Homeರಾಜಕೀಯಹಿರಿಯ ಸಮಾಜವಾದಿ ನಾಯಕ, ಮಾಜಿ ಸಚಿವ ಶರದ್ ಯಾದವ್ (75) ನಿಧನ

ಹಿರಿಯ ಸಮಾಜವಾದಿ ನಾಯಕ, ಮಾಜಿ ಸಚಿವ ಶರದ್ ಯಾದವ್ (75) ನಿಧನ

ಮಂಡಲ ಆಯೋಗ ಹೋರಾಟದ ‘ಮಸೀಹಾ’ ಎಂದು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಶರದ್‌ ಯಾದವ್‌ ಅವರನ್ನು ಬಣ್ಣಿಸಿದ್ದಾರೆ

- Advertisement -
- Advertisement -

ಹಿರಿಯ ಸಮಾಜವಾದಿ, ಒಕ್ಕೂಟ ಸರ್ಕಾರದ ಮಾಜಿ ಸಚಿವ ಶರದ್ ಯಾದವ್ ಅವರು ತಮ್ಮ 75 ನೇ ವಯಸ್ಸಿನಲ್ಲಿ ಗುರುವಾರ ನಿಧನರಾದರು. ಏಳು ಬಾರಿ ಲೋಕಸಭೆಗೆ ಚುನಾಯಿತರಾಗಿರುವ ಅವರು, ಜಯಪ್ರಕಾಶ್ ನಾರಾಯಣ್‌ ಅವರಿಂದ ಹಿಡಿದು ಲಾಲು ಪ್ರಸಾದ್‌ ಯಾದವ್‌ವರೆಗಿನ ರಾಜಕೀಯ ದಿಗ್ಗಜರ ಜೊತೆಗೆ ಅವರು ರಾಜಕೀಯದಲ್ಲಿ ಸಕ್ರೀಯವಾಗಿದ್ದರು.

ಇಂಜಿನಿಯರ್ ಪದವೀಧರರಾಗಿದ್ದ ಶರದ್‌ ಯಾದವ್ ಅವರು ರಾಮ್ ಮನೋಹರ್ ಲೋಹಿಯಾ ಅವರ ಸಮಾಜವಾದಕ್ಕೆ ಆಕರ್ಷಿತರಾಗಿ ರಾಜಕೀಯಕ್ಕೆ ಧುಮುಕಿದರು. ಇಂದಿರಾಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧದ ಪ್ರತಿಭಟನೆಗಳ ಹಿನ್ನಲೆಯಲ್ಲಿ ನಡೆದ ಚುನಾವಣೆಯಲ್ಲಿ ಚುನಾಯಿತರಾದ ಅವರು ಕಾಂಗ್ರೆಸ್ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಜಯಪ್ರಕಾಶ್ ನಾರಾಯಣ್‌ ಅವರೊಂದಿಗೆ ಕೆಲಸ ಮಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶರದ್‌ ಯಾದವ್‌ ಅವರು ಮಗಳು ಸುಭಾಷಿಣಿ ಶರದ್ ಯಾದವ್ ಅವರು ಟ್ವಿಟರ್‌ನಲ್ಲಿ ಮೂರು ಪದಗಳ ಪೋಸ್ಟ್‌ನೊಂದಿಗೆ ತಮ್ಮ ತಂದೆಯ ನಿಧನದ ಸುದ್ದಿಯನ್ನು ಹಂಚಿಕೊಂಡಿದ್ದಾರೆ. “ಪಾಪಾ ನಹಿ ರಹೆನ್ (ಅಪ್ಪ ಇನ್ನಿಲ್ಲ)” ಎಂದು ಅವರು ಟ್ವೀಟ್ ಮಾಡಿದ್ದಾರೆ.

 

ಶರದ್‌ ಯಾದವ್ ಅವರು ಪ್ರಬಲ ವಾಗ್ಮಿಯಾಗಿ ತಮ್ಮ ಛಾಪು ಮೂಡಿಸಿದ್ದ ಅವರು ಉತ್ತರ ಪ್ರದೇಶದಲ್ಲಿ ಕೂಡಾ ಚುನಾವಣೆಗೆ ಸ್ಪರ್ಧಿಸಿದ್ದರು. ಅಂತಿಮವಾಗಿ ಬಿಹಾರವನ್ನಷ್ಟೆ ತಮ್ಮ ರಾಜಕೀಯ ಕ್ಷೇತ್ರವಾಗಿ ಮಾಡಿಕೊಂಡ ಅವರು ವಿ.ಪಿ. ಸಿಂಗ್ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದ ಸಂಪುಟ ಸಚಿವರಾಗಿದ್ದರು.

1980 ಮತ್ತು 90 ರ ದಶಕದಲ್ಲಿ ರಾಜಕೀಯವನ್ನು ರೂಪಿಸುವಲ್ಲಿ ಶರದ್‌ ಯಾದವ್ ಪ್ರಮುಖ ಪಾತ್ರ ವಹಿಸಿದ್ದರು. 1989 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಯಶಸ್ವಿಯಾಗಿ ಎದುರಿಸಿದ್ದ ಅವರು 1980 ರ ದಶಕದಲ್ಲಿ ಜನತಾ ದಳದ ರಚನೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.

ಮಂಡಲ್ ಆಯೋಗದ ವರದಿಯನ್ನು ಜಾರಿಗೆ ತರಲು ಆಗಿನ ಪ್ರಧಾನಿ ವಿ.ಪಿ. ಸಿಂಗ್ ಅವರ ಮೇಲೆ ಒತ್ತಡ ಹೇರಿದ ಪ್ರಮುಖ ನಾಯಕರಲ್ಲಿ ಶರದ್‌ ಯಾದವ್‌ ಕೂಡಾ ಒಬ್ಬರಾಗಿದ್ದಾರೆ. ಆದರೆ ಮಹಿಳೆಯರಿಗೆ 33% ಮೀಸಲಾತಿಯನ್ನು ಪರಿಚಯಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದ ಅವರು ಹಿಂದುಳಿದ ವರ್ಗಗಳ ಪ್ರತಿರೋಧವನ್ನು ಸಂಘಟಿಸಿದ್ದರು. ಈ ಬೇಡಿಕೆಯನ್ನು ಅವರು ಮೇಲ್ಜಾತಿ ಗಣ್ಯರ ಪಿತೂರಿ ಎಂದು ಬಣ್ಣಿಸಿದ್ದರು.

2017 ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ, ನಿತೀಶ್ ನೇತೃತ್ವದ ಜೆಡಿಯು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಾಗ ಶರದ್ ಯಾದವ್ ಅವರನ್ನು ಅನುಸರಿಸಲು ನಿರಾಕರಿಸಿದರು. ಇದಕ್ಕಾಗಿ ಜೆಡಿಯು ಅವರನ್ನು ರಾಜ್ಯಸಭೆಯಿಂದ ಹೊರಹಾಕಲು ಪ್ರಯತ್ನಿಸಿತು. ನಂತರ, ಅವರು ನಿತೀಶ್ ಕುಮಾರ್ ಅವರೊಂದಿಗೆ ಬೇರ್ಪಟ್ಟು 2018 ರಲ್ಲಿ ತಮ್ಮದೇ ಆದ ಪಕ್ಷವಾದ ಲೋಕತಾಂತ್ರಿಕ ಜನತಾ ದಳ (LJD) ಅನ್ನು ಸ್ಥಾಪಿಸಿದರು. ಈ ಪಕ್ಷವನ್ನು ಐದು ವರ್ಷಗಳ ನಂತರ, 2022 ರಲ್ಲಿ ರಾಷ್ಟ್ರೀಯ ಜನತಾ ದಳ (RJD) ನೊಂದಿಗೆ ವಿಲೀನಗೊಳಿಸಿದರು. ಅವರ ಪುತ್ರಿ ಸುಭಾಷಿಣಿಗೆ ಆರ್‌ಜೆಡಿಯ ರಾಷ್ಟ್ರೀಯ ಮಂಡಳಿಯಲ್ಲಿ ಸ್ಥಾನವನ್ನೂ ನೀಡಲಾಗಿತ್ತು.

ಶರದ್‌ ಯಾದವ್‌ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

“ಶ್ರೀ ಶರದ್ ಯಾದವ್ ಅವರ ನಿಧನದಿಂದ ನೋವಾಗಿದೆ. ಸಾರ್ವಜನಿಕ ಜೀವನದಲ್ಲಿ ಅವರು ಸುದೀರ್ಘ ವರ್ಷಗಳಲ್ಲಿ ಸಂಸದ ಮತ್ತು ಸಚಿವರಾಗಿ ತಮ್ಮನ್ನು ಗುರುತಿಸಿಕೊಂಡರು. ಅವರು ಡಾ. ಲೋಹಿಯಾ ಅವರ ಆದರ್ಶಗಳಿಂದ ಹೆಚ್ಚು ಪ್ರೇರಿತರಾಗಿದ್ದರು. ನಾನು ನಮ್ಮ ನಡುವಿನ ಸಂವಾದಗಳನ್ನು ಯಾವಾಗಲೂ ಗೌರವಿಸುತ್ತದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ” ಎಂದು ಪ್ರಧಾನಿ ಹೇಳಿದ್ದಾರೆ.

ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಶರದ್‌ ಯಾದವ್‌ ಅವರನ್ನು ‘ಮಂಡಲ ಮಸೀಹಾ’ ಎಂದು ಬಣ್ಣಿಸಿದ್ದಾರೆ.

“ಮಹಾನ್ ಸಮಾಜವಾದಿ ನಾಯಕ, ನನ್ನ ಆಪ್ತರ ನಿಧನದ ಬಗ್ಗೆ ತಿಳಿದು ನಾನು ತೀವ್ರ ದುಃಖದಲ್ಲಿದ್ದೇನೆ. ನನಗೆ ಏನನ್ನೂ ಹೇಳಲು ಸಾಧ್ಯವಾಗುತ್ತಿಲ್ಲ. ನಾನು ಮಾತಾ ಜೀ ಮತ್ತು ಸಹೋದರ ಶಾಂತನು ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಈ ದುಃಖದ ಸಮಯದಲ್ಲಿ, ಇಡೀ ಸಮಾಜವಾದಿ ಕುಟುಂಬ ಅವರೊಂದಿಗಿದೆ” ಎಂದು ಹೇಳಿದ್ದಾರೆ.

https://twitter.com/TejashwiOffice/status/1613612650642169856.

ಮಾಜಿ ಪ್ರಧಾನಿ ದೇವೇಗೌಡ ಅವರು ಟ್ವೀಟ್ ಮಾಡಿ, “ನನ್ನ ಬಹುಕಾಲದ ಗೆಳೆಯ ಮತ್ತು ಜನತಾ ಪರಿವಾರದ ಸಹೋದ್ಯೋಗಿ ಶ್ರೀ ಶರದ್ ಯಾದವ್ ಅವರ ನಿಧನದ ಬಗ್ಗೆ ತಿಳಿದು ನನಗೆ ತುಂಬಾ ದುಃಖವಾಗಿದೆ. ಅವರ ಆರೋಗ್ಯ ವಿಚಾರಿಸಲು ಕೆಲ ತಿಂಗಳ ಹಿಂದೆ ಅವರನ್ನು ಭೇಟಿಯಾಗಿದ್ದೆ. ಅವನ್ ಆತ್ಮಕೆ ಶಾಂತಿ ಸಿಗಲಿ. ಓಂ ಶಾಂತಿ.” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...