Homeಕರ್ನಾಟಕ‘ಮದ್ಯ ಖರೀದಿ ವಯಸ್ಸನ್ನು 21 ರಿಂದ 18ಕ್ಕೆ’ | ಕರಡು ಅಧಿಸೂಚನೆ ಹೊರಡಿಸಿದ ಬೊಮ್ಮಾಯಿ ಸರ್ಕಾರ

‘ಮದ್ಯ ಖರೀದಿ ವಯಸ್ಸನ್ನು 21 ರಿಂದ 18ಕ್ಕೆ’ | ಕರಡು ಅಧಿಸೂಚನೆ ಹೊರಡಿಸಿದ ಬೊಮ್ಮಾಯಿ ಸರ್ಕಾರ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರ ಮದ್ಯ ಖರೀದಿಸುವ ವಯಸ್ಸಿನ ನಿರ್ಬಂಧವನ್ನು 21 ರಿಂದ 18ಕ್ಕೆ ಇಳಿಸುವ ಬಗ್ಗೆ ಕರಡು ಅಧಿಸೂಚನೆಯನ್ನು ಹೊರಡಿಸಿದ್ದು, ಈ ನಿಟ್ಟಿನಲ್ಲಿ ಅಭಿಪ್ರಾಯಗಳನ್ನು, ಸಲಹೆಗಳನ್ನು ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ನಾಗರೀಕರೊಂದಿಗೆ ಕೇಳಿದೆ. ಪ್ರಸ್ತುತ ಮದ್ಯ ಮಾರಾಟಕ್ಕೆ ಕಾನೂನುಬದ್ಧ ವಯಸ್ಸು 21 ಆಗಿದ್ದು, ಅಧಿಸೂಚನೆ ಜಾರಿಗೆ ಬಂದರೆ ಅದು 18 ಆಗಲಿದೆ.

ಪ್ರಸ್ತುತ ಅಬಕಾರಿ ಕಾನೂನು 21 ವರ್ಷದೊಳಗಿನ ವ್ಯಕ್ತಿಗಳಿಗೆ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸುತ್ತದೆ. ಇತ್ತೀಚಿನ ಅಧಿಸೂಚನೆಯು ‘ಕರ್ನಾಟಕ ಅಬಕಾರಿ ನಿಯಮಗಳು – 2023’ ರ ಕರಡು, ವಯೋಮಾನ ಕಡಿತಕ್ಕೆ ದಾರಿ ಮಾಡಿಕೊಡುತ್ತದೆ. ಆಕ್ಷೇಪಣೆಗಳಿದ್ದಲ್ಲಿ ಅಧಿಸೂಚನೆಯ 30 ದಿನಗಳಲ್ಲಿ ಸಲ್ಲಿಸಬೇಕು ಎಂದು ಅಬಕಾರಿ ಇಲಾಖೆ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2015 ರವರೆಗೆ ಆಲ್ಕೊಹಾಲ್‌‌ ಪಾನೀಯಗಳನ್ನು ಖರೀದಿಸಲು ಕಾನೂನುಬದ್ಧ ವಯಸ್ಸನ್ನು 18 ಇತ್ತು. ಕರ್ನಾಟಕ ಅಬಕಾರಿ ಪರವಾನಗಿ (ಸಾಮಾನ್ಯ ಷರತ್ತು) ನಿಯಮಗಳು – 1967 ಗೆ ತಿದ್ದುಪಡಿ ಮಾಡುವ ಮೂಲಕ ಇದನ್ನು 21 ಕ್ಕೆ ಹೆಚ್ಚಿಸಲಾಯಿತು. ಇದು ದುಬಾರಿ ಪಬ್‌ಗಳು ಮತ್ತು ಬಾರ್‌ಗಳಲ್ಲಿ 21 ವರ್ಷದೊಳಗಿನ ವ್ಯಕ್ತಿಗಳಿಗೆ ಮದ್ಯ ಮಾರಾಟ ಮಾಡುವುದನ್ನು ಪರಿಣಾಮಕಾರಿಯಾಗಿ ತಡೆಯಿತು.

ಖಂಡಿಸಿದ ವಿದ್ಯಾರ್ಥಿ ಸಂಘಟನೆಗಳು:

ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಕೆವಿಎಸ್‌‌‌ ವಿದ್ಯಾರ್ಥಿ ಸಂಘಟನೆಯ ರಾಜ್ಯ ಸಂಚಾಲಕ ಸರೋವರ್‌ ಬೆಂಕಿಕೆರೆ, “ಸರ್ಕಾರದ ಈ ನಡೆ ನನಗೆ ಆಶ್ಚರ್ಯ ತರಿಸಿಲ್ಲ, ಅಘಾತವಷ್ಟೆ ನೀಡಿದೆ. ಈ ಸರ್ಕಾರ ಮದ್ಯ ಖರೀದಿಯ ವಯಸ್ಸನ್ನು 18 ಮಾತ್ರವಲ್ಲ, 16 ಇಳಿಸಲು ಕೂಡಾ ಹೇಸಲ್ಲ. ಜನರನ್ನು ಕುಡಿಸಲು ಸರ್ಕಾರವೇ ಅಬಕಾರಿ ಇಲಾಖೆಗೆ ಟಾರ್ಗೆಟ್‌ ನೀಡುತ್ತದೆ. ಈ ಟಾರ್ಗೆಟ್‌ ಅನ್ನು ಇನ್ನಷ್ಟು ವಿಸ್ತಾರ ಮಾಡಲು ಸರ್ಕಾರ ಮುಂದಾಗಿದೆ. ಬಿಜೆಪಿ ಸರ್ಕಾರ ಈಗಾಗಲೆ ಯುವಜನರನ್ನು ಜಾತಿ-ಧರ್ಮ, ಕೋಮುಗಲಭೆ ಅನ್ನುವ ಅಮಲಿನಲ್ಲಿ ಮುಳುಗಿಸಿದೆ. ಇದೀಗ ಮತ್ತೇ ದೈಹಿಕ ಮತ್ತು ಮಾನಸಿಕ ಅಮಲಿನಲ್ಲೆ ಯುವಜನರು ಇರಬೇಕು ಎಂದು ಬಯಸುತ್ತಿದೆ. ಒಟ್ಟಿನಲ್ಲಿ ಯುವಜನರ ಮಾನಸಿಕ ಮತ್ತು ದೈಹಿಕ ಆರೋಗ್ಯ ಹಾಗೂ ಅವರ ಭವಿಷ್ಯವನ್ನು ಹಾಳುಮಾಡಲು ಪಣತೊಟ್ಟು ನಿಂತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಯಾವುದೇ ಸಾಧನೆ ಮಾಡದ ಸರ್ಕಾರ, ಚುನಾವಣೆ ಬರುವಂತಹ ಸಮಯದಲ್ಲಿ ತಮ್ಮ ವೈಫಲ್ಯಗಳನ್ನು ಮುಚ್ಚಿ ಹಾಕಲು ಇದನ್ನೆಲ್ಲಾ ಮಾಡುತ್ತಿದೆ. ಉದ್ಯೋಗ, ಉಚಿತ ಶಿಕ್ಷಣ, ಸಮಾನ ಶಿಕ್ಷಣದ ಕುರಿತಾಗಿ ಈವರೆಯೆ ಯಾವುದೆ ಸಾಧನೆ ಮಾಡದ ಸರ್ಕಾರ, ಇದೀಗ ಮದ್ಯದ ಅಮಲಿನಲ್ಲಿ ತೇಲಿಸುವಂತೆ ಕೆಲಸ ಮಾಡುತ್ತಿದೆ. ರಾಜಕಾರಣಿಗಳೆ ಕುಡಿದ ಮತ್ತಿನಲ್ಲಿ ಆಕ್ಸಿಡೆಂಟ್‌ಗಳು ಮಾಡುತ್ತಿರುವಂತಹ ಸಂದರ್ಭದಲ್ಲಿ ಮತ್ತೊಂದಷ್ಟು ಜನರನ್ನು ಮತ್ತಿನಲ್ಲಿ ಮುಳುಗುವಂತೆ ಮಾಡಲು ಸರ್ಕಾರ ಹೊರಡುತ್ತಿದೆ. ಯುವ ಜನರು ಇದನ್ನು ಚೆನ್ನಾಗಿ ಅರ್ಥ ಮಾಡಿಕೊಂಡು ಶಿಕ್ಷಣ-ಆರೋಗ್ಯ-ಉದ್ಯೋಗದಂತಹ ನೈಜ ಸಮಸ್ಯೆಗಳ ವಿಚಾರಗಳನ್ನು ಇಟ್ಟುಕೊಂಡು ಮುಂಬರುವ ಚುನಾವಣೆಯಲ್ಲಿ ಎದುರಿಸಬೇಕಾಗಿದೆ” ಎಂದು ಸರೋವರ್‌ ಹೇಳಿದರು.

ಎಸ್‌ಎಫ್‌ಐ ವಿದ್ಯಾರ್ಥಿ ಸಂಘಟನೆಯ ರಾಜ್ಯಾಧ್ಯಕ್ಷ ವಾಸುದೇವ ರೆಡ್ಡಿ ಮಾತನಾಡಿ, “ನಿನ್ನೆಯಷ್ಟೆ ಪ್ರಧಾನಿ ಮೋದಿ ಹುಬ್ಬಳ್ಳಿಯಲ್ಲಿ ಯುವಜನೋತ್ಸವ ಉದ್ಘಾಟನೆ ಮಾಡಿದ್ದಾರೆ. ಆದರೆ ನಮ್ಮ ರಾಜ್ಯದಲ್ಲಿ ಯುವಜನ ನೀತಿ ಎಂಬುವುದೆ ಇಲ್ಲ. ಯುವಜನರು ಎದುರಿಸುತ್ತಿರುವ ನಿರುದ್ಯೋಗ ಸೇರಿದಂತೆ ಹಲವಾರು ಸಮಾಜಘಾತುಕ ಶಕ್ತಿಗಳಿಗೆ, ಕೋಮುವಾದಕ್ಕೆ, ಜಾತಿ – ಅಸ್ಪೃಶ್ಯತೆಗೆ ಒಳಗಾಗುತ್ತಿದ್ದಾರೆ. ಇದೆಲ್ಲದರ ಜೊತೆಗೆ ಆನ್‌ಲೈನ್ ಜೂಜಾಟ ಹೆಚ್ಚಾಗಿದ್ದು, ಯುವಜನರು ಇವುಗಳಲ್ಲಿ ತೊಡಗಿದ್ದಾರೆ. ಇಷ್ಟೆಲ್ಲಾ ಸಮಸ್ಯೆಗಳಿರುವಾಗ ಸರ್ಕಾರ ಮದ್ಯ ಖರೀದಿಯ ವಯಸ್ಸನ್ನು ಇಳಿಸಿ ದೊಡ್ಡ ಪ್ರಮಾಣದಲ್ಲಿ ಯುವ ಜನರನ್ನು ಕುಡುಕರನ್ನಾಗಿ ಮಾಡುವ ಹುನ್ನಾರ ಮಾಡುತ್ತಿದೆ” ಎಂದು ಬಿಜೆಪಿ ಸರ್ಕಾರದ ನೀತಿಯನ್ನು ಖಂಡಿಸಿದ್ದಾರೆ.

“ಬಿಜೆಪಿ ಸರ್ಕಾರ ಬಾಯಿ ಬಿಟ್ಟರೆ ನೈತಿಕತೆ, ಸಂಸ್ಕೃತಿ, ಸಂಸ್ಕಾರದ ಬಗ್ಗೆ ಮಾತನಾಡುತ್ತದೆ. ಆದರೆ ಕಾನೂನು ಮೂಲಕ ಯುವಕರು ಮದ್ಯಪಾನಕ್ಕೆ ತೆರೆದುಕೊಳ್ಳಲು ಅವಕಾಶ ನೀಡುತ್ತಿದೆ. ರಾಮ ರಾಜ್ಯದ ಬಗ್ಗೆ ಹೇಳುವ ಈ ಸರ್ಕಾರ ಯುವಕರಿಗೆ ಮದ್ಯ ಬೇಗನೇ ಸಿಗುವಂತೆ ಮಾಡಿ ಪಾನ ರಾಜ್ಯ ಮಾಡುತ್ತಿದೆ. ಇದನ್ನು ಎಸ್‌ಎಫ್‌ಐ ತೀವ್ರವಾಗಿ ಖಂಡಿಸುತ್ತದೆ ಮತ್ತು ಇದನ್ನು ವಾಪಾಸು ಪಡೆಯಬೇಕು ಎಂದು ಆಗ್ರಹಿಸುತ್ತದೆ” ಎಂದು ವಾಸುದೇವ್‌ ರೆಡ್ಡಿ ಹೇಳಿದ್ದಾರೆ.

ಕುಡಿತದ ವಯೋಮಿತಿ ಸಡಿಲಿಕೆ ಮಾಡುವ ಸರಕಾರದ ತಿದ್ದುಪಡಿಗೆ ಜನ ಆಕ್ಷೇಪ ವ್ಯಕ್ತಪಡಿಸುವ ಸಂಭವವಿದ್ದು, ಇದನ್ನು ನೀತಿ ನಿರ್ಧಾರವಾಗಿ ಸರಕಾರ ಮುಂದುವರಿಸಲಿದೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರಿನ ಪಬ್‌ಗಳಲ್ಲಿ ತಮ್ಮ 18 ನೇ ಹುಟ್ಟುಹಬ್ಬವನ್ನು ಆಚರಿಸಲು ಬಯಸುವ ಅನೇಕರಿಗೆ ಪಬ್ ಸಂಸ್ಕೃತಿಯ ಮೇಲೆ ವ್ಯಾಮೋಹ ಬೆಳೆಸಿರುವುದರಿಂದ ಕೆಲವರು ವಯಸ್ಸಿನ ಸಡಿಲಿಕೆಯ ಪರವಾಗಿದ್ದಾರೆ.

ವಿಶ್ವದಲ್ಲಿ ನಡೆಯುವ ಅಕಾಲಿಕ ಮರಣ ಮತ್ತು ಅಂಗವೈಕಲ್ಯಕ್ಕೆ 5 ನೇ ಪ್ರಮುಖ ಕಾರಣ ಆಲ್ಕೋಹಾಲ್ ಬಳಕೆಯಾಗಿದೆ ಎಂದು ವರದಿಗಳು ಹೇಳುತ್ತವೆ. ಆಲ್ಕೋಹಾಲ್ ಬಳಕೆಯಿಂದಾಗಿ 200 ಕ್ಕೂ ಹೆಚ್ಚು ಕಾಯಿಲೆಗಳು ಅದರಲ್ಲೂ ಮುಖ್ಯವಾಗಿ ಲಿವರ್ ಸಿರೋಸಿಸ್, ಕ್ಯಾನ್ಸರ್ ಕಾಯಿಲೆಗಳು ಬರುವ ಸಂಭವವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...