಯಾವುದೇ ರೋಗಿಗಳಿಗೆ ಹಾನಿಯಾಗದಂತೆ ತಡೆಯಲು ಸಧ್ಯ ಮಾರುಕಟ್ಟೆಯಲ್ಲಿರುವ ಇಂತಹ ಉತ್ಪನ್ನಗಳನ್ನು ಪತ್ತೆಹಚ್ಚಬೇಕಿದೆ ಮತ್ತು ತೆಗೆದುಹಾಕಬೇಕಿದೆ. ಪ್ರಪಂಚದಾದ್ಯಂತದ ಈ ಉತ್ಪನ್ನಗಳ ಮೇಲೆ ಕಣ್ಗಾವಲು ಹೆಚ್ಚಿಸಲು ಔಷಧ ನಿಯಂತ್ರಕರನ್ನು WHO ಕೇಳಿಕೊಂಡಿದೆ.

ಇದೀಗ ನೀಷದ ಹೇರಲಾದ ಆ ಸಿರಪ್‌ ಗಳು 21% ರಷ್ಟು ಹೆಚ್ಚಿನ ಪ್ರಮಾಣದಲ್ಲಿ DEG ಅನ್ನು ಒಳಗೊಂಡಿವೆ ಎಂದು ಈ ಹಿಂದೆ ವೈರ್ ವರದಿ ಮಾಡಿತ್ತು. ಆ ಸಿರಪ್ ಗಳಿಂದ ನಮ್ಮ ದೇಶದ 70 ಮಕ್ಕಳ ಸಾವಿಗಿಡಾಗಿದ್ದಾರೆ ಎಂದು ಗ್ಯಾಂಬಿಯಾ ಸಂಸತ್ತು ವರದಿ ನೀಡಿತ್ತು. ಆದರೆ ಭಾರತ ಸರ್ಕಾರ ಮಾತ್ರ ಈವರೆಗೂ  ಆ ವರದಿಯ ಬಗ್ಗೆ ಪ್ರತಿಕ್ರಿಯಿಸಿಲ್ಲ.

ಡಿಸೆಂಬರ್ 27, 2022 ರಂದು ಎರಡು ಉತ್ಪನ್ನಗಳಲ್ಲಿ ಒಂದಾದ ಡಾಕ್ಸ್-1 ಮ್ಯಾಕ್ಸ್ ಸಿರಪ್ ವಿರುದ್ಧ ಉಜ್ಬೇಕಿಸ್ತಾನ್ ಮೊದಲ ಬಾರಿಗೆ ಎಚ್ಚರಿಕೆ ನೀಡಿತ್ತು. ಈವರೆಗೆ, “ತೀವ್ರವಾದ ಉಸಿರಾಟದ ಕಾಯಿಲೆ ಹೊಂದಿರುವ 21 ಮಕ್ಕಳಲ್ಲಿ 18 ಡಾಕ್ -1 ಮ್ಯಾಕ್ಸ್ ಸಿರಪ್ (sic) ತೆಗೆದುಕೊಮಡಿಂದರ ಪರಿಣಾಮವಾಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.” ಇನ್ನು ಮೃತ ಮಕ್ಕಳು, ಆಸ್ಪತ್ರೆಗೆ ದಾಖಲಾಗುವ ಮೊದಲು, ಈ ಔಷಧಿಯನ್ನು ಮನೆಯಲ್ಲಿ 2-7 ದಿನಗಳವರೆಗೆ ದಿನಕ್ಕೆ 3-4 ಬಾರಿ, 2.5-5 ಮಿಲಿ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಭಾರತೀಯ ಔಷಧ ನಿಯಂತ್ರಕ, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ತಂಡವು ಈ ಔಷಧಿಗಳ ಮೇಲೆ ತನಿಖೆ ನಡೆಸಲು ಮಾದರಿಗಳನ್ನು ಸಂಗ್ರಹಿಸಿದೆ. ಇನ್ನು ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಪ್ರತಿಯೊಂದು ಬ್ಯಾಚ್ ಉತ್ಪನ್ನಗಳನ್ನು ತಯಾರಕರು ಸಂರಕ್ಷಿಸಬೇಕು ಮತ್ತು ಆ ಮಾದರಿಗಳನ್ನು ನಿಯಂತ್ರಣ ಮಾದರಿಗಳು ಎಂದು ಕರೆಯಲಾಗುತ್ತದೆ. ಅವು ತನಿಖೆಗೆ ಬಳಕೆಯಾಗಲಿವೆ ಎಂದು ತಿಳಿಸಿಲಾಗಿದೆ.

ಇನ್ನು ಈ ಉತ್ಪನ್ನಗಳ ಮೇಲೆ ಭಾರತದಲ್ಲೂ ತನಿಖೆ ನಡೆಯುತ್ತಿದ್ದ, ಇನ್ನೂ ಫಲಿತಾಂಶಗಳು ಬಂದಿಲ್ಲ. ಆದರೆ ಉತ್ತರ ಪ್ರದೇಶ ರಾಜ್ಯದ ಡ್ರಗ್ ಕಂಟ್ರೋಲರ್ ಮಾತ್ರ ಜನವರಿ 10 ರಂದು ಮರಿಯನ್ ಬಯೋಟೆಕ್‌ನ ಪರವಾನಗಿಯನ್ನು ರದ್ದುಗೊಳಿಸಿದೆ.

ಈ ಬಗ್ಗೆ ನೋಯ್ಡಾದ ಡ್ರಗ್ ಇನ್ಸ್‌ಪೆಕ್ಟರ್ ವೈಭವ್ ಬಬ್ಬರ್ ಪ್ರತಿಕ್ರಿಯೆ ನೀಡಿದ್ದು, “ನಮಗೆ ಸಾಕಷ್ಟು ದಾಖಲೆಗಳನ್ನು ಒದಗಿಸದ ಕಾರಣ ನಾವು ಮೇರಿಯನ್ ಬಯೋಟೆಕ್ ಕಂಪನಿಯ ಉತ್ಪಾದನಾ ಪರವಾನಗಿಯನ್ನು ಅಮಾನತುಗೊಳಿಸಿದ್ದೇವೆ. ತಪಾಸಣೆಯ ಸಮಯದಲ್ಲಿ ಅವರು [ಮರಿಯನ್ ಬಯೋಟೆಕ್] ಒದಗಿಸದ ದಾಖಲೆಗಳ ಆಧಾರದ ಮೇಲೆ ರಾಜ್ಯ ಪರವಾನಗಿ ಪ್ರಾಧಿಕಾರದಿಂದ ಶೋಕಾಸ್ ನೋಟಿಸ್ ನೀಡಲಾಗಿದೆ. ಕಂಪನಿಯಲ್ಲಿ ಎಲ್ಲಾ ಔಷಧಗಳ ತಯಾರಿಕೆಯನ್ನು ನಿಲ್ಲಿಸಲಾಗಿದೆ ಎಂದು ANI ಗೆ ತಿಳಿಸಿದ್ದಾರೆ.

ಇದನ್ನು ಓದಿ: ಸ್ಯಾಂಟ್ರೋ ರವಿ BJP ಕಾರ್ಯಕರ್ತ ಎನ್ನುವ ಕಾರಣಕ್ಕೆ ಆತನ ಬಂಧನವಾಗುತ್ತಿಲ್ಲವೇ? ದಿನೇಶ್ ಗುಂಡೂರಾವ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...