Homeಕರ್ನಾಟಕಪಂಚಮಸಾಲಿ ಮೀಸಲಾತಿ ವಿಚಾರಕ್ಕೆ ತಾತ್ಕಾಲಿಕ ಬ್ರೇಕ್ ನೀಡಿದ ಹೈಕೋರ್ಟ್

ಪಂಚಮಸಾಲಿ ಮೀಸಲಾತಿ ವಿಚಾರಕ್ಕೆ ತಾತ್ಕಾಲಿಕ ಬ್ರೇಕ್ ನೀಡಿದ ಹೈಕೋರ್ಟ್

- Advertisement -
- Advertisement -

ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2-ಎ ಮೀಸಲಾತಿ ನೀಡಬಾರದು ಮತ್ತು ಮೀಸಲು ಪ್ರವರ್ಗ ಮಾರ್ಪಾಡು ಮಾಡುವಂತೆ ಕೋರಿ ಯಾವುದೇ ಜಾತಿ, ಉಪಜಾತಿ, ಸಮುದಾಯ ಬುಡಕಟ್ಟುಗಳು ಸಲ್ಲಿಸುವ ವೈಯಕ್ತಿಕ ಬೇಡಿಕೆಗಳನ್ನು ರಾಜ್ಯ ಸರ್ಕಾರ ಪ್ರೋತ್ಸಾಹಿಸದಂತೆ ತಡೆ ನೀಡಬೇಕು ಎಂಬ ಮಧ್ಯಂತರ ಮನವಿಯನ್ನು ಹೈಕೋರ್ಟ್‌ ಮಾನ್ಯ ಮಾಡಿದೆ. ಈ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ ನೀಡಿದೆ.

ಬಹುದಿನಗಳಿಂದ 2-ಎ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಪಂಚಮಸಾಲಿ ಲಿಂಗಾಯತ ಸಮುದಾಯ, ಈ ಚುನಾವಣೆ ಹೊಸ್ತಿಲಲ್ಲಿ ಮೀಸಲಾತಿ ಹೋರಾಟ ಅಸ್ತ್ರ ಪ್ರಯೋಗಿಸಿತ್ತು. ರಾಜ್ಯ ಬಿಜೆಪಿ ಸರ್ಕಾರ, ಹೊಸದಾಗಿ 2-ಸಿ ಹಾಗು 2-ಡಿ ಎಂದು ಪ್ರವರ್ಗ ಸೃಷ್ಟಿಸಿ ಈ ಸಮುದಾಯಕ್ಕೆ ಮೂಗಿಗೆ ತುಪ್ಪ ಸವರುವ ಕೆಲಸಕ್ಕೆ ಮುಂದಾಯಿತು. ಆದರೆ ಪಂಚಮಸಾಲಿ ಸಮುದಾಯ ಮಾತ್ರ 2ಎ ಮೀಸಲಾತಿ ಪಟ್ಟಿಗೆ ಸೇರಿಸಲೇಬೇಕು ಎಂದು ಪಟ್ಟು ಹಿಡಿದಿದೆ.

ಇದೀಗ ಹೈಕೋರ್ಟ್, ಮುಂದಿನ ವಿಚಾರಣೆವರೆಗೂ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಹೀಗಾಗಿ, ಸಮುದಾಯದ ಪ್ರವರ್ಗ 2–ಎಗೆ ಸೇರ್ಪಡೆ ಮಾಡುವ ಬೇಡಿಕೆ ಹಾಗೂ ಸರ್ಕಾರದ 2–ಸಿ, 2–ಡಿ ಪ್ರವರ್ಗ ಸೃಷ್ಟಿ ಮಾಡಿರುವ ನಿರ್ಣಯದ ಪ್ರಕ್ರಿಯೆಗೆ ಈಗ ತಾತ್ಕಾಲಿಕ ತಡೆ ಬಿದ್ದಂತಾಗಿದೆ.

ಬೆಂಗಳೂರಿನ ಜ್ಞಾನಭಾರತಿಯ ಮೃತ್ಯುಂಜಯ ನಗರದ ನಿವಾಸಿ ಡಿ.ಜಿ ರಾಘವೇಂದ್ರ ಬಿನ್ ಸೂರ್ಯ ದೇವಾಡಿಗ ಅವರು ಈ ವಿಚಾರವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ಅಶೋಕ್‌ ಎಸ್‌.ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠವು ಗುರುವಾರ ವಿಚಾರಣೆ ನಡೆಸಿತು.

ದಿನದ ಕಲಾಪ ಮುಗಿಯುವಾಗ ಸಂಜೆ 5.45 ರಲ್ಲಿ ಅರ್ಜಿದಾರರ ಪರ ಹಿರಿಯ ವಕೀಲ ರವಿವರ್ಮ ಕುಮಾರ್‌ ಅವರು, ‘ಪಂಚಮಸಾಲಿ ಸಮುದಾಯಕ್ಕೆ 2-ಎ ಮೀಸಲಾತಿ ನೀಡಬೇಕು ಎಂಬ ಬೇಡಿಕೆಗೆ ಸಂಬಂಧಿಸಿದ ಮಧ್ಯಂತರ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗವು ರಾಜ್ಯ ಸರ್ಕಾರಕ್ಕೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದೆ. ಈ ವರದಿಯನ್ನು ರಾಜ್ಯ ಸರ್ಕಾರ ಇನ್ನೂ ಕೋರ್ಟ್‌ಗೆ ಸಲ್ಲಿಸಿಲ್ಲ’ ಎಂದು ಆಕ್ಷೇಪಿಸಿದರು.

ಇದಕ್ಕೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಹಾಜರಾಗಿ ಪ್ರತಿಕ್ರಿಯಿಸಿದ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ಕೆ.ನಾವದಗಿ, ‘ವರದಿ ಸರ್ಕಾರದ ಪರಿಶೀಲನೆಯಲ್ಲಿದೆ. ಸರ್ಕಾರ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ. ವರದಿಯ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಇನ್ನಷ್ಟು ಕಾಲಾವಕಾಶ ನೀಡಬೇಕು. ಹಾಗಾಗಿ, ತಡೆ ನೀಡಬಾರದು’ ಎಂದು ಮನವಿ ಮಾಡಿದರು.

ಇದಕ್ಕೆ ರವಿವರ್ಮ ಕುಮಾರ್ ಪ್ರತಿಕ್ರಿಯಿಸಿ, ‘ಸರ್ಕಾರ ಸಮಯ ತೆಗೆದುಕೊಳ್ಳಲು ನಮ್ಮ ತಕರಾರಿಲ್ಲ, ಆದರೆ ಕೆಲವು ಸಮುದಾಯಗಳು ಸರ್ಕಾರದ ಮೇಲೆ ಅಸಾಂವಿಧಾನಿಕ ಬೇಡಿಕೆಯ ಈಡೇರಿಕೆಗಾಗಿ ಒತ್ತಡ ಹೇರುತ್ತಿವೆ. ಹಾಗಾಗಿ ಈ ವಿಷಯದಲ್ಲಿ ಯಥಾಸ್ಥಿತಿ ಕಾಪಾಡಿಕೊಳ್ಳಲು ಅದೇಶಿಸಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಮುಂದಿನ ವಿಚಾರಣೆಯನ್ನು ಇದೇ 30ಕ್ಕೆ ನಿಗದಿಪಡಿಸಿ ಅಲ್ಲಿಯವರೆಗೂ ಯಥಾಸ್ಥಿತಿ ಕಾಯ್ದುಕೊಂಡು ಹೋಗುವಂತೆ ಆದೇಶಿಸಿತು.

ಪಿಐಎಲ್ ನಲ್ಲಿ ಏನಿದೆ?

‘ದೇವಾಡಿಗ ಸಮುದಾಯಕ್ಕೆ ಸೇರಿದವನಾಗಿದ್ದು ಹಿಂದುಳಿದ ವರ್ಗಗಳಿಗೆ ದೊರೆಯುವ 2-ಎ ಮೀಸಲಾತಿಯ ಫಲಾನುಭವಿಯಾಗಿದ್ದೇನೆ‌. ಇತ್ತೀಚೆಗೆ ಲಿಂಗಾಯತ-ವೀರಶೈವ ಪಂಚಮಸಾಲಿ ಸಮುದಾಯದವರು ಪ್ರವರ್ಗ 2-ಎಗೆ ಸೇರಿಸಬೇಕು ಎಂ‌ಬ ಬೇಡಿಕೆಯನ್ನು ಮಂಡಿಸಿದ್ದಾರೆ. ಈ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಂಚಮಸಾಲಿ ಸಮುದಾಯವನ್ನು 2-ಎಗೆ ಸೇರ್ಪಡೆ ಮಾಡುವುದನ್ನು ಖಚಿತಪಡಿಸಿದ್ದು ಅದಕ್ಕಾಗಿ 2022ರ ಡಿಸೆಂಬರ್‌ 29ರ ಗಡುವು ನೀಡಿದ್ದರು. ಒಂದು ವೇಳೆ ಈ ಬಲಾಢ್ಯ ಹಾಗೂ ಮುಂದುವರಿದ ಸಮುದಾಯವನ್ನು 2-ಎಗೆ ಸೇರ್ಪಡೆ ಮಾಡಿದರೆ ಹಿಂದುಳಿದ ವರ್ಗಗಳಿಗೆ ಭರಿಸಲಾಗದ ಅನ್ಯಾಯ ಉಂಟಾಗಲಿದೆ. ಹಾಗಾಗಿ, ಈ ಅರ್ಜಿ ಇತ್ಯರ್ಥವಾಗುವತನಕ ಮೀಸಲು ಪ್ರವರ್ಗಗಳನ್ನು ಮಾರ್ಪಾಡು ಮಾಡುವಂತೆ ಕೋರುವ ಬೇಡಿಕೆಗಳನ್ನು ಸರ್ಕಾರ ಪ್ರೋತ್ಸಾಹಿಸದಂತೆ ಮಧ್ಯಂತರ ತಡೆ ನೀಡಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

‘ಇನ್ನು ಪಂಚಮಸಾಲಿ ಮೀಸಲಾತಿಗಾಗಿ ಹೋರಾಟದ ನೇತೃತ್ವ ವಹಿಸಿರುವ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರು ಇದೇ 13ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶಿಗ್ಗಾವಿ ನಿವಾಸದ ಮುಂದೆ ಸತ್ಯಾಗ್ರಹ ನಡೆಸುವ ನಿರ್ಧಾರ ಮಾಡಿದ್ದಾರೆ. ಇದು ನ್ಯಾಯಾಂಗ ನಿಂದನೆ ನ್ಯಾಯಾಂಗ ನಿಂದನೆಯಾಗುತ್ತದೆ. ಕೋರ್ಟ್‌ ಆದೇಶ ಈ ಪ್ರಕ್ರಿಯೆಯಲ್ಲಿನ ಎಲ್ಲ ವಿಧವಾದ ನಡೆಗಳಿಗೂ ಅನ್ವಯ ಆಗುತ್ತದೆ. ಸತ್ಯಾಗ್ರಹವನ್ನು ಪ್ರಶ್ನಿಸಿ ವಿಚಾರಣೆಗೆ ಒಳಪಡಿಸುವಂತೆ ಕೋರಿದರೆ ಆಗ ಅದು ಖಂಡಿತಾ ನ್ಯಾಯಾಂಗ ನಿಂದನೆ ಎನಿಸಿಕೊಳ್ಳುತ್ತದೆ’ ಎಂದು ಹಿರಿಯ ವಕೀಲ ರವಿವರ್ಮ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಇತ್ತ ಮೃತ್ಯುಂಜಯ ಸ್ವಾಮೀಜಿ, ‘ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಮುಖ್ಯಮಂತ್ರಿ ನಮ್ಮ ಹೋರಾಟದ ದಿಕ್ಕು ತಪ್ಪಿಸಲು, 2ಡಿ ಮೀಸಲಾತಿ ಘೋಷಿಸಿದರು. ಇದನ್ನು ಜನವರಿ 5ರಂದು ಬೆಳಗಾವಿಯಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಸಂಪೂರ್ಣವಾಗಿ ತಿರಸ್ಕರಿಸಿದ್ದೇವೆ. 2ಎ ಮೀಸಲಾತಿ ಕೊಡುವ ಅಧಿಕಾರ ಮುಖ್ಯಮಂತ್ರಿಯವರ ಕೈಯಲ್ಲಿತ್ತು. ಆದರೆ, ಮೀಸಲಾತಿ ಕೊಡದೆ ಕಾಲಹರಣ ಮಾಡಿದರು’ ಎಂದು ಸ್ವಾಮೀಜಿ ದೂರಿದರು.

‘ಇದೀಗ ಹೈಕೋರ್ಟ್‌ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಸರ್ಕಾರಕ್ಕೆ ಆದೇಶಿಸಿದೆ. ನಮ್ಮ ಹೋರಾಟಕ್ಕೆ ಯಾವುದೇ ತಡೆ ನೀಡಿಲ್ಲ. ಹೀಗಾಗಿ ನಮ್ಮ ಹೋರಾಟ ನಿರಂತರವಾಗಿ ನಡೆಯಲಿದೆ. ಸರ್ಕಾರದ ಅನ್ಯಾಯ ಖಂಡಿಸಿ ಜ.13ರಂದು ಶಿಗ್ಗಾವಿಯಲ್ಲಿರುವ ಸಿಎಂ ಮನೆಗೆ ಮುತ್ತಿಗೆ ಕಾರ್ಯಕ್ರಮ ಹಾಕಿಕೊಂಡಿದ್ದೇವೆ’ ಎಂದು ಸ್ವಾಮೀಜಿ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...