Homeಕರ್ನಾಟಕ‘ಮದ್ಯ ಖರೀದಿ ವಯಸ್ಸನ್ನು 21 ರಿಂದ 18ಕ್ಕೆ’ | ಕರಡು ಅಧಿಸೂಚನೆ ಹೊರಡಿಸಿದ ಬೊಮ್ಮಾಯಿ ಸರ್ಕಾರ

‘ಮದ್ಯ ಖರೀದಿ ವಯಸ್ಸನ್ನು 21 ರಿಂದ 18ಕ್ಕೆ’ | ಕರಡು ಅಧಿಸೂಚನೆ ಹೊರಡಿಸಿದ ಬೊಮ್ಮಾಯಿ ಸರ್ಕಾರ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರ ಮದ್ಯ ಖರೀದಿಸುವ ವಯಸ್ಸಿನ ನಿರ್ಬಂಧವನ್ನು 21 ರಿಂದ 18ಕ್ಕೆ ಇಳಿಸುವ ಬಗ್ಗೆ ಕರಡು ಅಧಿಸೂಚನೆಯನ್ನು ಹೊರಡಿಸಿದ್ದು, ಈ ನಿಟ್ಟಿನಲ್ಲಿ ಅಭಿಪ್ರಾಯಗಳನ್ನು, ಸಲಹೆಗಳನ್ನು ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ನಾಗರೀಕರೊಂದಿಗೆ ಕೇಳಿದೆ. ಪ್ರಸ್ತುತ ಮದ್ಯ ಮಾರಾಟಕ್ಕೆ ಕಾನೂನುಬದ್ಧ ವಯಸ್ಸು 21 ಆಗಿದ್ದು, ಅಧಿಸೂಚನೆ ಜಾರಿಗೆ ಬಂದರೆ ಅದು 18 ಆಗಲಿದೆ.

ಪ್ರಸ್ತುತ ಅಬಕಾರಿ ಕಾನೂನು 21 ವರ್ಷದೊಳಗಿನ ವ್ಯಕ್ತಿಗಳಿಗೆ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸುತ್ತದೆ. ಇತ್ತೀಚಿನ ಅಧಿಸೂಚನೆಯು ‘ಕರ್ನಾಟಕ ಅಬಕಾರಿ ನಿಯಮಗಳು – 2023’ ರ ಕರಡು, ವಯೋಮಾನ ಕಡಿತಕ್ಕೆ ದಾರಿ ಮಾಡಿಕೊಡುತ್ತದೆ. ಆಕ್ಷೇಪಣೆಗಳಿದ್ದಲ್ಲಿ ಅಧಿಸೂಚನೆಯ 30 ದಿನಗಳಲ್ಲಿ ಸಲ್ಲಿಸಬೇಕು ಎಂದು ಅಬಕಾರಿ ಇಲಾಖೆ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2015 ರವರೆಗೆ ಆಲ್ಕೊಹಾಲ್‌‌ ಪಾನೀಯಗಳನ್ನು ಖರೀದಿಸಲು ಕಾನೂನುಬದ್ಧ ವಯಸ್ಸನ್ನು 18 ಇತ್ತು. ಕರ್ನಾಟಕ ಅಬಕಾರಿ ಪರವಾನಗಿ (ಸಾಮಾನ್ಯ ಷರತ್ತು) ನಿಯಮಗಳು – 1967 ಗೆ ತಿದ್ದುಪಡಿ ಮಾಡುವ ಮೂಲಕ ಇದನ್ನು 21 ಕ್ಕೆ ಹೆಚ್ಚಿಸಲಾಯಿತು. ಇದು ದುಬಾರಿ ಪಬ್‌ಗಳು ಮತ್ತು ಬಾರ್‌ಗಳಲ್ಲಿ 21 ವರ್ಷದೊಳಗಿನ ವ್ಯಕ್ತಿಗಳಿಗೆ ಮದ್ಯ ಮಾರಾಟ ಮಾಡುವುದನ್ನು ಪರಿಣಾಮಕಾರಿಯಾಗಿ ತಡೆಯಿತು.

ಖಂಡಿಸಿದ ವಿದ್ಯಾರ್ಥಿ ಸಂಘಟನೆಗಳು:

ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಕೆವಿಎಸ್‌‌‌ ವಿದ್ಯಾರ್ಥಿ ಸಂಘಟನೆಯ ರಾಜ್ಯ ಸಂಚಾಲಕ ಸರೋವರ್‌ ಬೆಂಕಿಕೆರೆ, “ಸರ್ಕಾರದ ಈ ನಡೆ ನನಗೆ ಆಶ್ಚರ್ಯ ತರಿಸಿಲ್ಲ, ಅಘಾತವಷ್ಟೆ ನೀಡಿದೆ. ಈ ಸರ್ಕಾರ ಮದ್ಯ ಖರೀದಿಯ ವಯಸ್ಸನ್ನು 18 ಮಾತ್ರವಲ್ಲ, 16 ಇಳಿಸಲು ಕೂಡಾ ಹೇಸಲ್ಲ. ಜನರನ್ನು ಕುಡಿಸಲು ಸರ್ಕಾರವೇ ಅಬಕಾರಿ ಇಲಾಖೆಗೆ ಟಾರ್ಗೆಟ್‌ ನೀಡುತ್ತದೆ. ಈ ಟಾರ್ಗೆಟ್‌ ಅನ್ನು ಇನ್ನಷ್ಟು ವಿಸ್ತಾರ ಮಾಡಲು ಸರ್ಕಾರ ಮುಂದಾಗಿದೆ. ಬಿಜೆಪಿ ಸರ್ಕಾರ ಈಗಾಗಲೆ ಯುವಜನರನ್ನು ಜಾತಿ-ಧರ್ಮ, ಕೋಮುಗಲಭೆ ಅನ್ನುವ ಅಮಲಿನಲ್ಲಿ ಮುಳುಗಿಸಿದೆ. ಇದೀಗ ಮತ್ತೇ ದೈಹಿಕ ಮತ್ತು ಮಾನಸಿಕ ಅಮಲಿನಲ್ಲೆ ಯುವಜನರು ಇರಬೇಕು ಎಂದು ಬಯಸುತ್ತಿದೆ. ಒಟ್ಟಿನಲ್ಲಿ ಯುವಜನರ ಮಾನಸಿಕ ಮತ್ತು ದೈಹಿಕ ಆರೋಗ್ಯ ಹಾಗೂ ಅವರ ಭವಿಷ್ಯವನ್ನು ಹಾಳುಮಾಡಲು ಪಣತೊಟ್ಟು ನಿಂತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಯಾವುದೇ ಸಾಧನೆ ಮಾಡದ ಸರ್ಕಾರ, ಚುನಾವಣೆ ಬರುವಂತಹ ಸಮಯದಲ್ಲಿ ತಮ್ಮ ವೈಫಲ್ಯಗಳನ್ನು ಮುಚ್ಚಿ ಹಾಕಲು ಇದನ್ನೆಲ್ಲಾ ಮಾಡುತ್ತಿದೆ. ಉದ್ಯೋಗ, ಉಚಿತ ಶಿಕ್ಷಣ, ಸಮಾನ ಶಿಕ್ಷಣದ ಕುರಿತಾಗಿ ಈವರೆಯೆ ಯಾವುದೆ ಸಾಧನೆ ಮಾಡದ ಸರ್ಕಾರ, ಇದೀಗ ಮದ್ಯದ ಅಮಲಿನಲ್ಲಿ ತೇಲಿಸುವಂತೆ ಕೆಲಸ ಮಾಡುತ್ತಿದೆ. ರಾಜಕಾರಣಿಗಳೆ ಕುಡಿದ ಮತ್ತಿನಲ್ಲಿ ಆಕ್ಸಿಡೆಂಟ್‌ಗಳು ಮಾಡುತ್ತಿರುವಂತಹ ಸಂದರ್ಭದಲ್ಲಿ ಮತ್ತೊಂದಷ್ಟು ಜನರನ್ನು ಮತ್ತಿನಲ್ಲಿ ಮುಳುಗುವಂತೆ ಮಾಡಲು ಸರ್ಕಾರ ಹೊರಡುತ್ತಿದೆ. ಯುವ ಜನರು ಇದನ್ನು ಚೆನ್ನಾಗಿ ಅರ್ಥ ಮಾಡಿಕೊಂಡು ಶಿಕ್ಷಣ-ಆರೋಗ್ಯ-ಉದ್ಯೋಗದಂತಹ ನೈಜ ಸಮಸ್ಯೆಗಳ ವಿಚಾರಗಳನ್ನು ಇಟ್ಟುಕೊಂಡು ಮುಂಬರುವ ಚುನಾವಣೆಯಲ್ಲಿ ಎದುರಿಸಬೇಕಾಗಿದೆ” ಎಂದು ಸರೋವರ್‌ ಹೇಳಿದರು.

ಎಸ್‌ಎಫ್‌ಐ ವಿದ್ಯಾರ್ಥಿ ಸಂಘಟನೆಯ ರಾಜ್ಯಾಧ್ಯಕ್ಷ ವಾಸುದೇವ ರೆಡ್ಡಿ ಮಾತನಾಡಿ, “ನಿನ್ನೆಯಷ್ಟೆ ಪ್ರಧಾನಿ ಮೋದಿ ಹುಬ್ಬಳ್ಳಿಯಲ್ಲಿ ಯುವಜನೋತ್ಸವ ಉದ್ಘಾಟನೆ ಮಾಡಿದ್ದಾರೆ. ಆದರೆ ನಮ್ಮ ರಾಜ್ಯದಲ್ಲಿ ಯುವಜನ ನೀತಿ ಎಂಬುವುದೆ ಇಲ್ಲ. ಯುವಜನರು ಎದುರಿಸುತ್ತಿರುವ ನಿರುದ್ಯೋಗ ಸೇರಿದಂತೆ ಹಲವಾರು ಸಮಾಜಘಾತುಕ ಶಕ್ತಿಗಳಿಗೆ, ಕೋಮುವಾದಕ್ಕೆ, ಜಾತಿ – ಅಸ್ಪೃಶ್ಯತೆಗೆ ಒಳಗಾಗುತ್ತಿದ್ದಾರೆ. ಇದೆಲ್ಲದರ ಜೊತೆಗೆ ಆನ್‌ಲೈನ್ ಜೂಜಾಟ ಹೆಚ್ಚಾಗಿದ್ದು, ಯುವಜನರು ಇವುಗಳಲ್ಲಿ ತೊಡಗಿದ್ದಾರೆ. ಇಷ್ಟೆಲ್ಲಾ ಸಮಸ್ಯೆಗಳಿರುವಾಗ ಸರ್ಕಾರ ಮದ್ಯ ಖರೀದಿಯ ವಯಸ್ಸನ್ನು ಇಳಿಸಿ ದೊಡ್ಡ ಪ್ರಮಾಣದಲ್ಲಿ ಯುವ ಜನರನ್ನು ಕುಡುಕರನ್ನಾಗಿ ಮಾಡುವ ಹುನ್ನಾರ ಮಾಡುತ್ತಿದೆ” ಎಂದು ಬಿಜೆಪಿ ಸರ್ಕಾರದ ನೀತಿಯನ್ನು ಖಂಡಿಸಿದ್ದಾರೆ.

“ಬಿಜೆಪಿ ಸರ್ಕಾರ ಬಾಯಿ ಬಿಟ್ಟರೆ ನೈತಿಕತೆ, ಸಂಸ್ಕೃತಿ, ಸಂಸ್ಕಾರದ ಬಗ್ಗೆ ಮಾತನಾಡುತ್ತದೆ. ಆದರೆ ಕಾನೂನು ಮೂಲಕ ಯುವಕರು ಮದ್ಯಪಾನಕ್ಕೆ ತೆರೆದುಕೊಳ್ಳಲು ಅವಕಾಶ ನೀಡುತ್ತಿದೆ. ರಾಮ ರಾಜ್ಯದ ಬಗ್ಗೆ ಹೇಳುವ ಈ ಸರ್ಕಾರ ಯುವಕರಿಗೆ ಮದ್ಯ ಬೇಗನೇ ಸಿಗುವಂತೆ ಮಾಡಿ ಪಾನ ರಾಜ್ಯ ಮಾಡುತ್ತಿದೆ. ಇದನ್ನು ಎಸ್‌ಎಫ್‌ಐ ತೀವ್ರವಾಗಿ ಖಂಡಿಸುತ್ತದೆ ಮತ್ತು ಇದನ್ನು ವಾಪಾಸು ಪಡೆಯಬೇಕು ಎಂದು ಆಗ್ರಹಿಸುತ್ತದೆ” ಎಂದು ವಾಸುದೇವ್‌ ರೆಡ್ಡಿ ಹೇಳಿದ್ದಾರೆ.

ಕುಡಿತದ ವಯೋಮಿತಿ ಸಡಿಲಿಕೆ ಮಾಡುವ ಸರಕಾರದ ತಿದ್ದುಪಡಿಗೆ ಜನ ಆಕ್ಷೇಪ ವ್ಯಕ್ತಪಡಿಸುವ ಸಂಭವವಿದ್ದು, ಇದನ್ನು ನೀತಿ ನಿರ್ಧಾರವಾಗಿ ಸರಕಾರ ಮುಂದುವರಿಸಲಿದೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರಿನ ಪಬ್‌ಗಳಲ್ಲಿ ತಮ್ಮ 18 ನೇ ಹುಟ್ಟುಹಬ್ಬವನ್ನು ಆಚರಿಸಲು ಬಯಸುವ ಅನೇಕರಿಗೆ ಪಬ್ ಸಂಸ್ಕೃತಿಯ ಮೇಲೆ ವ್ಯಾಮೋಹ ಬೆಳೆಸಿರುವುದರಿಂದ ಕೆಲವರು ವಯಸ್ಸಿನ ಸಡಿಲಿಕೆಯ ಪರವಾಗಿದ್ದಾರೆ.

ವಿಶ್ವದಲ್ಲಿ ನಡೆಯುವ ಅಕಾಲಿಕ ಮರಣ ಮತ್ತು ಅಂಗವೈಕಲ್ಯಕ್ಕೆ 5 ನೇ ಪ್ರಮುಖ ಕಾರಣ ಆಲ್ಕೋಹಾಲ್ ಬಳಕೆಯಾಗಿದೆ ಎಂದು ವರದಿಗಳು ಹೇಳುತ್ತವೆ. ಆಲ್ಕೋಹಾಲ್ ಬಳಕೆಯಿಂದಾಗಿ 200 ಕ್ಕೂ ಹೆಚ್ಚು ಕಾಯಿಲೆಗಳು ಅದರಲ್ಲೂ ಮುಖ್ಯವಾಗಿ ಲಿವರ್ ಸಿರೋಸಿಸ್, ಕ್ಯಾನ್ಸರ್ ಕಾಯಿಲೆಗಳು ಬರುವ ಸಂಭವವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...