Homeಮುಖಪುಟಭಾರತದ ಎರಡು ಕೆಮ್ಮು ಸಿರಪ್ ಗಳ ಬಳಕೆ ಬಗ್ಗೆ ಎಚ್ಚರಿಕೆ ನೀಡಿದ WHO

ಭಾರತದ ಎರಡು ಕೆಮ್ಮು ಸಿರಪ್ ಗಳ ಬಳಕೆ ಬಗ್ಗೆ ಎಚ್ಚರಿಕೆ ನೀಡಿದ WHO

- Advertisement -
- Advertisement -

ಉಜ್ಬೇಕಿಸ್ತಾನ್‌ನಲ್ಲಿರುವ ಮಕ್ಕಳಿಗೆ ಭಾರತದಲ್ಲಿ ತಯಾರಿಸಿದ ಎರಡು ಕೆಮ್ಮು ಸಿರಪ್‌ಗಳನ್ನು ಬಳಸದಂತೆ ವಿಶ್ವ ಆರೋಗ್ಯ ಸಂಸ್ಥೆ (WHO) ಎಚ್ಚರಿಕೆ ನೀಡಿದ್ದು, ದೇಶದ 19 ಮಕ್ಕಳ ಸಾವಿನ ನಂತರ ಈ ಹೇಳಿಕೆಯನ್ನು ವಿಶ್ವ ಸಂಸ್ಥೆ ನೀಡಿದೆ.

ಭಾರತದ ಮರಿಯನ್ ಬಯೋಟೆಕ್ ತಯಾರಿಸಿದ ಎರಡು ಕೆಮ್ಮು ಸಿರಪ್‌ಗಳನ್ನು ಮಕ್ಕಳಿಗೆ ಬಳಸಬಾರದು ಎಂದು WHO ಹೇಳಿಕೆಯಲ್ಲಿ ತಿಳಿಸಿದೆ. ಕಳೆದ ಡಿಸೆಂಬರ್‌ನಲ್ಲಿ ಸಂಭವಿಸಿದ ಮಕ್ಕಳ ಸಾವಿಗೆ ಭಾರತೀಯ ಫಾರ್ಮಾಸ್ಯುಟಿಕಲ್ ಕಂಪನಿ ತಯಾರಿಸಿದ ಔಷಧಿ ಸೇವಿಸಿದ್ದ ಕಾರಣ ಎಂದು ಉಜ್ಬೇಕಿಸ್ತಾನ್‌ನ ಆರೋಗ್ಯ ಸಚಿವಾಲಯವು ಹೇಳಿಕೆ ನೀಡಿತ್ತು.

AMBRONOL ಸಿರಪ್ ಮತ್ತು DOK-1 ಮ್ಯಾಕ್ಸ್ ಸಿರಪ್ ಹೆಸರಿನ ಉತ್ಪನ್ನಗಳ ಪ್ರಯೋಗಾಲಯ ವಿಶ್ಲೇಷಣೆಯು ಸ್ವೀಕಾರಾರ್ಹವಲ್ಲದ ಪ್ರಮಾಣದ ಡೈಥಿಲೀನ್ ಗ್ಲೈಕೋಲ್ ಮತ್ತು / ಅಥವಾ ಎಥಿಲೀನ್ ಅನ್ನು ಹೊಂದಿರುವುದು ಕಂಡುಬಂದಿದೆ ಎಂದು ಹೇಳಿಕೆ ತಿಳಿಸಿದೆ. ಈ ಎರಡೂ ಔಷಧೀಯ ಕಂಪನಿ ನೋಯ್ಡಾ ಮೂಲದಲ್ಲಿದೆ. WHO ಎಚ್ಚರಿಕೆಯ ಬಗ್ಗೆ ಕಂಪನಿಯಿಂದ ಈ ವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ ಅದರ ವೆಬ್‌ಸೈಟ್ ಅನ್ನು ತೆಗೆದುಹಾಕಲಾಗಿದೆ.

WHO ನಿಷೇಧ ಹೇರಿದರೂ ಕೂಡ ಈವರೆಗೂ ತಯಾರಕರು ಈ ಉತ್ಪನ್ನಗಳ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ಮಾಹಿತಿ ನೀಡಿಲ್ಲ. ಹಾಗಾಗಿ ಇದೀಗ ಈ ಎರಡು ಉತ್ಪನ್ನಗಳು ಇತರ ದೇಶಗಳಲ್ಲಿ ಮಾರುಕಟ್ಟೆ ಅನುಮೋದನೆಯನ್ನು ಹೊಂದಿರಬಹುದು ಅಥವಾ ಅನೌಪಚಾರಿಕ ಮಾರುಕಟ್ಟೆಗಳ ಮೂಲಕ ಸರಬರಾಜು ಮಾಡಿರಬಹುದು ಎಂದು WHO ಕಳವಳ ವ್ಯಕ್ತಪಡಿಸಿದೆ.

ಇಂತಹ ಕೆಳದರ್ಜೆಯ ಔಷಧಿಗಳಿಂದ ಯಾವುದೇ ರೋಗಿಗಳಿಗೆ ಹಾನಿಯಾಗದಂತೆ ತಡೆಯಲು ಸಧ್ಯ ಮಾರುಕಟ್ಟೆಯಲ್ಲಿರುವ ಇಂತಹ ಉತ್ಪನ್ನಗಳನ್ನು ಪತ್ತೆಹಚ್ಚಬೇಕಿದೆ ಮತ್ತು ತೆಗೆದುಹಾಕಬೇಕಿದೆ. ಪ್ರಪಂಚದಾದ್ಯಂತದ ಈ ಉತ್ಪನ್ನಗಳ ಮೇಲೆ ಕಣ್ಗಾವಲು ಹೆಚ್ಚಿಸಲು ಔಷಧ ನಿಯಂತ್ರಕರನ್ನು WHO ಕೇಳಿಕೊಂಡಿದೆ.

ಇದೀಗ ನೀಷದ ಹೇರಲಾದ ಆ ಸಿರಪ್‌ ಗಳು 21% ರಷ್ಟು ಹೆಚ್ಚಿನ ಪ್ರಮಾಣದಲ್ಲಿ DEG ಅನ್ನು ಒಳಗೊಂಡಿವೆ ಎಂದು ಈ ಹಿಂದೆ ವೈರ್ ವರದಿ ಮಾಡಿತ್ತು. ಆ ಸಿರಪ್ ಗಳಿಂದ ನಮ್ಮ ದೇಶದ 70 ಮಕ್ಕಳ ಸಾವಿಗಿಡಾಗಿದ್ದಾರೆ ಎಂದು ಗ್ಯಾಂಬಿಯಾ ಸಂಸತ್ತು ವರದಿ ನೀಡಿತ್ತು. ಆದರೆ ಭಾರತ ಸರ್ಕಾರ ಮಾತ್ರ ಈವರೆಗೂ  ಆ ವರದಿಯ ಬಗ್ಗೆ ಪ್ರತಿಕ್ರಿಯಿಸಿಲ್ಲ.

ಡಿಸೆಂಬರ್ 27, 2022 ರಂದು ಎರಡು ಉತ್ಪನ್ನಗಳಲ್ಲಿ ಒಂದಾದ ಡಾಕ್ಸ್-1 ಮ್ಯಾಕ್ಸ್ ಸಿರಪ್ ವಿರುದ್ಧ ಉಜ್ಬೇಕಿಸ್ತಾನ್ ಮೊದಲ ಬಾರಿಗೆ ಎಚ್ಚರಿಕೆ ನೀಡಿತ್ತು. ಈವರೆಗೆ, “ತೀವ್ರವಾದ ಉಸಿರಾಟದ ಕಾಯಿಲೆ ಹೊಂದಿರುವ 21 ಮಕ್ಕಳಲ್ಲಿ 18 ಡಾಕ್ -1 ಮ್ಯಾಕ್ಸ್ ಸಿರಪ್ (sic) ತೆಗೆದುಕೊಮಡಿಂದರ ಪರಿಣಾಮವಾಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.” ಇನ್ನು ಮೃತ ಮಕ್ಕಳು, ಆಸ್ಪತ್ರೆಗೆ ದಾಖಲಾಗುವ ಮೊದಲು, ಈ ಔಷಧಿಯನ್ನು ಮನೆಯಲ್ಲಿ 2-7 ದಿನಗಳವರೆಗೆ ದಿನಕ್ಕೆ 3-4 ಬಾರಿ, 2.5-5 ಮಿಲಿ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಭಾರತೀಯ ಔಷಧ ನಿಯಂತ್ರಕ, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ತಂಡವು ಈ ಔಷಧಿಗಳ ಮೇಲೆ ತನಿಖೆ ನಡೆಸಲು ಮಾದರಿಗಳನ್ನು ಸಂಗ್ರಹಿಸಿದೆ. ಇನ್ನು ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಪ್ರತಿಯೊಂದು ಬ್ಯಾಚ್ ಉತ್ಪನ್ನಗಳನ್ನು ತಯಾರಕರು ಸಂರಕ್ಷಿಸಬೇಕು ಮತ್ತು ಆ ಮಾದರಿಗಳನ್ನು ನಿಯಂತ್ರಣ ಮಾದರಿಗಳು ಎಂದು ಕರೆಯಲಾಗುತ್ತದೆ. ಅವು ತನಿಖೆಗೆ ಬಳಕೆಯಾಗಲಿವೆ ಎಂದು ತಿಳಿಸಿಲಾಗಿದೆ.

ಇನ್ನು ಈ ಉತ್ಪನ್ನಗಳ ಮೇಲೆ ಭಾರತದಲ್ಲೂ ತನಿಖೆ ನಡೆಯುತ್ತಿದ್ದ, ಇನ್ನೂ ಫಲಿತಾಂಶಗಳು ಬಂದಿಲ್ಲ. ಆದರೆ ಉತ್ತರ ಪ್ರದೇಶ ರಾಜ್ಯದ ಡ್ರಗ್ ಕಂಟ್ರೋಲರ್ ಮಾತ್ರ ಜನವರಿ 10 ರಂದು ಮರಿಯನ್ ಬಯೋಟೆಕ್‌ನ ಪರವಾನಗಿಯನ್ನು ರದ್ದುಗೊಳಿಸಿದೆ.

ಈ ಬಗ್ಗೆ ನೋಯ್ಡಾದ ಡ್ರಗ್ ಇನ್ಸ್‌ಪೆಕ್ಟರ್ ವೈಭವ್ ಬಬ್ಬರ್ ಪ್ರತಿಕ್ರಿಯೆ ನೀಡಿದ್ದು, “ನಮಗೆ ಸಾಕಷ್ಟು ದಾಖಲೆಗಳನ್ನು ಒದಗಿಸದ ಕಾರಣ ನಾವು ಮೇರಿಯನ್ ಬಯೋಟೆಕ್ ಕಂಪನಿಯ ಉತ್ಪಾದನಾ ಪರವಾನಗಿಯನ್ನು ಅಮಾನತುಗೊಳಿಸಿದ್ದೇವೆ. ತಪಾಸಣೆಯ ಸಮಯದಲ್ಲಿ ಅವರು [ಮರಿಯನ್ ಬಯೋಟೆಕ್] ಒದಗಿಸದ ದಾಖಲೆಗಳ ಆಧಾರದ ಮೇಲೆ ರಾಜ್ಯ ಪರವಾನಗಿ ಪ್ರಾಧಿಕಾರದಿಂದ ಶೋಕಾಸ್ ನೋಟಿಸ್ ನೀಡಲಾಗಿದೆ. ಕಂಪನಿಯಲ್ಲಿ ಎಲ್ಲಾ ಔಷಧಗಳ ತಯಾರಿಕೆಯನ್ನು ನಿಲ್ಲಿಸಲಾಗಿದೆ ಎಂದು ANI ಗೆ ತಿಳಿಸಿದ್ದಾರೆ.

ಇದನ್ನು ಓದಿ: ಸ್ಯಾಂಟ್ರೋ ರವಿ BJP ಕಾರ್ಯಕರ್ತ ಎನ್ನುವ ಕಾರಣಕ್ಕೆ ಆತನ ಬಂಧನವಾಗುತ್ತಿಲ್ಲವೇ? ದಿನೇಶ್ ಗುಂಡೂರಾವ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...