HomeUncategorizedಪಕ್ಷದ ಜಾಹೀರಾತಿಗೆ ವ್ಯಯಿಸಿದ 164 ಕೋಟಿ ರೂ. ಪಾವತಿಸಿ: ಕೇಜ್ರಿವಾಲ್ ಸರ್ಕಾರಕ್ಕೆ ನೋಟಿಸ್

ಪಕ್ಷದ ಜಾಹೀರಾತಿಗೆ ವ್ಯಯಿಸಿದ 164 ಕೋಟಿ ರೂ. ಪಾವತಿಸಿ: ಕೇಜ್ರಿವಾಲ್ ಸರ್ಕಾರಕ್ಕೆ ನೋಟಿಸ್

- Advertisement -
- Advertisement -

ಅರವಿಂದ್‌ ಕೇಜ್ರಿವಾಲ್‌ ಅವರ ಸರಕಾರವು ಆಮ್‌ ಆದ್ಮಿ ಪಕ್ಷದ ರಾಜಕೀಯ ಜಾಹೀರಾತಿಗೆ  ₹ 163.62 ಕೋಟಿ ರೂ. ಹಣವನ್ನು ಖರ್ಚು ಮಾಡಿದೆ ಎಂದು ಮಾಹಿತಿ ಮತ್ತು ಪ್ರಚಾರ ನಿರ್ದೇಶನಾಲಯ (ಡಿಐಪಿ) ನೋಟಿಸ್‌ ನೀಡಿದೆ. 10 ದಿನಗಳೊಳಗೆ ಆ ಹಣವನ್ನು ಎಎಪಿ ಪಾವತಿಸಬೇಕು, ಎಂದು ಸೂಚನೆಯಲ್ಲಿ ಎಚ್ಚರಿಸಿದೆ. ವಸೂಲಿಯಾಗದೇ ಇದ್ದಲ್ಲಿ ಪಕ್ಷದ ಕಚೇರಿಗೆ ಬೀಗ ಜಡಿಯಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

“ಒಟ್ಟು ₹ 163,61,88,265/- ಮೊತ್ತವನ್ನು ಮರುಪಾವತಿಸಲು ಅಂತಿಮ ಅವಕಾಶವನ್ನು ನೀಡಲಾಗಿದೆ. ಈ ನೋಟಿಸ್ ಜಾರಿ ಮಾಡಿದ 10 ದಿನಗಳೊಳಗೆ ಕೆಳಗೆ ನೀಡಲಾದ ಖಾತೆಗೆ ಹಣ ಠೇವಣಿ ಮಾಡಬೇಕು. ಒಂದು ವೇಳೆ ನೀಡಿದ ಕಾಲಾವಕಾಶದಲ್ಲಿ ಹಣ ಮರುಪಾವತಿ ಮಾಡದಿದ್ದಲ್ಲಿ ಕಾನೂನಿನ ಪ್ರಕಾರ ಮುಂದಿನ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ,” ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.

2017ರ ಮಾರ್ಚ್ 31ರವರೆಗೆ ಪಕ್ಷದ ಜಾಹೀರಾತಿಗಾಗಿ ಒಟ್ಟು ₹ 99,31,10,053 (ರೂ. 99.31 ಕೋಟಿ) ವ್ಯಯಿಸಲಾಗಿದೆ. ಇನ್ನು ಉಳಿದ ₹ 64,30,78,212 (ರೂ. 64.31 ಕೋಟಿ) ಮೊತ್ತ ದಂಡದ ಬಡ್ಡಿಯಾಗಿದೆ ಎಂದು ಹಣದ ಬಗ್ಗೆ ನೋಟಿಸ್ ನಲ್ಲಿ ವಿವರಿಸಲಾಗಿದೆ.

ಇನ್ನು ಈ ನೋಟಿಸ್‌ಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು, ‘ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ, ಬಿಜೆಪಿ ಚುನಾಯಿತ ಸಚಿವರು ಮತ್ತು ಆಡಳಿತಾರೂಢ ಸರ್ಕಾರ ಎಎಪಿಯನ್ನು ಗುರಿಯಾಗಿಸಿಕೊಂಡು ಈ ನೋಟಿಸ್ ನೀಡಲಾಗಿದೆ ಎಂದು ಆರೋಪಿಸಿದರು.

ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷವು ಸರ್ಕಾರಿ ಜಾಹೀರಾತಿನ ಸೋಗಿನಲ್ಲಿ ರಾಜಕೀಯ ಜಾಹೀರಾತುಗಳನ್ನು ನಡೆಸುತ್ತಿದೆ ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಆರೋಪಿಸಿದ್ದರು. ಇದಾದ ಸುಮಾರು ಒಂದು ತಿಂಗಳ ನಂತರ ಈ ಬೆಳವಣಿಗೆಯಾಗಿದೆ.

ಡಿಸೆಂಬರ್ 20 ರಂದು ಲೆಫ್ಟಿನೆಂಟ್ ಗವರ್ನರ್ ಅವರು ಎಎಪಿಯಿಂದ ₹ 97 ಕೋಟಿ ವಸೂಲಿ ಮಾಡುವಂತೆ ಆದೇಶ ಹೊರಡಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಎಎಪಿ, ಅಂತಹ ಆದೇಶಗಳನ್ನು ರವಾನಿಸಲು ಅವರಿಗೆ ಯಾವುದೇ ಅಧಿಕಾರವಿಲ್ಲ ಎಂದು ಹೇಳಿತ್ತು.

ಎಎಪಿಯ ಮುಖ್ಯ ವಕ್ತಾರ ಸೌರಭ್ ಭಾರದ್ವಾಜ್ ಅವರು, ಲೆಫ್ಟಿನೆಂಟ್ ಗವರ್ನರ್ ಕಳುಹಿಸಿದ ಆದೇಶವನ್ನು “ಹೊಸ ಪ್ರೇಮ ಪತ್ರ” ಎಂದು ವ್ಯಂಗ್ಯವಾಡಿದ್ದರು. “ನಮ್ಮದು ಈಗ ರಾಷ್ಟ್ರೀಯ ಪಕ್ಷವಾಗಿ ಗುರುತಿಸಿಕೊಂಡಿದೆ. ಅಷ್ಟೇ ಅಲ್ಲದೇ ಎಂಸಿಡಿಯಲ್ಲಿ ಅಧಿಕಾರವನ್ನು ಕಿತ್ತುಕೊಂಡಿದ್ದೇವೆ ಹಾಗಾಗಿ ಬಿಜೆಪಿ ಗಲಿಬಿಲಿಗೊಂಡಿದೆ. ಎಲ್‌ಜಿ ಸಾಹಬ್ ಅವರು ಬಿಜೆಪಿಯ ನಿರ್ದೇಶನದಂತೆ ಎಲ್ಲವನ್ನೂ ಮಾಡುತ್ತಿದ್ದಾರೆ ಮತ್ತು ಇದು ದೆಹಲಿಯ ಜನರನ್ನು ತೊಂದರೆಗೊಳಿಸುತ್ತಿದೆ. ಲೆಫ್ಟಿನೆಂಟ್ ಗವರ್ನರ್ ನಿರ್ದೇಶನಗಳಿಗೆ ಕಾನೂನಿನ ದೃಷ್ಟಿಯಲ್ಲಿ ಯಾವುದೇ ಮಾನ್ಯತೆ ಇರುವುದಿಲ್ಲ ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...